
21-08-2022, 8:23 AM
ಕಟಪಾಡಿ :- ಯುನೈಟೆಡ್ ಕಿಂಗ್ಡಮ್ ನ ಬರ್ಮಿಂಗ್ಹ್ಯಾಮ್ ನಲ್ಲಿ ನಡೆದ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ವೇಯ್ಟ್ ಲಿಪ್ಟ್ ವಿಭಾಗದಲ್ಲಿ ದೇಶಕ್ಕೆ ಚೊಚ್ಚಲ ಪದಕ ಪಡೆದು ದೇಶದ ಕೀರ್ತಿ ಪತಾಕೆಯನ್ನು ಹಾರಿಸಿದ ಗುರುರಾಜ್ ಪೂಜಾರಿ ಇವರನ್ನು ಯುವವಾಹಿನಿ ಸಂಸ್ಥೆಯ ವತಿಯಿಂದ ಗೌರವಿಸಿ ಅಭಿನಂದಿಸಲಾಯಿತು. ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಪದಿ ಸಭಾಗ್ರಹದಲ್ಲಿ ಜರಗಿದ ಯುವವಾಹಿನಿ ಕೇಂದ್ರ ಸಮಿತಿ ಹಾಗೂ ಉಡುಪಿ ಘಟಕದ ಆತಿಥ್ಯದಲ್ಲಿ ಜರಗಿದ ಅಂತರ್ ಘಟಕ ಡೆನ್ನಾನ ಡೆನ್ನನ 2022 ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಇಂಧನ ಮತ್ತು ಕನ್ನಡ […]
Read More

21-08-2022, 8:12 AM
ಕಟಪಾಡಿ :- ನಮ್ಮ ನಡವಳಿಕೆಯನ್ನು ರೂಪಿಸಲು ಸಾಂಸ್ಕೃತಿಕ ಚಟುವಟಿಕೆಗಳು ಪರೋಕ್ಷವಾಗಿ ಸಹಾಯ ಮಾಡುತ್ತಿದೆ. ಭಾಷೆ , ಸಂಸ್ಕೃತಿಯ ಒಡನಾಟದಿಂದ ಉತ್ತಮ ನಡವಳಿಕೆ ಮೂಡಲು ಸಾಧ್ಯ. ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಸಮಾಜವನ್ನು ತಿದ್ದಿ ಸುಸಂಸ್ಕೃತ ಸಮಾಜ ನಿರ್ಮಾಣ ಮಾಡುವುದು ಸಾಧ್ಯ ಎಂದು ಇಂಧನ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಹೇಳಿದರು. ಅವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಹಾಗೂ ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಕನ್ನಡ ಮತ್ತು ಸಂಸ್ಕೃತಿ […]
Read More

16-08-2022, 5:02 PM
ಕೊಲ್ಯ :- ಬ್ರಹ್ಮ ಶ್ರೀ ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯದಲ್ಲಿ ತಾ. 16 ಆಗಸ್ಟ್ 2022 ರಂದು ಗುರುಗಳಾದ ಡಾ. ಅರುಣ್ ಉಳ್ಳಾಲ್ ರವರಿಂದ ಓಂಕಾರದೊಂದಿಗೆ ಆರಂಭಗೊಂಡು ಗಣಪತಿ ಸ್ತುತಿ, ಗುರುಸ್ತುತಿ ಮುಖೇನ ತರಗತಿಯನ್ನು ಪ್ರಾರಂಭಿಸಲಾಯಿತು. ವಿದ್ಯಾರ್ಥಿಗಳಿಂದಲೇ ನಿತ್ಯಾನುಷ್ಠಾನ ಶ್ಲೋಕ ಪಠಣೆ ಮಾಡಿಸಲಾಯಿತು. ಇಂದಿನ ತರಗತಿಯಲ್ಲಿ ವಿಶೇಷವಾಗಿ ರಕ್ಷಾ ಬಂಧನದ ಮಹತ್ವವನ್ನು ಗುರುಗಳು ತಿಳಿಸಿಕೊಟ್ಟರು ಹಾಗೂ ಎಲ್ಲಾ ವಿದ್ಯಾರ್ಥಿಗಳು ಸೇರಿ ಪರಸ್ಪರ ರಕ್ಷೆ ಕಟ್ಟಿ ಸಹೋದರತೆಯ ಹಬ್ಬ ರಕ್ಷಾ ಬಂಧನ ವನ್ನು ಸಂಭ್ರಮದಿಂದ ಆಚರಿಸಲಾಯಿತು.ವಿಶೇಷವಾಗಿ […]
Read More

