Yuvavahini

ಇತರೆ

ರಾಜಧಾನಿಯಲ್ಲಿ ಮೇಳೈಸಿದ ಯುವ ವೈಭವ

ಬೆಂಗಳೂರು :- ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರ ಇದರ ಸಹಯೋಗದಲ್ಲಿ ಯುವವಾಹಿನಿ (ರಿ.) ಬೆಂಗಳೂರು ಘಟಕದ ನೇತೃತ್ವದಲ್ಲಿ “ಯುವ ವೈಭವ-2022” ಎಂಬ ಸಾಂಸ್ಕೃತಿಕ ಹಬ್ಬವು ದಿನಾಂಕ 04 ಡಿಸೆಂಬರ್ 2022ರಂದು ಡಾ| ರಾಜಕುಮಾರ್ ಒಳಾಂಗಣ ಕ್ರೀಡಾಂಗಣ, ಮಹಾಲಕ್ಷ್ಮಿ ಲೇಔಟ್ ಇಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು, ಬೆಂಗಳೂರು ಘಟಕದ ಅಧ್ಯಕ್ಷರಾದ ಶ್ರೀಧರ ಡಿ, ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಕಿಶನ್ […]

Read More

ಪದಪ್ರದಾನ ಸಮಾರಂಭ

ಕಡಬ :- ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.) ಕಡಬ ಘಟಕದ 2022-23ನೇ ಸಾಲಿನ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ದಿನಾಂಕ 19 ನವೆಂಬರ್ 2022 ನೇ ಶನಿವಾರದಂದು ಶ್ರೀ ದುರ್ಗಂಬಿಕಾ ಅಮ್ಮನವರ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೇರವೇರಿಸಿ ಮಾತನಾಡಿದ ಪುತ್ತೂರು ಬಿಲ್ಲವ ಸಂಘದ ಕೋಶಾಧಿಕಾರಿ ಬಿ. ಟಿ ಮಹೇಶ್ಚಂದ್ರ ಸಾಲ್ಯಾನ್ ಇವರು ಈ ವರ್ಷದ ಕೆಲಸ ಕಾರ್ಯಗಳನ್ನು ಗಮನಿಸಿ ಅಭಿನಂದಿಸಿ ನೂತನ ತಂಡಕ್ಕೆ ಶುಭ ಹಾರೈಸಿದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ್ ಅಮೀನ್ […]

Read More

ಯುವವಾಹಿನಿ ಸೇವಾ ಮನೋಭಾವ ಹೊಂದಿರುವ ವಿಭಿನ್ನ ಸಂಸ್ಥೆ : ಡಾ. ಭರತ್ ವೈ ಶೆಟ್ಟಿ

ಕುಪ್ಪೆಪದವು :- ಯುವವಾಹಿನಿಯ ಶಿಸ್ತು ಬದ್ಧ ಕಾರ್ಯಕ್ರಮ, ಪಾರದರ್ಶಕತೆ, ಎಲ್ಲವನ್ನು ಗಮನಿಸಿ ಈ ಬಾರಿ ಕರ್ನಾಟಕ ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಿದೆ. ಈ ಸಂಸ್ಥೆಯು ಬೇರೆ ಸಂಘಟನೆಗಿಂತ ವಿಭಿನ್ನವಾಗಿದೆ. ಸೇವಾ ಮನೋಭಾವ ಹೊಂದಿರುವ ಸಂಸ್ಥೆಯ ಕಾರ್ಯಕ್ರಮಕ್ಕೆ ಬೇರೆ ಯಾವ ಕಾರ್ಯಕ್ರಮದ ಒತ್ತಡವಿದ್ದರೂ ಕೂಡ ಪಾಲ್ಗೊಳ್ಳುವ ಅವಕಾಶ ಬಿಟ್ಟುಕೊಡಲಾರೆ. ಯುವವಾಹಿನಿ ಸಂಸ್ಥೆಗೆ ಯಾವುದೇ ರೀತಿಯ ಸಹಕಾರ ನೀಡಲು ಸದಾ ಸಿದ್ಧ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಚಿಂತನೆ ಮತ್ತು ತತ್ವಾದರ್ಶಗಳು ಸರ್ವರಿಗೂ ಅನ್ವಯವಾಗುವಂತಿವೆ […]

Read More

ಪದಾಧಿಕಾರಿಗಳ ಪದಪ್ರದಾನ ಮತ್ತು ಸಾಧಕರಿಗೆ ಸನ್ಮಾನ

ಬೆಳ್ತಂಗಡಿ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿದ್ಯೆ, ಉದ್ಯೋಗ, ಸಂಪರ್ಕ ಎಂಬ ಪರಿಕಲ್ಪನೆಯೊಂದಿಗೆ ಸಮಾಜ ಸೇವೆ ಮಾಡುತ್ತಿರುವ ಯುವವಾಹಿನಿ ಬೆಳ್ತಂಗಡಿ ಘಟಕದ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರಧಾನ, ಸಾಧಕರಿಗೆ ಸನ್ಮಾನ ಸಾಂತ್ವನನಿಧಿ ಹಸ್ತಾಂತರ ಕಾರ್ಯಕ್ರಮ ನ.13 ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾಂಗಣದಲ್ಲಿ ನಡೆಯಿತು. ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಮಾಣಿ೦ಜ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು , ಬೆಳ್ತಂಗಡಿ ಘಟಕ ಅಧ್ಯಕ್ಷೆ ಸುಜಾತ […]

