
07-07-2017, 5:18 AM
ಯುವವಾಹಿನಿ (ರಿ) ಮೂಲ್ಕಿ ಘಟಕ ಆಶ್ರಯದಲ್ಲಿ ಮೂಲ್ಕಿ ವಿಜಯಾ ಕಾಲೇಜಿನ ಎನ್.ಎಸ್.ಎಸ್ ಮತ್ತು ಎನ್.ಸಿ.ಸಿ ಹಾಗೂ ಈವಗ್ರೀನ್ ಇದರ ಜಂಟಿ ಸಹಯೋಗದಲ್ಲಿ ದಿನಾಂಕ 07-07-2017ರಂದು ಮೂಲ್ಕಿ ವಿಜಯ ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.. ಅಕಾಡಮಿ ಆಫ್ ಜನರಲ್ ಎಜ್ಯುಕೇಶನ್ ಮಣಿಪಾಲ ಇದರ ಆಡಳಿತಾಧಿಕಾರಿಯಾದ ಡಾll ಹೆಚ್. ಶಾಂತರಾಮ್ ಕಾರ್ಯಕ್ರಮವನ್ನು ಉಧ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮೂಲ್ಕಿ ವಿಜಯಾ ಕಾಲೇಜಿನ ಪ್ರಾಂಶುಪಾಲರಾದ ಡಾll […]
Read More

25-06-2017, 12:39 PM
ಕೌಟುಂಬಿಕ ಸಾಮರಸ್ಯ,ಇಚ್ಛಾಶಕ್ತಿ, ಆತ್ಮ ಶಕ್ತಿ, ಸತತ ಪ್ರಯತ್ನ, ಇವೇ ಯುವವಾಹಿನಿಯ ಸಾಧನೆಯ ಹಿಂದಿರುವ ಶಕ್ತಿ, ಕೇವಲ 9 ತಿಂಗಳಲ್ಲಿ ಮೌಲ್ಯಯುತ 24 ಕಾರ್ಯಕ್ರಮಗಳನ್ನು ನೀಡಿದ ಕೂಳೂರು ಯುವವಾಹಿನಿ ಘಟಕವು ಯುವ ಜನಾಂಗಕ್ಕೆ ಮಾದರಿಯಾಗಿದೆ, ಕ್ರಿಯಾಶೀಲ ಯೋಜನೆ ಯೋಚನೆಗಳಿಂದ ಕೂಡಿದ ಅಂತರಾಷ್ಟ್ರೀಯ ಸಂಸ್ಥೆ ಗೆ ಸರಿಸಮನಾಗಿರುವ ಪದಗ್ರಹಣ ಸಮಾರಂಭವು ಸರ್ವರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಮಂಗಳೂರು ಸೈಂಟ್ ಅಲೋಶಿಯಸ್ ಕಾಲೇಜಿನ ಉಪನ್ಯಾಸಕರಾದ ಡಾ.ಗಣೇಶ್ ಅಮೀನ್ ಸಂಕಮಾರ್ ಅಭಿಪ್ರಾಯ ಪಟ್ಟರು. ಅವರು ದಿನಾಂಕ 25.06.2017ನೇ ಆದಿತ್ಯವಾರ ಕೂಳೂರು ಚರ್ಚ್ ಹಾಲ್ […]
Read More

25-06-2017, 12:09 PM
ನಾನು ನನ್ನದು,ನನ್ನಿಂದ ಎನ್ನುವ ಮಾತಿನಿಂದ ಸ್ವಲ್ಪ ಹೊರಗೆ ಬಂದು ನಾವು ನಮ್ಮದು, ನಮ್ಮೆಲ್ಲರ ಎನ್ನುವ ವಿಶಾಲ ಮನೋಭಾವ ಬೆಳೆಸಿಕೊಂಡರೆ ಆತ್ಮವಿಶ್ವಾಸ ಒಂದನ್ನುಳಿದು ಮಿಕ್ಕೆಲ್ಲವನ್ನೂ ಕಳೆದುಕೊಂಡರೂ ಚಿಂತೆ ಇಲ್ಲ ಎನ್ನುವ ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶಗಳನ್ನು ಮುಂದಿಟ್ಟುಕೊಂಡು ಮುನ್ನಡೆದರೆ ನಾವು ಖಂಡಿತಾ ಯಶಸ್ವಿಯಾಗುತ್ತೇವೆ.ಗುರುಗಳ ತತ್ವದಡಿಯಲ್ಲಿ ಹಿರಿಯ ಸದಸ್ಯರ ಮಾರ್ಗದರ್ಶನ ಪಡೆದು ಯುವವಾಹಿನಿ ಕೂಳೂರು ಘಟಕದಿಂದ ಇನ್ನೂ ಉತ್ತಮ ಕಾರ್ಯಕ್ರಮ ನಡೆಸುವಲ್ಲಿ ಶ್ರಮವಹಿಸುತ್ತೇನೆ ಎಂದು ಯುವವಾಹಿನಿ (ರಿ) ಕೂಳೂರು ಘಟಕದ. 2017-18 ನೇ ಸಾಲಿನ ನೂತನ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್ […]
Read More

