
07-02-2026, 11:00 AM
ಹೆಜಮಾಡಿ : ವಿದ್ಯೆಯೇ ಯುವವಾಹಿನಿಯ ಪ್ರಮುಖ ಧ್ಯೇಯವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ಜ್ಞಾನದ ಬೆಳಕಿನಲ್ಲಿ ತೊಡಗಿಸಿಕೊಂಡರೆ ಭವಿಷ್ಯವು ಸುಂದರವಾಗಿ ಅರಳುತ್ತದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷರಾದ ವಿಧ್ಯಾ ರಾಕೇಶ್ ಹೇಳಿದರು. ಹೆಜಮಾಡಿ ಘಟಕವು ಕಳೆದ ಹನ್ನೊಂದು ವರ್ಷಗಳಿಂದ ನಿರಂತರವಾಗಿ ಈ ಶೈಕ್ಷಣಿಕ ಕಾರ್ಯಕ್ರಮವನ್ನು ಹಮ್ಮಿಕೊಂಡು ಬರುತ್ತಿರುವುದು ಸಂತೋಷದ ವಿಷಯವಾಗಿದ್ದು, ಮುಂದೆಯೂ ಮಕ್ಕಳ ಭವಿಷ್ಯ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು. ಅವರು ಯುವವಾಹಿನಿ(ರಿ.) ಹೆಜಮಾಡಿ ಘಟಕ ಹಾಗೂ ಸ್ವರ್ಣ ಸೌಹಾರ್ದ ಸಹಕಾರಿ […]
Read More

04-02-2026, 11:56 AM
ಸಸಿಹಿತ್ಲು : ಯುವವಾಹಿನಿ (ರಿ.) ಸಸಿಹಿತ್ಲು ಘಟಕದ ಸದಸ್ಯರು ದಿನಾಂಕ 04.02.2026 ರಿಂದ 08.02.2026ರವರೆಗೆ ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನ, ಸಸಿಹಿತ್ಲು ಇಲ್ಲಿ ನಡೆದ ಹಸಿರು ಹೊರೆಕಾಣಿಕೆ, ನೇಮೋತ್ಸವ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳ ಸಂದರ್ಭದಲ್ಲಿ ಸ್ವಯಂಸೇವಕರಾಗಿ ಸೇವೆ ಸಲ್ಲಿಸಿದರು. ಐದು ದಿನಗಳ ಕಾಲ ನಡೆದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತರ ವ್ಯವಸ್ಥೆ, ಅನ್ನಸಂತರ್ಪಣೆ, ಶಿಸ್ತು ನಿರ್ವಹಣೆ ಸೇರಿದಂತೆ ವಿವಿಧ ಸೇವಾ ಚಟುವಟಿಕೆಗಳಲ್ಲಿ ಸದಸ್ಯರು ತೊಡಗಿಸಿಕೊಂಡರು. ಈ ಸಂದರ್ಭದಲ್ಲಿ ಯುವವಾಹಿನಿ ಸದಸ್ಯರು ಶ್ರದ್ಧಾಭಕ್ತಿಯಿಂದ ಸೇವೆ ಸಲ್ಲಿಸಿ ದೈವಸ್ಥಾನದ ಆಡಳಿತ […]
Read More

