
07-04-2019, 2:59 PM
ಶಕ್ತಿನಗರ : ಯುವವಾಹಿನಿ(ರಿ) ಶಕ್ತಿನಗರ ಘಟಕದ ಪದಗ್ರಹಣ ಸಮಾರಂಭವು ದಿನಾಂಕ 7/04/2019ನೇ ರವಿವಾರದಂದು ಕರಾಡ ಸಮಾಜ ಭವನದಲ್ಲಿ ನಡೆಯಿತು. ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಶ್ರೀ ನಾರಾಯಣ ಗುರುಗಳಿಗೆ ಹಿರಿಯ ಸದಸ್ಯರಾದ ಶ್ರೀ ಸದಾಶಿವ ಪೂಜಾರಿಯವರು ದೀಪವನ್ನು ಬೆಳಗಿಸಿ ಪ್ರಾರ್ಥನೆಯನ್ನು ಸಲ್ಲಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆಯನ್ನು ನೀಡಿದರು. ಪ್ರಾರ್ಥನೆಯ ನಂತರ ಸುಂದರ್ ಅಂಚನ್ ರವರು ಪದಗ್ರಹಣ ಸಮಾರಂಭದ ಉದ್ಘಾಟನೆಯನ್ನು ಮಾಡಿದರು. ಯುವವಾಹಿನಿ (ರಿ) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಡಾ.ರಾಜಾರಾಮ್, ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಹಾಗೂ ಶಕ್ತಿನಗರ […]
Read More

07-04-2019, 2:30 PM
ಅಡ್ವೆ: ಯುವವಾಹಿನಿ ಸಂಘಟನೆಯು ಊರಿನಲ್ಲಿ ಯಾವುದೇ ಅಡೆತಡೆಯಿಲ್ಲದೆ ಕಳೆದ 5 ವರ್ಷಗಳಿಂದ ಸಾಕಷ್ಟು ಬೆಳೆದು ನಿಂತು ಸಮಾಜಕ್ಕೆ ಕೈಲಾದ ಸಹಾಯ ನೀಡುತ್ತಿದೆ. ಇನ್ನು ಮುಂದೆಯೂ ನಿಂತ ನೀರಾಗದೆ ಮುಂದೆ ಸಾಗುತ್ತಿರಲಿ, ಇದಕ್ಕೆ ನಮ್ಮ ಹಿರಿಯರ ಸಲಹೆ ಸಹಕಾರ ಹಾಗೂ ಆಶೀರ್ವಾದ ಸದಾ ಇದೆ ಎಂದು ಅಡ್ವೆ ಗರಡಿಮನೆ ರಾಮ ಪೂಜಾರಿಯವರು ನುಡಿದರು. ಇವರು ಅಡ್ವೆ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಜರಗಿದ ಯುವವಾಹಿನಿ(ರಿ.) ಅಡ್ವೆ ಘಟಕದ 2019ನೇ ಸಾಲಿನ ಪದಗ್ರಹಣ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ […]
Read More

07-04-2019, 2:24 PM
ಕಂಕನಾಡಿ : ಯುವವಾಹಿನಿ(ರಿ) ಕಂಕನಾಡಿ ಘಟಕದ ಪದಗ್ರಹಣ ಸಮಾರಂಭ ವು ಮಹಾಕಾಳಿ ದೈವಸ್ಥಾನದ ವಠಾರ ಉಜ್ಜೋಡಿ ಯಲ್ಲಿ ಜರಗಿತು. ಸಮಾರಂಭವನ್ನು ಶ್ರೀನಿವಾಸ ಬಂಗೇರ ಉಜ್ಜೋಡಿ ಉಧ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಪ್ರಧಾನ ಕಾರ್ಯದರ್ಶಿ ರವಿಪೂಜಾರಿ ಚಿಲಿಂಬಿ ಅವರು ಮಾತನಾಡಿ ಯುವವಾಹಿನಿಯು ಜಾತಿ ಅಸಮಾನತೆಯನ್ನು ಹೋಗಲಾಡಿಸಿ ಯುವ ಜನತೆಯನ್ನು ಉತ್ತಮ ದಿಸೆಯಲ್ಲಿ ಕೊಂಡೊಯ್ಯುತ್ತಿದೆ ಸಂಘಟನೆಯಿಂದ ಇದು ಸಾಧ್ಯ ಗೆಜ್ಜೆಗಿರಿಯ ಶಿಲಾನ್ಯಾಸ ಸಂದರ್ಭ ಕೆಲವೇ […]
Read More

