
19-05-2017, 12:28 PM
ಯುವವಾಹಿನಿ (ರಿ) ಕೊಲ್ಯಘಟಕದ ಸದಸ್ಯ ಸ್ವಸ್ತಿಕ್ ಅವರು ದಿನಾಂಕ 19.05.2017 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಜರುಗಿದ ಅತ್ಲೆಟಿಕ್ ಸ್ಪರ್ಧೆಯಲ್ಲಿ 100 ಮೀ ಓಟವನ್ನು 10.83 ಸೆಕೆಂಡುಗಳಲ್ಲಿ ಕ್ರಮಿಸಿ ಚಿನ್ನದ ಪದಕ ತನ್ನ ಮುಡಿಗೇರಿಸಿಕೊಂಡಿದ್ದಾರೆ ಸ್ವಸ್ತಿಕ್ ಅವರು ಚಿನ್ನದ ಪದಕ ಗಳಿಸುವುದರ ಮೂಲಕ ಉತ್ತರಪ್ರದೇಶದ ಲಕ್ನೊದಲ್ಲಿ 2017 ಜೂನ್ 11 ರಿಂದ 15 ರವರಗೆ ಜರುಗುವ ಫೆಡರೇಶನ್ ಕಪ್ ನಾಷನಲ್ ಜೂನಿಯರ್ ಅತ್ಲೆಟಿಕ್ಸ್ ಚಾಂಪಿಯನ್ಶಿಪ್ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.ಕೊಲ್ಯ ಸೋಮೇಶ್ವರದ ಆನಂದಾಶ್ರಮ ಪ್ರೌಢಶಾಲೆಯ ದೈಹಿಕ ಶಿಕ್ಷಕರಾದ ಸಂದೀಪ್ ರಾಜ್ […]
Read More

16-05-2017, 7:24 AM
ಯುವವಾಹಿನಿ (ರಿ) ಯಡ್ತಾಡಿ ಘಟಕದ ಆಶ್ರಯದಲ್ಲಿ 07.05.2017 ರಿಂದ 16.05.2107 ರ ವರಗೆ ಹತ್ತು ದಿನಗಳ ಕಾಲ ಮಕ್ಕಳ ಬೇಸಿಗೆ ಶಿಬಿರ ವಿಕಸನ 2017 ಸೈಬರಕಟ್ಟೆ ಮಹಾತ್ಮಗಾಂಧಿ ಪ್ರೌಢ ಶಾಲೆಯಲ್ಲಿ ಜರುಗಿತು. ಒಟ್ಟು 137 ಮಕ್ಕಳು ಈ ಶಿಬಿರದ ಪ್ರಯೋಜನ ಪಡೆದರು. ಕರ್ನಾಟಕ ಬಾಲವಿಕಾಸ ಅಕಾಡೆಮಿ ,ದಾರಾವಾಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಡುಪಿ, ಹಾಗೂ ಸಮಗ್ರ ಶಿಶು ಅಭಿವೃದ್ಧಿ ಇಲಾಖೆ ಬ್ರಹ್ಮಾವರ ಈ ಶಿಬಿರದಲ್ಲಿ ಸಹಭಾಗಿತ್ವ ನೀಡಿದರು
Read More

15-05-2017, 7:19 AM
ಯುವವಾಹಿನಿ (ರಿ) ಯಡ್ತಾಡಿ ಘಟಕದ 2017-18 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 15.05.2017 ರಂದು ಜರುಗಿತು.ಬಿಲ್ಲವ ಒಕ್ಕೂಟ ಕೋಟ ಹೋಬಳಿಯ ಪೂರ್ವಾಧ್ಯಕ್ಷರಾದ ರತ್ನಾ ಜೆ.ರಾಜ್ ದೀಪ ಪ್ರಜ್ವಲನೆ ಮಾಡುವ ಮೂಲಕ ಸಮಾರಂಭ ಉದ್ಗಾಟಿಸಿದರು.ಕರ್ನಾಟಕ ಸರಕಾರದ ಮಾಜಿ ಸಚಿವರು ವಿದಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಸಾಫ್ಟವೇರ್ ಇಂಜಿನಿಯರ್ ಸತೀಶ್ ಪೂಜಾರಿ, ಮಾಧವ ಪೂಜಾರಿ,ಸಾಲಿಗ್ರಾಮ ಪಟ್ಟಣ ಪಂಚಾಯತ್ ಸದಸ್ಯರಾದ ಅಚ್ಚುತ ಪೂಜಾರಿ, ಕೋಟ ಹೋಬಳಿಯ ಬಿಲ್ಲವ ಒಕ್ಕೂಟದ ಅಧ್ಯಕ್ಷರಾದ ಶೇಖರ ಪೂಜಾರಿ, […]
Read More