15-08-2022, 3:30 PM
ಹೆಜಮಾಡಿ :- ಯುವವಾಹಿನಿ ಹೆಜಮಾಡಿ ಘಟಕದ ಪದಗ್ರಹಣ ಸಮಾರಂಭವು ದಿನಾಂಕ 15 ಆಗಸ್ಟ್ 2022 ರಂದು ಹೆಜಮಾಡಿ ಬಿಲ್ಲವರ ಸಂಘದ ಜಯ ಸಿ ಸುವರ್ಣ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಮ್ಮ ಘಟಕದ ಅಧ್ಯಕ್ಷರಾದ ರಾಜೇಶ್ ಸನಿಲ್ ವಹಿಸಿದ್ದರು. ಉದ್ಘಾಟಕರಾಗಿ ಹೆಜಮಾಡಿ ಬಿಲ್ಲವರ ಸಂಘದ ಅಧ್ಯಕ್ಷರಾದ ಲೋಕೇಶ್ ಅಮೀನ್, ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಉಪಸ್ಥಿತರಿದ್ದರು. ಹಾಗೂ ಮುಖ್ಯ ಅತಿಥಿಗಳಾಗಿ ಬಜ್ಪೆ ಠಾಣೆಯ ಎ.ಎಸ್. ಐ. ಗೋಪಾಲಕೃಷ್ಣ ಕುಂದರ್, ಉಡುಪಿ ಪ್ರತಿಷ್ಠಿತ ಲೋಯರ್ ಸಂಕಪ್ಪ […]
Read More

15-08-2022, 2:57 PM
ಬಂಟ್ವಾಳ : ವಿದೇಶಿ ಸಂಸ್ಕೃತಿ ಬಗ್ಗೆ ಆಕರ್ಷಣೆಗೆ ಒಳಗಾಗುವ ಯುವ ಜನತೆಗೆ ವೈಜ್ಞಾನಿಕ ಕಾರಣಗಳನ್ನು ನೀಡಿ ನಮ್ಮ ಸಂಸ್ಕೃತಿ ಸಂಸ್ಕಾರಗಳ ಬಗ್ಗೆ ಮನವರಿಕೆ ಮಾಡಿದಾಗ ಯುವ ಪೀಳಿಗೆ ನಮ್ಮ ಸಂಸ್ಕೃತಿ ಸಂಸ್ಕಾರವನ್ನು ಉಳಿಸಿ ಬೆಳೆಸುವ ಹಾದಿ ಸುಗಮವಾಗಲಿದೆ ಎಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವ ಸಂಶೋಧಕ, ಉಪನ್ಯಾಸಕ ಡಾ.ಅರುಣ್ ಉಳ್ಳಾಲ್ ಅಭಿಪ್ರಾಯ ಪಟ್ಟರು. ಅವರು ದಿನಾಂಕ 15.08.2022 ರಂದು ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಭವನಲ್ಲಿ ಜರುಗಿದ ಆಟಿಡೊಂಜಿ ಕೂಟ ಕಾರ್ಯಕ್ರಮದಲ್ಲಿ […]
Read More

14-08-2022, 4:58 PM
ಕೊಲ್ಯ :- ಯುವವಾಹಿನಿ (ರಿ.) ಕೊಲ್ಯ ಘಟಕದ 2022-23 ನೇ ಸಾಲಿನ ಪದಗ್ರಹಣ ಸಮಾರಂಭವು ದಿನಾಂಕ 14 ಆಗಸ್ಟ್ 2022 ರಂದು ಬ್ರಹ್ಮಶ್ರೀ ನಾರಾಯಣಗುರು ಸಭಾ ಮಂದಿರ ಕೊಲ್ಯದಲ್ಲಿ ಜರಗಿತು. ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ.) ಕೊಲ್ಯ ಸೋಮೇಶ್ವರದ ಅಧ್ಯಕ್ಷರಾದ ಶ್ರೀ ವೇಣುಗೋಪಾಲ್ ಕೊಲ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಚುನಾವಣಾಧಿಕಾರಿ ಮತ್ತು ಕೊಲ್ಯ ಘಟಕದ ಮಾಜಿ ಅಧ್ಯಕ್ಷರಾದ ಶ್ರೀ ರವಿ ಕೊಂಡಾಣ 2022-23 ನೇ ಸಾಲಿಗೆ ಆಯ್ಕೆಯಾಗಿರುವ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನೇರವೇರಿಸಿದರು. ಯುವವಾಹಿನಿ (ರಿ.) […]
Read More

11-08-2022, 4:43 PM
ಶಕ್ತಿ ನಗರ :- ಯುವವಾಹಿನಿ (ರಿ.) ಶಕ್ತಿನಗರ ಘಟಕ ಇದರ ವತಿಯಿಂದ 11 ಆಗಸ್ಟ್ 22ರ ಗುರುವಾರ ದಂದು ಘಟಕದ ವತಿಯಿಂದ ಪವಿತ್ರ ಹಬ್ಬ ರಕ್ಷಾ ಬಂಧನ ಆಚರಣಾ ಕಾರ್ಯಕ್ರಮಕ್ಕೆ ಘಟಕದ ಮಾಜಿ ಅಧ್ಯಕ್ಷರಾದ ಭಾರತೀ ಜಿ ಅಮೀನ್ ರವರು ದೀಪ ಬೆಳಗಿಸುವುದರೊಂದಿಗೆ ಚಾಲನೆ ನೀಡಿದರು. ಸಭೆಯಲ್ಲಿ ಸಹೋದರತ್ವದ ಬಗ್ಗೆ ಅಧ್ಯಕ್ಷರಾದ ಜಯರಾಮ್ ಇವರು ಮಾತನಾಡುತ್ತಾ ಸಹೋದರ ಮತ್ತು ಸಹೋದರಿ ಎನ್ನುವ ಈ ಸುಂದರ ಬಂಧದ ಮಹತ್ವವನ್ನು ಗುರುತಿಸಲು, ಪ್ರತಿ ವರ್ಷ, ರಕ್ಷಾ ಬಂಧನ ಹಬ್ಬವನ್ನು ನಮ್ಮ ಯುವವಾಹಿನಿ […]
Read More

