
13-11-2022, 5:48 PM
ಕುಪ್ಪೆಪದವು :- ಯುವವಾಹಿನಿಯ ಶಿಸ್ತು ಬದ್ಧ ಕಾರ್ಯಕ್ರಮ, ಪಾರದರ್ಶಕತೆ, ಎಲ್ಲವನ್ನು ಗಮನಿಸಿ ಈ ಬಾರಿ ಕರ್ನಾಟಕ ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಿದೆ. ಈ ಸಂಸ್ಥೆಯು ಬೇರೆ ಸಂಘಟನೆಗಿಂತ ವಿಭಿನ್ನವಾಗಿದೆ. ಸೇವಾ ಮನೋಭಾವ ಹೊಂದಿರುವ ಸಂಸ್ಥೆಯ ಕಾರ್ಯಕ್ರಮಕ್ಕೆ ಬೇರೆ ಯಾವ ಕಾರ್ಯಕ್ರಮದ ಒತ್ತಡವಿದ್ದರೂ ಕೂಡ ಪಾಲ್ಗೊಳ್ಳುವ ಅವಕಾಶ ಬಿಟ್ಟುಕೊಡಲಾರೆ. ಯುವವಾಹಿನಿ ಸಂಸ್ಥೆಗೆ ಯಾವುದೇ ರೀತಿಯ ಸಹಕಾರ ನೀಡಲು ಸದಾ ಸಿದ್ಧ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಚಿಂತನೆ ಮತ್ತು ತತ್ವಾದರ್ಶಗಳು ಸರ್ವರಿಗೂ ಅನ್ವಯವಾಗುವಂತಿವೆ […]
Read More

13-11-2022, 5:26 PM
ಬೆಳ್ತಂಗಡಿ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿದ್ಯೆ, ಉದ್ಯೋಗ, ಸಂಪರ್ಕ ಎಂಬ ಪರಿಕಲ್ಪನೆಯೊಂದಿಗೆ ಸಮಾಜ ಸೇವೆ ಮಾಡುತ್ತಿರುವ ಯುವವಾಹಿನಿ ಬೆಳ್ತಂಗಡಿ ಘಟಕದ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರಧಾನ, ಸಾಧಕರಿಗೆ ಸನ್ಮಾನ ಸಾಂತ್ವನನಿಧಿ ಹಸ್ತಾಂತರ ಕಾರ್ಯಕ್ರಮ ನ.13 ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾಂಗಣದಲ್ಲಿ ನಡೆಯಿತು. ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಮಾಣಿ೦ಜ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು , ಬೆಳ್ತಂಗಡಿ ಘಟಕ ಅಧ್ಯಕ್ಷೆ ಸುಜಾತ […]
Read More

06-11-2022, 4:50 PM
ಮಂಗಳೂರು:- ಸ್ವಾತಂತ್ರ್ಯ ಅಮೃತ ಮಹೋತ್ಸವ 2022ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಮಂಗಳೂರು ಘಟಕವು, ಘಟಕದ ಸದಸ್ಯರಿಗೆ, ಮಕ್ಕಳಿಗೆ ಮತ್ತು ಮಹಿಳೆಯರಿಗೆ ದಿನಾಂಕ 06 ನವೆಂಬರ್ 2022ರ ಭಾನುವಾರದಂದು ಯುವವಾಹಿನಿ ಸಭಾಂಗಣದಲ್ಲಿ ಸಂಗೀತ ಸ್ಪರ್ಧೆಯನ್ನು ಏರ್ಪಡಿಸಿತ್ತು. ಈ ಸಂಗೀತ ಸ್ಪರ್ಧೆಯ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಯುವವಾಹಿನಿ ಕೇಂದ್ರ ಸಮಿತಿಯ ಎರಡನೇ ಉಪಾಧ್ಯಕ್ಷರಾದ ಹರೀಶ್ ಕೆ. ಪೂಜಾರಿಯವರು ಮಾತನಾಡುತ್ತಾ ಸದಸ್ಯರಲ್ಲಿರುವ ಸೂಕ್ತ ಪ್ರತಿಭೆಗಳ ಅನಾವರಣಕ್ಕೆ ಇಂಥ ಕಾರ್ಯಕ್ರಮಗಳು ಮಾದರಿ ಎಂದು ಅಭಿಪ್ರಾಯಪಟ್ಟರು. ಸಂಗೀತ ಸ್ಪರ್ಧೆಯಲ್ಲಿ 9 […]
Read More