24-06-2017, 9:02 AM
ಯುವವಾಹಿನಿ (ರಿ) ಸುರತ್ಕಲ್ ಘಟಕದ ಆಶ್ರಯದಲ್ಲಿ ದಿನಾಂಕ 24.06.2017ರಂದು ಜರುಗಿದ ವಾರದ ಸಭೆಯಲ್ಲಿ ಬೆಳ್ತಂಗಡಿ DKRDS ಯೋಜನಾಧಿಕಾರಿ ಶೈಲು ಬಿರ್ವ ಅಗತ್ತಾಡಿ ಇವರು ಬಿಲ್ಲವ ಸಮಾಜದ ಕಟ್ಟುಪಾಡು ಎಂಬ ವಿಚಾರದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟರು. ಯುವವಾಹಿನಿ (ರಿ) ಮಂಗಳೂರು ಘಟಕದ ಮಾಜಿ ಅಧ್ಯಕ್ಷರಾದ ರಾಕೇಶ್ ಕುಮಾರ್, ಯುವವಾಹಿನಿ ಸುರತ್ಕಲ್ ಘಟಕದ ಅಧ್ಯಕ್ಷರಾದ ರವೀಂದ್ರ ಎಸ್.ಕೋಟ್ಯಾನ್, ಕಾರ್ಯದರ್ಶಿ ರಿತೇಶ್ ಕೆ.ನಿಕಟಪೂರ್ವ ಅಧ್ಯಕ್ಷರಾದ ಭಾಸ್ಕರ್ ಸಾಲ್ಯಾನ್ ಅಗರಮೇಲು ಹಾಗೂ ಸುರತ್ಕಲ್ ಯುವವಾಹಿನಿ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.
Read More

18-06-2017, 12:49 PM
ಕ್ರ್ರೀಯಾಶೀಲ ಯುವಕರ ತಂಡ ಪಡುಬಿದ್ರೆ ಯುವವಾಹಿನಿಯು ಈ ಪರಿಸರದಲ್ಲಿ ನಿರಂತರ ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು ಬಂದಿದೆ. ಯುವಕರನ್ನು ಒಗ್ಗೂಡಿಸುವ ಕಾರ್ಯ ಅದು ಯುವವಾಹಿನಿಯಿಂದ ಮಾತ್ರ ಸಾಧ್ಯ ಎಂದು ಪಡುಬಿದ್ರೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸುಧೀರ್ ಕುಮಾರ್ ತಿಳಿಸಿದರು. ಅವರು ದಿನಾಂಕ 18.06.2017 ರಂದು ಪಡುಬಿದ್ರೆ ಬಿಲ್ಲವ ಸಮಾಜ ಸೇವಾ ಸಂಘದ ಸಭಾಭವನದಲ್ಲಿ ಯುವವಾಹಿನಿ (ರಿ) ಪಡುಬಿದ್ರೆ ಘಟಕದ 2017-18 ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ ಪಡುಬಿದ್ರೆ ಘಟಕದ ಮಾಜಿ […]
Read More

18-06-2017, 12:42 PM
ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ದಿನಾಂಕ 18.06.2017 ರಂದು ಅಮ್ರತಾನಂದಮಯಿ ಟ್ರಸ್ಟ್ ಇದರ ಸಹಯೋಗದೊಂದಿಗೆ ಮಂಗಳೂರಿನ ಉರ್ವಾಸ್ಟೊರ್, ಕೊಟ್ಟಾರ ಪರಿಸರದಲ್ಲಿ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಸುಪ್ರೀತಾ ಪೂಜಾರಿ,ಕಾರ್ಯದರ್ಶಿ ಸುನೀತಾ,ಉಪಾಧ್ಯಕ್ಷರಾದ ರಶ್ಮಿ ಚಂದ್ರಶೇಖರ್,, ವಸಂತಿ, ಶರ್ಮಿಳಾ, ಕುಶಲಾ ಯಶವಂತ್, ಸುರೇಖಾ,ಶುಭಾ ರಾಜೇಂದ್ರ, ಕಾರ್ಯಕ್ರಮದ ಸಂಚಾಲಕರಾದ ಶ್ರೀಮತಿ ಉಮಾಶ್ರೀಕಾಂತ್ ಮತ್ತಿತರರು ಸ್ವಚ್ಚತಾ ಅಭಿಯಾನದಲ್ಲಿ ಭಾಗವಹಿಸಿದ್ದರು
Read More

