
20-03-2022, 5:41 AM
ಯುವವಾಹಿನಿ ಸಂಸ್ಥೆಯು ಯುವ ಸಮುದಾಯವನ್ನು ಕಟ್ಟಿ ಬೆಳೆಸುವ ಧ್ಯೇಯದೊಂದಿಗೆ ಇಂದು ಮಾದರಿಯಾಗಿ ಬೆಳೆದಿದೆ. ಸಮಾಜಮುಖಿ ಚಿಂತನೆಯಿಂದ ತಮ್ಮ ಸೇವೆಯನ್ನು ಎಲ್ಲಾ ಸಮಾಜಕ್ಕೂ ನೀಡುತ್ತಿರುವುದು ಶ್ಲಾಘನೀಯ ಇಂತಹ ಸೇವಾ ಸಂಸ್ಥೆಗೆ ಉತ್ತಮ ಭವಿಷ್ಯವಿದೆ ಎಂದು ಹಳೆಯಂಗಡಿ ಬಿಲ್ಲವ ಸಂಘದ ಅಧ್ಯಕ್ಷರಾದ ಚಂದ್ರಶೇಖರ ನಾನಿಲ್ ಹೇಳಿದರು. ಅವರು ದಿನಾಂಕ 20.03.2022 ರಂದು ಹಳೆಯಂಗಡಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ವಠಾರದಲ್ಲಿ ಹಳೆಯಂಗಡಿ ಯುವವಾಹಿನಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಘಟಕದ ನಿರ್ಗಮನ ಅಧ್ಯಕ್ಷರಾದ ಹರೀಶ್ ಆರ್ […]
Read More

19-03-2022, 4:13 PM
ಮೂಲ್ಕಿ:- ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ “ಮಹಿಳಾ ಸಂಭ್ರಮ – 2022″ ಕಾರ್ಯಕ್ರಮವು ದಿನಾಂಕ 19.3.2022ರ ಶನಿವಾರ ಮುಲ್ಕಿ ಬಿಲ್ಲವ ಸಂಘದ ಸಭಾಗೃಹದಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭರತೇಶ್ ಅಮೀನ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸರಕಾರಿ ಆಯುಷ್ ಆರೋಗ್ಯ ಮತ್ತು ಕ್ಷೇಮ ಕೇಂದ್ರ, ಕೊಲ್ಲೂರು ಇದರ ಆಸ್ಪತ್ರೆಯ ವೈದ್ಯಾಧಿಕಾರಿ ಡಾ|| ಶೋಭಾರಾಣಿ ಎನ್.ಎಸ್.ನಮ್ಮ ಆರೋಗ್ಯ ರಕ್ಷಣೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತಾ ನಾವು ದೈಹಿಕ ,ಮಾನಸಿಕ ಆರೋಗ್ಯವನ್ನು ಕಾಯ್ದು ಕೊಳ್ಳುವುದರ ಜೊತೆಗೆ ಸಾಮಾಜಿಕ ಆರೋಗ್ಯ […]
Read More

16-03-2022, 2:39 PM
ಕೂಳೂರು :- ಯುವವಾಹಿನಿ ಕೂಳೂರು ಘಟಕದ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ದಿನಾಚರಣೆ ಕಾರ್ಯಕ್ರಮವು ದಿನಾಂಕ 16-03-2022 ಬುಧವಾರದಂದು ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರ ಕೂಳೂರು ಇಲ್ಲಿ 7.00 ಗಂಟೆಗೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವ ಚಿತ್ರಕ್ಕೆ ದೀಪ ಬೆಳಗಿಸುವುದರೊಂದಿಗೆ ಆರಂಭವಾಯಿತು. ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಉಪಮೇಯರ್ ಸುಮಂಗಲಾ ರಾವ್ ಕಾರ್ಯಕ್ರಮವನ್ನು ಉದ್ಘಾಟಿಸಿ ಹೆಣ್ಣು ಅಬಲೆಯಲ್ಲ ಸಬಲೆ ಮಹಿಳೆ ಕೇವಲ ಮನೆ ಕೆಲಸಕ್ಕೆ ಸೀಮಿತವಲ್ಲ ಆಕೆಯನ್ನು ಎಲ್ಲಾ ಕ್ಷೇತ್ರಗಳಲ್ಲೂ ಸರಿಸಮಾನವಾಗಿ ನೋಡಬೇಕು ಎಂದು […]
Read More