06-11-2022, 4:40 PM
ಮಾಣಿ :- ಯುವವಾಹಿನಿ(ರಿ.) ಮಾಣಿ ಘಟಕದ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 06ನವೆಂಬರ್ 2022 ರಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾ ಭವನ,ಮಾಣಿ ಇಲ್ಲಿ ಜರುಗಿತು. ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಮಾಣಿ ಇದರ ಅಧ್ಯಕ್ಷರಾದ ಸುರೇಶ್ ಸೂರ್ಯ ರವರು ಉದ್ಘಾಟಿಸಿದರು. ತದನಂತರ ಅವರು ನೂತನ ತಂಡಕ್ಕೆ ಶುಭ ಹಾರೈಸಿದರು. ಕಾರ್ಯದರ್ಶಿ ರೇಣುಕಾ ಕಣಿಯೂರುರವರು ವಾರ್ಷಿಕ ವರದಿಯನ್ನು ದೃಶ್ಯ – ಶ್ರವ್ಯ ಪರದೆಯ ಮೂಲಕ […]
Read More

06-11-2022, 2:35 PM
ಮಂಗಳೂರು:- ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ 2022-23ನೇ ಸಾಲಿನ ಪದಗ್ರಹಣ ಕಾರ್ಯಕ್ರಮವು ದಿನಾಂಕ 06 ನವೆಂಬರ್ 2022ರಂದು ಉರ್ವಾ ಸ್ಟೋರಿನ ಯುವವಾಹಿನಿ ಸಭಾಂಗಣದಲ್ಲಿ ಜರಗಿತು. ವೇದಿಕೆಯಲ್ಲಿ ಕಾರ್ಯಕ್ರಮ ಉದ್ಘಾಟಕರಾಗಿ ಪ್ರವೀಣ್ ಕುಮಾರ್ ಕೆಡೆಂಜಿ ಆಡಳಿತ ನಿದೇ೯ಶಕರು ಪುರುಷರತ್ನ ಬಯೋ ಪ್ರೊಡ್ಯೂಸರ್ ಕಂಪನಿ, ಕಡಬ ಇವರು ಭಾಗವಹಿಸಿ ಶುಭ ಹಾರೈಸಿದರು. ಹಾಗೂ ಮುಖ್ಯ ಅತಿಥಿಗಳಾದ ಸುಖಲಾಕ್ಷಿ ವೈ .ಸುವರ್ಣ ಪ್ರಧಾನ ಕಾರ್ಯದಶಿ೯ ಅಖಿಲ ಭಾರತ ಬಿಲ್ಲವ ಮಹಿಳಾ ಸಂಘ, ಪುಷ್ಪಾವತಿ ಕೆ.ಎ. ಅಧ್ಯಕ್ಷರು ಪ್ರಗತಿ ಮಹಿಳಾ ಮಂಡಲ […]
Read More

05-11-2022, 4:30 PM
ಹೆಜಮಾಡಿ :- ಹೆಜಮಾಡಿ ಯುವವಾಹಿನಿ ಘಟಕದ ಆಶ್ರಯದಲ್ಲಿ ಹೆಜಮಾಡಿ ಬಿಲ್ಲವರ ಸಂಘದ ಗುರು ಮಂದಿರದಲ್ಲಿ ತುಳುನಾಡ ತುಳಸಿ ಪರ್ಭ ಆಚರಣೆಯು ದಿನಾಂಕ 05 ನವೆಂಬರ್ 2022ರಂದು ನಡೆಯಿತು. ಗುರು ಮಂದಿರದ ಪ್ರಧಾನ ಅರ್ಚಕ ಹರೀಶ್ ಶಾಂತಿ ಮುಂಬಯಿ ಧಾರ್ಮಿಕ ಪೂಜಾ ಕಾರ್ಯಕ್ರಮ ನೆರವೇರಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು, ಬಿಲ್ಲವ ಸಂಘದ ಅಧ್ಯಕ್ಷ ಲೋಕೇಶ್ ಅಮೀನ್, ಯುವವಾಹಿನಿ ಹೆಜಮಾಡಿ ಘಟಕ ದ ಅಧ್ಯಕ್ಷ ಧನಂಜಯ ಕಾರ್ಯದರ್ಶಿ ಜಯಶ್ರೀ ಸದಾಶಿವ, ಯುವವಾಹಿನಿ ಕೇಂದ್ರ ಸಮಿತಿಯ […]
Read More

