Yuvavahini

ಇತರೆ

ಯುವವಾಹಿನಿ ಹೆಜಮಾಡಿ ಘಟಕಕ್ಕೆ ನೂತನ ಸಾರಥ್ಯ

ಹೆಜಮಾಡಿ, ಆ. 2: ಯುವವಾಹಿನಿ (ರಿ.) ಹೆಜಮಾಡಿ ಘಟಕದ 2026–27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ಹೆಜಮಾಡಿ ಬಿಲ್ಲವರ ಸಂಘ (ರಿ.) ಸಭಾಂಗಣದಲ್ಲಿ ಘಟಕದ ಅಧ್ಯಕ್ಷ ನಿಶಾಂಕ್ ಎಸ್. ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಕಾರ್ಯಕ್ರಮವನ್ನು ಹೆಜಮಾಡಿ ಬಿಲ್ಲವರ ಸಂಘ (ರಿ.) ಅಧ್ಯಕ್ಷ ಮೋಹನ್ ದಾಸ್ ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಯುವವಾಹಿನಿಯು ಸಮಾಜಮುಖಿ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ನಿರಂತರ ಸೇವೆ ಸಲ್ಲಿಸುತ್ತಿದ್ದು, ಕಳೆದ ಒಂದು ವರ್ಷದ ಅವಧಿಯಲ್ಲಿ […]

Read More

ಬ್ರೈನ್ ಟ್ಯೂಮರ್ ಪೀಡಿತರಿಗೆ ಯುವವಾಹಿನಿ ಬಂಟ್ವಾಳದಿಂದ ₹25 ಸಾವಿರ ನೆರವು

ಬಂಟ್ವಾಳ, ಆ. 3: ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ಆದ್ಯತೆ ನೀಡುತ್ತಿರುವ ಯುವವಾಹಿನಿ (ರಿ.) ಬಂಟ್ವಾಳ ಘಟಕದ ವತಿಯಿಂದ ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿರುವ ರಾಮಚಂದ್ರ ಸಾಲ್ಯಾನ್ ಅವರಿಗೆ ಸೇವಾ ಯೋಜನೆಯಡಿ ₹25,000 ಮೊತ್ತದ ಆರ್ಥಿಕ ನೆರವನ್ನು ಹಸ್ತಾಂತರಿಸಲಾಯಿತು. ಚಿಕಿತ್ಸೆಗೆ ನೆರವಾಗುವ ಉದ್ದೇಶದಿಂದ ಈ ಸೇವಾ ಯೋಜನೆಯನ್ನು ರೂಪಿಸಲಾಗಿದ್ದು, ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರ ಸಮ್ಮುಖದಲ್ಲಿ ನೆರವಿನ ಮೊತ್ತವನ್ನು ಫಲಾನುಭವಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಮಾರ್ಗದರ್ಶಕರಾದ ಭುವನೇಶ್ ಪಚ್ಚಿನಡ್ಕ ಚಕ್ ಹಸ್ತಾಂತರ ಮಾಡಿದರು ಯುವವಾಹಿನಿ ಬಂಟ್ವಾಳ […]

Read More

ಮಾದಕ ವ್ಯಸನದಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ

ಮೂಡುಬಿದಿರೆ, ಆ. 1: ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ವತಿಯಿಂದ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಮೂಡುಬಿದಿರೆಯಲ್ಲಿ ಆಗಸ್ಟ್ 1ರಂದು ‘ವಿದ್ಯಾರ್ಥಿ ಮನೋಹಿತ’ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತ ಜಾಗೃತಿ ಕಾರ್ಯಾಗಾರ–2 ಯಶಸ್ವಿಯಾಗಿ ನಡೆಯಿತು. ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವುದು ಹಾಗೂ ಆರೋಗ್ಯಕರ, ಶಿಸ್ತುಬದ್ಧ ಜೀವನಶೈಲಿಯ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಬಾಲಕರ ವಿದ್ಯಾರ್ಥಿ ನಿಲಯದ ವಾರ್ಡನ್ ಸಂತೋಷ್ ನಾಯ್ಕ್ […]

Read More

“ಆಟಿ ಎಂದರೆ ಕಷ್ಟದ ದಿನಗಳು; ಆ ದಿನಗಳ ಸಂಕಷ್ಟವನ್ನು ಇಂದಿನ ಪೀಳಿಗೆಗೆ ತಿಳಿಸುವುದು ನಮ್ಮ ಕರ್ತವ್ಯ” – ಡಾ. ಮೀನಾಕ್ಷಿ ರಾಮಚಂದ್ರ