Read More

ಸಮಾಜ ಸೇವೆಯೊಂದಿಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅಭಿವೃದ್ಧಿಯನ್ನು ಹೊಂದಬೇಕು – ಹರೀಶ್ ಕೆ. ಪೂಜಾರಿ

ಮಂಗಳೂರು:- ಸ್ವಾತಂತ್ರ್ಯ ಅಮೃತ ಮಹೋತ್ಸವ 2022ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಮಂಗಳೂರು ಘಟಕವು, ಘಟಕದ ಸದಸ್ಯರಿಗೆ, ಮಕ್ಕಳಿಗೆ ಮತ್ತು ಮಹಿಳೆಯರಿಗೆ ದಿನಾಂಕ 06 ನವೆಂಬರ್ 2022ರ ಭಾನುವಾರದಂದು ಯುವವಾಹಿನಿ ಸಭಾಂಗಣದಲ್ಲಿ ಸಂಗೀತ ಸ್ಪರ್ಧೆಯನ್ನು ಏರ್ಪಡಿಸಿತ್ತು. ಈ ಸಂಗೀತ ಸ್ಪರ್ಧೆಯ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಯುವವಾಹಿನಿ ಕೇಂದ್ರ ಸಮಿತಿಯ ಎರಡನೇ ಉಪಾಧ್ಯಕ್ಷರಾದ ಹರೀಶ್ ಕೆ. ಪೂಜಾರಿಯವರು ಮಾತನಾಡುತ್ತಾ ಸದಸ್ಯರಲ್ಲಿರುವ ಸೂಕ್ತ ಪ್ರತಿಭೆಗಳ ಅನಾವರಣಕ್ಕೆ ಇಂಥ ಕಾರ್ಯಕ್ರಮಗಳು ಮಾದರಿ ಎಂದು ಅಭಿಪ್ರಾಯಪಟ್ಟರು. ಸಂಗೀತ ಸ್ಪರ್ಧೆಯಲ್ಲಿ 9 […]

Read More

ಪದಗ್ರಹಣ ಸಮಾರಂಭ – 2022

ಮಾಣಿ :- ಯುವವಾಹಿನಿ(ರಿ.) ಮಾಣಿ ಘಟಕದ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 06ನವೆಂಬರ್ 2022 ರಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾ ಭವನ,ಮಾಣಿ ಇಲ್ಲಿ ಜರುಗಿತು. ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಮಾಣಿ ಇದರ ಅಧ್ಯಕ್ಷರಾದ ಸುರೇಶ್ ಸೂರ್ಯ ರವರು ಉದ್ಘಾಟಿಸಿದರು. ತದನಂತರ ಅವರು ನೂತನ ತಂಡಕ್ಕೆ ಶುಭ ಹಾರೈಸಿದರು. ಕಾರ್ಯದರ್ಶಿ ರೇಣುಕಾ ಕಣಿಯೂರುರವರು ವಾರ್ಷಿಕ ವರದಿಯನ್ನು ದೃಶ್ಯ – ಶ್ರವ್ಯ ಪರದೆಯ ಮೂಲಕ […]

Read More

ಪದಗ್ರಹಣ ಸಮಾರಂಭ 2022

ಮಂಗಳೂರು:- ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ 2022-23ನೇ ಸಾಲಿನ ಪದಗ್ರಹಣ ಕಾರ್ಯಕ್ರಮವು ದಿನಾಂಕ 06 ನವೆಂಬರ್ 2022ರಂದು ಉರ್ವಾ ಸ್ಟೋರಿನ ಯುವವಾಹಿನಿ ಸಭಾಂಗಣದಲ್ಲಿ ಜರಗಿತು. ವೇದಿಕೆಯಲ್ಲಿ ಕಾರ್ಯಕ್ರಮ ಉದ್ಘಾಟಕರಾಗಿ ಪ್ರವೀಣ್ ಕುಮಾರ್ ಕೆಡೆಂಜಿ ಆಡಳಿತ ನಿದೇ೯ಶಕರು ಪುರುಷರತ್ನ ಬಯೋ ಪ್ರೊಡ್ಯೂಸರ್ ಕಂಪನಿ, ಕಡಬ ಇವರು ಭಾಗವಹಿಸಿ ಶುಭ ಹಾರೈಸಿದರು. ಹಾಗೂ ಮುಖ್ಯ ಅತಿಥಿಗಳಾದ ಸುಖಲಾಕ್ಷಿ ವೈ .ಸುವರ್ಣ ಪ್ರಧಾನ ಕಾರ್ಯದಶಿ೯ ಅಖಿಲ ಭಾರತ ಬಿಲ್ಲವ ಮಹಿಳಾ ಸಂಘ, ಪುಷ್ಪಾವತಿ ಕೆ.ಎ. ಅಧ್ಯಕ್ಷರು ಪ್ರಗತಿ ಮಹಿಳಾ ಮಂಡಲ […]

