Yuvavahini

ಇತರೆ

ಮಕ್ಕಳ ಸುರಕ್ಷತೆ ಪ್ರತಿಯೊಬ್ಬರ ಜವಾಬ್ದಾರಿ: ರಘು ನಾಯ್ಕ್

ಸುರತ್ಕಲ್ ಜೂನ್ 22: ಮಕ್ಕಳ ಸುರಕ್ಷತೆ, ಪೋಕ್ಸೋ ಕಾಯಿದೆಯ ಅರಿವು, ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳು ಹಾಗೂ ಮೊಬೈಲ್ ಬಳಕೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಯುವವಾಹಿನಿ (ರಿ.) ಸುರತ್ಕಲ್ ಘಟಕದ ವತಿಯಿಂದ ಶ್ರೀ ಮಹಾಲಿಂಗೇಶ್ವರ ಆಂಗ್ಲ ಮಾಧ್ಯಮ ಶಾಲೆ, ಸುರತ್ಕಲ್‌ನಲ್ಲಿ ಜಾಗೃತಿ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸುರತ್ಕಲ್ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ರಘು ನಾಯ್ಕ್ ಅವರು ಮಾತನಾಡಿ, “ಮಕ್ಕಳು ದೇಶದ ಭವಿಷ್ಯ. ಅವರ ಸುರಕ್ಷಿತ ಹಾಗೂ ನಿಶ್ಚಿಂತ ಬಾಲ್ಯವನ್ನು ಕಾಪಾಡುವುದು ನಮ್ಮೆಲ್ಲರ […]

Read More

ಯುವವಾಹಿನಿ ಸಂಸ್ಥೆಯ ಶಿಸ್ತು, ಸಂಘಟನಾ ಸಾಮರ್ಥ್ಯ ಅನುಕರಣೀಯ : ಭುವನೇಶ್ ಪಚ್ಚಿನಡ್ಕ

ಬಂಟ್ವಾಳ : ಯುವವಾಹಿನಿ ಸಂಸ್ಥೆಯ ಶಿಸ್ತು, ಸಂಘಟನಾ ಸಾಮರ್ಥ್ಯ ಹಾಗೂ ಸಮಾಜಮುಖಿ ಕಾರ್ಯಚಟುವಟಿಕೆಗಳು ನಿಜಕ್ಕೂ ಅನುಕರಣೀಯವಾಗಿವೆ ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಹೇಳಿದರು. ಅವರು ಜೂನ್ 21 ರಂದು ಬಿ.ಸಿ.ರೋಡ್‌ನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆದ ಯುವವಾಹಿನಿ ಬಂಟ್ವಾಳ ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಕಳೆದ 38 ವರ್ಷಗಳಿಂದ ಯುವವಾಹಿನಿ ಯುವಜನರನ್ನು ಒಗ್ಗೂಡಿಸಿ ಶಿಕ್ಷಣ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ […]

Read More

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾನೂನು ಅರಿವು ಅಗತ್ಯ : ಅರೋಲಿನ್ ಡಿ’ಸೋಜ”

ಮಂಗಳೂರು : ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮವು ಜೂನ್ 16ರಂದು ನಡೆಯಿತು. ಕಾರ್ಯಕ್ರಮವು ಗುರು ಪೂಜೆಯೊಂದಿಗೆ ಆರಂಭಗೊಂಡು, ಗುರು ಸ್ತುತಿಯ ಬಳಿಕ ಘಟಕದ ಅಧ್ಯಕ್ಷ ಹರೀಶ್ ಕೆ. ಸುವರ್ಣ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಅಧ್ಯಕ್ಷರು ಸಭಿಕರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಅರೋಲಿನ್ ಡಿ’ಸೋಜ ಅವರು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಮಹತ್ವ ಹಾಗೂ […]

Read More

ಬೆಂಗಳೂರು ಘಟಕದ ಪದಗ್ರಹಣ ಸಮಾರಂಭಕ್ಕೆ ವಿವಿಧ ಘಟಕಗಳಿಂದ ಅಭೂತಪೂರ್ವ ಬೆಂಬಲ

ಬೆಂಗಳೂರು : ಯುವವಾಹಿನಿ (ರಿ.) ಬೆಂಗಳೂರು ಘಟಕದ ಪದಗ್ರಹಣ ಸಮಾರಂಭವು ಸಂಘಟನಾ ಬದ್ಧತೆ, ಏಕತೆ ಹಾಗೂ ಪರಸ್ಪರ ಸಹಕಾರದ ಭಾವನೆಯನ್ನು ಅನಾವರಣಗೊಳಿಸಿದ ಸ್ಮರಣೀಯ ಕಾರ್ಯಕ್ರಮವಾಗಿ ಯಶಸ್ವಿಯಾಗಿ ನೆರವೇರಿತು. ಈ ಸಮಾರಂಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರು, ಮಾಜಿ ಅಧ್ಯಕ್ಷರು ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು ಸೇರಿದಂತೆ ಒಟ್ಟು 60ಕ್ಕೂ ಹೆಚ್ಚು ಸದಸ್ಯರು ಭಾಗವಹಿಸಿದ್ದು ವಿಶೇಷವಾಗಿತ್ತು. ಈ ಸಂಖ್ಯೆಯು ಕೇವಲ ಹಾಜರಾತಿಯನ್ನು ಮಾತ್ರ ಸೂಚಿಸುವುದಲ್ಲ; ಸಂಘಟನೆಯ ಮೇಲಿನ ಸದಸ್ಯರ ಬದ್ಧತೆ, ಪ್ರೀತಿ ಹಾಗೂ ಅಚಲ ನಂಬಿಕೆಯ […]