ಮಂಗಳೂರು, ಜು. 28: ಹಿಂದಿನ ಕಾಲದಲ್ಲಿ ಆಟಿ ತಿಂಗಳು ಎಂದರೆ ಕಷ್ಟದ ದಿನಗಳ ಸಂಕೇತವಾಗಿತ್ತು. ನಿರಂತರ ಸುರಿಯುವ ಮಳೆಯಿಂದ ಸೂರ್ಯನ ಮುಖವೇ ಕಾಣದ ದಿನಗಳು, ಆಹಾರದ ಅಭಾವ, ಅನಾರೋಗ್ಯ ಮತ್ತು ಬದುಕಿನ ಸಂಕಷ್ಟಗಳು ಆಟಿಯ ಅವಿಭಾಜ್ಯ ಅಂಗವಾಗಿದ್ದವು. ಆ ದಿನಗಳ ಅನುಭವವನ್ನು ಮರೆಯಲು ಸಾಧ್ಯವಿಲ್ಲ ಎಂದು ಖ್ಯಾತ ಉಪನ್ಯಾಸಕಿ ಡಾ. ಮೀನಾಕ್ಷಿ ರಾಮಚಂದ್ರ ಹೇಳಿದರು. ಯುವವಾಹಿನಿ (ರಿ.) ಮಂಗಳೂರು ಘಟಕವು ಆಯೋಜಿಸಿದ್ದ ಕಾರ್ಗಿಲ್ ವಿಜಯ್ ದಿವಸ್, ಆಟಿದ ಕಂಪು-ನೆಂಪು ಹಾಗೂ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯ […]

Read More

‘ಅಟಿದ ನೆಂಪು’

ಕಂಕನಾಡಿ, ಜುಲೈ 26: ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ‘ಅಟಿದ ನೆಂಪು’ ಕಾರ್ಯಕ್ರಮವು ಜುಲೈ 26ರಂದು ಭಾನುವಾರ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಭಗವತಿ ಇಂಗ್ಲೀಷ್ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಚಂದ್ರಾವತಿ ದೀಪ ಬೆಳಗಿಸಿ ಹಾಗೂ ಹಲಸಿನ ಹಣ್ಣನ್ನು ಸಾಂಪ್ರದಾಯಿಕವಾಗಿ ತುಂಡು ಮಾಡುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಆಟಿ ತಿಂಗಳಲ್ಲಿ ಹಿಂದಿನ ಕಾಲದಲ್ಲಿ ಸ್ಥಳೀಯವಾಗಿ ದೊರೆಯುವ ಸೊಪ್ಪು, ಹಣ್ಣು ಹಾಗೂ ನೈಸರ್ಗಿಕ ಆಹಾರ ಪದಾರ್ಥಗಳನ್ನು ಬಳಸಿಕೊಂಡು ಜನರು ತಮ್ಮ ಜೀವನವನ್ನು ಸಾಗಿಸುತ್ತಿದ್ದರು. […]

Read More

ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ಮೂಡುಬಿದಿರೆ, ಜುಲೈ 26: ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ (ರಿ.) ಶಿರ್ತಾಡಿ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ಘಟಕ ಶಿರ್ತಾಡಿ ಇವರ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಂಗಣ, ಶಿರ್ತಾಡಿಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು. ಶಿಬಿರದಲ್ಲಿ ಪ್ರಸಾದ್ ನೇತ್ರಾಲಯ, ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಮಂಗಳೂರು–ಮೂಡುಬಿದಿರೆ ವತಿಯಿಂದ ಉಚಿತ ನೇತ್ರ ತಪಾಸಣೆ, ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಶೋಭಾವನ, […]

Read More

ಆಟಿ ಕೂಟಗಳಿಗೆ ಯುವವಾಹಿನಿಯೇ ಪ್ರೇರಣೆ: ದಯಾನಂದ್ ಹೆಜ್ಮಾಡಿ

ಮುಲ್ಕಿ, ಜುಲೈ 26: “ಇಂದು ದೇಶ-ವಿದೇಶಗಳಲ್ಲಿ ಆಟಿಡೊಂಜಿ ದಿನದ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯುತ್ತಿದ್ದರೆ, ಅದಕ್ಕೆ ಮೂಲ ಪ್ರೇರಣೆಯೇ ಯುವವಾಹಿನಿ (ರಿ.) ಮುಲ್ಕಿ ಘಟಕ” ಎಂದು ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ದಯಾನಂದ್ ಹೆಜ್ಮಾಡಿ ಹೇಳಿದರು. ಅವರು ಜುಲೈ 26ರಂದು ಮುಲ್ಕಿ ಬಿಲ್ಲವ ಸಂಘದ ಸಭಾಭವನದಲ್ಲಿ ಯುವವಾಹಿನಿ (ರಿ.) ಮುಲ್ಕಿ ಘಟಕದ ವತಿಯಿಂದ ಆಯೋಜಿಸಲಾದ 24ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಹಿಂದಿನ ಕಾಲದ ಚಿಮಿನಿ ದೀಪ ಬೆಳಗಿಸುವ ಮೂಲಕ ವಿಶಿಷ್ಟವಾಗಿ ಉದ್ಘಾಟಿಸಿ ಮಾತನಾಡಿದರು. ತುಳುನಾಡಿನ […]

