
12-03-2017, 12:28 PM
ಕಣ್ಣು ಸರಿಯಾಗಿದ್ದಲ್ಲಿ ಜಗತ್ತನ್ನು ಪ್ರೀತಿಸಬಹುದು, ಆದರೆ ನಾಲಿಗೆ ಸರಿಯಾಗಿದ್ದಲ್ಲಿ ಜಗತ್ತು ನಮ್ಮನ್ನು ಪ್ರೀತಿಸುತ್ತದೆ. ದುಶ್ಚಟಗಳನ್ನು ತೊರೆದು ಜ್ಞಾನದ ಮಾರ್ಗದಲ್ಲಿ ನಡೆದಾಗ ಮನೆ ಮನೆಯಲ್ಲೂ ದೇವಸ್ಥಾನದ ನಿರ್ಮಾಣ ಸಾಧ್ಯ. ಅವಮಾನಗಳ ಹಿಂದಿರುವ ನೋವಿನಿಂದ ನಮ್ಮ ಹಿರಿಯರು ಸಂಘಟನೆಗಳ ರಚನೆ ಮಾಡಿದರು. ಮನಸ್ಸು ಮನಸ್ಸುಗಳನ್ನು ಬೆಸೆಯುವ ಆದರ್ಶ, ಸಂವಿಧಾನ ಬದ್ದ ಸಂಘಟನೆ ಯುವವಾಹಿನಿ ಎಂದು ಮಂಗಳೂರು ಸಂತ ಎಲೋಶಿಯಸ್ ಕಾಲೇಜ್ ಉಪನ್ಯಾಸಕ ಡಾ. ಗಣೇಶ್ ಅಮೀನ್ ಸಂಕಮಾರ್ ತಿಳಿಸಿದರು. ಅವರು ದಿನಾಂಕ 12.03.2017 ನೇ ಆದಿತ್ಯವಾರ ಮಂಗಳೂರು ಕೊಟ್ಟಾರ ಚೌಕಿಯಲ್ಲಿರುವ ಮೆ.ಐಡಿಯಲ್ ಎರೇಂಜರ್ಸ್ […]
Read More

12-03-2017, 11:50 AM
ಯುವವಾಹಿನಿ ಕೂಳೂರು ಘಟಕದ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಅಭಿವ್ಯಕ್ತಿ – ಅಭಿಪ್ರಾಯಗಳ ನಿರೂಪಣೆ ಕಾರ್ಯಕ್ರಮವು ದಿನಾಂಕ 12.03.2017 ನೇ ಆದಿತ್ಯವಾರ ಕೂಳೂರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರದಲ್ಲಿ ಜರುಗಿತು. ಅಭಿಪ್ರಾಯಗಳ ನಿರೂಪಣೆ ಮಾಡಿದ ಸಹನಾ ಕುಂದರ್ – ಈ ಜಗತ್ತು ಗಂಡು ಹೆಣ್ಣು ಇಬ್ಬರನ್ನೂ ಅವಲಂಬಿಸಿದೆ. ಟಿವಿ ಸೀರಿಯಲ್ಗಳ ಭ್ರಮೆಯಿಂದ ಮಹಿಳೆಯರು ಹೊರ ಬರಬೇಕು. ನಮ್ಮ ರಕ್ತದಲ್ಲಿ ನಮ್ಮ ಸಂಸ್ಕೃತಿ ಅಡಕವಾಗಿದೆ. ಪಾಶ್ಚಾತ್ಯ ಸಂಸ್ಕೃತಿಗೆ ನಾವು ಬಲಿಯಾಗಿದ್ದೇವೆ. ಮಹಿಳೆಯರು ಸಂಸ್ಕೃತಿ ಸಂಸ್ಕಾರದ ಬಗ್ಗೆ ಜಾಗೃತರಾದಾಗ […]
Read More