01-02-2026, 9:00 PM
ಪಡುಬಿದ್ರೆ/ಮಂಗಳೂರು : ಮಹಿಳಾ ಸಬಲೀಕರಣಕ್ಕೆ ಕ್ರೀಡೆಯನ್ನೇ ವೇದಿಕೆಯಾಗಿಸಿಕೊಂಡು, ಮಹಿಳಾ ಶಕ್ತಿಯನ್ನು ಸಮಾಜದ ಮುಂದಿಡುವ ಶ್ಲಾಘನೀಯ ಕಾರ್ಯವನ್ನು ಯುವವಾಹಿನಿ (ರಿ.) ಪಡುಬಿದ್ರೆ ಘಟಕ ಯಶಸ್ವಿಯಾಗಿ ನೆರವೇರಿಸಿದೆ. ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಆಶ್ರಯದಲ್ಲಿ ಸ್ಥಳೀಯ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ನಡೆದ “ಬಿಲ್ಲವ ಪ್ರೀಮಿಯರ್ ಲೀಗ್ (BPL) – 2026” ಮಹಿಳಾ ಕ್ರಿಕೆಟ್ ಪಂದ್ಯಾಟವು ಕೇವಲ ಕ್ರೀಡಾಕೂಟವಲ್ಲದೆ, ಸಂಘಟನೆ, ಏಕತೆ ಹಾಗೂ ಸಬಲೀಕರಣದ ಜೀವಂತ ಸಂದೇಶವಾಗಿ ಮೂಡಿಬಂದಿತು. ಪ್ರಮುಖವಾಗಿ ಯುವವಾಹಿನಿಯ ಮಹಿಳಾ ಸದಸ್ಯರಿಂದಲೇ ಆಯೋಜಿಸಲ್ಪಟ್ಟ ಈ […]
Read More

01-02-2026, 8:00 PM
ಪಣಂಬೂರು : ಯುವವಾಹಿನಿ (ರಿ.) ಪಣಂಬೂರು–ಕುಳಾಯಿ ಘಟಕದ ವತಿಯಿಂದ ದಿನಾಂಕ 01-02-2026, ರವಿವಾರ ಒಂದು ದಿನದ ದೇವಸ್ಥಾನ ಯಾತ್ರೆ ಮತ್ತು ಪ್ರವಾಸ ಕಾರ್ಯಕ್ರಮವನ್ನು ಭಕ್ತಿಭಾವ ಹಾಗೂ ಆತ್ಮೀಯತೆಯೊಂದಿಗೆ ಆಯೋಜಿಸಲಾಗಿತ್ತು.ಈ ಯಾತ್ರೆಯ ಅಂಗವಾಗಿ ಕಣಿಪುರ ಗೋಪಾಲ ಕೃಷ್ಣ ದೇವಸ್ಥಾನ, ಅನಂತಪುರ ಪದ್ಮನಾಭ ಸ್ವಾಮಿ ದೇವಸ್ಥಾನ, ಮಲ್ಲ ದುರ್ಗಾ ಪರಮೇಶ್ವರಿ ದೇವಸ್ಥಾನ, ಮಧೂರು ಮದನಂತೇಶ್ವರ ವಿನಾಯಕ ದೇವಸ್ಥಾನ, ಪರಶಿನ ಕಡವು ಮುತ್ತಪ್ಪ ದೇವಸ್ಥಾನ ಹಾಗೂ ಬೇಕಲ್ ಬೀಚ್ ಪ್ರವಾಸವನ್ನು ಯಶಸ್ವಿಯಾಗಿ ನಡೆಸಲಾಯಿತು. ಯಾತ್ರಿಗಳು ಮೊದಲಾಗಿ ಕಣಿಪುರ ಗೋಪಾಲ ಕೃಷ್ಣ ದರ್ಶನ […]
Read More

01-02-2026, 1:00 PM
ಪಡೀಲು : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಇವರ ಆಶ್ರಯದಲ್ಲಿ “ಆರೋಗ್ಯ ಸೇವಾ ಸಂಗಮ” ಎಂಬ ಶೀರ್ಷಿಕೆಯಡಿ 100ನೇ ಬೃಹತ್ ಉಚಿತ ವೈದ್ಯಕೀಯ, ನೇತ್ರ, ದಂತ ಹಾಗೂ ರಕ್ತದಾನ ಶಿಬಿರ, ವೈದ್ಯ ಸೇವಾ ಸಾಧಕರ ಅಭಿನಂದನಾ ಕಾರ್ಯಕ್ರಮ ಹಾಗೂ ಸಂಘದ ಹದಿನಾಲ್ಕನೇ ವಾರ್ಷಿಕೋತ್ಸವವು ದಿನಾಂಕ 01.02.2026ರ ಆದಿತ್ಯವಾರ ಪಡೀಲಿನ ಬೈರಾಡಿ ಕೆರೆಯ ಸಮೀಪದಲ್ಲಿರುವ ಆತ್ಮಶಕ್ತಿ ಸೌಧದಲ್ಲಿ ಯಶಸ್ವಿಯಾಗಿ ನಡೆಯಿತು. ಈ ಸಮಾರಂಭದ ಅಂಗವಾಗಿ ಶಿಬಿರಕ್ಕೆ ಸಹಯೋಗ ನೀಡಿದ ವಿವಿಧ ಸಂಘ–ಸಂಸ್ಥೆಗಳ ಗುರುತಿಸುವಿಕೆ ಮತ್ತು ಗೌರವ ಕಾರ್ಯಕ್ರಮವನ್ನು […]
Read More

