24-05-2026, 9:00 PM
ಬಜಪೆ, ಮೇ 24: ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ಸದಸ್ಯರ ನಡುವಿನ ಬಾಂಧವ್ಯ ವೃದ್ಧಿ ಹಾಗೂ ಸಂಘಟನಾ ಚಟುವಟಿಕೆಗಳಿಗೆ ಮತ್ತಷ್ಟು ಚೈತನ್ಯ ತುಂಬುವ ಉದ್ದೇಶದಿಂದ 24-05-2026 ರಂದು ಒಂದು ದಿನದ ಸ್ನೇಹ ಪ್ರವಾಸವನ್ನು “ಕಿಂಗ್ ಆಫ್ ಕಿಂಗ್ಸ್” ವಾಟರ್ ಪಾರ್ಕ್ಗೆ ಆಯೋಜಿಸಲಾಯಿತು. ಪ್ರವಾಸದಲ್ಲಿ ಯುವವಾಹಿನಿ ಬಜಪೆ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ಕುಟುಂಬ ಸದಸ್ಯರು ಸೇರಿದಂತೆ ಒಟ್ಟು 33 ಮಂದಿ ಭಾಗವಹಿಸಿದ್ದರು. ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ವಿವಿಧ ಮನರಂಜನಾ ಚಟುವಟಿಕೆಗಳು […]
Read More
24-05-2026, 8:00 PM
ಮಾಣಿ : ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಮೇ 24, 2026ರಂದು ಆಯೋಜಿಸಲಾದ “ಯುವ ಸ್ನೇಹ ಸಂಭ್ರಮ – 2026” ಎಂಬ ಒಂದು ದಿನದ ಸ್ನೇಹ ಪ್ರವಾಸವು ಅತ್ಯಂತ ಸಂತೋಷ, ಸೌಹಾರ್ದತೆ ಹಾಗೂ ಸಂಭ್ರಮದ ವಾತಾವರಣದಲ್ಲಿ ಯಶಸ್ವಿಯಾಗಿ ನೆರವೇರಿತು. ಪ್ರವಾಸ ಆರಂಭಕ್ಕೂ ಮುನ್ನ ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷರಾದ ಗಣೇಶ್ ಕೊಡಾಜೆ ಅವರು ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಬೆಳಿಗ್ಗೆ 6.00 ಗಂಟೆಗೆ ಸದಸ್ಯರು ಪ್ರವಾಸಕ್ಕೆ ಚಾಲನೆ ನೀಡಿದರು. ಮೊದಲಿಗೆ ಬಪ್ಪನಾಡು ದುರ್ಗಾಪರಮೇಶ್ವರಿ ಕ್ಷೇತ್ರ ಹಾಗೂ ಬಳಿಕ […]
Read More
23-05-2026, 4:00 PM
ಮಂಗಳೂರು: ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಸದಸ್ಯೆಯರಿಗಾಗಿ ಆಯೋಜಿಸಲಾಗಿದ್ದ “ಉಪನಿಬಂಧನೆ (ಬೈಲಾ) ಮಾಹಿತಿ ಕಾರ್ಯಾಗಾರವು ಮೇ 23ರಂದು ಸಂಜೆ ಯುವವಾಹಿನಿ ಸಭಾಂಗಣದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಘಟಕದ ಅಧ್ಯಕ್ಷೆ ಕಸ್ತೂರಿ ಮಹೇಶ್ ಅವರು ಕಾರ್ಯಾಗಾರಕ್ಕೆ ಆಗಮಿಸಿದ್ದ ಸರ್ವರನ್ನೂ ಸ್ವಾಗತಿಸಿದರು. ಬಳಿಕ, ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಘಟಕದ ಮಾಜಿ ಅಧ್ಯಕ್ಷೆ ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷೆ ವಿದ್ಯಾ ರಾಕೇಶ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಮಹಿಳಾ ಸಬಲೀಕರಣಕ್ಕೆ ಪೂರಕ ಚಿಂತನೆ: […]
Read More
22-05-2026, 10:00 PM
ವಿಟ್ಲ: ಯುವವಾಹಿನಿ(ರಿ) ವಿಟ್ಲ ಘಟಕದ ವತಿಯಿಂದ ದಿನಾಂಕ 22/05/2026, ಶುಕ್ರವಾರದಂದು ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಭಜನಾ ಸಂಕೀರ್ತನೆ ಕಾರ್ಯಕ್ರಮವು ಭಕ್ತಿಭಾವದಿಂದ ನಡೆಯಿತು. ಭಜನಾ ಸಂಕೀರ್ತನೆ. ಅತ್ಯಂತ ಶ್ರದ್ಧಾ-ಭಕ್ತಿಯಿಂದ ನೆರವೇರಿದ್ದು, ಭಾಗವಹಿಸಿದ ಭಕ್ತಾದಿಗಳ ಮನಸೂರೆಗೊಂಡಿತು. ಈ ಭಜನಾ ಸೇವೆಯಲ್ಲಿ ಯುವವಾಹಿನಿ ಘಟಕದ ಕಾರ್ಯದರ್ಶಿಗಳಾದ ಧನಲಕ್ಷ್ಮೀ ರಾಜೇಶ್ ಹಾಗೂ ಘಟಕದ ಸದಸ್ಯರು ಸಕ್ರಿಯವಾಗಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು.
