11-08-2019, 4:06 PM
ಪುತ್ತೂರು : ಯುವವಾಹಿನಿ ಕೇಂದ್ರ ಸಮಿತಿಯ 2019-20ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಜರುಗಿತು. ಯುವವಾಹಿನಿ ಕೇಂದ್ರ ಸಮಿತಿಯ 33ನೇ ನೂತನ ಅಧ್ಯಕ್ಷರಾಗಿ ನರೇಶ್ ಕುಮಾರ್ ಸಸಿಹಿತ್ಲು, ಪ್ರಥಮ ಉಪಾಧ್ಯಕ್ಷರಾಗಿ ಡಾ.ರಾಜಾರಾಂ ಕೆ.ಬಿ, 2ನೇ ಉಪಾಧ್ಯಕ್ಷರಾಗಿ ಉದಯ ಅಮೀನ್ ಮಟ್ಟು ಮುಲ್ಕಿ , ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಎಸ್.ಆರ್ […]
Read More
14-07-2019, 2:27 PM
ಮೂಡಿಗೆರೆ : ಯುವವಾಹಿನಿಯ 35ನೇ ನೂತನ ಘಟಕ ಯುವವಾಹಿನಿ(ರಿ) ಮೂಡಿಗೆರೆ ಘಟಕ ಉದ್ಘಾಟನೆಸಮಾರಂಭವು ದಿನಾಂಕ 14.07.2019 ರಂದು ಮೂಡಿಗೆರೆ ಚರ್ಚ್ ಸಭಾಂಗಣದಲ್ಲಿ ನಡೆಯಿತು. ಯುವವಾಹಿನಿ ಸಂಸ್ಥೆಯು ಯುವಜನರ ಪ್ರೇರಕ ಶಕ್ತಿಯಾಗಿದೆ, ಮೂಡಿಗೆರೆಯಲ್ಲಿ ಯುವವಾಹಿನಿ ಘಟಕ ಸ್ಥಾಪನೆಯಾಗಿರುವುದು ಅತ್ಯಂತ ಸಂತಸ ತಂದಿದೆ ಎಂದು ಮೂಡಿಗೆರೆ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷರಾದ ಪ್ರವೀಣ್ ಪೂಜಾರಿ ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ […]
Read More
29-06-2019, 2:19 PM
ಉಪ್ಪಿನಂಗಡಿ : ಬೃಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶದಂತೆ ವಿದ್ಯೆಯಿಂದ ಸ್ವತಂತ್ರರಾಗಿ ಸಂಘಟನೆಯಿಂದ ಬಲಯುತರಾಗಿ ಎಂಬ ಸಂದೇಶವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ರೂಪುಗೊಳ್ಳುದರ ಜೊತೆಗೆ ಬಿಲ್ಲವ ಯುವಕರು ಸಮಾಜಕ್ಕೆ ಶಕ್ತಿ ತುಂಬುವ ಕೆಲಸ ಮಾಡಬೇಕಿದೆ ಎಂದು ಮೂಲ್ಕಿ- ಮೂಡಬಿದಿರೆಯ ಶಾಸಕರಾದ ಉಮನಾಥ ಕೋಟ್ಯಾನ್ ಇವರು ತಿಳಿಸಿದರು. ಅವರು ದಿನಾಂಕ 29.06.2019 ರಂದು ಉಪ್ಪಿನಂಗಡಿಯ ಸಂಘಮ ಕೃಪಾದಲ್ಲಿ ನಡೆದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಉಪ್ಪಿನಂಗಡಿ ಘಟಕದ 2019-20ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ […]
Read More
15-06-2019, 4:49 PM
ಕಡಬ : ಜಾತಿ ಸಂಘಟನೆಗಳು ಸಮಾಜದ ಅಭಿವೃದ್ಧಿಗೆ ಪೂರಕವಾಗಿರಬೇಕೇ ಹೊರತು ಸಮಾಜವನ್ನು ಒಡೆಯಬಾರದು.ಸಮಾಜಮುಖಿ ಚಿಂತನೆಗಳಿಂದ ಸದೃಢ ರಾಷ್ಟ್ರ ನಿರ್ಮಾಣದ ಗುರಿಯೊಂದಿಗೆ ಜಾತಿ ಸಂಘಟನೆಗಳು ಕಾರ್ಯ ನಿರ್ವಹಿಸಬೇಕು ಎಂದು ಮಂಗಳೂರು ಆಕಾಶವಾಣಿಯ ಕಾರ್ಯಕ್ರಮ ನಿರ್ವಹಣಾಧಿಕಾರಿ ಡಾ.