01-02-2026, 11:30 AM
ಕೊಲ್ಯ : ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ಆಯೋಜಿಸಲಾದ ಬಿಲ್ಲವಾಸ್ ವುಮೆನ್ಸ್ ಪ್ರೀಮಿಯರ್ ಲೀಗ್ – 2026 ಕ್ರಿಕೆಟ್ ಪಂದ್ಯಾಟದಲ್ಲಿ ಯುವವಾಹಿನಿ (ರಿ.) ಕೊಲ್ಯ ಘಟಕದ ತಂಡವು ಭಾಗವಹಿಸಿ, ಅತ್ಯುತ್ತಮ ಪ್ರದರ್ಶನ ನೀಡಿತು. ಪಂದ್ಯಾಟದ ಅವಧಿಯಲ್ಲಿ ಕೊಲ್ಯ ಘಟಕದ ಮಹಿಳಾ ಆಟಗಾರ್ತಿಯರು ತಮ್ಮ ಆಟದ ಮೂಲಕ ಕೌಶಲ್ಯ, ಆತ್ಮವಿಶ್ವಾಸ ಮತ್ತು ತಂಡಾತ್ಮಕ ಮನೋಭಾವವನ್ನು ಪ್ರದರ್ಶಿಸಿ, ಪ್ರೇಕ್ಷಕರ ಹಾಗೂ ಸಂಘಟಕರ ಮೆಚ್ಚುಗೆಗೆ ಪಾತ್ರರಾದರು.
Read More

31-01-2026, 9:00 PM
ಬೆಳ್ತಂಗಡಿ : ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಹಾಗೂ ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ, ಬೆಳ್ತಂಗಡಿ ತಾಲೂಕು ಇವರ ಸಹಕಾರದೊಂದಿಗೆ ದಿನಾಂಕ 31.01.2026 ಶನಿವಾರ ಸಂಭ್ರಮ–2 ಯುವವಾಹಿನಿ ಕುಟುಂಬದ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಪಣಕಜೆಯ ನವಸುಮ ನಿವಾಸದಲ್ಲಿ ಆತ್ಮೀಯವಾಗಿ ನಡೆಯಿತು. ಈ ಸಂದರ್ಭದಲ್ಲಿ ವಿಶೇಷವಾಗಿ “ಸ್ಪಂದನ : ಹೃದಯ ಸ್ತಂಭನ ಹಾಗೂ ಹೃದಯಾಘಾತ ಮುನ್ನೆಚ್ಚರಿಕೆ ಕ್ರಮಗಳು” ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಉಜಿರೆ ಬೆನಕ ಹೆಲ್ತ್ ಸೆಂಟರ್ನ ತುರ್ತು ಚಿಕಿತ್ಸಾ ತಜ್ಞರಾದ ಡಾ. […]
Read More

