Yuvavahini

ಪದಗ್ರಹಣ

ಪದಗ್ರಹಣ ಸಮಾರಂಭ-ಯುವವಾಹಿನಿ (ರಿ.)ಗ್ರಾಮ ಚಾವಡಿ ಕೊಣಾಜೆ ಘಟಕ

ದಿನಾಂಕ: 06-07-2025 ನೇ ಆದಿತ್ಯವಾರ ಬ್ರಹ್ಮಶ್ರೀ ನಾರಾಯಣಗುರು ಸಭಾ ಭವನ,ಗ್ರಾಮ ಚಾವಡಿ ಕೊಣಾಜೆಯಲ್ಲಿ ನೆರವೇರಿತು.ಪ್ರಾರ್ಥನೆ ಯೊಂದಿಗೆ ಕಾರ್ಯಕ್ರಮ ಆರಂಭವಾಯಿತು..ಘಟಕದ ಒಂದನೇ ಉಪಾಧ್ಯಕ್ಷರು ವಿಜೇತ್ ಪಜೀರು ಪ್ರಾಸ್ತವಿಕ ಭಾಷಣದೊಂದಿಗೆ ಬಂದ ಎಲ್ಲಾ ಅತಿಥಿಗಳನ್ನು ಸ್ವಾಗತಿಸಿದರು, ಈ ಕಾರ್ಯಕ್ರಮದ ಉದ್ಗಾಟನೆಯನ್ನು ಬ್ರಹ್ಮಶ್ರೀ ನಾರಾಯಣ ಗುರುಸೇವಾ ಸಂಘ(ರಿ) ಗ್ರಾಮಚಾವಡಿಯ ಅಧ್ಯಕ್ಷರು ಆದ ಶ್ರೀ ರವೀಂದ್ರ ಬಂಗೇರ ಕೊಣಾಜೆ ಅವರು ದೀಪಾ ಬೆಳಗುವುದರೊಂದಿಗೆ ನೆರವೇರಿಸಿದರು..ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಶ್ರೀ ಹರೀಶ್ ಪೂಜಾರಿ ಕೊಣಾಜೆ ವಹಿಸಿದ್ದರು.ಯುವ ವಾಹಿನಿ (ರಿ.)ಕೇಂದ್ರ ಸಮಿತಿ ಮಂಗಳೂರು ಇದರ […]

Read More

2025-26 ನೇ ಸಾಲಿನ ಪದಗ್ರಹಣ ಸಮಾರಂಭ-ಯುವವಾಹಿನಿ (ರಿ.) ಪಡುಬಿದ್ರಿ ಘಟಕ

2025-26 ನೇ ಸಾಲಿನ ಪದಗ್ರಹಣ ಸಮಾರಂಭವು ದಿನಾಂಕ 24/8/25 ರ ಆದಿತ್ಯವಾರ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮವನ್ನು ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕಣ್ಣಂಗಾರು ಇದರ ಅಧ್ಯಕ್ಷರಾದ ಶ್ರೀ ಸೀನ ಪೂಜಾರಿಯವರು ಉದ್ಘಾಟಿಸಿ ಮಾತನಾಡುತ್ತಾ ಪಡುಬಿದ್ರಿ ಘಟಕವು ಸಾಮಾಜಿಕ ಸಾಂಸ್ಕೃತಿಕ ಕಾರ್ಯಕ್ರಮದ ಜೊತೆಗೆ ವಿದ್ಯೆಗೂ ಮಹತ್ವ ನೀಡುತ್ತಿದೆ ಯುವ ಜನರಿಗೆ ವ್ಯಕ್ತಿತ್ವ ವಿಕಸನಗೊಳಿಸಲು ಯುವವಾಹಿನಿ ಯಂತಹ ಸಂಸ್ಥೆಗಳು ಮಾದರಿಯಾಗಿವೆ ಎಂದರು. ಪಡುಬಿದ್ರೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ವೈ ಸುಧೀರ್ […]

Read More

2025 26 ನೇ ಸಾಲಿನ ಪದಗ್ರಹಣ ಸಮಾರಂಭ-ಯುವವಾಹಿನಿ (ರಿ) ಪಡುಬಿದ್ರಿ ಘಟಕ

ಘಟಕದ 2025 26 ನೇ ಸಾಲಿನ ಪದಗ್ರಹಣ ಸಮಾರಂಭವು ದಿನಾಂಕ 24/8/ 25ರ ಆದಿತ್ಯವಾರ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದ ಅಧ್ಯಕ್ಷರಾದ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕಣ್ಣಂಗಾರು ಸೀನ ಪೂಜಾರಿಯವರು ಮಾತನಾಡಿ ಪಡುಬಿದ್ರಿ ಘಟಕವು ಸಾಮಾಜಿಕ ಸಾಂಸ್ಕೃತಿಕ ಕಾರ್ಯಕ್ರಮದ ಜೊತೆಗೆ ವಿದ್ಯೆಗೂ ಮಹತ್ವ ನೀಡುತ್ತಿದೆ ಯುವ ಜನರಿಗೆ ವ್ಯಕ್ತಿತ್ವ ವಿಕಸನಗೊಳಿಸಲು ಯುವವಾಹಿನಿ ಅಂತಹ ಸಂಸ್ಥೆಗಳು ಮಾದರಿಯಾಗಿವೆ ಎಂದರು ಪಡುಬಿದ್ರೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ವೈ […]