Read More

ತುಳುನಾಡ ತುಳಸಿ ಪರ್ಬ

ಹೆಜಮಾಡಿ :- ಹೆಜಮಾಡಿ ಯುವವಾಹಿನಿ ಘಟಕದ ಆಶ್ರಯದಲ್ಲಿ ಹೆಜಮಾಡಿ ಬಿಲ್ಲವರ ಸಂಘದ ಗುರು ಮಂದಿರದಲ್ಲಿ ತುಳುನಾಡ ತುಳಸಿ ಪರ್ಭ ಆಚರಣೆಯು ದಿನಾಂಕ 05 ನವೆಂಬರ್ 2022ರಂದು ನಡೆಯಿತು. ಗುರು ಮಂದಿರದ ಪ್ರಧಾನ ಅರ್ಚಕ ಹರೀಶ್ ಶಾಂತಿ ಮುಂಬಯಿ ಧಾರ್ಮಿಕ ಪೂಜಾ ಕಾರ್ಯಕ್ರಮ ನೆರವೇರಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು, ಬಿಲ್ಲವ ಸಂಘದ ಅಧ್ಯಕ್ಷ ಲೋಕೇಶ್ ಅಮೀನ್, ಯುವವಾಹಿನಿ ಹೆಜಮಾಡಿ ಘಟಕ ದ ಅಧ್ಯಕ್ಷ ಧನಂಜಯ ಕಾರ್ಯದರ್ಶಿ ಜಯಶ್ರೀ ಸದಾಶಿವ, ಯುವವಾಹಿನಿ ಕೇಂದ್ರ ಸಮಿತಿಯ […]

Read More

ಹಣತೆ ಬೆಳಗಿದ ಅಂದದ ತುಳಸಿಕಟ್ಟೆ

ಕೊಲ್ಯ :- ತುಳಸಿ ಹಬ್ಬದ ಪ್ರಯುಕ್ತ ಘಟಕದ ಸದಸ್ಯರಿಗೆ ದಿನಾಂಕ 05 ನವೆಂಬರ್ 2022ರಂದು ಸಾಂಪ್ರದಾಯಿಕ ಹಣತೆ ಬೆಳಗಿದ ಅಂದದ ತುಳಸಿ ಕಟ್ಟೆ ಫೋಟೋ ಸ್ಪರ್ಧೆಯನ್ನು ಘಟಕದ ಸದಸ್ಯರಿಗೆ ಏರ್ಪಡಿಸಿದ್ದು, ಒಟ್ಟು 31 ಸದಸ್ಯರು ಭಾಗವಹಿಸಿದ್ದರು. ಘಟಕದ ಕಲೆ ಮತ್ತು ಸಾಹಿತ್ಯ ನಿರ್ದೇಶಕರು ಕು. ಅನ್ವಿತಾ. ಎ, ಮತ್ತು ವಿದ್ಯಾರ್ಥಿ ಸಂಘಟನೆ ನಿರ್ದೇಶಕರದ ಕು. ಸಚೇತ ಸಾಲ್ಯಾನ್ ಅವರು ಈ ಸ್ಪರ್ಧೆಯ ಜವಾಬ್ದಾರಿ ವಹಿಸಿಕೊಂಡಿದ್ದರು. ಬ್ರಹ್ಮ ಶ್ರೀ ನಾರಾಯಣ ಗುರು ಧರ್ಮಶಿಕ್ಷಣ ತರಗತಿ ಇದರ ಗುರುಗಳಾದ ಡಾ. […]

Read More

ಮುಸ್ಸಂಜೆಯಲ್ಲಿ ಕಣ್ಮಣ ಸೆಳೆದ ಕನ್ನಡ ರಾಜ್ಯೋತ್ಸವ ಭಾವಲಹರಿ-ಕವಿ-ಕಾವ್ಯ-ಗಾಯನದ ರಸದೌತಣ

ಕೊಲ್ಯ :- ಯುವವಾಹಿನಿ (ರಿ.) ಕೊಲ್ಯ ಘಟಕದ ಆಶ್ರಯದಲ್ಲಿ ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ.) ಕೊಲ್ಯ ಸೋಮೇಶ್ವರ ಮತ್ತು ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯ ಹಾಗೂ ಚುಟುಕು ಸಾಹಿತ್ಯ ಪರಿಷತ್ ಉಳ್ಳಾಲ ಘಟಕ ಇದರ ಸಹಭಾಗಿತ್ವದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಯುವಸಂಜೆ- ಭಾವಲಹರಿ, ಕವಿ ಕಾವ್ಯ ಗಾಯನವು ದಿನಾಂಕ 01 ನವೆಂಬರ್ 2022 ರಂದು ಸಂಜೆ ಬ್ರಹ್ಮಶ್ರೀ ನಾರಾಯಣಗುರು ಸಭಾ ಭವನ ಕೊಲ್ಯದಲ್ಲಿ ಜರುಗಿತು. ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!