
01-03-2026, 6:00 PM
ಉಡುಪಿ : ಭಾರತೀಯ ಸಂಸ್ಕ್ರತಿಯಲ್ಲಿ ಕುಟುಂಬ ವ್ಯವಸ್ಥೆಯೆ ಪ್ರಧಾನವಾದುದು. ರಾಷ್ಟ್ರಭಕ್ತಿ, ಶ್ರದ್ಧೆ, ಒಕ್ಕೂಟ ವ್ಯವಸ್ಥೆ, ಸಾಮಾಜಿಕ ಮೌಲ್ಯಗಳಿಗೆ ಸದಾ ಪ್ರೇರಣೆಗಳಾಗುವುದು ಕುಟುಂಬ ವ್ಯವಸ್ಥೆಯಿಂದ. ಆಧುನಿಕ ದಿನಮಾನದಲ್ಲಿ ಎಲ್ಲಾ ಎಲ್ಲೆಗಳನ್ನು ಮೀರಿ ಕುಟುಂಬದ ಉಳಿವಿಗೆ ಹೆಚ್ಚು ಸಹಕಾರಿಯಾಗುವುದು ಸಂಘಟನಾ ಸಹಭಾಗಿತ್ವ ಎಂದು ಕರ್ನಾಟಕ ಸರಕಾರದ ಹೆಚ್ಚುವರಿ ಅಡ್ವೋಕೇಟ್ ಜನರಲ್ ತಾರಾನಾಥ ಪೂಜಾರಿ ಅಭಿಪ್ರಾಯಪಟ್ಟರು. ಯುವವಾಹಿನಿಯಂತಹ ಸಂಘಟನೆ ತತ್ವ ಸಿದ್ದಾಂತಗಳಿಗೆ ಬದ್ದವಾಗಿ ಮಾತೃವಾತ್ಸಲ್ಯದ ರೀತಿಯಲ್ಲಿ ಸದಸ್ಯರನ್ನು ಪ್ರೇರೇಪಿಸುತ್ತಾ ಸಂಘಟನೆ ಮತ್ತು ಸೇವಾ ಪ್ರಜ್ಞೆಯನ್ನು ಜಾಗೃತಗೊಳಿಸುತ್ತಿರುವುದು ಶ್ಲಾಘನೀಯ ಎಂದರು.ರಜತ ಮಹೋತ್ಸವದ ಸವಿ […]
Read More

01-03-2026, 2:00 PM
ಮಂಗಳೂರು : “ಸಂಘಟನೆಯ ಯಶಸ್ಸು ಕೇವಲ ಅಧಿಕಾರ ಚಲಾಯಿಸುವುದರಲ್ಲಿಲ್ಲ, ಬದಲಾಗಿ ಎಲ್ಲರನ್ನೂ ಒಗ್ಗೂಡಿಸಿ ದಕ್ಷ ನಿರ್ಧಾರಗಳನ್ನು ತೆಗೆದುಕೊಳ್ಳುವ ನಾಯಕತ್ವದ ಮೇಲಿದೆ” ಎಂದು ಆಪ್ತ ಸಮಾಲೋಚಕರು, ತರಬೇತುದಾರರಾದ ಸ್ಮಿತೇಶ್ ಎಸ್ ಬಾರ್ಯ ಅಭಿಪ್ರಾಯಪಟ್ಟರು. ಅವರು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮತ್ತು ಮಂಗಳೂರು ಘಟಕದ ಆತಿಥ್ಯದಲ್ಲಿ ಯೆಯ್ಯಾಡಿಯ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಮಾರ್ಚ್ 1, ಭಾನುವಾರ ಆಯೋಜಿಸಲಾಗಿದ್ದ ಯುವವಾಹಿನಿ ಘಟಕಗಳ ಪದಾಧಿಕಾರಿಗಳ ಮತ್ತು ಸದಸ್ಯರ ತರಬೇತಿ ಕಾರ್ಯಾಗಾರ ‘ವಿಕಾಸ 2026’ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ […]
Read More

