
31-07-2016, 6:03 AM
ಪ್ರವಾಸಾನುಭವ ’ದೇಶ ಸುತ್ತಿ ನೋಡು, ಕೋಶ ಓದಿ ನೋಡು ಎಂಬ ತತ್ವವನ್ನಿರಿಸಿಕೊಂಡು ಹಲವು ಚಿಕ್ಕ-ದೊಡ್ಡ ಪ್ರವಾಸಗಳನ್ನು ಏರ್ಪಡಿಸುತ್ತ ಬಂದಿರುವ ಯುವವಾಹಿನಿ ಮಂಗಳೂರು ಘಟಕವು ಈ ಬಾರಿ ದಕ್ಷಿಣ ಭಾರತ ಪ್ರವಾಸವನ್ನು ಏರ್ಪಡಿಸಿತ್ತು. 2014 ರಲ್ಲಿ ಉತ್ತರ ಭಾರತ ಮತ್ತು ನೇಪಾಳದ 10 ದಿನಗಳ ಪ್ರವಾಸದಲ್ಲಿ ಭಾಗಿಯಾಗಿದ್ದ ನಾನು 2015 ರ ಉತ್ತರ ಭಾರತ ಪ್ರವಾಸ (ವಾರಣಾಸಿ, ಹೃಷಿಕೇಶ, ಹರಿದ್ವಾರ, ವೈಷ್ಣೋದೇವಿ, ದೆಹಲಿ, ಅಮೃತಸರ್, ವಾಘಾ ಬೋರ್ಡರ್ ಇತ್ಯಾದಿ ಸ್ಥಳಗಳಿಗೆ)ಕ್ಕೆ ಹೋಗಲಾಗಲಿಲ್ಲ. ಈ ಬಾರಿ ದಕ್ಷಿಣ ಭಾರತದ ತಮಿಳುನಾಡು ಮತ್ತು ಕೇರಳದ ಆಯ್ದ […]
Read More

31-07-2016, 3:59 AM
ಬಂಟ್ವಾಳ ಕಸ್ಬಾ ಗ್ರಾಮದ ಭೋಜ ಪೂಜಾರಿ ಮತ್ತು ವನಿತಾ ದಂಪತಿಗಳ ಸುಪುತ್ರ ಶಶಾಂತ್ ಬಿ. ಈ ಬಾರಿಯ ಎಸ್ಎಸ್ಎಲ್ಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡು ಶೈಕ್ಷಣಿಕ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಗಣಿತ ಮತ್ತು ಸಂಸ್ಕೃತದಲ್ಲಿ 100 ಅಂಕಗಳನ್ನು ಪಡೆದು 625 ಕ್ಕೆ 614 (98.24%) ಅಂಕ ಗಳಿಸಿರುವುದು ಶ್ಲಾಘನೀಯ. ಬಿಡುವಿನ ವೇಳೆಯಲ್ಲಿ ತಾನೇ ದುಡಿದು ಶಾಲಾ ಶುಲ್ಕವನ್ನು ಭರಿಸಿ ಹೆತ್ತವರಿಗೆ ಹೊರೆಯಾಗದೆ ಎಲ್ಲರ ಪ್ರೀತಿ ಸಂಪಾದಿಸಿದ್ದಾರೆ. ತಾನೇ ನಾಟಕ ರಚಿಸಿ, ಅಭಿನಯಿಸಿದ ಉತ್ತಮ ರಂಗ ಕಲಾವಿದ. ಶಾಲಾ ದಿನಗಳಲ್ಲೇ ನಾಯಕತ್ವ ಗುಣ […]
Read More

31-07-2016, 3:55 AM
ಶ್ರೀಮತಿ ಭಾರತಿ ಹಾಗೂ ಶ್ರೀ ಉಮಾನಾಥ ದಂಪತಿಗಳಿಗೆ ಉತ್ತಮ ಹೆಮ್ಮೆ ಪಡತಕ್ಕೆ ಸಾಧನೆಯ ಕುವರಿ ನಿಧಿಶ್ರೀಯ ಬಗ್ಗೆ ಮತ್ತು ಅವಳ ಸಾಧನೆಯ ಬಗ್ಗೆ ಅರಿವಿರಲಿಕ್ಕಿಲ್ಲ ತಮ್ಮ ಜೀವನದ ಹಾದಿಯಲ್ಲಿ ತಮ್ಮ ಮಗಳು ಒಂದುದಿನ ಸ್ವಪ್ರತಿಭೆಯಿಂದ ಜನ ಮನ್ನಣೆಯನ್ನು ಗಳಿಸಿ ಕೊಡಲಿದ್ದಾಳೆ ಎಂಬ ಅರಿವಿರಲಿಕ್ಕಿಲ್ಲ. ಕಾರಣ ಅವರಿದ್ದದ್ದು 62 ತೋಕೂರು ಜೋಕಟ್ಟೆ ಎಂಬ ಸಣ್ಣ ಊರಿನಲ್ಲಿ. ಸಾಮಾನ್ಯವಾಗಿ ಅತ್ಯಂತ ಗ್ರಾಮೀಣ ಪ್ರದೇಶದಲ್ಲಿ ಬೆಳೆದವರಿಗೆ ಬದುಕಿನ ಸೂಕ್ಷತೆಗಳ ಅರಿವಿರುತ್ತದೆ. ಜೀವನದ ಕಷ್ಟ ಕಾರ್ಪಣ್ಯಗಳ ಸರಿಯಾದ ದೃಷ್ಟಿಕೋನ ಇರುತ್ತದೆ ಇವರ ಬಾಳಿನಲ್ಲೂ ನಡೆದದ್ದು […]
Read More

