
30-04-2017, 10:35 AM
ದಿನಾಂಕ 30.04.2017ನೇ ಆದಿತ್ಯವಾರ ಸುಳ್ಯ ಕಾಯರ್ತೋಡಿ ಮಹಾವಿಷ್ಣುವಿನ ದೇವಸ್ಥಾನದ ಸಭಾಂಗಣದಲ್ಲಿ ಜರುಗಿದ ಯುವವಾಹಿನಿ (ರಿ) ಸುಳ್ಯ ಘಟಕದ 2017-18 ನೇ ಸಾಲಿನ ಪದಾದಿಕಾರಿಗಳ ಪದಗ್ರಹಣ ಸಮಾರಂಭ ಜರುಗಿತು ಯುವವಾಹಿನಿ ಕೇಂದ್ರ ಸಮಿತಿಯ 25ನೇ ಘಟಕ ಯುವವಾಹಿನಿ (ರಿ) ಸುಳ್ಯ ಘಟಕದ ನೂತನ ಅದ್ಯಕ್ಷರಾಗಿ ಶಿವಪ್ರಸಾದ್.ಕೆ.ವಿ ಹಾಗೂ ಇತರ 16 ಕಾರ್ಯಕಾರಿ ಸಮಿತಿ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಸುಳ್ಯ ತಾಲೂಕು ಸಂಘಟನಾ ಕಾರ್ಯದರ್ಶಿ ಮಹೇಶ್ಚಂದ್ರ ಬಿ.ಟಿ. ನೂತನ ಪದಾದಿಕಾರಿಗಳ ಆಯ್ಕೆ ಪ್ರಕಟಿಸಿದರು. ಯುವವಾಹಿನಿ […]
Read More

30-04-2017, 10:17 AM
ಯುವವಾಹಿನಿಯು ಕೇವಲ ಸಾಮಾಜಿಕ ಸಂಘಟನೆಯಲ್ಲ ಪ್ರೀತಿ,ವಿಶ್ವಾಸ, ಮಾನವೀಯತೆಯನ್ನು ಪರಸ್ಪರ ಬೆಸೆಯುವ ಸಂಸ್ಥೆ, ಯುವವಾಹಿನಿಯು ನಾಯಕತ್ವ, ವ್ಯಕ್ತಿತ್ವವನ್ನು ಪರಿಣಾಮಕಾರಿಯಾಗಿ ರೂಪಿಸಿ ಬಿಲ್ಲವ ಸಮಾಜದಲ್ಲಿ ಆದರ್ಶ ಸಂಸ್ಥೆಯಾಗಿ ಬೆಳೆದು ನಿಂತಿದೆ ಎಂದು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅದ್ಯಕ್ಷ ಸಂಪತ್ ಬಿ.ಸುವರ್ಣ ತಿಳಿಸಿದರು ದಿನಾಂಕ 30.04.2017 ಆದಿತ್ಯವಾರ ಸುಳ್ಯ ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನದ ಸಭಾಂಗಣದಲ್ಲಿ ಜರುಗಿದ ಯುವವಾಹಿನಿ (ರಿ) ಸುಳ್ಯ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಗಿ ಭಾಗವಹಿಸಿ ಮಾತನಾಡಿದರು ಸುಳ್ಯ ತಾಲೂಕು ಬ್ರಹ್ಮಶ್ರೀ ಗುರುನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷರಾದ […]
Read More

25-04-2017, 5:02 AM
ಯುವವಾಹಿನಿ (ರಿ) ಮಂಗಳೂರು ಘಟಕದ ಆಶ್ರಯದಲ್ಲಿ ದಿನಾಂಕ 25.04.2017 ನೇ ಮಂಗಳವಾರದಂದು ಮಂಗಳೂರಿನ ಯುವವಾಹಿನಿ ಕೇಂದ್ರ ಸಮಿತಿ ಕಛೇರಿಯಲ್ಲಿ ಸಂಚಾರಿ ನಿಯಮಗಳ ಮಾಹಿತಿ ಕಾರ್ಯಾಗಾರ ಜರುಗಿತು. ಮಂಗಳೂರು ಉತ್ತರ ವಲಯದ ಟ್ರಾಫಿಕ್ ಇನ್ಸ್ಪೆಕ್ಟರ್ ಮಂಜುನಾಥ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟರು ಸಂಚಾರಿ ನಿಯಮಗಳ ಪಾಲನೆ,ಅನಾಹುತಗಳನ್ನು ತಡೆಗಟ್ಟುವ ಮುಂಜಾಗೃತಾ ಕ್ರಮಗಳ ಬಗ್ಗೆ ಅರಿವು ಮೂಡಿಸಿದರು ಯುವವಾಹಿನಿ ಮಂಗಳೂರು ಘಟಕದ ವಾರದ ಸಾಪ್ತಾಹಿಕ ಸಭೆಯಲ್ಲಿ ಜರುಗಿದ ಈ ಮಾಹಿತಿ ಕಾರ್ಯಾಗಾರದಲ್ಲಿ ಸುಮಾರು 75ಕ್ಕೂ ಹೆಚ್ಚು ಸದಸ್ಯರು ಭಾಗವಹಿಸಿ […]
Read More