31-01-2026, 10:00 AM
ಪಡುಬಿದ್ರಿ: ಕ್ರೀಡೆ ಸಂಘಟನೆಗೆ ಏಕತೆಗೆ ಅತ್ಯುತ್ತಮ ಆಯ್ಕೆ. ಕ್ರೀಡೆ ಮೂಲಕ ಮಹಿಳಾ ಸಬಲೀಕರಣದತ್ತ ಹೆಜ್ಜೆ ಇಟ್ಟ ಯುವವಾಹಿನಿಯ ಪ್ರಯತ್ನ ಶ್ಲಾಘನೀಯ ಎಂದು ಭಾರತ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ ತಿಳಿಸಿದರು. ಅವರು ಯುವವಾಹಿನಿ ಪಡುಬಿದ್ರಿ ಘಟಕದ ವತಿಯಿಂದ ಆಯೋಜಿಸಲ್ಪಟ್ಟ ಬಿಲ್ಲವಾಸ್ ವುಮನ್ಸ್ ಪ್ರೀಮಿಯರ್ ಲೀಗ್- 2026 ರ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಸನ್ಮಾನ ಸ್ವೀಕರಿಸಿದ ಅಂತಾರಾಷ್ಟ್ರೀಯ ಕ್ರೀಡಾಪಟು ಕು| ರಕ್ಷಾ ರೆಂಜಾಳ ಮಾತನಾಡಿ, ಇಂತಹ ವಿನೂತನ […]
Read More

28-01-2026, 7:00 PM
ಯುವವಾಹಿನಿ (ರಿ.) ಪಣಂಬೂರು–ಕುಳಾಯಿ ಘಟಕದ ವತಿಯಿಂದ “ಮನೆ ಮನದಲ್ಲಿ ಭಜನೆ” ಯೋಜನೆಯ ಅಂಗವಾಗಿ, ದಿನಾಂಕ 28-01-2026 ಬುಧವಾರ ಘಟಕದ ಗೌರವ ಸದಸ್ಯರಾದ ಪ್ರಕಾಶ್ ಪೂಜಾರಿ ಅವರ ಮನೆಯಲ್ಲಿ ಸಂಜೆ 6:00 ಗಂಟೆಗೆ ಗುರುಪೂಜೆ ಹಾಗೂ ಘಟಕದ ಭಜನಾ ತಂಡದ ವತಿಯಿಂದ ಭಜನಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಭಕ್ತಿ–ಭಾವಪೂರ್ಣ ಭಜನಾ ಕೀರ್ತನೆಯಲ್ಲಿ ಯುವವಾಹಿನಿ ಮಂಗಳೂರು ಘಟಕದ ಸದಸ್ಯರಾದ ಸದಾನಂದ ಪೂಜಾರಿ ಅವರು ಗುರುಪೂಜಾ ಕಾರ್ಯವನ್ನು ನೆರವೇರಿಸಿದರು. ಭಜನಾ ಸೇವೆಗೆ ಆತಿಥ್ಯ ವಹಿಸಿದ ಪ್ರಕಾಶ್ ಪೂಜಾರಿ ದಂಪತಿಗಳನ್ನು ಘಟಕದ ವತಿಯಿಂದ […]
Read More

27-01-2026, 8:00 PM
ಮಂಗಳೂರು : ಯುವವಾಹಿನಿ ಸಂಸ್ಥೆಯು ತನ್ನ ಸಂಘಟನಾ ಚಟುವಟಿಕೆಗಳ ಮೂಲಕ ಸಮಾಜಮುಖಿ ಮೌಲ್ಯಗಳ ಪರಿಣಾಮಕಾರಿ ಅನುಷ್ಠಾನಕ್ಕೆ ನಿರಂತರವಾಗಿ ಕೈಜೋಡಿಸುತ್ತಿದ್ದು, ಶೈಕ್ಷಣಿಕ ಪ್ರೋತ್ಸಾಹ, ಸೇವಾ ಕಾರ್ಯಗಳು ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಯುವಕರಲ್ಲಿ ಸಾಮಾಜಿಕ ಹೊಣೆಗಾರಿಕೆ, ಶಿಸ್ತು ಮತ್ತು ಸೇವಾಭಾವವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಭಾರತೀಯ ವೈದ್ಯರ ಸಂಘದ ಅಧ್ಯಕ್ಷರಾದ ಡಾ. ಸದಾನಂದ ಪೂಜಾರಿ ತಿಳಿಸಿದ್ದಾರೆ.ಅವರು ದಿನಾಂಕ 27.01.2026 ರಂದು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ಆಯೋಜಿಸಲಾದ ಯುವವಾಹಿನಿ (ರಿ) ಮಂಗಳೂರು ಘಟಕದ 2026–27ನೇ ಸಾಲಿನ ನೂತನ […]
Read More