13-05-2017, 12:39 PM
ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ದಿನಾಂಕ 10.05.2017 ರಿಂದ ದಿನಾಂಕ 13.05.2017 ರ ವರಗೆ ನಾಲ್ಕು ದಿನಗಳ ಕಾಲ ಮಕ್ಕಳ ಬೇಸಿಗೆ ಶಿಬಿರ ಮಂಗಳೂರಿನ ಕೊಟ್ಟಾರದ ಯುವವಾಹಿನಿ ಕೇಂದ್ರ ಕಛೇರಿಯಲ್ಲಿ ಜರುಗಿತು. ಖ್ಯಾತ ಮರಳು ಶಿಲ್ಪಿ ಹಾಗೂ ಮಣ್ಣಿನ ಕಲಾಕೃತಿಯ ಕಲಾವಿದ ಹರೀಶ್ ಕೊಡಿಯಾಲಬೈಲ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮುಖವಾಡ ಹಾಗೂ ಮಣ್ಣಿನ ಕಲಾಕೃತಿ ರಚನೆಯ ಬಗ್ಗೆ ಮಕ್ಕಳಿಗೆ ತರಬೇತಿ ನೀಡಿದರು ಹಾಗೂ ಶ್ರೀಮತಿ ಶುಭಾ ರಾಜೇಂದ್ರ ಸಹಕಾರ ನೀಡಿದರು. ಮಂಗಳೂರು ಮಹಿಳಾ ಘಟಕದ ಸದಸ್ಯೆಯರಾದ […]
Read More

11-05-2017, 7:23 AM
ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ದಿನಾಂಕ 11/04/2017 ರಿಂದ 11.05.2017 ರವರೆಗೆ ಯುವವಾಹಿನಿ ಸಂಚಾಲನ ಸಮಿತಿ ಮೂಡುಕೋಡಿ ಮತ್ತು ಸೇವಾ ಭಾರತಿ ಮೂಡುಕೋಡಿ ಇದರ ಜಂಟಿ ಸಹಯೋಗದೊಂದಿಗೆ ಒಂದು ತಿಂಗಳ ಕಾಲ ಮೂಡುಕೋಡಿ ಶ್ರೀರಾಮ ಮಂದಿರದಲ್ಲಿ ಹೊಲಿಗೆ ತರಬೇತಿ ಶಿಬಿರವು ಜರುಗಿತು. ದಿನಾಂಕ 11.05.2017 ರಂದು ಸಮಾರೋಪ ಸಮಾರಂಭವು ಯುವವಾಹಿನಿ ಸಂಚಾಲನ ಮೂಡುಕೋಡಿಯ ಕಾರ್ಯದರ್ಶಿ ಯೋಗೀಶ್ ಬಿಕ್ರೊಟ್ಟು ಇವರ ಅಧ್ಯಕ್ಷತೆಯಲ್ಲಿ ಜರುಗಿತು..ಮುಖ್ಯ ಅತಿಥಿಗಳಾಗಿ ಸೇವಾ ಭಾರತಿ ಕನ್ಯಾಡಿಯ ಅಧ್ಯಕ್ಷ ಕೃಷ್ಣಪ್ಪ ಗುಡಿಗಾರ್, ಯುವವಾಹಿನಿ ಕೇಂದ್ರ ಸಮಿತಿ ನಿರ್ದೇಶಕ […]
Read More

07-05-2017, 5:18 AM
ದಿನಾಂಕ 07.05.2017ನೇ ಆದಿತ್ಯವಾರ ಉಡುಪಿಯ ಉದ್ಯಾವರದಲ್ಲಿ ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಅಂತರ್ ಘಟಕ ಹಗ್ಗಜಗ್ಗಾಟ ಸ್ಪರ್ಧೆ ಜರುಗಿತು. ಈ ಕ್ರೀಡಾಕೂಟದಲ್ಲಿ ಒಟ್ಟು 16 ಯುವವಾಹಿನಿ ತಂಡಗಳು ಭಾಗವಹಿಸಿದ್ದವು ಪುರುಷರ ವಿಭಾಗದಲ್ಲಿ ಯುವವಾಹಿನಿ ಕಟಪಾಡಿ ಪ್ರಥಮ, ಬಂಟ್ವಾಳ ದ್ವಿತೀಯ, ಪುತ್ತೂರು ತೃತೀಯ ಹಾಗೂ ಮಹಿಳಾ ವಿಭಾಗದಲ್ಲಿ ಯುವವಾಹಿನಿ ಮಂಗಳೂರು ಮಹಿಳಾ ಪ್ರಥಮ, ಉಡುಪಿ ದ್ವಿತೀಯ, ಬಂಟ್ವಾಳ ತೃತೀಯ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. ಬಹುಮಾನ ವಿಜೇತ ತಂಡಗಳು […]
Read More