05-11-2022, 2:53 PM
ಕೊಲ್ಯ :- ತುಳಸಿ ಹಬ್ಬದ ಪ್ರಯುಕ್ತ ಘಟಕದ ಸದಸ್ಯರಿಗೆ ದಿನಾಂಕ 05 ನವೆಂಬರ್ 2022ರಂದು ಸಾಂಪ್ರದಾಯಿಕ ಹಣತೆ ಬೆಳಗಿದ ಅಂದದ ತುಳಸಿ ಕಟ್ಟೆ ಫೋಟೋ ಸ್ಪರ್ಧೆಯನ್ನು ಘಟಕದ ಸದಸ್ಯರಿಗೆ ಏರ್ಪಡಿಸಿದ್ದು, ಒಟ್ಟು 31 ಸದಸ್ಯರು ಭಾಗವಹಿಸಿದ್ದರು. ಘಟಕದ ಕಲೆ ಮತ್ತು ಸಾಹಿತ್ಯ ನಿರ್ದೇಶಕರು ಕು. ಅನ್ವಿತಾ. ಎ, ಮತ್ತು ವಿದ್ಯಾರ್ಥಿ ಸಂಘಟನೆ ನಿರ್ದೇಶಕರದ ಕು. ಸಚೇತ ಸಾಲ್ಯಾನ್ ಅವರು ಈ ಸ್ಪರ್ಧೆಯ ಜವಾಬ್ದಾರಿ ವಹಿಸಿಕೊಂಡಿದ್ದರು. ಬ್ರಹ್ಮ ಶ್ರೀ ನಾರಾಯಣ ಗುರು ಧರ್ಮಶಿಕ್ಷಣ ತರಗತಿ ಇದರ ಗುರುಗಳಾದ ಡಾ. […]
Read More

01-11-2022, 5:35 PM
ಕೊಲ್ಯ :- ಯುವವಾಹಿನಿ (ರಿ.) ಕೊಲ್ಯ ಘಟಕದ ಆಶ್ರಯದಲ್ಲಿ ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ.) ಕೊಲ್ಯ ಸೋಮೇಶ್ವರ ಮತ್ತು ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯ ಹಾಗೂ ಚುಟುಕು ಸಾಹಿತ್ಯ ಪರಿಷತ್ ಉಳ್ಳಾಲ ಘಟಕ ಇದರ ಸಹಭಾಗಿತ್ವದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಯುವಸಂಜೆ- ಭಾವಲಹರಿ, ಕವಿ ಕಾವ್ಯ ಗಾಯನವು ದಿನಾಂಕ 01 ನವೆಂಬರ್ 2022 ರಂದು ಸಂಜೆ ಬ್ರಹ್ಮಶ್ರೀ ನಾರಾಯಣಗುರು ಸಭಾ ಭವನ ಕೊಲ್ಯದಲ್ಲಿ ಜರುಗಿತು. ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯ […]
Read More

01-11-2022, 4:02 PM
ಬೆಂಗಳೂರು :- 2022 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯದ ಪ್ರತಿಷ್ಠಿತ ಸಂಸ್ಥೆ ಯುವವಾಹಿನಿಗೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಜರುಗಿದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಸ್ತಾಂತರ ಮಾಡಿದರು. ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡಿರುವ ರಾಜ್ಯಾದ್ಯಂತ 33 ಘಟಕಗಳ ಮೂಲಕ 3000ಕ್ಕೂ ಅಧಿಕ ಸದಸ್ಯರನ್ನು ಹೊಂದಿರುವ ಯುವವಾಹಿನಿ ಸಂಸ್ಥೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ದಿನಾಂಕ 01 ನವೆಂಬರ್ 2022 ಮಂಗಳವಾರದಂದು ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಇವರು ಕಿಕ್ಕಿರಿದು […]
Read More

30-10-2022, 3:19 PM
ಕಳೆದ 35 ವರುಷಗಳಿಂದ ಯುವವಾಹಿನಿ ಸಂಸ್ಥೆಯನ್ನು ಕಟ್ಟಿ ಬೆಳೆಸಿದ ಹಿರಿಯರು, ರಾಜ್ಯಾದ್ಯಂತ ಕಾರ್ಯಾಚರಿಸುತ್ತಿರುವ 33 ಘಟಕಗಳ ಸುಮಾರು ಮೂರು ಸಾವಿರಕ್ಕೂ ಅಧಿಕ ಸದಸ್ಯರ ಶ್ರಮ…..ಇವೇ ಯುವವಾಹಿನಿಯ ಸಾಧನೆಯ ಹಿಂದಿರುವ ಶಕ್ತಿ, ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಉದಯ ಅಮೀನ್ ಮಟ್ಟು ತಿಳಿಸಿದರು. ನಮ್ಮ ಸಂಸ್ಥೆಯ ಸಾಧನೆಯನ್ನು ಗುರುತಿಸಿ ಪ್ರಶಸ್ತಿ ನೀಡಿದ ಕರ್ನಾಟಕ ಸರಕಾರಕ್ಕೆ ಕೃತಜ್ಞತೆಗಳು ಹಾಗೂ ಪ್ರತಿಯೊಂದು ಯುವವಾಹಿನಿ ಸದಸ್ಯರಿಗೆ ಈ ಪ್ರಶಸ್ತಿಯನ್ನು ಅರ್ಪಿಸಲಾಗುವುದು ಹಾಗೂ ಈ ಸಾಧನೆಯ ಹಿಂದಿರುವ ಪ್ರತಿ ಯುವವಾಹಿನಿ ಸದಸ್ಯರಿಗೆ ಹೃದಯಾಂತರಾಳದ […]
Read More