01-03-2026, 1:00 PM
ಶ್ರೀಯುತರು ಉಡುಪಿ ಯುವವಾಹಿನಿಯ ರಜತ ಸಂಭ್ರಮವನ್ನು ಬ್ರಹ್ಮಶ್ರೀ ನಾರಾಯಣ ಗುರುಗಳು ಕರಮುಕ್ಕು ದೇಗುಲದಲ್ಲಿ ಪ್ರತಿಷ್ಠಾಪಿಸಿದ ದೀಪದ ಮಾದರಿಯನ್ನು ಪ್ರಜ್ವಲಿಸಿ ಸಂಸ್ಥೆಯು ನಡೆಸಿದ ಸಾಮಾಜಿಕ ಹಾಗೂ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ವಿಶೇಷ ಪ್ರಶಂಸೆಯನ್ನು ವ್ಯಕ್ತಪಡಿಸಿದರು. ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷರಾದ ದಯಾನಂದ ಕರ್ಕೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಜತ ಸಂಭ್ರಮ ಸಂಚಾಲಕರಾದ ರಘುನಾಥ್ ಮಾಬಿಯಾನ್ ಗೌರವ ಉಪಸ್ಥಿತರಿದ್ದರು. ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಅರವಿಂದ ಕೋಟ್ಯಾನ್ ಕಲ್ಲುಗುಡ್ಡೆ ಸಂಗ್ರಹಿಸಿದ ‘ಗುರುವಾಣಿ’ ಕೃತಿಯನ್ನು ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಅಧ್ಯಕ್ಷರಾದ […]
Read More

01-03-2026, 10:00 AM
ವೇಣೂರು: ನಾರಾವಿಯ ಪುಣ್ಯಕ್ಷೇತ್ರ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಜರಗುತ್ತಿರುವ ಬ್ರಹ್ಮಕಲಶ ಮಹೋತ್ಸವದ ಅಂಗವಾಗಿ, ಯುವವಾಹಿನಿ (ರಿ.) ವೇಣೂರು ಘಟಕದ ವತಿಯಿಂದ ಅತ್ಯಂತ ಯಶಸ್ವಿಯಾಗಿ ಹೊರಕಾಣಿಕೆ ಸಮರ್ಪಿಸಲಾಯಿತು.ದಿನಾಂಕ 01-03-2026ರ ಭಾನುವಾರದಂದು ನಡೆದ ಈ ವೈಭವದ ಹೊರಕಾಣಿಕೆ ಮೆರವಣಿಗೆಯಲ್ಲಿ ವೇಣೂರು ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಅತ್ಯಂತ ಉತ್ಸಾಹದಿಂದ ಭಾಗವಹಿಸಿದ್ದರು. ಭಕ್ತಿ ಮತ್ತು ಶ್ರದ್ಧೆಯ ಸಂಕೇತವಾಗಿ ಸಮರ್ಪಿಸಲಾದ ಈ ಹೊರಕಾಣಿಕೆಯನ್ನು ದೇವಸ್ಥಾನದ ಸಮಿತಿಯವರು ಗೌರವಪೂರ್ವಕವಾಗಿ ಸ್ವೀಕರಿಸಿದರು. ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಯುವವಾಹಿನಿ ವೇಣೂರು ಘಟಕದ ಪದಾಧಿಕಾರಿಗಳು, ಮಾಜಿ […]
Read More

28-02-2026, 9:00 PM
ಕೊಲ್ಯ : ತುಳುನಾಡಿನ ಪವಿತ್ರ ಧಾರ್ಮಿಕ ಕ್ಷೇತ್ರವಾದ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತಿಲ್ನಲ್ಲಿ ಜರುಗಿದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಯುವವಾಹಿನಿ (ರಿ.) ಕೊಲ್ಯ ಘಟಕದ ಸದಸ್ಯರು ಭಕ್ತಿಪೂರ್ವಕವಾಗಿ ಸ್ವಯಂ ಸೇವೆಯನ್ನು ಸಲ್ಲಿಸಿದರು.ಆದಿ ದೈವ ಧೂಮಾವತಿ, ಸಾಯನ ಬೈದ್ಯರ ಗುರುಪೀಠ ಹಾಗೂ ದೇಯಿ ಬೈದ್ಯೆತಿ-ಕೋಟಿ ಚೆನ್ನಯರ ಮೂಲಸ್ಥಾನವಾದ ಈ ಪವಿತ್ರ ಕ್ಷೇತ್ರದಲ್ಲಿ ಫೆಬ್ರವರಿ 28ರಂದು ಜರುಗಿದ ಕಾರ್ಯಕ್ರಮದಲ್ಲಿ ಘಟಕದ ಹೆಚ್ಚಿನ ಸಂಖ್ಯೆಯ ಸದಸ್ಯರು ಪಾಲ್ಗೊಂಡರು. ಬೆಳಿಗ್ಗೆಯಿಂದ ಸಂಜೆಯವರೆಗೆ ಕ್ಷೇತ್ರದ ಪ್ರಸಾದ ಪ್ಯಾಕಿಂಗ್ ಹಾಗೂ ದೇಯಿ ಬೈದ್ಯೆತಿ […]
Read More

