
16-06-2026, 7:30 PM
ಮಂಗಳೂರು : ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮವು ಜೂನ್ 16ರಂದು ನಡೆಯಿತು. ಕಾರ್ಯಕ್ರಮವು ಗುರು ಪೂಜೆಯೊಂದಿಗೆ ಆರಂಭಗೊಂಡು, ಗುರು ಸ್ತುತಿಯ ಬಳಿಕ ಘಟಕದ ಅಧ್ಯಕ್ಷ ಹರೀಶ್ ಕೆ. ಸುವರ್ಣ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಅಧ್ಯಕ್ಷರು ಸಭಿಕರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಅರೋಲಿನ್ ಡಿ’ಸೋಜ ಅವರು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಮಹತ್ವ ಹಾಗೂ […]
Read More

14-06-2026, 2:00 PM
ಬೆಂಗಳೂರು : ಯುವವಾಹಿನಿ (ರಿ.) ಬೆಂಗಳೂರು ಘಟಕದ ಪದಗ್ರಹಣ ಸಮಾರಂಭವು ಸಂಘಟನಾ ಬದ್ಧತೆ, ಏಕತೆ ಹಾಗೂ ಪರಸ್ಪರ ಸಹಕಾರದ ಭಾವನೆಯನ್ನು ಅನಾವರಣಗೊಳಿಸಿದ ಸ್ಮರಣೀಯ ಕಾರ್ಯಕ್ರಮವಾಗಿ ಯಶಸ್ವಿಯಾಗಿ ನೆರವೇರಿತು. ಈ ಸಮಾರಂಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರು, ಮಾಜಿ ಅಧ್ಯಕ್ಷರು ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು ಸೇರಿದಂತೆ ಒಟ್ಟು 60ಕ್ಕೂ ಹೆಚ್ಚು ಸದಸ್ಯರು ಭಾಗವಹಿಸಿದ್ದು ವಿಶೇಷವಾಗಿತ್ತು. ಈ ಸಂಖ್ಯೆಯು ಕೇವಲ ಹಾಜರಾತಿಯನ್ನು ಮಾತ್ರ ಸೂಚಿಸುವುದಲ್ಲ; ಸಂಘಟನೆಯ ಮೇಲಿನ ಸದಸ್ಯರ ಬದ್ಧತೆ, ಪ್ರೀತಿ ಹಾಗೂ ಅಚಲ ನಂಬಿಕೆಯ […]
Read More

14-06-2026, 2:00 PM
ಬೆಂಗಳೂರು : ಯುವವಾಹಿನಿ (ರಿ.) ಬೆಂಗಳೂರು ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ದಿನಾಂಕ 14 ಜೂನ್ 2026 ರಂದು ಬೆಂಗಳೂರಿನ ವಿಧಾನಸೌಧದ ಬಳಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಅತ್ಯಂತ ಅಚ್ಚುಕಟ್ಟಾಗಿ, ಶಿಸ್ತುಬದ್ಧವಾಗಿ ಹಾಗೂ ಸಾಂಘಿಕ ಮನೋಭಾವದಿಂದ ನೆರವೇರಿತು. . ಸಂಘಟನಾ ಸಾಮರ್ಥ್ಯ ಶ್ಲಾಘನೀಯ : ಜೆ.ಪಿ.ಸುಧಾಕರ್ಬೆಂಗಳೂರು ಘಟಕದ ಸಂಘಟನಾ ಸಾಮರ್ಥ್ಯ, ಸಮಯಪಾಲನೆ, ಶಿಸ್ತು ಮತ್ತು ಸದಸ್ಯರ ನಡುವಿನ ಐಕ್ಯತೆಯು ಶ್ಲಾಘನೀಯ ಎಂದು ಸಮಾರಂಭ ಉದ್ಘಾಟಿಸಿ ಮಾತನಾಡಿದ ಖ್ಯಾತ […]
Read More

14-06-2026, 1:00 PM
ಕಟಪಾಡಿ, ಜೂನ್ 14: ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಯುವವಾಹಿನಿ (ರಿ.) ಕಟಪಾಡಿ ಘಟಕದ ವತಿಯಿಂದ ಜೇಸೀ ಭವನ, ಕಟಪಾಡಿಯಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು. ಮಾನವೀಯ ಸೇವೆಯ ಉದ್ದೇಶದಿಂದ ನಡೆದ ಈ ಶಿಬಿರದಲ್ಲಿ ಘಟಕದ ಅಧ್ಯಕ್ಷ ಸುಶಾಂತ್ ಪೂಜಾರಿ, ಉಪಾಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿ ರಕ್ತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಿದರು. ಸಮಾಜದಲ್ಲಿ ಅಗತ್ಯವಿರುವ ರೋಗಿಗಳ ಜೀವ ಉಳಿಸಲು ರಕ್ತದಾನವು ಶ್ರೇಷ್ಠ ಸೇವೆಯಾಗಿದ್ದು, ಆರೋಗ್ಯವಂತರು ಸ್ವಯಂಪ್ರೇರಿತರಾಗಿ ನಿಯಮಿತವಾಗಿ ರಕ್ತದಾನ ಮಾಡಬೇಕು ಎಂದು ಈ ಸಂದರ್ಭದಲ್ಲಿ ಅಭಿಪ್ರಾಯ […]
Read More

