
24-08-2024, 3:32 AM
ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥವನ್ನು ದಿನಾಂಕ 24-08-2024ನೇ ಶನಿವಾರ ಕುದ್ರೋಳಿ ಶ್ರೀ ಗ್ರಂಥ ಗೋಕರ್ಣನಾಥ ಕ್ಷೇತ್ರದಲ್ಲಿ ಲೋಕಾರ್ಪಣೆ ಮಾಡಲಾಯಿತು. ಜಗತ್ತಿಗೆ ಮಾನವೀಯತೆಯ ಸಂದೇಶ ನೀಡಿದವರಲ್ಲಿ ಬುದ್ಧ ಮತ್ತು ಬಸವಣ್ಣರ ಬಳಿಕದ ಸ್ಥಾನ ಬ್ರಹ್ಮಶ್ರೀ ನಾರಾಯಣಗುರುಗಳಿಗೆ ಸಲ್ಲುತ್ತದೆ ಎಂದು ಗ್ರಂಥ […]
Read More

14-07-2024, 8:45 AM
ಮಂಗಳೂರು: ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಂಸದರಾದ ಜಗದೀಶ್ ಶೆಟ್ಟರ್, ಡಾ. ಸಿ.ಎನ್. ಮಂಜುನಾಥ್, ಹಿರಿಯ ಬಾಲಿವುಡ್ ನಟ ಗುಲ್ಶನ್ ಗ್ರೋವರ್ ಮೊದಲಾದವರು ಉಪಸ್ಥಿತರಿದ್ದರು. ಡಾ.ಸದಾನಂದ ಪೂಜಾರಿಯವರು ಮಂಗಳೂರಿನ ವೆನ್ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಮೂತ್ರರೋಗ […]
Read More

20-02-2024, 12:11 PM
ಮಂಗಳೂರು : ಯುವವಾಹಿನಿ ಸಂಸ್ಥೆಯು ಯುವಕರ ಆಕರ್ಷಣೆಯ ಮೂಲಕ ಯುವಜನತೆಯಲ್ಲಿ ಹೊಸ ಸ್ಪೂರ್ತಿ ತುಂಬಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ.ಪೂಜಾರಿ ತಿಳಿಸಿದರು. ಅವರು 2024 ಫೆಬ್ರವರಿ 20 ರಂದು ಮಂಗಳೂರಿನ ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿದ ಯುವವಾಹಿನಿ ಮಂಗಳೂರು ಘಟಕದ ಪದಗ್ರಹಣ ಸಮಾರಂಭದಲ್ಲಿ ನೂತನ ಕಾರ್ಯಕಾರಿ ಸಮಿತಿಗೆ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು. ಶ್ರೀನಿವಾಸ್ ಬಲ್ಕ್ ಕ್ಯಾರಿಯರ್ ಇದರ ಮಾಲೀಕರಾದ ಲೋಕೇಶ್ ಆರ್ ಅಮೀನ್ ಇವರು ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿದರು, ಕೇಂದ್ರ […]
Read More

04-02-2024, 7:26 AM
ಮಂಗಳೂರು: ಮಂಗಳೂರು ಜನರನ್ನು ಕಾನೂನು ಮತ್ತು ಪ್ರೀತಿಯಿಂದ ಮಾತ್ರ ಗೆಲ್ಲಲು ಸಾಧ್ಯ. ಕರಾವಳಿ ಜನತೆಗೆ ಪ್ರೀತಿ ಕೊಟ್ಟರೆ ಅವರು ನೂರುಪಟ್ಟು ಪ್ರೀತಿ ತೋರಿಸುತ್ತಾರೆ. ಹೀಗೆ ಭಾವುಕರಾಗಿ ನುಡಿದವರು ಮಂಗಳೂರು ಸೆಂಟ್ರಲ್ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಮಹೇಶ್ಕುಮಾರ್. ಕೊಡಗಿಗೆ ವರ್ಗಾವಣೆಗೊಂಡ ಅವರನ್ನು ಮಂಗಳೂರು ನಾಗರಿಕ ಸಮಿತಿ ವತಿಯಿಂದ ಭಾನುವಾರ ಆಯೋಜಿಸಲಾದ ಅದ್ದೂರಿ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು. ಪೊಲೀಸ್ ಕೆಲಸದ ಜತೆಗೆ ಸಾಮಾಜಿಕ ಚಟುವಟಿಕೆಯಿಂದ ನಾನು ಜೀವನದಲ್ಲಿ ಖುಷಿ ಕಂಡಿದ್ದೇನೆ. ಮಂಗಳೂರು ಸರ್ವಧರ್ಮಗಳ ನೆಲೆಬೀಡು ಆಗಬೇಕು ಎನ್ನುವುದು ನಮ್ಮೆಲ್ಲರ […]
Read More