07-05-2017, 5:08 AM
ಯುವವಾಹಿನಿಯು ಬಿಲ್ಲವ ಸಮಾಜದ ಕಣ್ಣುಗಳು, ವಜ್ರದಂತೆ ಬಲಿಷ್ಠವಾಗಿರುವ ಬಿಲ್ಲವ ಸಮಾಜವನ್ನು ಪರಸ್ಪರ ಪ್ರೀತಿ, ವಿಶ್ವಾಸ, ಸಂಪರ್ಕದ ಮೂಲಕ ಹೊಳಪು ನೀಡುವ ಕಾರ್ಯವನ್ನು ಯುವವಾಹಿನಿ ಮಾಡುತ್ತಿದೆ ಎಂದು ರಾಜ್ಯಪ್ರಶಸ್ತಿ ಪುರಸ್ಕ್ರತ ಚಲನಚಿತ್ರ ನಟ,ನಿರ್ಮಾಪಕ ರಾಜಶೇಖರ ಕೋಟ್ಯಾನ್ ತಿಳಿಸಿದರು. ಅವರು ದಿನಾಂಕ 07.05.2017ನೇ ಆದಿತ್ಯವಾರ ಉಡುಪಿಯ ಉದ್ಯಾವರದಲ್ಲಿ ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ ಜರುಗಿದ ಯುವವಾಹಿನಿ ಅಂತರ್ ಘಟಕ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆ ಯುವಕ್ರೀಡಾ ಸಂಗಮ 2017 […]
Read More

07-05-2017, 5:00 AM
ಸಮಾಜದಲ್ಲಿ ಪರಸ್ಪರ ಪ್ರೀತಿ, ವಿಶ್ವಾಸ, ಶಾಂತಿ,ನೆಮ್ಮದಿಯನ್ನು ಬಲಪಡಿಸುವಲ್ಲಿ ಯುವಕರ ಪಾತ್ರ ಮಹತ್ತರವಾದುದು, ಈ ನಿಟ್ಟಿನಲ್ಲಿ ಯುವಕರನ್ನು ಕ್ರೀಡೆಯ ಮೂಲಕ ಸಂಘಟಿಸುವ ಯುವವಾಹಿನಿಯ ಕಾರ್ಯ ಶ್ಲಾಘನೀಯವಾದುದು ಎಂದು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಅದ್ಯಕ್ಷರಾದ ಶ್ರೀ ಅಶೋಕ್ ಎಂ.ಸುವರ್ಣ ತಿಳಿಸಿದರು. ಅವರು ದಿನಾಂಕ 07.05.2017ನೇ ಆದಿತ್ಯವಾರ ಉಡುಪಿಯ ಉದ್ಯಾವರದಲ್ಲಿ ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ ಜರುಗಿದ ಯುವವಾಹಿನಿ ಅಂತರ್ ಘಟಕ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆ […]
Read More

06-05-2017, 6:31 AM
ಯುವವಾಹಿನಿ (ರಿ) ಹೆಜಮಾಡಿ ಘಟಕ ಹಾಗೂ ಹೆಜಮಾಡಿ ಬಿಲ್ಲವ ಸಂಘದ ಆಶ್ರಯದಲ್ಲಿ ದಿನಾಂಕ 06.05.2017 ನೇ ಶನಿವಾರ ಹೆಜಮಾಡಿ ಬಿಲ್ಲವ ಸಂಘದಲ್ಲಿ 19ನೇ ವರ್ಷದ ಸಾರ್ವಜನಿಕ ಶನಿ ಪೂಜೆ ಜರಗಿತು. ಹೆಜಮಾಡಿ ಯುವವಾಹಿನಿ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡಿದ್ದರು
Read More

05-05-2017, 6:44 AM
ಯುವವಾಹಿನಿ (ರಿ) ಹೆಜಮಾಡಿ ಘಟಕದ ಆಶ್ರಯದಲ್ಲಿ ತೀರಾ ಬಡ ಕುಟುಂಬ ಪೋಂಕ್ರ ಪೂಜಾರಿ ಇವರಿಗೆ ಸುಮಾರು ರೂಪಾಯಿ ಮೂರುವರೆ ಲಕ್ಷ ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಿ ಹಸ್ತಾಂತರಿಸಲಾಯಿತು. ಹೆಜಮಾಡಿ ಯುವವಾಹಿನಿಯ ಯಶಸ್ವೀ ಸಮಾಜಮುಖಿ ಕಾರ್ಯ ಮನೆ ನಿರ್ಮಾಣ ಯೋಜನೆ ಎಲ್ಲರ ಪ್ರಶಂಸೆಗೆ ಪಾತ್ರವಾಯಿತು. ಕೇವಲ ಮೂರು ತಿಂಗಳ ಅವಧಿಯಲ್ಲಿ ದಾನಿಗಳ ಸಹಾಯ ಹಾಗೂ ಹೆಜಮಾಡಿ ಯುವವಾಹಿನಿ ಸದಸ್ಯರ ಶ್ರಮದ ಫಲವಾಗಿ ನಮ್ಮ ಮನೆ ನಿರ್ಮಾಣ ಯೋಜನೆ ಯಶಸ್ವಿಯಾಗಿದೆ ಎಂದು ಹೆಜಮಾಡಿ ಯುವವಾಹಿನಿ ಅಧ್ಯಕ್ಷರಾದ ಲೋಕೇಶ್ ಅಮೀನ್ ತಿಳಿಸಿದರು. […]
Read More