24-07-2016, 9:18 AM
ವಿದ್ಯೆ, ಉದ್ಯೋಗ ಮತ್ತು ಸಂಪರ್ಕವೆಂಬ ನಾರಾಯಣ ಗುರುಗಳ ತತ್ವದಂತೆ ಯುವವಾಹಿನಿ ಸದಸ್ಯರು ಕೆಲಸ ಮಾಡುತ್ತಿದ್ದು ಜನರ ಅನಿಸಿಕೆ ಹಾಗೂ ನಿರೀಕ್ಷೆಯನ್ನು ಹುಸಿಗೊಳಿಸಲಿಲ್ಲ. ಯುವವಾಹಿನಿ ಯಂತೆ ಪ್ರತಿಯೊಂದು ಸಂಘಟನೆಗಳು ಒಗ್ಗಟ್ಟಾಗಿ ಕೆಲಸ ಮಾಡಿದಾಗ ಸಂಘಟನೆಗಳಿಗೆ ನಿಜವಾದ ಅರ್ಥ ಹಾಗೂ ಬೆಲೆ ಸಿಗುತ್ತದೆ ಎಂದು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ಸಂತೋಷ್ ಕುಮಾರ್ರವರು ಹೇಳಿದರು. ಅವರು ಜು. 24 ರಂದು ಬಪ್ಪಳಿಗೆ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆದ 2016-17 ನೇ ಸಾಲಿನ ಯುವವಾಹಿನಿ ಪುತ್ತೂರು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ […]
Read More

24-07-2016, 5:56 AM
ಯುವವಾಹಿನಿ(ರಿ) ಹಳೆಯಂಗಡಿ ವತಿಯಿಂದ ದಿನಾಂಕ 24-7-2016 ರಂದು ಆಟಿದ ಆಯನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕೋಟಿ ಚೆನ್ನಯರು ಆರಾಧಿಸಿದ ಕೆಮ್ಮಲೆಜೆಯ ನಾಗಬ್ರಹ್ಮ ಗುಡಿಯ ಆಕರ್ಷಕ ರಂಗ ವಿನ್ಯಾಸದ ವೇದಿಯಲ್ಲಿ ಹಳೆಯಂಗಡಿ ಯುವವಾಹಿನಿಯ ಅವಳಿ ಸದಸ್ಯರ ಕೋಟಿ-ಚೆನ್ನಯ ಕಿರು ರೂಪಕದೊಂದಿಗೆ ಕಾರ್ಯಕ್ರಮ ಆರಂಭ. ದ.ಕ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಕಸ್ತೂರಿ ಪಂಜ ಹಾಗೂ ತುಳು ಚಿತ್ರನಟ, ರಂಗಭೂಮಿ ಕಲಾವಿದ ಶ್ರೀ ಅರವಿಂದ ಬೋಳಾರ್ ಇವರು ನಾಗಬ್ರಹ್ಮ ಗುಡಿಯ ಜೋಡು ನಂದಾ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಅತ್ಯಂತ ವಿಶಿಷ್ಠವಾಗಿ […]
Read More

18-07-2016, 8:18 AM
ಘಟಕದ ವತಿಯಿಂದ ತಾ. 16-7-2016 ರಂದು ಕೋಡಿಕಲ್ ದ.ಕ. ಜಿಲ್ಲಾ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಆಚರಣೆ, ಸಸಿ ವಿತರಣೆ ಹಾಗೂ ಶಾಲೆಯ 30 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ಜರಗಿರುತ್ತದೆ. ಕಾರ್ಯಕ್ರಮವನ್ನು ಕೋಡಿಕಲ್ ಬಿಲ್ಲವ ಸಂಘ ಇದರ ಅಧ್ಯಕ್ಷೆ ಶ್ರೀಮತಿ ಲೋಲಾಕ್ಷಿ ದೇವೇಂದ್ರ ಕೋಟ್ಯಾನ್ರವರು ಉದ್ಘಾಟಿಸಿದರು. ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಯ ಜಯಪ್ಪ ಅದ್ಯಪಾಡಿ, ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ವೀಣಾ ಶೆಟ್ಟಿ, ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ವಿದ್ಯಾ ರಾಕೇಶ್, ಘಟಕದ ಸಲಹೆಗಾರರ ಸಾಧು ಪೂಜಾರಿ ಹಾಗೂ […]
Read More