07-04-2019, 2:21 PM
ಹಳೆಯಂಗಡಿ : ಯುವವಾಹಿನಿ (ರಿ) ಹಳೆಯಂಗಡಿ ಘಟಕದ 2019-20 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ದಿನಾಂಕ 07-04-2019 ರಂದು ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲ (ರಿ) ಹಳೆಯಂಗಡಿಯ ಸಭಾಗ್ರಹದಲ್ಲಿ ಜರಗಿತು. ಕಾರ್ಯಕ್ರಮವನ್ನು ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಶ್ರೀ ಚಂದ್ರಶೇಖರ್ ನಾನಿಲ್ ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.ಯುವವಾಹಿನಿ (ರಿ) ಹಳೆಯಂಗಡಿಯ ಘಟಕದ ಅಧ್ಯಕ್ಷರಾದ ಹೇಮನಾಥ ಕರ್ಕೇರಾರವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಳ್ವಾಸ್ ಪದವಿ ಕಾಲೇಜಿನ ಉಪನ್ಯಾಸಕಿ […]
Read More

05-04-2019, 2:26 PM
ಕೂಳೂರು : ಅನಾಥಾಶ್ರಮದಲ್ಲಿ ಬೆಳೆಯುತ್ತಿದ್ದ ಲಕ್ಷ್ಮಿ ಎಂಬ ವಿದ್ಯಾರ್ಥಿನಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಯ ಮೊತ್ತವನ್ನು ನೀಡಲು ಅಸಾಧ್ಯವಾಗಿರುವುದರಿಂದ ಯುವವಾಹಿನಿ ಕೂಳೂರು ಘಟಕದ ವತಿಯಿಂದ ವಿದ್ಯಾರ್ಥಿನಿಗೆ ಆಸ್ಪತ್ರೆ ಶುಲ್ಕ ಭರಿಸಲು 20,000 /- ರೂಪಾಯಿ ನೀಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್, ನಿಕಟ ಪೂರ್ವ ಅಧ್ಯಕ್ಷರಾದ ಪುಷ್ಪರಾಜ್
Read More

04-04-2019, 1:36 PM
ಮಾಣಿ : ಜೀವನ ಪಯಣದ ಹಾದಿಯಲ್ಲಿ ಸಂಬಂಧಗಳು ಬಲು ಮಹತ್ವ ಪಡೆದಿದೆ. ಸಂಬಂಧಗಳು ಉಳಿಯಬೇಕಾದರೆ ಸ್ಪಂದನೆಯ ಅಗತ್ಯವಿದೆ. ಅದಕ್ಕೆ ಸಕಾಲ ಎಂಬಂತೆ ದುರ್ದೈವವಸಾತ್ ನಮ್ಮಘಟಕದ ಸದಸ್ಯರಾದ ನಮ್ಮ ಹತ್ತಿರದ ನಿವಾಸಿ ಬರಿಮಾರ್ ಗ್ರಾಮದ, ಬಲ್ಯ ಬಳಿ ವಾಸವಾಗಿರುವ ಸದಾನಂದ ಪೂಜಾರಿ ಹಾಗೂ ಜಯಂತಿ ದಂಪತಿಗಳ ಪುತ್ರ, “ಅಶ್ವಥ್” ರಸ್ತೆ ಅಪಘಾತದಲ್ಲಿ ಗಾಯಗೊಂಡು ಮಂಗಳೂರಿನ ಏ.ಜೆ ಹಾಸ್ಪಿಟಲ್ ನ ತುರ್ತು ನಿಗಾ ಘಟಕದಲ್ಲಿ ದಾಖಲಾಗಿದ್ದರು ಹಾಗೂ ಕಾಲಿನ ಶಸ್ತ್ರ ಚಿಕಿತ್ಸೆ ನಡೆದಿದೆ . ತೀರಾ ಬಡತನದಲ್ಲಿರುವ ಈ ಕುಟುಂಬಕ್ಕೆ […]
Read More

31-03-2019, 2:41 PM
ಉಡುಪಿ : ಉಡುಪಿ ಯುವವಾಹಿನಿ ಘಟಕದಲ್ಲಿ ದಿನಾಂಕ 31/03/2019 ರಂದು ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಭಾರತೀಯ ವಿಕಾಸ ಟ್ರಸ್ಟ್ ವತಿಯಿಂದ ಸ್ವ ಉದ್ಯೋಗ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಶಿಬಿರದಲ್ಲಿ ಮಹಿಳೆಯರಿಗೆ – ಸಾಂಬಾರು ಪುಡಿ, ಸಾರಿನ ಪುಡಿ, ಪುಳಿಯೋಗರೆ ಮಿಕ್ಸ್, ಪೇಪರ್ ಬ್ಯಾಗ್ ತಯಾರಿಸುವ ವಿಧಾನ, ಮ್ಯಾಟ್ ತಯಾರಿಸುವ ಬಗ್ಗೆ ತರಬೇತಿ ನೀಡಿದರು. ಸುಮಾರು 20 ಮಹಿಳೆಯರು ತರಬೇತಿಯಲ್ಲಿ ಪಾಲ್ಗೊಂಡುರು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಮತಿ ಲಕ್ಷ್ಮೀಬಾಯಿ ಹಾಗೂ ಶ್ರೀಮತಿ ಸುಮಂಗಲಾ ರವರು ಭಾಗವಹಿಸಿದ್ದರು.ಶಕುಂತಳ ಎಸ್ […]
Read More

