
30-09-2018, 4:12 PM
ಉಪ್ಪಿನಂಗಡಿ : ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದ ಆಶ್ರಯದಲ್ಲಿ ಘಟಕದ ಸದಸ್ಯರಿಗೆ ಯುವದರ್ಪಣ ಮಾಹಿತಿ ಕಾರ್ಯಾಗಾರವು ರೋಟರಿ ಭವನ ರಾಮನಗರ ಉಪ್ಪಿನಂಗಡಿ ಇಲ್ಲಿ ದಿನಾಂಕ :30/09/18 ರಂದು ಆದಿತ್ಯವಾರ ನಡೆಯಿತು.ಯುವದರ್ಪಣ ಕಾರ್ಯಕ್ರಮದ ಮೂಲಕ ಹೊಸ ಮುಖಗಳನ್ನು ಪರಿಚಯಿಸುವ ಈ ಪ್ರಯತ್ನ ಶ್ಲಾಘನೀಯ ಎಂದು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಜಯಂತ್ ನಡುಬೈಲ್ ತಿಳಿಸಿದರು. ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದ ಅದ್ಯಕ್ಷ ಅಜಿತ್ ಕುಮಾರ್ ಪಾಲೇರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ(ರಿ) ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷ […]
Read More

29-09-2018, 4:06 PM
ಮಂಗಳೂರು : ವಿಶ್ವ ಹೃದ್ರೋಗ ದಿನಾಚರಣೆಯ ಅಂಗವಾಗಿ ಒಮೇಗಾ ಅಸ್ಪತ್ರೆ ಮಂಗಳೂರು, ಯುವವಾಹಿನಿ (ರಿ) ಮಂಗಳೂರು ಘಟಕ, ಲಯನ್ಸ್ ಕ್ಲಬ್ ಮಂಗಳೂರು ಮಂಗಳಾದೇವಿ, ಅಶೋಕನಗರ ಲಯನ್ಸ್ ಕ್ಲಬ್, ಲಯನ್ಸ್ ಕ್ಲಬ್ ಕುಡ್ಲ. ಇವರ ಸಂಯುಕ್ತ ಆಶ್ರಯದಲ್ಲಿ ಖ್ಯಾತ ಹೃದ್ರೋಗ ತಜ್ಞರಾದ ಡಾ. ಕೆ.ಮುಕುಂದ್ ಇವರ ನೇತೃತ್ವದಲ್ಲಿ “ಉಚಿತ ಹೃದಯರೋಗ ಮತ್ತು ಮಧುಮೇಹ ತಪಾಸಣಾ ಶಿಬಿರ” ದಿನಾಂಕ 29.09.2018 ರಂದು ಯುವವಾಹಿನಿ ಸಭಾಂಗಣ ಉರ್ವಸ್ಟೋರ್ ಇಲ್ಲಿ ನಡೆಯಿತು. ಶಿಬಿರಾರ್ಥಿಗಳ ವೈದ್ಯಕೀಯ ತಪಾಸಣೆಯ ಪೂರ್ವದಲ್ಲಿ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು […]
Read More

23-09-2018, 4:58 PM
ಬೆಳುವಾಯಿ : ಬಿಲ್ಲವ ಸಮಾಜದ ಶ್ರೀಮಂತ ಇತಿಹಾಸದಲ್ಲಿ ಅದೆಷ್ಟೋ ಮಹಿಳೆಯರು ಮತ್ತು ಮಹನೀಯರು ದಳವಾಯಿಗಳಾಗಿ ಯೋಧರಾಗಿ ನಾಡು ಕಟ್ಟಿದವರು ಇದ್ದಾರೆ ಆದರೆ ಇತಿಹಾಸಕಾರರು ಅವರ ಬದುಕಿನ ಮೇಲೆ ಬೆಳಕು ಚೆಲ್ಲದ್ದು ವಿಷಾದನೀಯ. ಬಿಲ್ಲವರಲ್ಲಿ ಏನು ಇದೆ ಎಂದು ಕೇಳುವುದಕ್ಕಿಂತ ಏನು ಇಲ್ಲ ಎಂದು ಕೇಳುವುದೇ ಉತ್ತಮ. ಎಲ್ಲವು ಇದ್ದಂತಹ ಸಮಾಜ ಎಂದರೆ ಅದು ಬಿಲ್ಲವ ಸಮಾಜ ಮಾತ್ರ. ನಾಯಕರಾಗಿ, ಬಿಲ್ವಿದ್ದೆ ಪ್ರವೀಣರಾಗಿ, ದೈವಗಳ ಅರ್ಚಕಾಗಿ, ವೈದ್ಯರಾಗಿ, ಕೃಷಿ ಮಾಡುವ ಪ್ರತಿಷ್ಟಿತ ಮನೆಗಳಾಗಿ, ಯೋಧರಾಗಿ, ಬೇಟಗಾರರಾಗಿ ಜನಾನುರಾಗಿಯಾಗಿದ್ದವರು ಇದೇ […]
Read More