10-07-2016, 7:36 AM
ಯುವವಾಹಿನಿ (ರಿ) ಅಡ್ವೆ ಘಟಕದ ಪದಗ್ರಹಣ ಕಾರ್ಯಕ್ರಮವು ದಿನಾಂಕ 10-7-2016 ರಂದು ಅಡ್ವೆ ಆನಂದಿ ಸಭಾಭವನದಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಸಂತೋಷ್ ಕುಮಾರ್ ವಹಿಸಿದ್ದರು. ಡಾ. ಎನ್.ಟಿ. ಅಂಚನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. 2016-17 ನೇ ಸಾಲಿನ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್, ಕಾರ್ಯದರ್ಶಿಯಾಗಿ ಶಶಿಧರ್ ಟಿ. ಪೂಜಾರಿ ಆಯ್ಕೆಗೊಂಡರು. ಪದಾಧಿಕಾರಿಗಳಿಗೆ ಪ್ರಮಾಣ ವಚನವನ್ನು ಕೇಂದ್ರ ಸಮಿತಿ ಉಪಾಧ್ಯಕ್ಷ ಪದ್ಮನಾಭ ಮರೋಳಿ ಭೋದಿಸಿ ನೂತನ ತಂಡಕ್ಕೆ ಶುಭ ಹಾರೈಸಿದರು. ಅಲ್ಲದೇ ಅಂದು ಪರಿಸರದ ಸುತ್ತಮುತ್ತಲಿನ ಶಾಲಾ ಕಾಲೇಜುಗಳಲ್ಲಿ […]
Read More

21-06-2016, 11:43 AM
ಪೊಲೀಸ್ ಇಲಾಖೆಯಲ್ಲಿನ ತಮ್ಮ ವಿಶೇಷ ಸೇವೆಗಾಗಿ 2015-16 ನೇ ಸಾಲಿನ ಮುಖ್ಯ ಮಂತ್ರಿಗಳ ಚಿನ್ನದ ಪದಕ ಪಡೆದ ಪ್ರಾಮಾಣಿಕ, ನಿಷ್ಠಾವಂತ ದಕ್ಷ ಪೊಲೀಸ್ ಅಧಿಕಾರಿ ಶಾಂತಾರಾಮ್ ಕುಂದರ್ ಇವರನ್ನು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಸಂತೋಷ್ ಕುಮಾರ್, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ. ಸೇಸಪ್ಪ ಕೋಟ್ಯಾನ್, ಯುವವಾಹಿನಿ ಸಲಹೆಗಾರರಾದ ಬಿ. ತಮ್ಮಯ, ಅಣ್ಣು ಪೂಜಾರಿ, ಅಧ್ಯಕ್ಷರಾದ ರಾಜೇಶ್ ಸುವರ್ಣ, ಕೋಶಾಧಿಕಾರಿ […]
Read More

09-08-2015, 7:35 AM
ಯುವವಾಹಿನಿ ಕೇಂದ್ರ ಸಮಿತಿಯ 2015-16 ನೇ ಸಾಲಿನ ಪದಗ್ರಹಣ ಸಮಾರಂಭವು ಬಂಟ್ವಾಳ ಮೆಲ್ಕಾರಿನ ಬಿರ್ವ ಆಡಿಟೋರಿಯಂ ಇಲ್ಲಿ 09.08.2015 ರಂದು ಜರಗಿತು. ಚುನಾವಣಾಧಿಕಾರಿ ರವಿಚಂದ್ರ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಭೋದಿಸಿದರು. ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಉಡುಪಿ ನೇತೃತ್ವದ ತಂಡವು ಪ್ರಮಾಣ ವಚನ ಸ್ವೀಕರಿಸಿತು.
Read More

09-08-2015, 7:30 AM
ಆಗಸ್ಟ್ 9, 2015 ರಂದು ಮೆಲ್ಕಾರ್ ಬಿರ್ವ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 28ನೇ ವಾರ್ಷಿಕ ಸಮಾವೇಶದಲ್ಲಿ ಬಿಲ್ಲವಾನ್ ದುಬೈ ಮತ್ತು ನಾರ್ಥನ್ ಎಮಿರೇಟ್ಸ್ ಸಂಸ್ಥೆಗೆ ಸಾಮಾಜಿಕ ಕ್ಷೇತ್ರದ ಸಮಗ್ರ ಸಾಧನೆಯನ್ನು ಗುರುತಿಸಿ ಯುವವಾಹಿನಿ ಸಾಧನಾ ಶ್ರೇಷ್ಟ ಪ್ರಶಸ್ತಿ – 2015 ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ. ಸೇಸಪ್ಪ ಕೋಟ್ಯಾನ್, ಮುಂಬಯಿ ಬಿಲ್ಲವರ ಅಸೋಸಿಯೇಶನ್ ಅಧ್ಯಕ್ಷರಾದ ನಿತ್ಯಾನಂದ ಡಿ. ಕೊಟ್ಯಾನ್, ದ.ಕ.ಜಿಲ್ಲಾ ಮೂರ್ತೆದಾರರ ಮಹಾ ಮಂಡಲದ ಅಧ್ಯಕ್ಷರಾದ […]
Read More