Read More
21-05-2026, 9:00 PM
ಉಡುಪಿ : ಯುವವಾಹಿನಿ (ರಿ ) ಉಡುಪಿ ಘಟಕದ ಗುರು ಸತ್ಸಂಗ ಕಾರ್ಯ ಕ್ರಮವು ಘಟಕದ ಜೊತೆಕಾರ್ಯದರ್ಶಿ ಸಚೇಂದ್ರ ಅಂಬಾಗಿಲುರವರ ಅಥಿತ್ಯದಲ್ಲಿ ಅವರ ಮನೆಯಲ್ಲಿ ಅವರ ಮನೆಯವರು ಸೇರಿ ದೀಪ ಬೆಳಗಿಸಿ ಪ್ರಾರಂಭಗೊಂಡಿತು. ಘಟಕದ ಸದಸ್ಯರು ಸೇರಿ ಭಜನಾ ಕಾರ್ಯಕ್ರಮ ನೆರವೇರಿಸಿದರು. ಮಾಜಿ ಅಧ್ಯಕ್ಷರಾದ ಭಾಸ್ಕರ್ ಸುವರ್ಣರವರು ಗುರುಗಳಿಗೆ ಮಹಾಪೂಜೆ ನೆರವೇರಿಸಿ. ಆಗಮಿಸಿದ ಎಲ್ಲರಿಗೂ ಹಾಗೂ ಮನೆಯವರಿಗೂ ಗುರುಗಳು ಒಳಿತು ಮಾಡುವಂತೆ ಪ್ರಾರ್ಥಿಸಿ ಮಹಾ ಪ್ರಸಾದವನ್ನು ನೀಡಿದರು.ಗುರು ಸಂದೇಶವನ್ನು ಖ್ಯಾತ ನಿರೂಪಕರಾದ ರಾಜೇಂದ್ರ ಪ್ರಸಾದ್ ಎಕ್ಕರ್ ರವರು […]
Read More
17-05-2026, 8:30 PM
ಪೆರ್ಮಂಕಿ : ಯುವವಾಹಿನಿ (ರಿ.) ಪೆರ್ಮಂಕಿ ಘಟಕದ ವತಿಯಿಂದ ಗೆಜ್ಜೆಗಿರಿ ಶ್ರೀ ಆದಿ ಧೂಮಾವತಿ ಶ್ರೀದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಕಲ್ಕುಡ-ಕಲ್ಲುರ್ಟಿ ದೈವದ ಮಹಾತ್ಮೆ ಸಾರುವ ‘ನಾಗರತಿ’ ಎಂಬ ಕಾಲಮಿತಿ ಯಕ್ಷಗಾನ ಪ್ರದರ್ಶನವು ಪೆರ್ಮಂಕಿಯ ವಿಶಾಲ್ ಗಾರ್ಡನ್ನಲ್ಲಿ ಇತ್ತೀಚೆಗೆ ಯಶಸ್ವಿಯಾಗಿ ನೆರವೇರಿತು. ಸನ್ಮಾನ ಮತ್ತು ಆರ್ಥಿಕ ನೆರವು:ಇದೇ ಸಂದರ್ಭದಲ್ಲಿ ಉದ್ಯಮ ರಂಗದ ಜೊತೆಗೆ ಸಾಮಾಜಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಪ್ರಮುಖ ಉದ್ಯಮಿ, ಸಮಾಜ ಸೇವಕ ಶೈಲೇಂದ್ರ ವೈ. ಸುವರ್ಣ ಅವರನ್ನು ಘಟಕದ ವತಿಯಿಂದ ಅತ್ಯಂತ […]
Read More
17-05-2026, 8:00 PM
ಕೆಂಜಾರು : ಯುವವಾಹಿನಿ (ರಿ.) ಕೆಂಜಾರು – ಕರಂಬಾರು ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ಮೇ 17ರಂದು ಕೆಂಜಾರು ಶ್ರೀದೇವಿ ಭಜನಾ ಮಂದಿರದ ಸಭಾಂಗಣದಲ್ಲಿ ಜರುಗಿತು.ಕೆಂಜಾರು ಶ್ರೀ ರಾಮಾಂಜನೇಯ ದೇವಸ್ಥಾನದ ಅಧ್ಯಕ್ಷರಾದ ಮಹಾಬಲ ಪೂಜಾರಿ ಅವರು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ನೂತನ ತಂಡದ ಸಮಾಜಮುಖಿ ಚಿಂತನೆಗಳಿಗೆ ಶುಭ ಹಾರೈಸಿದರು. ಘಟಕದ ಅಧ್ಯಕ್ಷರಾದ ಸಂದೀಪ್ ಕೋರೆಮನೆ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು […]
Read More
17-05-2026, 7:00 PM