13-06-2026, 9:00 PM
ಮುಲ್ಕಿ : ಯುವವಾಹಿನಿ (ರಿ.) ಮುಲ್ಕಿ ಘಟಕದ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜೂನ್ 13, 2026ರಂದು ಸಂಜೆ 6 ಗಂಟೆಗೆ ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ನಡೆಯಿತು. ಬ್ರಹ್ಮಶ್ರೀ ನಾರಾಯಣಗುರು ದೇವರ ಪೂಜೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಘಟಕದ ಸದಸ್ಯೆ ರಾಜೇಶ್ವರಿ ನಿತ್ಯಾನಂದ ಪ್ರಾರ್ಥನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮುಲ್ಕಿ ನಗರ ಪಂಚಾಯತ್ನ ಮಾಜಿ ಅಧ್ಯಕ್ಷ ಸತೀಶ್ ಅಂಚನ್ ಮಾತನಾಡಿ, ಯುವ ಸಮಾಜವು ಶೈಕ್ಷಣಿಕ, […]
Read More

13-06-2026, 1:00 PM
ಮಂಗಳೂರು : ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ (ರಿ) ಹಾಗೂ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ನಡೆದ ಮಹಿಳಾ ಆರೋಗ್ಯ, ಋತುಬಂಧ ಮತ್ತು ಕ್ಯಾನ್ಸರ್ ತಡೆ ಅರಿವು ಕಾರ್ಯಕ್ರಮದಲ್ಲಿ, ಋತುಬಂಧದ ಸಂದರ್ಭದಲ್ಲಿ ಉಂಟಾಗುವ ದೈಹಿಕ ಹಾಗೂ ಮಾನಸಿಕ ಬದಲಾವಣೆಗಳು, ಕ್ಯಾನ್ಸರ್ ತಡೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳು, ನಿಯಮಿತ ತಪಾಸಣೆಯ ಮಹತ್ವ ಹಾಗೂ ಆರೋಗ್ಯಕರ ಜೀವನಶೈಲಿಯ ಅಗತ್ಯತೆಯ ಕುರಿತು ಸಂಪನ್ಮೂಲ ವ್ಯಕ್ತಿ ಡಾ. ನಿಶಿತಾ ಶೆಟ್ಟಿಯಾನ್ ಫೆರ್ನಾಂಡಿಸ್ ಮಾಹಿತಿ ನೀಡಿದರು. 40 ವರ್ಷಗಳ ಬಳಿಕ […]
Read More

07-06-2026, 10:00 PM
ಶಕ್ತಿನಗರ : ವರ್ಷದಲ್ಲಿ ಕೇವಲ 28 ದಿನಗಳ ಕಾಲ ಮಾತ್ರ ದರ್ಶನಕ್ಕೆ ಅವಕಾಶವಿರುವ ಈ ಪುಣ್ಯಕ್ಷೇತ್ರಕ್ಕೆ ತೆರಳಲು ಜೂನ್ 6, 2026ರಂದು ಶನಿವಾರ ರಾತ್ರಿ 10.45 ಗಂಟೆಗೆ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ನಿರ್ದೇಶಕರು ಹಾಗೂ ಸದಸ್ಯರು ಸೇರಿದಂತೆ ಸುಮಾರು 33 ಮಂದಿ ನಾಲ್ಯಪದವು ಶಕ್ತಿನಗರ ಶಾಲೆಯ ಬಳಿ ಸೇರಿದರು. ಪ್ರಯಾಣ ಆರಂಭಿಸುವ ಮುನ್ನ ಎಲ್ಲರೂ ಗುರುಗಳಿಗೆ ಪ್ರಾರ್ಥನೆ ಸಲ್ಲಿಸಿ, ಮಹಾದೇವನ ದರ್ಶನದ ಸಂಕಲ್ಪದೊಂದಿಗೆ ಯಾತ್ರೆಯನ್ನು ಆರಂಭಿಸಿದರು. ಮರುದಿನ ಬೆಳಿಗ್ಗೆ ಸುಮಾರು 4.30 ಗಂಟೆಗೆ ಕೊಟ್ಟಿಯೂರು ತಲುಪಿದ […]
Read More