23-09-2018, 8:51 AM
ಮಾಣಿ : ನಾರಾಯಣಗುರುಗಳು ಈ ಜಗತ್ತು ಕಂಡ ಶ್ರೇಷ್ಠ ದಾರ್ಶನಿಕರು. ತಮ್ಮ ಸಂಘರ್ಷ ರಹಿತವಾದ ಕ್ರಾಂತಿ ತತ್ವದ ಮೂಲಕ ಸಮಾಜದ ಉದ್ಧರಕ್ಕಾಗಿ ದುಡಿದವರು. ವಿದ್ಯೆಯಿಂದ ಸ್ವತಂತ್ರರಾಗಿರಿ, ಸಂಘಟನೆಯಿಂದ ಬಲಯುತರಾಗಿರಿ ಎಂಬ ಧ್ಯೇಯ ವಾಕ್ಯದೊಂದಿಗೆ ಸಮಾಜದಲ್ಲಿ ಧನಾತ್ಮಕವಾದ ಬದಲಾವಣೆಗೆ ಕಾರಣರಾದರು ಎಂದು ಶಶಿಧರ್ ಕೆ. ಅಂಡಿಂಜೆ ಹೇಳಿದರು. ಅವರು ಯುವವಾಹಿನಿ(ರಿ) ಮಾಣಿ ಘಟಕದ 2018-19ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ವತಿಯಿಂದ ನಡೆದ ಗುರುಪೂಜೆ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿ ಮಾತನಾಡಿದರು. […]
Read More

23-09-2018, 7:40 AM
ಮಂಗಳೂರು : ಭಜನೆಯಿಂದ ಪ್ರಗತಿ, ಕ್ಷಮತೆ, ಶಿಸ್ತು, ಕ್ರಿಯಾಶೀಲತೆ, ಕೌಶಲ, ಸಾಧನೆ ಹೆಚ್ಚಾಗುತ್ತದೆ. ಭಕ್ತಿಯ ಅಂತರಗಂಗೆ ಭಜನೆ ಮೂಲಕ ಜಲಪಾತವಾಗಿ ಧುಮುಕುತ್ತದೆ. ನಿಷ್ಕಲ್ಮಶ ಪ್ರೀತಿಯಿಂದ, ಮುಗ್ದ ಭಕ್ತಿಯಿಂದ ಭಜನೆ ಹಾಡಿದರೆ ಪರಮಾತ್ಮನ ಸಾಕ್ಷಾತ್ಕಾರವಾಗುತ್ತದೆ. ಭಜನಾ ಸಂಸ್ಕೃತಿಯ ಪುನರುತ್ಥಾನದೊಂದಿಗೆ ಭಜಕರು ನವಭಾರತ ನಿರ್ಮಾಣದ ಶಿಲ್ಪಿಗಳಾಗಬೇಕು , ಭಜನೆ ಆತ್ಮ ಶುದ್ಧೀಕರಣದ ಸನ್ಮಾರ್ಗ ಎಂದು ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ತಿಳಿಸಿದರು. ಅವರು ದಿನಾಂಕ 23.09.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ […]
Read More

23-09-2018, 2:42 AM
ಕಂಕನಾಡಿ : ಇತ್ತೀಚೆಗೆ ಮಂಗಳಾದೇವಿ ದೇವಸ್ಥಾನದಲ್ಲಿ ಮರ ಬಿದ್ದು ಗಾಯಗೊಂಡ ಸುರೇಖಾ ಕೋಟ್ಯಾನ್ ಆರೋಗ್ಯವನ್ನು ವಿಚಾರಿಸಿ ₹.10000/- ವೈದ್ಯಕೀಯ ನೆರವು ನೀಡಲಾಯಿತು.ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಕಂಕನಾಡಿ ಘಟಕದ ಅಧ್ಯಕ್ಷ ಭವಿತ್ ರಾಜ್ ಕಾರ್ಯದರ್ಶಿ ಸುಮಾ ವಸಂತ್ , ಮಾಜಿ ಅಧ್ಯಕ್ಷ ಹರೀಶ್. ಕೆ. ಸನಿಲ್ ಮತ್ತಿತರರು ಉಪಸ್ಥಿತರಿದ್ದರು.
Read More

22-09-2018, 4:23 PM
. ಪುತ್ತೂರು : ಯುವವಾಹಿನಿ (ರಿ.) ಪುತ್ತೂರು ಘಟಕ ಇದರ ಆಶ್ರಯದಲ್ಲಿ ರೋಟರಿ ಕ್ಯಾಂಪ್ಕೊ ಬ್ಲಡ್ ಬ್ಯಾಂಕ್ ಪುತ್ತೂರು, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳಂದೂರು ಇದರ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ಕಾಲೇಜ್ ಅಭಿವೃದ್ಧಿ ಸಮಿತಿ ಇದರ ಸಹಭಾಗಿತ್ವದಲ್ಲಿ “ಸ್ವಯಂ ಪ್ರೇರಿತ ರಕ್ತದಾನ ಶಿಬಿರ ” ದಿನಾಂಕ 22/9/2018ನೇ ಶನಿವಾರ ಬೆಳಿಗ್ಗೆ ಗಂಟೆ 9.30ಕ್ಕೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳಂದೂರು ಇಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ(ರಿ.)ಪುತ್ತೂರು ಘಟಕದ ಅಧ್ಯಕ್ಷರಾದ […]
Read More