23-04-2017, 3:20 PM
ಯುವವಾಹಿನಿಯ 29 ನೇ ವಾರ್ಷಿಕ ಸಮಾವೇಶ ದಾಖಲೆಯ ಪುಟ ಸೇರುವ ಮೂಲಕ ಉಡುಪಿ ಯುವವಾಹಿನಿಯ ಶಕ್ತಿ ಅನಾವರಣಗೊಂಡಿದೆ. ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡುವ ಮೂಲಕ ಉಡುಪಿ ಯುವವಾಹಿನಿ ಪುಣ್ಯದ ಕಾರ್ಯ ಮಾಡುತ್ತಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 23.042017 ನೇ ಆದಿತ್ಯವಾರ ಉಡುಪಿಯ ಜಗನ್ನಾಥ ಸಭಾಂಗಣದಲ್ಲಿ ಜರುಗಿದ ಯುವವಾಹಿನಿ (ರಿ) ಉಡುಪಿ ಘಟಕದ 2017-18 ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರಧಾನ ನೆರವೇರಿಸಿ ಮಾತನಾಡಿದರು. ಶೈಕ್ಷಣಿಕ ಕ್ಷೇತ್ರದಲ್ಲಿ […]
Read More

23-04-2017, 6:11 AM
ತಲೆಗೊಂದು ಸೂರು – ಇದು ಯುವವಾಹಿನಿ (ರಿ) ಉಡುಪಿ ಘಟಕದ ಶಾಶ್ವತ ಯಶಸ್ವೀ ಯೋಜನೆ – ವರುಷಕ್ಕೊಂದು ತೀರಾ ಬಡ ಕುಟುಂಬವನ್ನು ಆಯ್ಕೆ ಮಾಡಿ ಅವರಿಗೆ ಮನೆ ನಿರ್ಮಾಣ ಮಾಡಿ ಕೊಡುವುದು ಉಡುಪಿ ಯುವವಾಹಿನಿಯ ಜನಪ್ರಿಯ ಸಮಾಜಮುಖಿ ಕಾರ್ಯಕ್ರಮ. ಈ ವರ್ಷದ ತಲೆಗೊಂದು ಸೂರು ಕಾರ್ಯಕ್ರಮದಲ್ಲಿ ದಿನಾಂಕ 23.04.2017ನೇ ಆದಿತ್ಯವಾರ ಶ್ರೀಮತಿ ಇಂದಿರಾ ಎಂಬ ಬಡ ಕುಟುಂಬಕ್ಕೆ ಮನೆ ನಿರ್ಮಾಣ ಮಾಡಿ ಹಸ್ತಾಂತರಿಸಲಾಗಿದೆ. ರಾಜ್ಯ ಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಸಾಂಕೇತಿಕವಾಗಿ ಶ್ರೀಮತಿ ಇಂದಿರಾ ಕುಟುಂಬಕ್ಕೆ ಮನೆ ಹಸ್ತಾಂತರಿಸಿದರು. ಮಾಜಿ ಸಚಿವ […]
Read More

22-04-2017, 12:03 PM
ಯುವವಾಹಿನಿ ಪುತ್ತೂರು ಘಟಕದ ಆಶ್ರಯದಲ್ಲಿ ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಇದರ ಸಹಯೋಗದೊಂದಿಗೆ ದಿನಾಂಕ 22.04.2017 ನೇ ಶನಿವಾರ ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಸಭಾಭವನದಲ್ಲಿ ರಕ್ತದಾನ ಶಿಬಿರ ಜರುಗಿತು. ಪುತ್ತೂರು ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಬಿಲ್ಲವ ಸಂಘದ ಅದ್ಯಕ್ಷರಾದ ಜಯಂತ ನಡುಬೈಲು ಶಿಬಿರ ಉದ್ಘಾಟಿಸಿ ಮಾತನಾಡಿ ಮನುಷ್ಯನ ಶರೀರದಲ್ಲಿ ಹರಿಯುವ ರಕ್ತ ಒಂದೇ, ಜಾತಿ, ಮತ, ಧರ್ಮಗಳ ವ್ಯತ್ಯಾಸವಿಲ್ಲದೆ ಎಲ್ಲರೂ ಒಂದೇ ತಾಯಿಯ ಮಕ್ಕಳು ಎಂಬ ಸಂದೇಶ ಸಾರುತ್ತದೆ ಎಂದು ತಿಳಿಸಿದರು. ಯುವವಾಹಿನಿ […]
Read More