07-06-2026, 10:00 PM
ಕೂಳೂರು : ಕೇರಳದ ಕಣ್ಣೂರು ಜಿಲ್ಲೆಯಲ್ಲಿರುವ ಕೊಟ್ಟಿಯೂರು ಮಹಾದೇವ ದೇವಸ್ಥಾನವು ಅತ್ಯಂತ ಪವಿತ್ರ ಹಾಗೂ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿದ್ದು, ತನ್ನ ಆಧ್ಯಾತ್ಮಿಕ ಮಹತ್ವದಿಂದ ಭಕ್ತರಿಗೆ ವಿಶಿಷ್ಟ ಅನುಭವವನ್ನು ನೀಡುತ್ತಿದೆ. ಈ ಪುಣ್ಯಕ್ಷೇತ್ರಕ್ಕೆ ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ವಿಶೇಷ ತೀರ್ಥಯಾತ್ರೆಯನ್ನು ಆಯೋಜಿಸಲಾಯಿತು. ಜೂನ್ 6, 2026ರಂದು ರಾತ್ರಿ 10.00 ಗಂಟೆಗೆ ಕೂಳೂರಿನಿಂದ ಬಸ್ಸಿನ ಮೂಲಕ ಯಾತ್ರೆ ಆರಂಭಗೊಂಡಿತು. ಈ ಯಾತ್ರೆಯಲ್ಲಿ ಘಟಕದ ಮಾಜಿ ಅಧ್ಯಕ್ಷರು, ಅಧ್ಯಕ್ಷರು, ನಿರ್ದೇಶಕರು ಹಾಗೂ ಸದಸ್ಯರು ಸೇರಿದಂತೆ ಸುಮಾರು 40 ಮಂದಿ […]
Read More

07-06-2026, 10:00 PM
ಮಂಗಳೂರು: ವರ್ಷದಲ್ಲಿ ಕೇವಲ ಒಂದು ತಿಂಗಳ ಅವಧಿಗೆ ಮಾತ್ರ ನಡೆಯುವ ಕೊಟ್ಟಿಯೂರು ಪರಶಿವನ ಜಾತ್ರೆಯ ಅಂಗವಾಗಿ ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಜೂನ್ 6, 2026ರಂದು ವಿಶೇಷ ಕ್ಷೇತ್ರಯಾತ್ರೆಯನ್ನು ಆಯೋಜಿಸಲಾಯಿತು. ರಾತ್ರಿ 8.30 ಗಂಟೆಗೆ ಮಂಗಳೂರಿನಿಂದ ಹೊರಟ ಯಾತ್ರಿಕರು ಮುಂಜಾನೆ ಸುಮಾರು 4 ಗಂಟೆಗೆ ಕೊಟ್ಟಿಯೂರು ಪುಣ್ಯಕ್ಷೇತ್ರವನ್ನು ತಲುಪಿದರು. ಪವಿತ್ರ ವಾವಲಿ ನದಿಯಲ್ಲಿ ಸ್ನಾನ ಮಾಡಿ, ಮಡಿ ಬಟ್ಟೆಯಲ್ಲಿ ಕ್ಷೇತ್ರ ಪ್ರದಕ್ಷಿಣೆ ಸಲ್ಲಿಸಿ, ಭಕ್ತಿಭಾವದಿಂದ ಪರಶಿವ ಮತ್ತು ಸತಿಯ ದರ್ಶನ ಪಡೆದರು. ಕೊಟ್ಟಿಯೂರು ಕ್ಷೇತ್ರವು ತನ್ನ […]
Read More

07-06-2026, 10:00 PM
ಕೆಂಜಾರು-ಕರಂಬಾರು: ಯುವವಾಹಿನಿ (ರಿ.) ಕೆಂಜಾರು-ಕರಂಬಾರು ಘಟಕದ ವತಿಯಿಂದ ಆಯೋಜಿಸಲಾದ ಕೊಟ್ಟಿಯೂರು ಪುಣ್ಯಕ್ಷೇತ್ರಗಳ ಪವಿತ್ರ ಯಾತ್ರೆಯು ಯಶಸ್ವಿಯಾಗಿ ನೆರವೇರಿತು. ಜೂನ್ 6, 2026ರಂದು ರಾತ್ರಿ 8.30 ಗಂಟೆಗೆ ಶ್ರೀ ದೇವಿ ಭಜನಾ ಮಂದಿರ, ಕೆಂಜಾರು-ಕರಂಬಾರುವಿನಿಂದ ಯಾತ್ರೆಯು ಅತ್ಯಂತ ಉತ್ಸಾಹದಿಂದ ಆರಂಭವಾಯಿತು. ಈ ಧಾರ್ಮಿಕ ಪ್ರವಾಸದಲ್ಲಿ ಒಂದು ಬಸ್ಸಿನಲ್ಲಿ 50 ಮಂದಿ ಹಾಗೂ ಒಂದು ಟಿಟಿ ವಾಹನದಲ್ಲಿ 14 ಮಂದಿ ಸೇರಿದಂತೆ ಒಟ್ಟು 64 ಮಂದಿ ಯಾತ್ರಿಕರು ಭಾಗವಹಿಸಿದ್ದರು.ಮರುದಿನ ಮುಂಜಾನೆ ಸುಮಾರು 4.00 ಗಂಟೆಗೆ ಯಾತ್ರಿಕರು ಪವಿತ್ರ ಕೊಟ್ಟಿಯೂರು ಕ್ಷೇತ್ರವನ್ನು […]
Read More