ಸದಾನಂದ ಪೆರ್ಲ ಹೇಳಿದರು. ಅವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿಯ ಕಡಬ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪ್ರಧಾನ ಭಾಷಣ ಮಾಡಿದರು. ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಮತ್ತು ಸಂದೇಶಗಳು ಜಾಗತಿಕ ಮನ್ನಣೆ ಪಡೆದಿವೆ. ಅವರ ಆದರ್ಶ ಮತ್ತು ತತ್ವದಡಿ […]
Read More
02-06-2019, 9:13 AM
ಎಸ್ ಎಸ್ ಎಲ್ ಸಿ, ಪಿಯುಸಿ ಸಾಧಕರಿಗೆ ಪುರಸ್ಕಾರ 2019 ನೇ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 90 ಕ್ಕಿಂತ ಹೆಚ್ಚು ಅಂಕ ಗಳಿಸಿದ 34 ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ತವರುಮನೆಯ ಸನ್ಮಾನ : ಬಿ.ತಮ್ಮಯ ಯುವವಾಹಿನಿ ಸಲಹೆಗಾರ, ತುಳುಲಿಪಿ ಶಿಕ್ಷಕ, ಸಾಹಿತಿ ಬಿ.ತಮ್ಮಯ ಅವರ ಸಾಮಾಜಿಕ ಹಾಗೂ ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಸನ್ಮಾನಿಸಲಾಯಿತು, ಯುವವಾಹಿನಿ ಬಂಟ್ವಾಳ ಘಟಕದ ಸನ್ಮಾನವು ತವರುಮನೆಯ ಸನ್ಮಾನದಂತೆ ಅತ್ಯಂತ ಶ್ರೇಷ್ಠವಾದ ಸನ್ಮಾನ ಈ ಸನ್ಮಾನವು ಅಚ್ಚಳಿಯದೆ ನೆನಪಿನ […]
Read More
12-05-2019, 3:05 PM
ಪಣಂಬೂರು : ನಾಳಿನ ಸುಂದರ ಭವಿಷ್ಯಕ್ಕಾಗಿ ವಿದ್ಯೆಗೆ ಪ್ರೊತ್ಸಾಹ ಅಗತ್ಯ. ಈ ಮೂಲಕ ಯುವವಾಹಿನಿ ಬ್ರಹತ್ ಶಕ್ತಿಯಾಗಿ ರೂಪುಗೊಂಡಿದೆ. ಯುವವಾಹಿನಿ (ರಿ) ಪಣಂಬೂರು- ಕುಳಾಯಿ ಘಟಕವು ಈ ನಿಟ್ಟಿನಲ್ಲಿ ಚೆನ್ನಾಗಿ ಕೆಲಸ ಮಾಡಿದೆ ಎಂದು ಮಂಗಳೂರು ವಿಶ್ವವಿಧ್ಯಾನಿಲಯದ ನಿವೃತ್ತ ಉಪಕುಲಸಚಿವ ಪ್ರಭಾಕರ ನೀರುಮಾರ್ಗ ಹೇಳಿದರು. ದಿನಾಂಕ 12.05.2019ರಂದು ನವ ಮಂಗಳೂರು ಬಂದರು ಮಂಡಳಿ, ಪಣಂಬೂರು ಇದರ ಸಭಾಂಗಣದಲ್ಲಿ ಯುವವಾಹಿನಿ (ರಿ) ಪಣಂಬೂರು – ಕುಳಾಯಿ ಘಟಕದ 2019-20ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ […]
Read More
12-05-2019, 7:53 AM
ಉಡುಪಿ : ಯುವವಾಹಿನಿ ಉಡುಪಿ ಘಟಕ ಪದಗ್ರಹಣ ಸಮಾರಂಭವು ದಿನಾಂಕ 12/05/2019 ರಂದು ಘಟಕದ ಸಭಾಂಗಣದಲ್ಲಿ ನಡೆಯಿತು. ಘಟಕದ ಅಧ್ಯಕ್ಷರಾದ ಅಶೋಕ್ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡಿತು. ಮುಖ್ಯ ಅತಿಥಿಯಾಗಿ ಸಂಜೀವ ಟಿ ಕರ್ಕೇರಾ ( ನಿವ್ರೃತ್ತ ಮಹಾಪ್ರಬಂಧಕರು ಮತ್ತು ಸಲಹೆಗಾರರು , ಮಂಗಳೂರು ವಿಶೇಷ ಆರ್ಥಿಕ ವಲಯ, ಮಂಗಳೂರು ). ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲು , ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರೂ , ಘಟಕದ ಸಲಹೆಗಾರರೂ ಅದ ರವಿರಾಜ್ ಹಾಗೂ ಸಂತೋಷ್ […]