10-08-2022, 1:50 PM
ಬಂಟ್ವಾಳ : ಆರೋಗ್ಯ ಮಾನವನ ಅತ್ಯಂತ ಶ್ರೇಷ್ಠ ಸಂಪತ್ತು, ಆಯುರ್ವೇದ ಔಷಧಿಗಳು ನಿಧಾನವಾದ ಪರಿಣಾಮ ಎಂಬುದು ಸತ್ಯಕ್ಕೆ ದೂರವಾದ ಮಾತು, ಋಷಿಮನಿಗಳ ಕಾಲದಿಂದಲೂ ನಾವು ಕೇಳಿ ತಿಳಿದುಕೊಂಡ ಹಾಗೂ ಯಾವುದೇ ಅಡ್ಡ ಪರಿಣಾಮಗಳು ಇಲ್ಲದ, ಆಯುರ್ವೇದ ಚಿಕಿತ್ಸೆ ಅತ್ಯಂತ ಪ್ರಯೋಜನಕಾರಿಯಾಗಿದೆ ಎಂದು ರೊಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ ಇದರ ಅಧ್ಯಕ್ಷೆ ಪಲ್ಲವಿ ಕಾರಂತ್ ತಿಳಿಸಿದರು. ಅವರು ದಿನಾಂಕ 10 ಆಗಸ್ಟ್ 2022 ರಂದು ಬಂಟ್ವಾಳ ತಾಲೂಕಿನ ಪಚ್ಚಿನಡ್ಕದಲ್ಲಿ ಯುವವಾಹಿನಿ ಬಂಟ್ವಾಳ ಘಟಕ, ಓಂ ಫ್ರೇಂಡ್ಸ್ ಪಚ್ಚಿನಡ್ಕ ಹಾಗೂ ರೋಟರಿ […]
Read More

07-08-2022, 3:01 PM
ಮಾಣಿ :- ತುಳುವರ ಬದುಕಿನ ಪ್ರತಿಯೊಂದು ಕಾರ್ಯವು ಕೆಲಸಕ್ಕೆ ಕೇಂದ್ರಿತವಾಗಿದ್ದು,ಕೆಲಸದ ಪ್ರತಿಯೊಂದು ಕ್ರಮವೇ ಆಚರಣೆಯ ಒಂದು ಭಾಗವೇ ಆಗಿರುತ್ತದೆ.ತುಳುನಾಡಿನ ಹಳೆಯ ವಸ್ತುಗಳೇ ಒಂದೊಂದು ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಯೋಗೀಶ್ ಕೈರೋಡಿಯವರು ನುಡಿದರು. ಅವರು ದಿನಾಂಕ 07 ಆಗಸ್ಟ್ 2022 ರ ಆದಿತ್ಯವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ಮಾಣಿ ಇಲ್ಲಿ ಯುವವಾಹಿನಿ(ರಿ.) ಮಾಣಿ ಘಟಕ ಹಮ್ಮಿಕೊಂಡ “ಆಟಿದ ತಿರ್ಲ್” ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು . ಕಾರ್ಯಕ್ರಮವನ್ನು ನೆಲ ಶುಧ್ಧಿಕರಿಸಿ,ಸುತ್ತಿಗೆ ಇಟ್ಟು ,ದೀಪ […]
Read More

06-08-2022, 3:30 PM
ಮೂಲ್ಕಿ :- ಯುವವಾಹಿನಿ (ರಿ.) ಮೂಲ್ಕಿ ಘಟಕ ಹಾಗೂ ಲಯನ್ಸ್ ಕ್ಲಬ್ ಮೂಲ್ಕಿ ಮತ್ತು ನವದುರ್ಗ ಯುವಕ ವ್ರಂದ ಕೋಟಕೇರಿ ಇದರ ಸಂಯುಕ್ತ ಆಶ್ರಯದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ಮೂಲ್ಕಿ ಬಸ್ಸು ನಿಲ್ದಾಣದ ಬಳಿ ಹಾಳೆ ತೊಗಟೆಯ ಕಷಾಯ ವಿತರಣೆ ಕಾರ್ಯಕ್ರಮ ಜರಗಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಭಾರತಿ ಭಾಸ್ಕರ ಕೋಟ್ಯಾನ್, ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು, ಮಾಜಿ ಅಧ್ಯಕ್ಷರುಗಳಾದ ಹರೀಂದ್ರ ಸುವರ್ಣ, ಮೋಹನ್ ಸುವರ್ಣ, ಜಯ ಸಿ ಪೂಜಾರಿ, ಸತೀಶ್ ಕಿಲ್ಪಾಡಿ […]
Read More