
24-03-2019, 4:22 PM
ಮೂಡಬಿದಿರೆ : ದಕ್ಷಿಣ ಕನ್ನಡ ಸ್ಕೀಪ್ ಸಮಿತಿ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗು ಆಳ್ವಾಸ್ ಶಿಕ್ಷಣ ಸಂಸ್ಥೆ ಮತ್ತು “”ಯುವವಾಹಿನಿ (ರಿ) ಮೂಡುಬಿದಿರೆ ಘಟಕ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ದಿನಾಂಕ 24-3-2019ರಂದು ಮೂಡುಬಿದಿರೆ ಯ “ಸ್ವರಾಜ್ ಮೈದಾನದ ಮುಖ್ಯ ದ್ವಾರ”ದಿಂದ ಮೂಡುಬಿದಿರೆ ವ್ಯಾಪ್ತಿಯ 18ಕಿ.ಮೀ ಜಿಲ್ಲಾ ಮಟ್ಟದ ಮ್ಯಾರಥಾನ್ ಸ್ಪರ್ಧೆ ಯಶಸ್ವಿಯಾಗಿ ನಡೆಯಿತು. ಈ “ಮ್ಯಾರಥಾನ್” ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ವ್ಯಾಪ್ತಿಯಲ್ಲಿ ಬರುವ ಶಾಲಾ/ಕಾಲೇಜು ಗಳ ವಿದ್ಯಾರ್ಥಿಗಳು, ಇಲಾಖಾ ಅಧಿಕಾರಿ/ಸಿಬ್ಬಂದಿಗಳು ಹಾಗೂ […]
Read More

23-03-2019, 3:42 PM
ಮಂಗಳೂರು : ಹದಿಹರೆಯದ ಅವಧಿಯು ಏರಿಳಿತದಿಂದ ಕೂಡಿರುತ್ತದೆ. ವ್ಯಕ್ತಿಯ ಬಾಲ್ಯದ ಸುರಕ್ಷಿತ ಹಿಡಿತದಿಂದ ಪ್ರೌಡಿಮೆಯ ಕಡೆಗೆ ಹೆಜ್ಜೆಯಿಡುತ್ತಾನೆ. ಈ ಹಂತದಲ್ಲಿ ಮಕ್ಜಳೆಡೆಗೆ ಗಮನ ನೀಡಿ ಅವರ ಮನೋವಿಕಾಸದ ಬಗ್ಗೆ ಕಾಳಜಿ ವಹಿಸಬೇಕು ಎಂದು ಖ್ಯಾತ ಮನೋವೈದ್ಯರಾದ ಡಾ.ಅರುಣಾ ಯಡಿಯಾಳ್ ತಿಳಿಸಿದರು. ಅವರು ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಮಂಗಳೂರಿನ ಇಂದಿರಾ ಪ್ರಿಯದರ್ಶಿನಿ ಉದ್ಯಾನವನದಲ್ಲಿ ದಿನಾಂಕ 23.03.2019ರಂದು ನಡೆದ ಮನೆ, ಮನಸ್ಸು, ಜೀವನ ಕನಸುಗಳ ಜೊತೆ ಮಾತುಕತೆ ಮನದ ಮಾತು […]
Read More