13-03-2022, 11:48 AM
ಬೆಳ್ತಂಗಡಿ: ”ಮಹಿಳೆ ಇನ್ನೊಬ್ಬರ ಮುಂದೆ ಕೈ ಚಾಚಿ ಬದುಕುವುದಕ್ಕಿಂತ ತಾನೇ ಹಣ ಗಳಿಸಿಕೊಳ್ಳಬೇಕು. ಆಕೆ ಅರ್ಥಿಕವಾಗಿ ಸದೃಢವಾದಾಗ ಸಮಸ್ಯೆ ದೂರವಾಗುವುದರ ಜೊತೆಗೆ ಸಮಾಜದಲ್ಲಿ ಗೌರವ, ಸ್ಥಾನಮಾನ ಸಿಗುವುದು’ ಎಂದು ಮಂಗಳೂರು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕಿ ರೇಖಾ ಗೋಪಾಲ್ ಹೇಳಿದರು. ಅವರು ದಿನಾಂಕ 13.03.2022 ರಂದು ಬೆಳ್ತಂಗಡಿಯ ಸುವರ್ಣ ಆರ್ಕೆಡ್,ಇದರ ಸಭಾಂಗಣದಲ್ಲಿ ಬೆಳ್ತಂಗಡಿ ಯುವವಾಹಿನಿ ಘಟಕ, ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ, ಬೆಳ್ತಂಗಡಿ ಇವರ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ […]
Read More

13-03-2022, 11:00 AM
ಸಮಾಜಮುಖಿ ಕಾರ್ಯಗಳನ್ನು ಮಾಡಿ ಜನಮೆಚ್ಚುಗೆಯನ್ನು ಪಡೆದ ಯುವವಾಹಿನಿ ಬೇರೆ ಸಂಸ್ಥೆಗಳಿಗೆ ಕೈಗನ್ನಡಿಯಾಗಿದೆ, ಸಮಾಜದ ವಿವಿಧ ಅಯಾಮಗಳಲ್ಲಿ ನೊಂದವರಿಗೆ ನೆರವಾಗುತ್ತಿರುವುದು ಶ್ಲಾಘನೀಯ ಮುಂದೆ ಹೊಸ ತಂಡದೊಂದಿಗೆ ಇನ್ನಷ್ಟು ಕಾರ್ಯಗಳು ಮೂಡಿಬರಲಿ ಎಂದು ಮೂಲ್ಕಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಉಮನಾಥ ಕೋಟ್ಯಾನ್ ತಿಳಿಸಿ ಶುಭ ಹಾರೈಸಿದರು. ಅವರು ದಿನಾಂಕ 13.03.2022 ರಂದು ಬಜಪೆ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ನಡೆದ ಯುವವಾಹಿನಿ ಬಜ್ಪೆ ಘಟಕದ ನೂತನ ತಂಡದ ಪದಗ್ರಹಣ ಸಮಾರಂಭದ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು. ಸಮಾರಂಭದ […]
Read More

06-03-2022, 10:44 AM
ಕೆಎಂಸಿ ಸಂಸ್ಥೆಯ ಅತ್ತಾವರ ಇವರ ಸಹಕಾರದೊಂದಿಗೆ ಯುವವಾಹಿನಿ(ರಿ.) ಶಕ್ತಿನಗರ ಘಟಕ, ಲಯನ್ಸ್ ಕ್ಲಬ್ ಮಂಗಳೂರು ಇವರ ಸಹಭಾಗಿತ್ವದೊಂದಿಗೆ ಬೃಹತ್ ರಕ್ತದಾನ ಶಿಬಿರ, ಆರೋಗ್ಯ ಶಿಬಿರವು ದಿನಾಂಕ 06-03- 2022ರಂದು ಕುವೆಂಪು ಮಾದರಿ ಸರಕಾರಿ ಶಾಲೆ ನಾಳ್ಯಪದವು ಶಕ್ತಿನಗರದಲ್ಲಿ ಜರುಗಿತು. ಯುವವಾಹಿನಿ( ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿ ಶಕ್ತಿನಗರ ಯುವವಾಹಿನಿ ಘಟಕದ ಕಾರ್ಯಕ್ರಮದ ಬಗ್ಗೆ ಶ್ಲಾಘಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಘಟಕದ ಅಧ್ಯಕ್ಷರಾದ ಜಯರಾಮ ಪೂಜಾರಿ ಬಾಳಿಲ […]
Read More

27-02-2022, 8:12 AM
ಮಂಗಳೂರು ದಿ.27.02.2022 ಯುವವಾಹಿನಿ (ರಿ.) ಕೆಂಜಾರು – ಕರಂಬಾರು ಘಟಕದ ಪದಗ್ರಹಣ ಸಮಾರಂಭವು ಶ್ರೀ ದೇವಿ ಭಜನಾ ಮಂದಿರ ಕೆಂಜಾರು ಕರಂಬಾರು ಇಲ್ಲಿ ಜರುಗಿತು. ಶ್ರೀ ರಾಮಾಂಜನೆಯ ಮಂದಿರ ಕೆಂಜಾರು ಇದರ ಅಧ್ಯಕ್ಷರಾದ ಶ್ರೀ ಮಹಾಬಲ ಪೂಜಾರಿಯವರು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಆರತಿಗೈದು ದೀಪ ಪ್ರಜ್ವಲನೆ ಮಾಡುವ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಶ್ರೀದೇವಿ ಭಜನಾ ಮಂದಿರದ ಅಧ್ಯಕ್ಷರಾದ ಶ್ರೀ ಶೇಖರ್ ಬಂಗೇರ ಅವರು ಸಮಾರಂಭವನ್ನು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಜೀತೇಶ್ ಸಾಲ್ಯಾನ್ ವಹಿಸಿದ್ದರು. ಮಾಜಿ ಅಧ್ಯಕ್ಷರಾದ […]
Read More