Read More
05-05-2019, 5:06 PM
ಕೂಳೂರು : ಯುವವಾಹಿನಿ ಎಂಬ ಐದು ಅಕ್ಷರದಲ್ಲಿ ಒಂದು ಆಕರ್ಷಣೆ ಇದೆ, ಶಕ್ತಿ ಇದೆ, ಭರವಸೆ ಇದೆ. ಆರೋಗ್ಯಕರವಾದ ಸಂಪರ್ಕವೇ ಸಂಘಟನೆಯ ಸಾಧನ. ವಾಹಿನಿ ಅಂದರೆ ನಿರಂತರವಾದ ಹರಿವು, ಯುವವಾಹಿನಿಯ ನಿಸ್ವಾರ್ಥವಾದ ಸಮಾಜಮುಖಿ ಕಾಳಜಿಯಿಂದ ಕೂಡಿದ ಈ ಹರಿವಿನ ಶಕ್ತಿಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಯುವವಾಹಿನಿ ಯುವಜನತೆಯ ಭರವಸೆಯ ಬೆಳಕಾಗಿದೆ ಎಂದು ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ.ಸುವರ್ಣ ತಿಳಿಸಿದರು. ದಿನಾಂಕ 05.05.2019 ರಂದು ಕೂಳೂರು ಚರ್ಚ್ ಹಾಲ್ ನಲ್ಲಿ ಜರುಗಿದ ಯುವವಾಹಿನಿ (ರಿ) […]
Read More
05-05-2019, 4:14 PM
ಕುಪ್ಪೆಪದವು : ಯುವವಾಹಿನಿ(ರಿ) ಕುಪ್ಪೆಪದವು ಘಟಕದ 2018-20 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 05.05.2019 ರಂದು ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನ ಕುಪ್ಪೆಪದವು ಇಲ್ಲಿ ನಡೆಯಿತು. ಬಿಲ್ಲವ ಸೇವಾ ಸಮಿತಿ ಕುಪ್ಪೆಪದವು ಇದರ ಅಧ್ಯಕ್ಷರಾದ ಹಿರಣಾಕ್ಷ ಕೋಟ್ಯಾನ್ ರವರು ಕಾರ್ಯಕ್ರಮ ವನ್ನು ಉದ್ಘಾಟಿಸಿದರು. ಸಮಾರಂಭದಲ್ಲಿ ಪ್ರಧಾನ ಭಾಷಣ ಮಾಡಿದ ದ. ಕ ಜಿಲ್ಲಾ ಕ್ಯಾಟರಿಂಗ್ ಮಾಲಕರ ಅಸೋಸಿಯೇಷನ್(ರಿ.) ಇದರ ಅಧ್ಯಕ್ಷರಾದ ಸತೀಶ್ ಬೋಳಾರ ಮಾತನಾಡಿ,” ಶ್ರೀ ನಾರಾಯಣ ಗುರುಗಳ ತತ್ವ ಆದರ್ಶದೊಂದಿಗೆ […]
Read More
27-04-2019, 4:23 PM
ಮುಲ್ಕಿ: ಯುವವಾಹಿನಿ (ರಿ,) ಮುಲ್ಕಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 27-04-2019 ರಂದು ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಗ್ರಹದಲ್ಲಿ ನಡೆಯಿತು . ಘಟಾಕಾಧ್ಯಕ್ಷೆ ಕುಶಲ .ಎಸ್ . ಕುಕ್ಯಾನ್ ಎಲ್ಲರನ್ನೂ ಸ್ವಾಗತಿಸಿದರು . ಮಾಜಿ ಅಧ್ಕ್ಯಕ್ಷರಾದ ಮೋಹನ್ ಸುವರ್ಣರವರು ಘಟಕ ನಡೆದು ಬಂದ ಹಾದಿಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಘಟಕದ ಕಾರ್ಯದರ್ಶಿ ಚರಿಷ್ಮಾ ಶ್ರೀನಿವಾಸ್ ರವರು ವಾರ್ಷಿಕ ವರದಿಯನ್ನು ಮಂಡಿಸಿದರು, ನಿರ್ಗಮನ ಅಧ್ಯಕ್ಷ ರಾದ ಕುಶಲ .ಎಸ್. ಕುಕ್ಯಾನ್ ರವರು ತನ್ನ […]
Read More