18-03-2019, 4:33 PM
ಮೂಲ್ಕಿ: ಮಹಿಳೆಯರು ಸುಶಿಕ್ಷಿತರಾಗಿ ಸಂಘ ಜೀವಿಯಾಗಿ ಸ್ವಾಭಿಮಾನದಿಂದ ನಾಯಕತ್ವದ ಗುಣಗಳನ್ನು ಪಡೆದು ಬೆಳೆದರೆ ಸಮಾಜ ಅಭಿವೃದ್ಧಿಗೊಳ್ಳಲು ಸಾಧ್ಯವಿದೆ ಸ್ವಾಭಿಮಾನದ ನಡೆಗೆ ವೇದಿಕೆಯನ್ನು ಕಲ್ಪಿಸಿರಿ ಎಂದು ಮಂಗಳೂರಿನ ಯುವವಾಹಿನಿ ಕೇಂದ್ರ ಸಮಿತಿಯ ಮಹಿಳಾ ಸಂಘಟನಾ ನಿರ್ದೇಶಕಿ ಪಾರ್ವತಿ ಎಸ್. ಅಮೀನ್ ಹೇಳಿದರು. ಅವರು ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಶನಿವಾರ ನಡೆದ ಯುವವಾಹಿನಿ ಮೂಲ್ಕಿ ಘಟಕದ ಆಶ್ರಯದಲ್ಲಿ ವಿವಿಧ ಮಹಿಳಾ ಸಂಘಗಳ ಸಹಕಾರದಲ್ಲಿ ಮಹಿಳಾ ದಿನಾಚರಣೆಯ ಪ್ರಯುಕ್ತ ಭೂಮಿಕಾ ೨೦೧೯ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ ಮೂಲ್ಕಿ ಘಟಕದ […]
Read More

17-03-2019, 3:54 PM
ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕ ಇದರ 2019 -20 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 17/03/2019 ನೇ ಆದಿತ್ಯವಾರದಂದು ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರ ಕೊಲ್ಯದಲ್ಲಿ ಜರಗಿತು. ಒಂದೇ ಜಾತಿ,ಒಂದೇ ಧರ್ಮ,ಒಂದೇ ದೇವರು ಎಂಬ ತತ್ವವನ್ನು ಜಗತ್ತಿಗೆ ಸಾರಿದ ಬ್ರಹ್ಮ ಶ್ರೀ ನಾರಾಯಣ ಗುರುಗಳಿಗೆ ಪ್ರಾರ್ಥನೆ ಮತ್ತು ಪೂಜೆ ಸಲ್ಲಿಸುವುದರ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.ಘಟಕದ ಅಧ್ಯಕ್ಷರಾದ ಕುಸುಮಾಕರ್ ಕುಂಪಲರವರು ಸಮಾರಂಭಕ್ಕೆ ಆಗಮಿಸಿದ ಮುಖ್ಯ ಅತಿಥಿಗಳನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು.ದೀಪ ಪ್ರಜ್ವಲನೆಯ […]
Read More

17-03-2019, 3:48 PM
ಕಂಕನಾಡಿ : ಯುವವಾಹಿನಿ ಎಂಬುದು ನಮ್ಮ ಕುಟುಂಬ. ನಾವು ಪ್ರತಿಫಲಾಪೇಕ್ಷೆ ಇಲ್ಲದೆ ನಿಸ್ವಾರ್ಥವಾಗಿ ಸಮಾಜ ಸೇವೆ ಸಲ್ಲಿಸಿದಾಗ ಅದರ ಉತ್ತಮ ಫಲ ನಮಗೆ ಖಂಡಿತವಾಗಿಯೂ ದೊರೆಯುತ್ತದೆ ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ನರೇಶ್ ಕುಮಾರ್ ಸಸಿಹಿತ್ಲುರವರು ಹೇಳಿದರು. ದಿನಾಂಕ 17-3-2019ನೇ ಆದಿತ್ಯವಾರದಂದು ತಣ್ಣೀರುಬಾವಿ ಟ್ರೀ ಪಾರ್ಕಲ್ಲಿ ಜರುಗಿದ ಯುವವಾಹಿನಿ (ರಿ.) ಕಂಕನಾಡಿ ಘಟಕದ ಹಳೆ ಬೇರು ಹೊಸ ಚಿಗುರು ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ದೀಪ ಬೆಳಗಿ ಉದ್ಘಾಟಿಸಿ ಸದಸ್ಯರು ಯುವವಾಹಿನಿಯಲ್ಲಿ […]
Read More