Read More

ಪದಗ್ರಹಣ ಕಾರ್ಯಕ್ರಮ -ಯುವವಾಹಿನಿ (ರಿ) ಕೆಂಜಾರು- ಕರಂಬಾರು ಘಟಕ

ಯುವವಾಹಿನಿ (ರಿ) ಕೆಂಜಾರು- ಕರಂಬಾರು ಘಟಕ ಪದಗ್ರಹಣ ಕಾರ್ಯಕ್ರಮ 09-03-2025 ಆದಿತ್ಯವಾರ ಶ್ರೀ ದೇವಿ ಭಜನಾಮಂದಿರ ಬಜಪೆ ಶ್ರೀ ನಾರಾಯಣ ಗುರು ಸಮಾಜ ಮಂದಿರದ ಅಧ್ಯಕ್ಷರಾದ ಶ್ರೀಯುತ ಶಿವರಾಮ ಪೂಜಾರಿಯವರು ಶ್ರೀ ನಾರಾಯಣ ಗುರು ಸ್ವಾಮಿಯವರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆಯಿತ್ತರು.ಶ್ರೀಮತಿ ಪ್ರತಿಮಾ ಪುನಿತ್ ಅವರು ಪ್ರಾರ್ಥನೆ ಮಾಡಿದರು. ಘಟಕದ ಅಧ್ಯಕ್ಷರಾದ ವಿನೋದ್ ಕುಮಾರ್ ಅವರು ಸ್ವಾಗತಿಸಿದರು. ಶ್ರೀಯುತ ಮಂಜು ಪೂಜಾರಿ ಭಂಡಾರಮನೆ ಇವರು ದೀಪ ಬೇಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರಿಸಿದರು.ಘಟಕದ ಮಾಜಿ […]

Read More

ಯುವವಾಹಿನಿ (ರಿ.) ಸುರತ್ಕಲ್ ಘಟಕದ ಪದಗ್ರಹಣ

ಯುವವಾಹಿನಿ (ರಿ) ಸುರತ್ಕಲ್ ಘಟಕದ 2025 -26 ನೇ ಸಾಲಿನ ಪದಗ್ರಹಣ ‘ಸಾರಥ್ಯ- 2025’ ಸಮಾರಂಭವು ದಿನಾಂಕ 19.01.2025 ರಂದು ಬ್ರಹ್ಮ ಶ್ರೀ ನಾರಾಯಣ ಗುರು ಸಭಾಗೃಹ ಕುಳಾಯಿಯಲ್ಲಿ ನಡೆಯಿತು. ಜಗದ್ಗುರು ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೂಜೆಯ ಮುಖೇನಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಅನಂತರ ಘಟಕದ ಸದಸ್ಯರ ನೃತ್ಯ ವೈವಿದ್ಯ ನಡೆಯಿತು. ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸ೦ಘ ಕುಳಾಯಿ ಯ ಮಾಜಿ ಉಪಾಧ್ಯಕ್ಷರಾದ ಚಂದ್ರಹಾಸ ಮೂಡುಬೆಟ್ಟು ಉದ್ಘಾಟಿಸಿ ಶುಭಹಾರೈಸಿದರು. ಮುಖ್ಯ ಅತಿಥಿಗಳಾದ ಕರ್ನಾಟಕ ರಾಜ್ಯ […]

Read More

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ಸಾಧನೆ ಮೆಚ್ಚುವಂತದ್ದು : ಪದ್ಮನಾಭ ಸಾಲಿಯನ್

ಮೂಡುಬಿದಿರೆ : ಯುವವಾಹಿನಿ (ರಿ) ಮೂಡುಬಿದಿರೆ ಘಟಕದ 2024-25 ನೇ ಸಾಲಿನ ತಂಡದ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಕಾರ್ಯಕ್ರಮವು ಮೂಡುಬಿದಿರೆಯ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ 29-12-2024 ರ ಅಪರಾಹ್ನ ಜರಗಿತು. ಮೂಡುಬಿದಿರೆ ಘಟಕವು ಆರಂಭವಾದಾಗಿನಿಂದ ಇದರ ಪ್ರತಿಯೊಂದು ಕಾರ್ಯಕ್ರಮವನ್ನು ನೋಡುವ ಅವಕಾಶ ನನಗೆ ಸಿಕ್ಕಿದೆ. ಇದುವರೆಗೆ ಘಟಕದ ಚುಕ್ಕಾಣಿಯನ್ನು ಎತ್ತಿ ಹಿಡಿದ ಆರು ಅಧ್ಯಕ್ಷರುಗಳು ಕೂಡ ಘಟಕದ ಬೆಳವಣಿಗೆಗೆ ಸಾಕ್ಷಿಯಾಗಿದ್ದಾರೆ ಎಂದು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ನಿವೃತ್ತ ಬ್ಯಾಂಕ್ ಅಧಿಕಾರಿ ಶ್ರೀ […]