27-01-2024, 3:27 AM
ದೇಶದ ಪ್ರತಿಷ್ಠಿತ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಒಂದಾದ ಯೂನಿಯನ್ ಬ್ಯಾಂಕ್ ಒಫ್ ಇಂಡಿಯಾ ಇದರ ನೌಕರರ ಸಂಘ (ಕರ್ನಾಟಕ) ದ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗಿರುವ, ಯುವವಾಹಿನಿ (ರಿ.) ಪಣಂಬೂರು-ಕುಳಾಯಿ ಘಟಕದ ಮಾಜಿ ಅಧ್ಯಕ್ಷರು ಹಾಗೂ ಪ್ರಸ್ತುತ ಸಾಲಿನ ವಿಶುಕುಮಾರ್ ದತ್ತಿನಿಧಿ ಸಂಚಾಲಕರಾರುವ ಶ್ರೀ ಸುರೇಶ್ ಪೂಜಾರಿ ಇವರಿಗೆ ಯುವಸಿಂಚನ ಹಾಗೂ ಯುವವಾಹಿನಿ ಸಾಮಾಜಿಕ ಜಾಲತಾಣ ಬಳಗದ ಹೃದಯಸ್ಪರ್ಶಿ ಅಭಿನಂದನೆಗಳು.
Read More

15-01-2024, 5:20 PM
ಬಜಪೆ: ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ 2024 ನೇ ಜನವರಿ 15 ರಂದು ಯುವವಾಹಿನಿ ಬಜಪೆ ಘಟಕದ ಸದಸ್ಯರಿಂದ ಭಜನಾ ಸಂಕೀರ್ತನೆಯು ಅರ್ಥಪೂರ್ಣವಾಗಿ ನಡೆಯಿತು. ಈ ಸಂದರ್ಭದಲ್ಲಿ ಬಜಪೆ ಘಟಕದ ಅಧ್ಯಕ್ಷರು ಹಾಗು ಸದಸ್ಯರನ್ನು ಕ್ಷೇತ್ರದ ಅರ್ಚಕರು ಗೌರವಿಸಿದರು.
Read More

07-01-2024, 10:00 AM
ಮಂಗಳೂರು: ಕ್ರೀಡೆಯಲ್ಲಿ ತೊಡಗಿಸಿಕೊಂಡಲ್ಲಿ ದೈಹಿಕ ಸದೃಢತೆ ಸಾಧಿಸಿಲಾಗುವುದು ಹಾಗೂ ಮಾನಸಿಕ, ದೈಹಿಕ, ಆರೋಗ್ಯವು ಸುಧಾರಿಸುತ್ತದೆ ಎಂದು ಲಯನ್ಸ್ ಕ್ಲಬ್ ಮಂಗಳೂರು ಅಧ್ಯಕ್ಷರಾದ ಲ| ಶೀನಾ ಪೂಜಾರಿ ಇವರು ತಿಳಿಸಿದರು. ಅವರು ಯುವವಾಹಿನಿ ಮಂಗಳೂರು ಘಟಕದ ಆಶ್ರಯದಲ್ಲಿ 2024 ನೇ ಜನವರಿ 7 ರಂದು ಮಂಗಳೂರಿನ ನಂತೂರಿನ ಪಾದುವ ಕ್ರೀಡಾಂಗಣದಲ್ಲಿ ಜರುಗಿದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ(ರಿ.) ಮಂಗಳೂರು ಘಟಕದ ಅಧ್ಯಕ್ಷರಾದ ಗಣೇಶ್ ಸುವರ್ಣ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ, […]
Read More

24-12-2023, 11:20 AM
ಮಂಗಳೂರು :- ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷರಾಗಿ ಹರೀಶ್ ಕೆ ಪೂಜಾರಿ ಆಯ್ಕೆಯಾಗಿದ್ದಾರೆ. ಒಂದನೇ ಉಪಾಧ್ಯಕ್ಷರಾಗಿ ಲೋಕೇಶ್ ಕೋಟ್ಯಾನ್ ಕುಳೂರು, ಎರಡನೇ ಉಪಾಧ್ಯಕ್ಷರಾಗಿ ಅಶೋಕ್ ಕುಮಾರ್ ಪಡ್ಪು, ಪ್ರಧಾನ ಕಾರ್ಯದರ್ಶಿಯಾಗಿ ಜಗದೀಶ್ ಚಂದ್ರ ಡಿ.ಕೆ, ಕೋಶಾಧಿಕಾರಿಯಾಗಿ ಹರೀಶ್.ವಿ ಪಚ್ಚನಾಡಿ ಜೊತೆ ಕಾರ್ಯದರ್ಶಿಯಾಗಿ ರೇಖಾ ಗೋಪಾಲ, ಕಲೆ ಮತ್ತು ಸಾಹಿತ್ಯ ನಿರ್ದೇಶಕರಾಗಿ ನಯನಾ ರಮೇಶ್, ಸಾಂಸ್ಕೃತಿಕ ನಿರ್ದೇಶಕರಾಗಿ ಹರೀಶ್ ಸುವರ್ಣ ಬೆಳ್ತಂಗಡಿ, ನಾರಾಯಣಗುರು ತತ್ವ ಪ್ರಚಾರ ನಿರ್ದೇಶಕರಾಗಿ ಮೋಹನ್ ಮಾಡೂರು, ಮಹಿಳಾ ಸಂಘಟನಾ ನಿರ್ದೇಶಕರಾಗಿ […]
Read More

24-12-2023, 9:00 AM
ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ ತರುವ ಕೆಲಸ ಯುವವಾಹಿನಿಯಿಂದ ಆಗುತ್ತಿದೆ ನಾವೆಲ್ಲರೂ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳ ಹಾದಿಯಲ್ಲಿ ಮುನ್ನಡೆಯಬೇಕಾಗಿದೆ ಎಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ತಿಳಿಸಿದರು. ಅವರು ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಆತಿಥ್ಯದಲ್ಲಿ ಜರುಗಿದ ಯುವವಾಹಿನಿಯ […]
Read More