09-03-2019, 2:27 AM
ಕೂಳೂರು : ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಯುವವಾಹಿನಿ(ರಿ) ಕೂಳೂರು ಘಟಕದ ಆತಿಥ್ಯದಲ್ಲಿ ಯುವ ವಾಹಿನಿ ವಿದ್ಯಾನಿಧಿಯ ಬಲವರ್ಧನೆಗಾಗಿ ಯುವವಾಹಿನಿ ಪ್ರೀಮಿಯರ್ ಲೀಗ್ (YPL-201) ಮಾರ್ಚ್ 9 ಹಾಗೂ 10 ರಂದು ಎನ್.ಎಂ.ಪಿ.ಟಿ ಮೈದಾನ ಪಣಂಬೂರು ಇಲ್ಲಿ ನಡೆಯಿತು .ಬೆಳಗ್ಗೆ 7 ಗಂಟೆಗೆ ಸರಿಯಾಗಿ ನಾರಾಯಣ ಗುರುಗಳ ಆಶೀರ್ವಾದ ಪಡೆದು ದೀಪ ಬೆಳಗಿಸಿ ಕ್ರಿಕೆಟ್ ಪಂದ್ಯಾಟವನ್ನು ಪ್ರಾರಂಭಿಸಲಾಯಿತು .ಎರಡು ಪಂದ್ಯಗಳ ನಂತರ ಬೆಳಗ್ಗೆ 9 ಗಂಟೆಗೆ ಸರಿಯಾಗಿ ಉದ್ಘಾಟನಾ ಸಮಾರಂಭ ಜರಗಿತು .ಉದ್ಘಾಟನಾ ಸಮಾರಂಭದ ಅಧ್ಯಕ್ಷ […]
Read More

03-03-2019, 3:32 PM
ಮಾಣಿ : ದೇಶ ಸುತ್ತು ಕೋಶ ಓದು ಎನ್ನುವ ಮಾತಿನಂತೆ ಅನುಭವ ವಿಸ್ತಾರ ಹಾಗೂ ಯುವವಾಹಿನಿ ಕುಟುಂಬದ ಸದಸ್ಯರೊಳಗಿನ ಸ್ನೇಹ, ವಾತ್ಸಲ್ಯದ ಗಟ್ಟಿತನಕ್ಕಾಗಿ ಯುವವಾಹಿನಿ (ರಿ.) ಮಾಣಿ ಘಟಕವು ಹಮ್ಮಿಕೊಂಡ ಸುಂದರ ಕಾರ್ಯಕ್ರಮವೇ “ಸ್ನೇಹ ಸಿಂಚನ- ಯುವವಾಹಿನಿ ಕುಟುಂಬದ ವಾತ್ಸಲ್ಯ ಪಯಣ” ಸ್ನೇಹ ಸಿಂಚನ ಪಯಣ ಸಾಗಿದ್ದು ಉಡುಪಿ ಜಿಲ್ಲೆಯ ಬ್ರಹ್ಮಾವರದ ಕಿಂಗ್ ಆಫ್ ಕಿಂಗ್ಸ್ ದ್ವೀಪಕ್ಕೆ.ದಿನಾಂಕ 03-03-19 ಅದಿತ್ಯವಾರದಂದು ಬೆಳಿಗ್ಗೆ 63ಮಂದಿ ಯುವವಾಹಿನಿ ಸದಸ್ಯರೊಂದಿಗೆ ತಂಡವು ಘಟಕದ ಅಧ್ಯಕ್ಷರಾದ ಹರೀಶ್ ಪೂಜಾರಿ ಬಾಕಿಲ ಇವರ ನೇತೃತ್ವದೊಂದಿಗೆ […]
Read More