ಬಂಟ್ವಾಳ: ಯುವವಾಹಿನಿ (ರಿ.) ಬಂಟ್ವಾಳ ಘಟಕದ ವತಿಯಿಂದ ಮೇ 17, 2026ರಂದು ಮಂಗಳೂರಿನ ತಣ್ಣೀರುಬಾವಿ ಟ್ರೀ ಪಾರ್ಕ್ನಲ್ಲಿ ಹಮ್ಮಿಕೊಳ್ಳಲಾಗಿದ್ದ ಯುವವಾಹಿನಿ ಕುಟುಂಬದ ‘ಸ್ನೇಹ ಮಿಲನ’ ಕಾರ್ಯಕ್ರಮವು ಅತ್ಯಂತ ಸಡಗರ-ಸಂಭ್ರಮದಿಂದ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ಬಂಟ್ವಾಳ ಘಟಕದ ಅಧ್ಯಕ್ಷರಾದ ನಾಗೇಶ್ ಪೂಜಾರಿ ನೈಬೆಲು ಅವರು ಆಗಮಿಸಿದ ಸರ್ವರನ್ನೂ ಆತ್ಮೀಯವಾಗಿ ಸ್ವಾಗತಿಸಿದರು. ಬಂಟ್ವಾಳ ಘಟಕದ ಯುವವಾಹಿನಿ ಕುಟುಂಬದ ಒಟ್ಟು 94 ಸದಸ್ಯರು ಈ ಪ್ರಕೃತಿಯ ಮಡಿಲಲ್ಲಿ ನಡೆದ ಸ್ನೇಹಕೂಟದಲ್ಲಿ ಭಾಗವಹಿಸಿ ಸಂಭ್ರಮಿಸಿದರು. ಸಂಭ್ರಮದ ಆಟೋಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳುಬೆಳಗಿನ […]
Read More
17-05-2026, 7:00 PM
ಸುಳ್ಯ: ಯುವವಾಹಿನಿ (ರಿ.) ಸುಳ್ಯ ಘಟಕದ ವತಿಯಿಂದ ನಾಲ್ಕನೇ ತಿಂಗಳ ‘ಗುರುಸ್ಫೂರ್ತಿ’ ಕಾರ್ಯಕ್ರಮವು ಮೇ 17 ರಂದು ಬೆಳಿಗ್ಗೆ ಘಟಕದ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ರಮೇಶ್ ಪೂಜಾರಿ ಜಯನಗರ ಇವರ ಗೃಹದಲ್ಲಿ ಅತ್ಯಂತ ಶ್ರದ್ಧಾ-ಭಕ್ತಿಯಿಂದ ಜರುಗಿತು. ದೀಪ ಪ್ರಜ್ವಲನೆ ಮತ್ತು ಭಜನೆ:ಕಾರ್ಯಕ್ರಮದ ಆತಿಥ್ಯ ವಹಿಸಿದ್ದ ರಮೇಶ್ ಪೂಜಾರಿ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭ ಹಾರೈಸಿದರು. ಉದ್ಘಾಟನೆಯ ಬಳಿಕ ನೆರೆದಿದ್ದ ಸದಸ್ಯರಿಂದ ಭಕ್ತಿಪೂರ್ವಕ ಭಜನಾ ಕಾರ್ಯಕ್ರಮ ನಡೆಯಿತು. ನಾರಾಯಣ ಗುರುಗಳ ತತ್ವ […]
Read More
17-05-2026, 2:00 PM
ಕೊಲ್ಯ : ಮಾನವ ಸೇವೆಯೇ ಮಾಧವ ಸೇವೆ ಎಂಬ ಧ್ಯೇಯದೊಂದಿಗೆ, ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ.) ಕೊಲ್ಯ ಸೋಮೇಶ್ವರ ಮತ್ತು ಯುವವಾಹಿನಿ (ರಿ.) ಕೊಲ್ಯ ಘಟಕದ ಜಂಟಿ ಆಶ್ರಯದಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ಎರಡು ಕುಟುಂಬಗಳಿಗೆ ಆರ್ಥಿಕ ನೆರವು ನೀಡುವ ಮೂಲಕ “ಸಹಾಯ ಹಸ್ತ” ಚಟುವಟಿಕೆಯನ್ನು ಹಮ್ಮಿಕೊಳ್ಳಲಾಯಿತು. ದಿನಾಂಕ 17-05-2026 ರಂದು ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ತಾಯಂದಿರ ವೈದ್ಯಕೀಯ ಚಿಕಿತ್ಸಾ ವೆಚ್ಚಕ್ಕಾಗಿ ಧನಸಹಾಯ ಹಸ್ತಾಂತರಿಸಲಾಯಿತು: ಸೋಮೇಶ್ವರ ನಿವಾಸಿ ದಾಮೋದರ ಪೂಜಾರಿ ಇವರ ಧರ್ಮಪತ್ನಿಯವರ ಚಿಕಿತ್ಸಾ ವೆಚ್ಚಕ್ಕಾಗಿ. […]
Read More