Read More

ಉಚಿತ ಆರೋಗ್ಯ, ಕಣ್ಣಿನ ತಪಾಸಣೆ ಹಾಗೂ ರಕ್ತದಾನ ಶಿಬಿರ

ಬಂಟ್ವಾಳ, ಜು. 25 : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ (ರಿ.) ಹಾಗೂ ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ಐ.ಎಂ.ಎ. ಮಂಗಳೂರು ಶಾಖೆಯ ಸಹಕಾರದೊಂದಿಗೆ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಂಗಣದಲ್ಲಿ ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣಾ ಶಿಬಿರ ಹಾಗೂ ಸ್ವಯಂಪ್ರೇರಿತ ರಕ್ತದಾನ ಶಿಬಿರವು ಶನಿವಾರ ಯಶಸ್ವಿಯಾಗಿ ನಡೆಯಿತು. ಆರೋಗ್ಯ ಜಾಗೃತಿ ಹಾಗೂ ಸಮಾಜಸೇವೆಯ ಉದ್ದೇಶದಿಂದ ಆಯೋಜಿಸಲಾದ ಈ ಶಿಬಿರದಲ್ಲಿ ಯುವವಾಹಿನಿಯ ಸುಮಾರು 70 ಮಂದಿ ಸದಸ್ಯರು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ […]

Read More

ಕ್ರೀಡೆ ಸಂಘಟನಾ ಬಾಂಧವ್ಯವನ್ನು ಇನ್ನಷ್ಟು ಗಟ್ಟಿಗೊಳಿಸುತ್ತದೆ: ರೋಹಿತ್ ಎಸ್

ಬೆಂಗಳೂರು, ಜುಲೈ 19: ಯುವವಾಹಿನಿ (ರಿ.) ಬೆಂಗಳೂರು ಘಟಕದ ವತಿಯಿಂದ ಸದಸ್ಯರಿಗಾಗಿ ಆಯೋಜಿಸಲಾಗಿದ್ದ “ಕೋಟಿ ಚೆನ್ನಯ್ಯ ಟ್ರೋಫಿ – ಸೀಸನ್ 2” ಬ್ಯಾಡ್ಮಿಂಟನ್ ಕ್ರೀಡಾಕೂಟವು ಭಾನುವಾರ ಬೆಂಗಳೂರಿನ ದಾಸರಹಳ್ಳಿ ಸಮೀಪದ ಎಎಂ ಸ್ಪೋರ್ಟ್ಸ್ ಅರೆನಾದಲ್ಲಿ ಸಂಭ್ರಮ, ಉತ್ಸಾಹ ಮತ್ತು ಕ್ರೀಡಾಸ್ಫೂರ್ತಿಯ ವಾತಾವರಣದಲ್ಲಿ ಯಶಸ್ವಿಯಾಗಿ ನಡೆಯಿತು. ಬೆಳಿಗ್ಗೆ ನಡೆದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿತ್ಯಾನಂದ ಶೆಟ್ಟಿ ಹಾಗೂ ನಂಜುಂಡ ಪೂಜಾರಿ ಅವರು, ಘಟಕದ ಅಧ್ಯಕ್ಷ ವಿಜೇತ್ ವಿ. ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. […]

Read More

ಆಟಿ ಅನಿಷ್ಟವಲ್ಲ ಆತ್ಮಸ್ಟೈರ್ಯ ತುಂಬುವ ಕಾಲ -ಪ್ರೋ. ಭಾಸ್ಕರ್ ರೈ ಕುಕ್ಕುವಲ್ಲಿ

ಬಜಪೆ ಜುಲೈ 19 : ಯುವವಾಹಿನಿ(ರಿ.) ಬಜಪೆ ಘಟಕದ ವತಿಯಿಂದ ಹಾಗೂ ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.) ಬಜಪೆ -ಕರಂಬಾರು ಇವರ ಸಹಕಾರದಲ್ಲಿ “ಆಟಿದ ನೆಂಪು -2026” ಕಾರ್ಯಕ್ರಮವು ಬ್ರಹ್ಮ ಶ್ರೀ ನಾರಾಯಣ ಗುರು ಸಮುದಾಯ ಭವನ ಬಜಪೆ ಇಲ್ಲಿ 19.07.2026 ರಂದು ಯುವವಾಹಿನಿ ಬಜಪೆ ಘಟಕದ ಅಧ್ಯಕ್ಷರಾದ ರೋಹಿತ್ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು. ಊರಿಗೆ ಬಂದ ಮಾರಿ ರೋಗದ ಕಳೆ ರುಜಿನದ ಕೊಳೆಯ ಕಳೆಯುತ್ತಾ ಮನೆಯಂಗಳಕ್ಕೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!