20-02-2022, 2:26 PM
ಕೋಟ: ಸಂಘಟನೆಗಳು ಸಮಾಜದ ಶ್ರೇಯಸ್ಸಿಗಾಗಿ ಸಮಾಜಮುಖಿ ಚಿಂತನೆಗಳ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ನೊಂದವರ, ಅಶಕ್ತರ ಬಾಳಿಗೆ ಬೆಳಕಾಗಿ ಹೊಸ ಮುನ್ನುಡಿ ಬರೆಯುತ್ತಿದೆ. ಈ ನಿಟ್ಟಿನಲ್ಲಿ ಯುವವಾಹಿನಿ(ರಿ) ಯಡ್ತಾಡಿ ಘಟಕ ಹಲವಾರು ಸಮಾಜ ಸೇವೆಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಂಘಟನೆಯ ಸ್ಥಾಪನೆಯ ಉದ್ದೇಶದಂತೆ ಹೆಜ್ಜೆ ಹಾಕುತ್ತಿರುವುದು ಶ್ಲಾಘನೀಯ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಯಡ್ತಾಡಿ ಶ್ರೀಕೃಷ್ಣ ನಿಲಯದ ವಠಾರದಲ್ಲಿ ಯುವವಾಹಿನಿ (ರಿ) ಯಡ್ತಾಡಿ […]
Read More

13-02-2022, 4:30 PM
ಕಾರ್ಕಳ :ಬಿಲ್ಲವ ಸಮಾಜ ಸೇವಾ ಸಂಘ(ರಿ) ಬಜಗೋಳಿ,ಯುವವಾಹಿನಿ(ರಿ) ಕಾರ್ಕಳ ಘಟಕ,ಹಾಗೂ ಯೂತ್ ಬಿಲ್ಲವ(ರಿ) ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ, ಜಿಲ್ಲಾ ರಕ್ತ ನಿಧಿ ಕೇಂದ್ರ ಉಡುಪಿ ಇದರ ಸಹಯೋಗದೊಂದಿಗೆ ಸಾರ್ವಜನಿಕ ಬ್ರಹತ್ ರಕ್ತದಾನ ಶಿಬಿರವು ಶ್ರೀ ನಾರಾಯಣ ಗುರು ಸಭಾಭವನ ಬಜಗೋಳಿ ಇಲ್ಲಿ ಫೆ.13ರಂದು ನಡೆಯಿತು. ಬಜಗೋಳಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಅಶೋಕ್ ಪೂಜಾರಿ ನಲ್ಲೂರು ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಜನಔಷಧಿ ಕೇಂದ್ರ ಕಾರ್ಕಳ ಇದರ ಮಾಲಕರಾದ ಸುಶಾಂತ್ ಬಜಗೋಳಿ ಇವರು […]
Read More

13-02-2022, 8:29 AM
ಬೆಂಗಳೂರು : ಫೆಬ್ರವರಿ 13, 2022ರ ಭಾನುವಾರ ಬೆಂಗಳೂರಿನ ಜಯನಗರದ ಯುವಕ ಸಂಘದ ವಿವೇಕ ಸಭಾಂಗಣದಲ್ಲಿ ಸಂಭ್ರಮವೋ ಸಂಭ್ರಮ.ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮೂಲೆಗಳಿಂದ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಒಟ್ಟು ಸೇರಿರುವ ಬಿಲ್ಲವ ಸಮಾಜದ ಯುವಕ-ಯುವತಿಯರು ಯುವವಾಹಿನಿ (ರಿ) ಬೆಂಗಳೂರು ಘಟಕದ ನಾಲ್ಕನೆಯ ವಾರ್ಷಿಕ ಸಮಾವೇಶವನ್ನು ಅದ್ದೂರಿಯಾಗಿ ಆಚರಿಸಿಕೊಂಡರು. ಬೆಳಿಗ್ಗೆ ಗಂಟೆ ಹತ್ತರಿಂದ ಆರಂಭವಾದ ಕಾರ್ಯಕ್ರಮವನ್ನು ಸಕೇಶ್ ಬುನ್ನನ್ ನಡೆಸಿಕೊಟ್ಟರು. ವಿವಿಧ ನೃತ್ಯ-ಸಂಗೀತ ಗಳನ್ನೊಳಗೊಂಡ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಸೇರಿದ್ದ ಜನಸಾಗರವು ಮನರಂಜನೆಯ ರಸದೌತಣವನ್ನು ಸವಿಯುವಂತಾಯಿತು. ಸುಮಾರು […]
Read More