28-02-2026, 9:00 PM
ಮಂಗಳೂರು: ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ಲ್ (ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ) ಇಲ್ಲಿ ನಡೆದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ, ದಿನಾಂಕ 28-02-2026 ರಂದು ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಕ್ಷೇತ್ರದ ದರ್ಶನ ಮತ್ತು ಪ್ರಸಾದ ಸ್ವೀಕಾರ ಕಾರ್ಯಕ್ರಮ ನಡೆಯಿತು. ಜಾತ್ರಾ ಮಹೋತ್ಸವದ ಪುಣ್ಯ ಕಾಲದಲ್ಲಿ ಘಟಕದ ಸದಸ್ಯರೆಲ್ಲರೂ ಒಟ್ಟಾಗಿ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ವತಿಯಿಂದ ನೀಡಲಾಗುವ ಬ್ರಹ್ಮ ಬೈದರ್ಕುಲು ಹಾಗೂ […]
Read More

28-02-2026, 6:00 PM
ಉಡುಪಿ : ಸಮುದಾಯದ ಉನ್ನತಿಗೆ ಭೌದ್ದಿಕ ವಿಕಸನದೊಂದಿಗೆ ಸಾಂಸ್ಕೃತಿಕ ವಿಚಾರಧಾರೆಗಳು ಅವಶ್ಯಕ. ಈ ನಿಟ್ಟಿನಲ್ಲಿ ಯುವವಾಹಿನಿಯು ಯುವ ಮನಸ್ಸುಗಳಿಗೆ ಸೂಕ್ತ ಪ್ರೋತ್ಸಾಹ ನೀಡಿ ಸೃಜನಶೀಲತೆಯನ್ನು ಸದ್ವಿನಿಯೋಗಪಡಿಸುತ್ತಿದೆ ಎಂದು ನಾರಾಯಣಗುರು ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಶ್ರೀ ಮುದ್ರಾಡಿ ಮಂಜುನಾಥ ಪೂಜಾರಿ ಅಭಿಪ್ರಾಯಪಟ್ಟರು. ಸಾಂಸ್ಕೃತಿಕ ಪ್ರಜ್ಞೆಗಳು ವ್ಯಕ್ತಿಗಳಲ್ಲಿ ಸೃಜನಶೀಲತೆಯನ್ನು ಸೃಷ್ಟಿಸುತ್ತಿದ್ದು, ಉತ್ತಮ ವಿಚಾರಧಾರೆಗಳು, ನೈಜ್ಯ ಇತಿಹಾಸಗಳ ಸಂದೇಶವನ್ನು ಬಿತ್ತರಿಸುವಲ್ಲಿ ನಿರಂತರ ವಿವಿಧ ಕಾರ್ಯಕ್ರಮಗಳನ್ನು ಸಂಘಟಿಸುತ್ತಿರುವ ಯುವವಾಹಿನಿಯ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಶ್ರೀಯತರು ದಿನಾಂಕ 28-02-2062,ಶನಿವಾರ ,ಬನ್ನಂಜೆ ನಾರಾಯಣ ಗುರು ಆಡಿಟೋರಿಯಂನಲ್ಲಿ […]
Read More

28-02-2026, 12:30 PM
ಉಡುಪಿ : ಸದಭಿರುಚಿಯ ಚಟುವಟಿಕೆಗಳು ಪ್ರತಿಭಾ ಪರಿಶೋಧದ ಜೊತೆಗೆ ಸ್ನೇಹ,ಸೌಹಾರ್ದ ಸಂಬಂಧವನ್ನೂ ಸಾಧ್ಯವಾಗಿಸುತ್ತದೆ. ಸಂಸ್ಕೃತಿ,ಸಂಸ್ಕಾರಗಳನ್ನು ಪ್ರಸ್ತುತಪಡಿಸುವುದರಿಂದ ಸಮುದಾಯದ ಸಂವರ್ಧನೆಗೂ ಕಾರಣವಾಗುತ್ತದೆ. ವಿವಿಧ ಆಸಕ್ತಿಗಳ ಜೊತೆಗೆ ಸಜ್ಜುಗೊಳ್ಳುವ ಸಾಂಸ್ಕೃತಿಕ ಪ್ರಕಾರಗಳು ಅನ್ಯೋನ್ಯತೆಯ ಪ್ರತೀಕವಾಗಿ ಸಂಘಟನೆಗೆ ಶಕ್ತಿ ತುಂಬುತ್ತದೆ ಎಂದು ಹಿರಿಯ ಜಾನಪದ ವಿದ್ವಾಂಸರಾದ ಬನ್ನಂಜೆ ಬಾಬು ಅಮೀನ್ ಅಭಿಪ್ರಾಯಪಟ್ಟರು. ಶ್ರೀಯುತರು ದಿನಾಂಕ 28-02-2026,ಶನಿವಾರದಂದು ಬನ್ನಂಜೆ ನಾರಾಯಣ ಗುರು ಆಡಿಟೋರಿಯಂನಲ್ಲಿ ಜರಗಿದ ಉಡುಪಿ ಘಟಕದ ರಜತ ಸಂಭ್ರಮ ಪ್ರಯುಕ್ತ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಸಂಘಗಳಿಗೆ ಆಯೋಜಿಸಲಾದ ಸಾಂಸ್ಕೃತಿಕ ಸ್ಪರ್ಧಾ […]
Read More