12-03-2017, 5:54 AM
ಬೆಳ್ತಂಗಡಿ ಯುವವಾಹಿನಿ ಆಶ್ರಯದಲ್ಲಿ ಮೂಡುಕೋಡಿಯಲ್ಲಿ ದಿನಾಂಕ 12.03.2017 ನೇ ಆದಿತ್ಯವಾರ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ಬೆಳ್ತಂಗಡಿ ಶಾಸಕ ಹಾಗೂ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅದ್ಯಕ್ಷ. ಕೆ ವಸಂತ ಬಂಗೇರ ಮತ್ತು ಸುಜಿತಾ ವಿ ಬಂಗೇರ, ಗ್ರಾಮದ ಪ್ರಥಮ ಬಿಲ್ಲವ ಸಮಾಜದ ಪೊಲೀಸ್ ಕಾನ್ಸ್ಸ್ಟೇಬಲ್ ಶೈಲೇಂದ್ರ ಕೆ ಕೋಳಂಗಜೆಗುತ್ತು, ನ್ಯಾಯವಾದಿ ಹರೀಶ್ ಪಿ ಎನ್ ,ಝೀ ಟಿವಿ ಕಾಮಿಡಿ ಕಿಲಾಡಿ ಕಲಾವಿದ ಅನೀಶ್ ಅಮೀನ್, ಚರ್ಮವಾದ್ಯ ಪ್ರವೀಣ ಪ್ರಭಾಕರ್ ಪೂಜಾರಿ ಉರುಂಜಿಬೆಟ್ಟು, […]
Read More

05-03-2017, 11:28 AM
ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ತಾ 5-3-2017 ನೇ ಆದಿತ್ಯವಾರ ಯುವವಾಹಿನಿ ಅಂತರ್ ಘಟಕ ಮಹಿಳಾ “ದೇಯಿ ಬೈದ್ಯೆದಿ ಕ್ರೀಡಾಕೂಟ” ಕುದ್ರೋಳಿ ಶ್ರೀ ನಾರಾಯಣಗುರು ಕಾಲೇಜು ಮೈದಾನದಲ್ಲಿ ನಡೆಯಿತು. ಕ್ರೀಡೆಯು ಮಾನವೀಯ ಸಂಬಂಧ ಬೆಸೆದು ಸಾಮರಸ್ಯ ಮೂಡಿಸುತ್ತದೆ. ಯುವವಾಹಿನಿ ಮಹಿಳಾ ಘಟಕವು ಕ್ರೀಡೆಗೆ ನೀಡುತ್ತಿರುವ ಪ್ರೋತ್ಸಾಹ ಶ್ಲಾಘನೀಯವಾದುದು ಎಂದು ಕುದ್ರೋಳಿ ಬಿಲ್ಲವ ಮಹಿಳಾ ಸಂಘದ ಅಧ್ಯಕ್ಷರಾದ ಶ್ರೀಮತಿ ಸುಮಲತಾ ಎನ್. ಸುವರ್ಣರವರು ಕ್ರೀಡಾಕೂಟ ಉದ್ಘಾಟಿಸಿ ತಿಳಿಸಿದರು. ಯುವವಾಹಿನಿ ಕೆಂದ್ರಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ, ಮಹಿಳಾ ಘಟಕದ […]
Read More