30-03-2019, 4:44 PM
ಪಡುಬಿದ್ರಿ : ಯುವವಾಹಿನಿ ಸಂಘಟನೆಯು ಸಾಕಷ್ಟು ಬೆಳೆದು ನಿಂತು ಸಮಾಜಕ್ಕೆ ತನ್ನಿಂದಾದ ಸಹಾಯ ನೀಡುತ್ತಿದೆ. ಸಮಾಜದ ಅಭಿವೃದ್ಧಿಗಾಗಿ ನಿಸ್ವಾರ್ಥತೆಯಿಂದ ದುಡಿಯುತ್ತಿರುವ ಯುವಕರ ಭಲಾಡ್ಯ ಸಂಘಟನೆಯೇ ಯುವವಾಹಿನಿ ಎಂದು ಯುವವಾಹಿನಿಯ ಕಾರ್ಯ ಸಾಧನೆಗಳನ್ನು ಅರಿತುಕೊಂಡ ಮುಂಬೈ ಆನಂದ್ ರಾಠಿ ಆಂಡ್ ಗ್ರೂಪ್ ಸಂಸ್ಥೆಯ ಸದಾನಂದ ಪೂಜಾರಿ ಮಾದುಮನೆ ಇವರು ಹರ್ಷ ವ್ಯಕ್ತಪಡಿಸಿದರು. ಇವರು ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾ ಭವನದಲ್ಲಿ ದಿನಾಂಕ 24.03.2019 ರಂದು ಜರಗಿದ ಯುವವಾಹಿನಿ(ರಿ.) ಪಡುಬಿದ್ರಿ ಘಟಕದ 2019-20 ನೇ ಸಾಲಿನ ಪದಗ್ರಹಣ […]
Read More

27-03-2019, 4:48 PM
ಬಜಪೆ : ಯುವವಾಹಿನಿ(ರಿ.) ಬಜಪೆ ಘಟಕ ,ಲಯನ್ಸ್ ಕ್ಲಬ್ ಮುಚ್ಚೂರು – ನೀರುಡ್ಡೆ ,ನಿರಂಜನ ಸ್ವಾಮಿ ಪಾಲಿಟೆಕ್ನಿಕ್ (ಅನುದಾನಿತ ) ಸುಂಕದಕಟ್ಟೆ , ಹಾಗೂ ವೆನ್ಲಾಕ್ ಆಸ್ಪತ್ರೆ ಮಂಗಳೂರು, ಇವರ ಸಂಯುಕ್ತ ಅಶ್ರಯದಲ್ಲಿ, ಬೃಹತ್ ರಕ್ತದಾನ ಶಿಬಿರ ತಾರೀಕು 27/03/2019 ರಂದು ಬೆಳಿಗ್ಗೆ 10 ಗಂಟೆಗೆ ಶ್ರೀ ನಿರಂಜನ ಸ್ವಾಮಿ ಪಾಲಿಟೆಕ್ನಿಕ್ ಸುಂಕದಕಟ್ಟೆ ಇಲ್ಲಿ ಯಶಶ್ವಿಯಾಗಿ ನಡೆಯಿತು . ಎಸ್.ಎನ್.ಎಸ್ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಜ್ಯೋತಿ ನಾರಾಯಣ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು .ಲಯನ್ಸ್ ಕ್ಲಬ್ ವಲಯ ಅಧ್ಯಕ್ಷರಾದ […]
Read More

24-03-2019, 4:24 PM
ಮೂಡಬಿದಿರೆ : ಮಂಗಳೂರು ಕೆಮಿಕಲ್ಸ್ ಆ್ಯಂಡ್ ಫರ್ಟಿಲೈಜರ್ಸ್ ಲಿಮಿಟೆಡ್ ಪಣಂಬೂರು,ಮಂಗಳೂರು, ಜಸ್ಟಿಸ್ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ಮಂಗಳೂರು ಹಾಗೂ ಯುವವಾಹಿನಿ (ರಿ) ಮೂಡುಬಿದಿರೆ ಘಟಕ ಹಾಗೂ ಇನ್ನಿತರ ಸಂಘ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಹರಿಪ್ರಸಾದ್ ಪಿ. ನಿಯೋಜಿತ ಉಪಾಧ್ಯಕ್ಷರು ಯುವವಾಹಿನಿ ರಿ. ಮೂಡಬಿದಿರೆ ಘಟಕ ಇವರ ನೇತ್ರತ್ವದಲ್ಲಿ ದಿನಾಂಕ 24-3-2019 ಭಾನುವಾರ ಫ್ರೆಂಡ್ಸ್ ಕ್ಲಬ್ ಸಭಾ ಭವನ ಹೊಸಂಗಡಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು. ಸುಮಾರು 211 ಮಂದಿ ಈ ಶಿಬಿರದ ಪ್ರಯೋಜನವನ್ನು ಪಡೆದಿರುತ್ತಾರೆ…
Read More