28-02-2026, 11:00 AM
ಮಂಗಳೂರು: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಇತ್ತೀಚೆಗೆ ಜರುಗಿದ ಜಾತ್ರಾ ಮಹೋತ್ಸವದ ಪುಣ್ಯ ಸಂದರ್ಭದಲ್ಲಿ, ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ವಿಶೇಷ ಸ್ವಯಂ ಸೇವೆ ಹಾಗೂ ಅನ್ನದಾನ ಸೇವೆಗಳನ್ನು ಸಲ್ಲಿಸಲಾಯಿತು. ದಿನಾಂಕ 28-02-2026ರ ಮಡಿಲು ಸೇವೆಯ ಪವಿತ್ರ ದಿನದಂದು ಕಂಕನಾಡಿ ಘಟಕದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರದಲ್ಲಿ ಉಪಸ್ಥಿತರಿದ್ದು, ಭಕ್ತಾದಿಗಳ ಅನುಕೂಲಕ್ಕಾಗಿ ಸ್ವಯಂಸೇವಕರಾಗಿ ಕಾರ್ಯನಿರ್ವಹಿಸಿದರು. ಕ್ಷೇತ್ರದ ಶಿಸ್ತು ಮತ್ತು ವ್ಯವಸ್ಥಿತ ನಿರ್ವಹಣೆಯಲ್ಲಿ ಪಾಲ್ಗೊಂಡು ಸೇವೆಯನ್ನು ಅರ್ಪಿಸಿದರು.ಅನ್ನದಾನಕ್ಕೆ ಧನಸಹಾಯ:ಯುವವಾಹಿನಿಯ ಸಾಮಾಜಿಕ ಬದ್ಧತೆಯ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿಯೂ […]
Read More

27-02-2026, 9:31 PM
ಕೊಣಾಜೆ: ಪಾನೇಲದ ಓಂ ಶ್ರೀ ಗಣೇಶ ಯುವಕ ಮಂಡಲ (ರಿ.) ಮಂಡಲಿ ಹಾಗೂ ಭಜನಾ ಮಂಡಳಿಯ ನೂತನ ಕಟ್ಟಡದ ಶುಭ ಉದ್ಘಾಟನಾ ಸಮಾರಂಭವು ಫೆಬ್ರವರಿ 27, 2026ರ ಶುಕ್ರವಾರದಂದು ಅತ್ಯಂತ ಸಡಗರ-ಸಂಭ್ರಮದಿಂದ ನೆರವೇರಿತು.ಈ ಕಾರ್ಯಕ್ರಮದ ಸಾಂಸ್ಕೃತಿಕ ವೈವಿಧ್ಯದ ಭಾಗವಾಗಿ, ಯುವವಾಹಿನಿ (ರಿ.) ಗ್ರಾಮ ಚಾವಡಿ ಕೊಣಾಜೆ ಘಟಕದ ಸದಸ್ಯರಿಂದ “ದೇವೆರ್ ಬರೆತಿನ ಅಣೆಬರಹ” ಎಂಬ ತುಳು ಸಾಮಾಜಿಕ ಹಾಸ್ಯಮಯ ನಾಟಕವು ಪ್ರದರ್ಶನಗೊಂಡಿತು. ಗ್ರಾಮ ಚಾವಡಿ ಕೊಣಾಜೆ ಘಟಕದ ಕಲಾವಿದರ ಚಾಕಚಕ್ಯತೆ ಮತ್ತು ಹಾಸ್ಯಮಯ ಅಭಿನಯವು ನೆರೆದಿದ್ದ ಪ್ರೇಕ್ಷಕರ […]
Read More