05-03-2017, 7:07 AM
ಸುರತ್ಕಲ್ ಯುವವಾಹಿನಿ ಕುಟುಂಬ ಸದಸ್ಯರ ಕುಟುಂಬ ಸಮ್ಮಿಲನ ಕಾರ್ಯಕ್ರಮವು ದಿನಾಂಕ 05.03.2017 ನೇ ಆದಿತ್ಯವಾರ ಪ್ರಕೃತಿಯ ರಮಣೀಯ ಸ್ಥಳವಾದ ಸಸಿಹಿತ್ಲು ಕಡಲ ಕಿನಾರೆಯಲ್ಲಿ ಜರುಗಿತು. ಯುವವಾಹಿನಿ ಸುರತ್ಕಲ್ ಘಟಕದ ಅದ್ಯಕ್ಷ ರವೀಂದ್ರ ಕೋಟ್ಯಾನ್, ನಿಕಟಪೂರ್ವ ಅದ್ಯಕ್ಷ ಭಾಸ್ಕರ್ ಸಾಲ್ಯಾನ್, ಯುವವಾಹಿನಿ ಕೇಂದ್ರ ಸಮಿತಿಯ ಅದ್ಯಕ್ಷ ಪದ್ಮನಾಭ ಮರೋಳಿ, ಉಪಾಧ್ಯಕ್ಷ ಯಶವಂತ ಪೂಜಾರಿ ಮತ್ತಿತರ ಗಣ್ಯರು ಸೇರಿದಂತೆ 60ಕ್ಕೂ ಹೆಚ್ಚು ಕುಟುಂಬ ಸದಸ್ಯರು ಭಾಗವಹಿಸಿದ್ದರು ವಿವಿಧ ಆಟೋಟ ಸ್ಪರ್ಧೆಗಳು, ಮನರಂಜನಾ ಕಾರ್ಯಕ್ರಮಗಳನ್ನು ಸಡೆಸಲಾಯುತು. ಸುರತ್ಕಲ್ ಯುವವಾಹಿನಿ ಕಾರ್ಯದರ್ಶಿ ರಿತೇಶ್ ಕುಮಾರ್ […]
Read More

03-03-2017, 5:00 AM
ಸರಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ದೇಶಾದ್ಯಂತ ಶಿಕ್ಷಣ ಸುಧಾರಣಾ ಅಭಿಯಾನ ನಡೆಸುತ್ತಿರುವ ಹಾಗೂ ಬಂಟ್ವಾಳ ದಡ್ಡಲಕಾಡು ಸರಕಾರಿ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ರೂಪಿಸಿದ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಅದ್ಯಕ್ಷ ಶ್ರೀ ಪ್ರಕಾಶ್ ಅಂಚನ್ ಅವರ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಗಣನೀಯ ಸಾಧನೆಯನ್ನು ಗುರುತಿಸಿ ಕೇಲ್ದೋಡಿ ಶ್ರೀ ವೈದ್ಯನಾಥ ಕೊಡಮಣಿತ್ತಾಯ ಬ್ರಹ್ಮಬೈದರ್ಕಳ ಕ್ಷೇತ್ರದಲ್ಲಿ ದಿನಾಂಕ 03.03.2017 ನೇ ಶುಕ್ರವಾರದಂದು ಜರುಗಿದ ಹುಟ್ಟೂರ ಅಭಿನಂದನಾ ಸಮಾರಂಭದಲ್ಲಿ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಅಭಿನಂದಿಸಲಾಯಿತು. ಈ […]
Read More

01-03-2017, 4:13 AM
ದಿನಾಂಕ 1-3-2017 ರಂದು ಶ್ರೀ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರದ ಸಭಾಂಗಣದಲ್ಲಿ ಯುವವಾಹಿನಿ (ರಿ) ಕೂಳೂರು ಘಟಕ ಮತ್ತು ಬ್ರಹ್ಮಶ್ರೀ ನಾರಾಯಣಗುರು ಮಂದಿರ ಇವುಗಳ ಜಂಟಿ ಆಶ್ರಯದಲ್ಲಿ ಕಾನೂನು ಹಾಗೂ ಗಸ್ತು ವ್ಯವಸ್ಥೆಯ ಬಗ್ಗೆ ಮಾಹಿತಿ ಕಾರ್ಯಾಗಾರ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೂಳೂರು ಘಟಕದ ಉಪಾಧ್ಯಕ್ಷ ಪುಷ್ಪರಾಜ್ ಕುಮಾರ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕಾವೂರು ಪೊಲೀಸ್ ಠಾಣೆಯ ಪಿಎಸ್ಐ ಉಮೇಶ್ ಕುಮಾರ್ ಅವರು ಗಸ್ತು ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಿದರು. ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷ […]
Read More