15-06-2017, 2:25 PM
“ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಟಾಪರ್ಸ್ ಎಲ್ಲಿದ್ದಾರೆ? ಜೀವನದಲ್ಲಿ ಯಶಸ್ವಿಗೊಂಡರೇ.? ಟಾಪರ್ಸ್ ಎನಿಸಿಕೊಂಡಿರುವ ಕರಾವಳಿಯ ವಿದ್ಯಾರ್ಥಿಗಳು ನಮ್ಮ ಸಮಾಜದಲ್ಲಿ ಗುರುತಿಸಿಕೊಳ್ಳುತ್ತಿಲ್ಲ. ಐಎಎಸ್, ಐಪಿಎಸ್, ಇನ್ನಿತರ ಸಮಾಜದ ಉನ್ನತ ವiಟ್ಟದ ಕ್ಷೇತ್ರಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಮತ್ತು ಶಿಕ್ಷಣ ಸಂಸ್ಥೆಗಳು ಈ ಬಗ್ಗೆ ಯೋಚಿಸುವ ಅಗತ್ಯವಿದೆ” ಎಂದು ನಗರದ ಶ್ರೀ ನಾರಾಯಣಗುರು ಕಾಲೇಜಿನ ಉಪನ್ಯಾಸಕರಾದ ಕೇಶವ ಬಂಗೇರರವರು ಅಭಿಪ್ರಾಯ ವ್ಯಕ್ತ ಪಡೆಸಿದರು. ಅವರು ದಿನಾಂಕ ಮಂಗಳೂರು ಉಜ್ಜೋಡಿಯ ಶ್ರೀ ಮಹಾಂಕಾಳಿ ದೈವಸ್ಥಾನ ವಠಾರದಲ್ಲಿ ಯುವವಾಹಿನಿ ಕಂಕನಾಡಿ ಘಟಕದ ಆಶ್ರಯದಲ್ಲಿ […]
Read More

11-06-2017, 2:02 PM
ಬಿಲ್ಲವರು ತಮ್ಮದೇ ಆದ ಸಂಸ್ಕೃತಿ ಸಂಪ್ರದಾಯಗಳನ್ನು ಪಾಲಿಸಿಕೊಂಡು ಈ ತುಳುನಾಡಿನ ಮೂಲ ಜನಾಂಗಗಳಲ್ಲಿ ಒಬ್ಬರಾಗಿ ಸಂಪ್ರದಾಯಗಳನ್ನು ಉಳಿಸಿಕೊಂಡು ಬರುತ್ತಿದ್ದಾರೆ”. ಈ ಸಂಸ್ಕೃತಿಯನ್ನು ಉಳಿಸುವಲ್ಲಿ ಯುವವಾಹಿನಿಯೂ ಸಹ ಅವಿರತವಾಗಿ 30 ವರ್ಷಗಳಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದೆ ಎಂದು ಶೈಲು ಬಿರ್ವ ಅಗತ್ತಾಡಿ ತಿಳಿಸಿದರು. ಅವರು ದಿನಾಂಕ 11.06.2017 ರಂದು ಅಡ್ವೆ ಆನಂದಿ ಸಭಾ ಭವನದಲ್ಲಿ ಜರುಗಿದ ಯುವವಾಹಿನಿ ಅಡ್ವೆ ಘಟಕದ ಪದಗ್ರಹಣದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದ ಉದ್ಘಾಟನೆ ಯನ್ನು ಮಾಜಿ ಎ.ಪಿ.ಎಂ.ಸಿ. ಅಧ್ಯಕ್ಷರಾದ […]
Read More

11-06-2017, 12:41 PM
ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದಿಂದ ದಿನಾಂಕ 11.06.2017ರಂದು ವಿವಿಧ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಲಾಯಿತು.ಮಂದಾರ್ತಿ ದುರ್ಗಾಪರಮೇಶ್ವರಿ, ಗುಡ್ಡೇಟ್ಟು ಗುಹಾಲಯ,ಉದ್ಭವ ಮಹಾಗಣಪತಿ ದೇವಸ್ಥಾನ, ಕಮಲಶಿಲೆಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನ ಮುಂತಾದ ದೇವಸ್ಥಾನಗಳಿಗೆ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಸದಸ್ಯರು ಬೇಟಿನೀಡಿದರು. ಸಂಪರ್ಕದ ನೆಲೆಯಲ್ಲಿ ಈ ಪ್ರವಾಸ ಯಶಸ್ವಿಯಾಗಿದೆ ಎಂದು ಕ್ಷೇತ್ರ ದರ್ಶನ ಕಾರ್ಯಕ್ರಮದ ಸಂಚಾಲಕರಾದ ಶ್ರೀಮತಿ ವಸಂತಿ ಬಿ ಹಾಗೂ ಶಶಿಕಲಾ ಅರ್ ತಿಳಿಸಿದ್ದಾರೆ.
Read More