24-02-2019, 3:22 PM
ಬೆಳ್ತಂಗಡಿ : ಸಂಘಟನೆಯ ಮೂಲಕ ಸಮಾಜಮುಖಿ ಕೆಲಸಗಳನ್ನು ಮಾಡುವುದರೊಂದಿಗೆ ಸಮಾಜ ಸೇವೆ ಮಾಡಬೇಕು ಎಂದು ಮಾಜಿ ಶಾಸಕ, ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಗೌರಾವಾಧ್ಯಕ್ಷ ಕೆ.ವಸಂತ ಬಂಗೇರ ಹೇಳಿದರು. ಅವರು ಫೆ.24 ರಂದು ಸುವರ್ಣ ಆರ್ಕೇಡ್ನಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.)ಬೆಳ್ತಂಗಡಿ ಘಟಕದ ನೂತನ ಪದಾದಿಕಾರಿಗಳ ಪದಪ್ರಧಾನ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಬಿಲ್ಲವ ಸಂಘಟನೆ ತಾಲೂಕಿನಲ್ಲಿ 55 ವರ್ಷಗಳಿಂದ ಸಮಾಜಸೇವೆ ಮಾಡುತ್ತಿದ್ದು, ಯುವ ವಾಹಿನಿ ಕಳೆದ 5 ವರ್ಷಗಳಿಂದ ಉತ್ತಮ […]
Read More

10-02-2019, 3:45 PM
ಕುಪ್ಪೆಪದವು : ಯುವವಾಹಿನಿ(ರಿ) ಕುಪ್ಪೆಪದವು ಘಟಕದ ವತಿಯಿಂದ ದಿನಾಂಕ 10.02.2019 ರಂದು ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ಮುಕ್ಕ ಶ್ರೀನಿವಾಸ ದಂತ ವೈದ್ಯಕೀಯ ಕಾಲೇಜಿನ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಯಿತು. ಯುವವಾಹಿನಿ (ರಿ)ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಕುಪ್ಪೆಪದವು ಘಟಕದ ಕೃಷಿ ಚಟುವಟಿಕೆಯ ಬಗ್ಗೆ ಶ್ಲಾಘಿಸಿದರು ಹಾಗೂ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಯುವವಾಹಿನಿ(ರಿ) ಕುಪ್ಪೆಪದವು ಘಟಕದ ಅಧ್ಯಕ್ಷರಾದ ಅರುಣ್ ಕುಮಾರ್ ಅಂಬೆಲೊಟ್ಟು ಸಭೆಯ ಅಧ್ಯಕ್ಷತೆ […]
Read More

10-02-2019, 6:58 AM
ಮಾಣಿ : ಕಳೆದೆರಡು ವರ್ಷಗಳಿಂದ ಎರಡು ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮಹಾಕಾಳಿ ಬೆಟ್ಟು , ಬರಿಮಾರು ಗ್ರಾಮದ ನಿವಾಸಿ ದಯಾನಂದ ಪೂಜಾರಿ ಇವರ ಚಿಕಿತ್ಸೆಗಾಗಿ ನಾರಾಯಣ ಗುರು ಸೇವಾ ಸಂಘ ಮಾಣಿ ಮತ್ತು ಯುವವಾಹಿನಿ (ರಿ.)ಮಾಣಿ ಘಟಕದ ಸ್ಪಂದನ ಯೋಜನೆಯ ವತಿಯಿಂದ ಜಂಟಿಯಾಗಿ ಹತ್ತು ಸಾವಿರ ಮೊತ್ತದ ಚೆಕ್ ನೀಡಲಾಯಿತು.ನಾರಾಯಣಗುರು ಸೇವಾ ಮಾಣಿ ಇದರ ಅಧ್ಯಕ್ಷರಾದ ನಾರಾಯಣ್ ಸಾಲ್ಯಾನ್, ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷರಾದ ಹರೀಶ್ ಪೂಜಾರಿ ಬಾಕಿಲ, ಉಪಾಧ್ಯಕ್ಷರು ರಮೇಶ್ ಮುಜಲ, ಬರಿಮಾರು ಗಾಂ.ಪಂ ಅಧ್ಯಕ್ಷರಾದ […]
Read More