Read More

ಶಿಸ್ತು, ಸಾಂಘಿಕತೆ ಮತ್ತು ಸಮಾಜಸೇವೆಯ ಸಂಭ್ರಮ: ಯುವವಾಹಿನಿ ಬೆಂಗಳೂರು ಘಟಕದ ಪದಗ್ರಹಣ

ಬೆಂಗಳೂರು : ಯುವವಾಹಿನಿ (ರಿ.) ಬೆಂಗಳೂರು ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ದಿನಾಂಕ 14 ಜೂನ್ 2026 ರಂದು ಬೆಂಗಳೂರಿನ ವಿಧಾನಸೌಧದ ಬಳಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಅತ್ಯಂತ ಅಚ್ಚುಕಟ್ಟಾಗಿ, ಶಿಸ್ತುಬದ್ಧವಾಗಿ ಹಾಗೂ ಸಾಂಘಿಕ ಮನೋಭಾವದಿಂದ ನೆರವೇರಿತು. . ಸಂಘಟನಾ ಸಾಮರ್ಥ್ಯ ಶ್ಲಾಘನೀಯ : ಜೆ.ಪಿ.ಸುಧಾಕರ್ಬೆಂಗಳೂರು ಘಟಕದ ಸಂಘಟನಾ ಸಾಮರ್ಥ್ಯ, ಸಮಯಪಾಲನೆ, ಶಿಸ್ತು ಮತ್ತು ಸದಸ್ಯರ ನಡುವಿನ ಐಕ್ಯತೆಯು ಶ್ಲಾಘನೀಯ ಎಂದು ಸಮಾರಂಭ ಉದ್ಘಾಟಿಸಿ ಮಾತನಾಡಿದ ಖ್ಯಾತ […]

Read More

ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ರಕ್ತದಾನ ಶಿಬಿರ

ಕಟಪಾಡಿ, ಜೂನ್ 14: ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಯುವವಾಹಿನಿ (ರಿ.) ಕಟಪಾಡಿ ಘಟಕದ ವತಿಯಿಂದ ಜೇಸೀ ಭವನ, ಕಟಪಾಡಿಯಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು. ಮಾನವೀಯ ಸೇವೆಯ ಉದ್ದೇಶದಿಂದ ನಡೆದ ಈ ಶಿಬಿರದಲ್ಲಿ ಘಟಕದ ಅಧ್ಯಕ್ಷ ಸುಶಾಂತ್ ಪೂಜಾರಿ, ಉಪಾಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿ ರಕ್ತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಿದರು. ಸಮಾಜದಲ್ಲಿ ಅಗತ್ಯವಿರುವ ರೋಗಿಗಳ ಜೀವ ಉಳಿಸಲು ರಕ್ತದಾನವು ಶ್ರೇಷ್ಠ ಸೇವೆಯಾಗಿದ್ದು, ಆರೋಗ್ಯವಂತರು ಸ್ವಯಂಪ್ರೇರಿತರಾಗಿ ನಿಯಮಿತವಾಗಿ ರಕ್ತದಾನ ಮಾಡಬೇಕು ಎಂದು ಈ ಸಂದರ್ಭದಲ್ಲಿ ಅಭಿಪ್ರಾಯ […]

Read More

ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ

ಮುಲ್ಕಿ : ಯುವವಾಹಿನಿ (ರಿ.) ಮುಲ್ಕಿ ಘಟಕದ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜೂನ್ 13, 2026ರಂದು ಸಂಜೆ 6 ಗಂಟೆಗೆ ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ನಡೆಯಿತು. ಬ್ರಹ್ಮಶ್ರೀ ನಾರಾಯಣಗುರು ದೇವರ ಪೂಜೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಘಟಕದ ಸದಸ್ಯೆ ರಾಜೇಶ್ವರಿ ನಿತ್ಯಾನಂದ ಪ್ರಾರ್ಥನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮುಲ್ಕಿ ನಗರ ಪಂಚಾಯತ್‌ನ ಮಾಜಿ ಅಧ್ಯಕ್ಷ ಸತೀಶ್ ಅಂಚನ್ ಮಾತನಾಡಿ, ಯುವ ಸಮಾಜವು ಶೈಕ್ಷಣಿಕ, […]