22-04-2017, 9:28 AM
ಯುವವಾಹಿನಿ ಸುರತ್ಕಲ್ ಹಾಗೂ ಯುವವಾಹಿನಿ ಸಸಿಹಿತ್ಲು ಘಟಕಗಳ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಸಸಿಹಿತ್ಲು ಇದರ ಸಹಯೋಗದೊಂದಿಗೆ ದಿನಾಂಕ 22.04.2017ನೇ ಶನಿವಾರ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ,ಸಸಿಹಿತ್ಲು ಇಲ್ಲಿ ಸಂಚಾರಿ ನಿಯಮಗಳು ಮತ್ತು ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ಕಾರ್ಯಾಗಾರ ಜರುಗಿತು ಟ್ರಾಫಿಕ್ ಇನ್ಸ್ಪೆಕ್ಟರ್ ಮಂಜುನಾಥ್ ನಾಯಕ್ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಕಾರ್ಯಾಗಾರ ನಡೆಸಿಕೊಟ್ಟರು. ಸಂಚಾರಿ ನಿಯಮಗಳು, ರಸ್ತೆ ಸುರಕ್ಷತೆ ಹಾಗೂ ಅಪಘಾತ ತಡೆಗಟ್ಟುವ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸುರತ್ಕಲ್ […]
Read More

21-04-2017, 3:30 PM
ಯುವವಾಹಿನಿ ಪಣಂಬೂರು ಘಟಕದ ಸದಸ್ಯರು ದಿನಾಂಕ 22.04.2017 ರಿಂದ. 24.04.2017 ರ ವರಗೆ ಲೋಕಶಾಂತಿಯ ಹರಿಕಾರ ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮಸ್ಥಾನ ಕೇರಳದ ಶಿವಗಿರಿಗೆ ಪ್ರವಾಸ ಕೈಗೊಂಡರು 50 ಸದಸ್ಯರು ಈ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು
Read More

18-04-2017, 2:17 PM
ಯುವವಾಹಿನಿ (ರಿ) ಕಂಕನಾಡಿ ಘಟಕದ ಆಶ್ರಯದಲ್ಲಿ ಮಹಿಳೆಯರಿಗಾಗಿ ವೈವಿಧ್ಯಮಯ ಹಾಗೂ ವಿಶಿಷ್ಟ ವಿನ್ಯಾಸದ ಕೇಶ ವಿನ್ಯಾಸ ಕಾರ್ಯಾಗಾರ ದಿನಾಂಕ 18.04.2017 ರಂದು ಜರುಗಿತು. ಯುವವಾಹಿನಿ ಮಹಿಳಾ ಘಟಕದ ನಿಕಟಪೂರ್ವ ಅಧ್ಯಕ್ಷೆ ಹಾಗೂ ಬ್ಯುಟಿಷೀಯನ್ ಶ್ರೀಮತಿ ವಿದ್ಯಾ ರಾಕೇಶ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಕಾರ್ಯಾಗಾರ ನಡೆಸಿಕೊಟ್ಟರು. ಹಾಗೂ ಈ ಸಂದರ್ಭದಲ್ಲಿ ಸರಳ ವಿಧಾನಗಳ ಮೂಲಕ ಮಹಿಳೆಯರ ಸೌಂದರ್ಯ ಹೆಚ್ಚಿಸುವ ಮೇಕಪ್ ವಿಧಾನದ ಬಗ್ಗೆ ಮಾಹಿತಿ ನೀಡಿದರು. ಮಂಗಳೂರಿನ ಗೋರಿಗುಡ್ಡದಲ್ಲಿ ಜರುಗಿದ ಈ ಕಾರ್ಯಾಗಾರದಲ್ಲಿ 50 ಕ್ಕೂ ಹೆಚ್ಚು ಮಹಿಳೆಯರು […]
Read More

16-04-2017, 12:35 PM
ಜಾಗತೀಕರಣದ ಭರಾಟೆಯಲ್ಲಿ ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯ ನಶಿಸಿಹೋಗುತ್ತಿರುವ ಈ ಕಾಲಘಟ್ಟದಲ್ಲಿ ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಮೂಲಕ ಯುವ ಜನಾಂಗದಲ್ಲಿ ಹೊಸ ಹುರುಪು ಮೂಡಿಸುವ ಕಾರ್ಯ ಮಾಡುತ್ತಿರುವ ಬಜಪೆ ಯುವವಾಹಿನಿಯು ಉತ್ತಮ ದಾರಿಯಲ್ಲಿ ಮುನ್ನಡೆಯುತ್ತಿದೆ ಎಂದು ರೋಟರಿ ವಲಯ 1ರ ಸಹಾಯಕ ಗವರ್ನರ್ ಜಿನರಾಜ್ ಸಾಲ್ಯಾನ್ ತಿಳಿಸಿದರು. ಅವರು ಯುವವಾಹಿನಿ(ರಿ) ಬಜಪೆ ಘಟಕದ ಆಶ್ರಯದಲ್ಲಿ ದಿನಾಂಕ 16.04.2017 ನೇ ಆದಿತ್ಯವಾರ ಬೆಳಗ್ಗೆ ಬಜಪೆ ಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ಹೊಸ ವರ್ಷಾಚರಣೆಯ ಪ್ರಯುಕ್ತ ಜರುಗಿದ ಬಿಸು […]
Read More