Read More

ಯುವ ಸಮುದಾಯವನ್ನು ಸುದೃಢವಾಗಿಸುವಲ್ಲಿ ಯುವವಾಹಿನಿಯ ಪಾತ್ರ ಅಪಾರ -ಬಹುಭಾಷಾ ಸಾಹಿತಿ ಶ್ರೀ ಮುದ್ದು ಮೂಡುಬೆಳ್ಳೆ

ಪಣಂಬೂರು – ಕುಳಾಯಿ: ಯುವವಾಹಿನಿ (ರಿ) ಪಣಂಬೂರು- ಕುಳಾಯಿ ಘಟಕದ ನೂತನ ಕಾರ್ಯಕಾರಿ ಸಮಿತಿಯಪದಗ್ರಹಣ ಸಮಾರಂಭ 2024-25 ಮತ್ತು ಪ್ರತಿಭಾ ಪುರಸ್ಕಾರ, ವಿದ್ಯಾನಿಧಿ ವಿತರಣಾ ಕಾರ್ಯಕ್ರಮವು ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಕುಳಾಯಿಯಲ್ಲಿ ಭಾನುವಾರ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ) ಪಣಂಬೂರು – ಕುಳಾಯಿ ಘಟಕದ ಅಧ್ಯಕ್ಷೆಶ್ರೀಮತಿ ಮನೀಷಾರೂಪೇಶ್ವಹಿಸಿದ್ದರು. ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಕುಳಾಯಿ ಇದರ ಅಧ್ಯಕ್ಷರಾದ ಶ್ರೀ ಕೇಶವ ಸುವರ್ಣ ಕಾರ್ಯಕ್ರಮವನ್ನು ಉದ್ಘಾಟಿಸಿ, ಕರ್ನಾಟಕ […]

Read More

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ : ಉಮಾನಾಥ ಕೋಟ್ಯಾನ್ ಯುವವಾಹಿನಿಯ ಸಮಾವೇಶದ ಪ್ರತಿ ಕ್ಷಣವನ್ನು ಆನಂದಿಸಿದ್ದೇನೆ, ಶಿಸ್ತು, ಅಚ್ಚುಕಟ್ಟುತನ, ಹೊಸತನ ಇತರರಿಗೆ ಮಾದರಿಯಾಗಿದೆ ಎಂದು ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಮುಲ್ಕಿ – ಮೂಡುಬಿದಿರೆ ಕ್ಷೇತ್ರದ ಶಾಸಕ […]

Read More

2025ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ವಿದ್ಯಾರ್ಥಿ ವೇತನ ಕಾರ್ಯಕ್ರಮ

ಉಪ್ಪಿನಂಗಡಿ : ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 21.12.2024ನೇ ಶನಿವಾರ, ಅಪರಾಹ್ನ ಗಂಟೆ 6.30ಕ್ಕೆ ಉಪ್ಪಿನಂಗಡಿ ಹೆಚ್ ಎಂ ಆಡಿಟೋರಿಯಂ ನಲ್ಲಿ ಘಟಕದ ಅಧ್ಯಕ್ಷರಾದ ಶ್ರೀ ಸೋಮಸುಂದರ್ ಕೊಡಿಪ್ಪಾನ ರವರ ಅಧ್ಯಕ್ಷತೆಯಲ್ಲಿ ಜರುಗಿತು. ಘಟಕದ ಮಾಜಿ ಅಧ್ಯಕ್ಷರಾದ ಡಾ.ಸದಾನಂದ ಕುಂದರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಕೆಡೆಂಜಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ, ಸಾಮಾಜಿಕ ಕಳಕಳಿಯ ಸಂಘಟನೆ ಯೊಂದಿಗೆ […]

Read More

ಯುವವಾಹಿನಿ (ರಿ) ಪುತ್ತೂರು ಘಟಕ : ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಪುತ್ತೂರು : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ಪುತ್ತೂರು ಘಟಕದ 2024-25 ನೇ ಸಾಲಿನ ಪದಗ್ರಹಣ ಸಮಾರಂಭ ಕಾರ್ಯಕ್ರಮವು ದಿನಾಂಕ 14-12-2024 ನೇ ಶನಿವಾರ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನ ಬಪ್ಪಳಿಗೆ, ಪುತ್ತೂರು ಇಲ್ಲಿ ನಡೆಯಿತು. ಕಾರ್ಯಕ್ರಮವು ನಾರಾಯಣ ಗುರುಗಳ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಸ್ವಾಗತವನ್ನು ಘಟಕದ ಉಪಾಧ್ಯಕ್ಷರಾದ ಅಣ್ಣಿ ಪೂಜಾರಿರವರು ನೆರವೇರಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಕೆಡೆಂಜಿ ನೆರವೇರಿಸಿದರು. ಸಭಾಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಜಯರಾಮ.ಬಿ.ಎನ್ ವಹಿಸಿದ್ದರು. ಮುಖ್ಯ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜುಲೈ 21 ಬೆಳಗ್ಗೆ ಗಂಟೆ 10.30ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಗಾಣದಪಡ್ಪು, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!