Read More

ಮಹಿಳಾ ಆರೋಗ್ಯ ಮತ್ತು ಕ್ಯಾನ್ಸರ್ ತಡೆ ಅರಿವು ಕಾರ್ಯಕ್ರಮ

ಮಂಗಳೂರು : ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ (ರಿ) ಹಾಗೂ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ನಡೆದ ಮಹಿಳಾ ಆರೋಗ್ಯ, ಋತುಬಂಧ ಮತ್ತು ಕ್ಯಾನ್ಸರ್ ತಡೆ ಅರಿವು ಕಾರ್ಯಕ್ರಮದಲ್ಲಿ, ಋತುಬಂಧದ ಸಂದರ್ಭದಲ್ಲಿ ಉಂಟಾಗುವ ದೈಹಿಕ ಹಾಗೂ ಮಾನಸಿಕ ಬದಲಾವಣೆಗಳು, ಕ್ಯಾನ್ಸರ್ ತಡೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳು, ನಿಯಮಿತ ತಪಾಸಣೆಯ ಮಹತ್ವ ಹಾಗೂ ಆರೋಗ್ಯಕರ ಜೀವನಶೈಲಿಯ ಅಗತ್ಯತೆಯ ಕುರಿತು ಸಂಪನ್ಮೂಲ ವ್ಯಕ್ತಿ ಡಾ. ನಿಶಿತಾ ಶೆಟ್ಟಿಯಾನ್ ಫೆರ್ನಾಂಡಿಸ್ ಮಾಹಿತಿ ನೀಡಿದರು. 40 ವರ್ಷಗಳ ಬಳಿಕ […]

Read More

ಕೊಟ್ಟಿಯೂರು ಮಹಾದೇವನ ಪವಿತ್ರ ವೈಶಾಖ ಯಾತ್ರೆ

ಶಕ್ತಿನಗರ : ವರ್ಷದಲ್ಲಿ ಕೇವಲ 28 ದಿನಗಳ ಕಾಲ ಮಾತ್ರ ದರ್ಶನಕ್ಕೆ ಅವಕಾಶವಿರುವ ಈ ಪುಣ್ಯಕ್ಷೇತ್ರಕ್ಕೆ ತೆರಳಲು ಜೂನ್ 6, 2026ರಂದು ಶನಿವಾರ ರಾತ್ರಿ 10.45 ಗಂಟೆಗೆ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ನಿರ್ದೇಶಕರು ಹಾಗೂ ಸದಸ್ಯರು ಸೇರಿದಂತೆ ಸುಮಾರು 33 ಮಂದಿ ನಾಲ್ಯಪದವು ಶಕ್ತಿನಗರ ಶಾಲೆಯ ಬಳಿ ಸೇರಿದರು. ಪ್ರಯಾಣ ಆರಂಭಿಸುವ ಮುನ್ನ ಎಲ್ಲರೂ ಗುರುಗಳಿಗೆ ಪ್ರಾರ್ಥನೆ ಸಲ್ಲಿಸಿ, ಮಹಾದೇವನ ದರ್ಶನದ ಸಂಕಲ್ಪದೊಂದಿಗೆ ಯಾತ್ರೆಯನ್ನು ಆರಂಭಿಸಿದರು. ಮರುದಿನ ಬೆಳಿಗ್ಗೆ ಸುಮಾರು 4.30 ಗಂಟೆಗೆ ಕೊಟ್ಟಿಯೂರು ತಲುಪಿದ […]

Read More

ದಕ್ಷಿಣ ಕಾಶಿ ಪುಣ್ಯಕ್ಷೇತ್ರ ತೀರ್ಥಯಾತ್ರೆ

ಕೂಳೂರು : ಕೇರಳದ ಕಣ್ಣೂರು ಜಿಲ್ಲೆಯಲ್ಲಿರುವ ಕೊಟ್ಟಿಯೂರು ಮಹಾದೇವ ದೇವಸ್ಥಾನವು ಅತ್ಯಂತ ಪವಿತ್ರ ಹಾಗೂ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿದ್ದು, ತನ್ನ ಆಧ್ಯಾತ್ಮಿಕ ಮಹತ್ವದಿಂದ ಭಕ್ತರಿಗೆ ವಿಶಿಷ್ಟ ಅನುಭವವನ್ನು ನೀಡುತ್ತಿದೆ. ಈ ಪುಣ್ಯಕ್ಷೇತ್ರಕ್ಕೆ ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ವಿಶೇಷ ತೀರ್ಥಯಾತ್ರೆಯನ್ನು ಆಯೋಜಿಸಲಾಯಿತು. ಜೂನ್ 6, 2026ರಂದು ರಾತ್ರಿ 10.00 ಗಂಟೆಗೆ ಕೂಳೂರಿನಿಂದ ಬಸ್ಸಿನ ಮೂಲಕ ಯಾತ್ರೆ ಆರಂಭಗೊಂಡಿತು. ಈ ಯಾತ್ರೆಯಲ್ಲಿ ಘಟಕದ ಮಾಜಿ ಅಧ್ಯಕ್ಷರು, ಅಧ್ಯಕ್ಷರು, ನಿರ್ದೇಶಕರು ಹಾಗೂ ಸದಸ್ಯರು ಸೇರಿದಂತೆ ಸುಮಾರು 40 ಮಂದಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!