26-02-2017, 7:24 AM
ಯುವವಾಹಿನಿ 24ನೇ ಘಟಕವಾಗಿ ಅಸ್ತಿತ್ವಕ್ಕೆ ಬಂದ ಕೊಲ್ಯ ಘಟಕದ ಪದಗ್ರಹಣ ಸಮಾರಂಭವು ಫೆಬ್ರವರಿ 26 ರಂದು ಕೊಲ್ಯ ಶ್ರೀ ನಾರಾಯಣಗುರು ಮಂದಿರದಲ್ಲಿ ಜರಗಿತು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಪದ್ಮನಾಭ ಮರೋಳಿ ನೂತನ ಪದಾಧಿಕಾರಿಗಳಿಗೆ ಪದಪ್ರಧಾನ ಮಾಡಿದರು. ಸುರೇಶ್ ಬಿ. ನೇತೃತ್ವದ 12 ಸದಸ್ಯರ ಕ್ರಿಯಾಶೀಲ ಯುವಕರ ತಂಡವು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಪದಾಧಿಕಾರಿಗಳ ವಿವರ ಈ ಕೆಳಗಿನಂತಿದೆ ಅದ್ಯಕ್ಷರು : ಸುರೇಶ್ ಬಿ ಉಪಾಧ್ಯಕ್ಷರು : ರವಿ ಕೊಂಡಾಣ ಕಾರ್ಯದರ್ಶಿ : ಲತೀಶ್ ಎಂ ಸಂಕೊಳಿಗೆ […]
Read More

12-02-2017, 12:01 PM
ತಾ. 12-2-2017 ರಿಂದ 15-2-2017 ರವರೆಗೆ ಯುವವಾಹಿನಿ ಕೇಂದ್ರ ಸಮಿತಿಯ ಕಛೇರಿಯಲ್ಲಿ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ವತಿಯಿಂದ ಭಾರತ ಸರಕಾರ ದತ್ತೋಪಂತ್ ಥೇಂಗಡಿ ರಾಷ್ಟ್ರೀಯ ಕಾರ್ಮಿಕರ ಶಿಕ್ಷಣ ಅಭಿವೃದ್ಧಿ ಮಂಡಳಿ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಪ್ರಾದೇಶಿಕ ನಿರ್ದೇಶನಾಲಯ ಮಂಗಳೂರು ಇದರ ಸಹಯೋಗದೊಂದಿಗೆ 4 ದಿನಗಳ ಅಸಂಘಟಿತ ಕಾರ್ಮಿಕರ ಕಾರ್ಯಾಗಾರ ಜರಗಿತು. ಕಾರ್ಯಕ್ರಮವನ್ನು ರಾಷ್ಟ್ರೀಯ ಕಾರ್ಮಿಕ ಶಿಕ್ಷಣ ಮಂಡಳಿಯ ಶಿಕ್ಷಣಾಧಿಕಾರಿ ಸತೀಶ್ ಕುಮಾರ್ ಹಾಗೂ ಕೇರ್ಸ್ ಮಂಗಳೂರು ಇದರ ನಿರ್ದೇಶಕರಾಗಿರುವ ಸತೀಶ್ ಮಾಬೆನ್ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ […]
Read More

04-02-2017, 6:25 AM
ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಸದಸ್ಯರು ದಿನಾಂಕ 04.02.2017 ರಂದು ಲೋಕಶಾಂತಿಯ ಹರಿಕಾರ ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮಸ್ಥಾನ ಕೇರಳದ ಶಿವಗಿರಿಗೆ ಪ್ರವಾಸ ಕೈಗೊಂಡರು.
Read More