16-09-2018, 3:17 PM
ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ದಿನಾಂಕ 16.09.2018 ರಂದು ನಡೆದ ಶಿವಗಿರಿಯಾತ್ರೆ ಯಶಸ್ವಿಯಾಗಿ ನಡೆಯಿತು . ಮಂಗಳೂರಿನಿಂದ ರೈಲಿನ ಮೂಲಕ ಹೊರಟ ಯುವವಾಹಿನಿಯ ಯಾತ್ರಾ ತಂಡವನ್ನು ವರ್ಕಳ ರೈಲು ನಿಲ್ದಾನದಲ್ಲಿ ಶಿವಗಿರಿ ಮಠದ ಪೂಜ್ಯ ಸತ್ಯಾನಂದತೀರ್ಥ ಶ್ರೀಗಳು ಸ್ವಾಗತಿಸುವ ಮೂಲಕ ಯಾತ್ರೆಯು ಆರಂಭವಾಯಿತು. ಸ್ವಾಮೀಜಿಯವರ ನೇತೃತ್ವದಲ್ಲಿ ಶಿವಗಿರಿಯಲ್ಲಿ ನ ನಾರಾಯಣಗುರುಗಳ ಮಹಾಸಮಾಧಿ ಮತ್ತು ಕೆಲ ಐತಿಹಾಸಿಕ ಸ್ಥಳಗಳನ್ನು ಸಂದರ್ಶಿಸಿದೆವು. ಆ ಬಳಿಕ ಗುರುಗಳ ಪೂರ್ವಾಶ್ರಮದ ಮನೆ, ಸುಬ್ರಹ್ಮಣ್ಯ ದೇವಾಲಯ, ನಾರಾಯಣಗುರುಗಳೇ ತನ್ನ ಕಯ್ಯಾರೆ […]
Read More

16-09-2018, 2:38 AM
ಕಂಕನಾಡಿ : ಯುವವಾಹಿನಿ(ರಿ.) ಕಂಕನಾಡಿ ಘಟಕದ ಆಶ್ರಯದಲ್ಲಿ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಯೆನೆಪೋಯ ಡೀಮ್ಡ್ ಟು ಬಿ ಯುನಿವರ್ಸಿಟಿ ಮತ್ತು ಸಮುದಾಯ ದಂತ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇವರ ಸಂಯುಕ್ತ ಸಹಯೋಗದೊಂದಿಗೆ ದಿನಾಂಕ 16-9-2018 ರಂದು ಗೋರಿಗುಡ್ಡ ಕಿಟೆಲ್ ಮೆಮೋರಿಯಲ್ ಪ್ರಾಥಮಿಕ ಶಾಲೆಯಲ್ಲಿ ಉಚಿತ ಬೃಹತ್ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರ ಜರುಗಿತು. ಸುಮಾರು 100ಕ್ಕೂ ಅಧಿಕ ಮಂದಿ ಈ ಶಿಬಿರದಲ್ಲಿ ಪಾಲ್ಗೊಂಡು ಶಿಬಿರದ ಸದುಪಯೋಗವನ್ನು […]
Read More

15-09-2018, 4:45 PM
ಹಳೆಯಂಗಡಿ : ಕಟ್ಟೋಣ ನಾವು ಹೊಸ ನಾಡೊಂದನು…ಶಾಂತಿ ಸಹಬಾಳ್ವೆಯ ಬೀಡೊಂದನು… ಹೆಜ್ಜೆ ಮೇಲೆ ಹೆಜ್ಜೆ ಇಡುತ ಕುಣಿವ ಯುವಜನರ ದಂಡು, ಜೊತೆಗೆ ಹುಚ್ಚೆಬ್ಬಿಸೋ ನಾಸಿಕ್ ಬ್ಯಾಂಡು… ಹಳೆಯಂಗಡಿ ಗಣೇಶೋತ್ಸವದಲ್ಲಿ ಜನಮನ ಸೆಳೆದ ಯುವವಾಹಿನಿ ತಂಡಕ್ಕೆ ಜೈ ಹೋ . ದಿನಾಂಕ 15-09-2018 ರಂದು ನಡೆದ ಹಳೆಯಂಗಡಿಯ ಸಾರ್ವಜನಿಕ ಶ್ರೀ ಗಣೇಶೋತ್ಸವದ ಶೋಭಯಾತ್ರೆಯಲ್ಲಿ ಯುವವಾಹಿನಿ (ರಿ) ಹಳೆಯಂಗಡಿ ಘಟಕದ ಸದಸ್ಯರಿಂದ “ನಾಸಿಕ್ ಬ್ಯಾಂಡ್ ” ಕಾರ್ಯಕ್ರಮ ಏರ್ಪಡಿಸಲಾಯಿತು. 60 ಸದಸ್ಯರ ದಂಡು ,ಹಳದಿ ಬಣ್ಣದ ಜರ್ಸಿ ಟಿ-ಶರ್ಟ್ ಸಮವಸ್ತ್ರದಲ್ಲಿ […]
Read More