Yuvavahini

ಪದಗ್ರಹಣ

ಸಮಾಜದ ನೆಮ್ಮದಿ ಯುವವಾಹಿನಿಯ ಗುರಿ : ಯಶವಂತ ಪೂಜಾರಿ

ಪಣಂಬೂರು : ಅವ್ಯವಸ್ಥೆಯನ್ನು ತಿಂದುಂಡು ಹೊದ್ದು ಮಲಗೇಳುವ ನಮ್ಮ ಪರಿಸ್ಥಿತಿಯನ್ನು ಬದಲಾಯುಸೋ ಪ್ರಯತ್ನಕ್ಕೆ ಯುವವಾಹಿನಿ ಸಂಘಟನೆ ಅನಿವಾರ್ಯ ಹಾಗೂ ಆಗ ಮಾತ್ರ ಒಂದು ಸುಭದ್ರ ನಾಳೆ, ಒಂದು ನೆಮ್ಮದಿಯ ನಾಳೆ, ಒಂದು ನಿರಾತಂಕ ನಾಳೆ, ಒಂದು ಸ್ಪಷ್ಟ ನಾಳೆ, ಒಂದು ಸಮೃದ್ಧಿಯ ನಾಳೆ ನಿರ್ಮಾಣಕ್ಕೆ ಸಾಧ್ಯ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 09.06.2018 ರಂದು ಪಣಂಬೂರು, ನವಮಂಗಳೂರು ಬಂದರು ಮಂಡಳಿಯ ರಿಕ್ರಿಯೇಶನ್ ಕ್ಲಬ್ ಇಲ್ಲಿ ಯುವವಾಹಿನಿ(ರಿ) ಪಣಂಬೂರು ಘಟಕದ […]

Read More

ಯುವಕರು ನಾಯಕತ್ವ ಗುಣ ಬೆಳೆಸಬೇಕು : ಯಶವಂತ ಪೂಜಾರಿ

ಹಳೆಯಂಗಡಿ : ಯುವ ಸಮುದಾಯ ಉತ್ತಮ‌ ನಾಯಕತ್ವ ಗುಣವನ್ನು ಬೆಳೆಸಬೇಕು ಎಂಬ ಸದುದ್ದೇಶದೊಂದಿಗೆ ಯುವವಾಹಿನಿ ಸಂಸ್ಥೆಯು ಯುವ ಸಮುದಾಯದ ಸಂಘಟನೆಯೊಂದಿಗೆ ಸಮಾಜ ಸೇವೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ತಿಳಿಸಿದರು. ಹಳೆಯಂಗಡಿ ಹರಿ ಓಂ ಸಭಾಂಗಣದಲ್ಲಿ ಯುವವಾಹಿನಿ (ರಿ) ಹಳೆಯಂಗಡಿ ಘಟಕದ 2018-19 ನೇ ಸಾಲಿನ ನೂತನ ಪದಾಧಿಕಾರಿಗಳ ಪ್ರತಿಜ್ಞಾ ವಿಧಿ ಬೋಧಿಸಿ ಅವರು ಮಾತನಾಡಿದರು. ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ್ ನಾನಿಲ್ ಸಭೆಯ […]

Read More

ಆತ್ಮವಿಶ್ವಾಸಕ್ಕಿಂತ ಹೆಚ್ಚಿನ ಶಕ್ತಿ ಇನ್ನೊಂದಿಲ್ಲ – ಯಶವಂತ ಪೂಜಾರಿ.

ಅಡ್ವೆ : ಒಗ್ಗಟ್ಟಿನಿಂದ ದುಡಿದರೆ ಸಾದನೆಗೆ ಅಸಾಧ್ಯವಾದುದು ಏನಿಲ್ಲ, ನಮ್ಮ ಯುವಕರಲ್ಲಿ ಉತ್ಸಾಹ ಹೆಚ್ಚಿಸಬೇಕು. ಆ ಮೂಲಕ ಆತ್ಮವಿಶ್ವಾಸ ಬೆಳೆಸಬೇಕು ಆತ್ಮವಿಶ್ವಾಸಕ್ಕಿಂತ ಹೆಚ್ಚಿನ ಶಕ್ತಿ ಇನ್ನೊಂದು ಇಲ್ಲ. ಹಾಗೆಯೇ ಯುವವಾಹಿನಿ ಸಂಘಟನೆಯ ಮೂಲಕ ನಾವೆಲ್ಲರೂ ಒಗ್ಗಾಟ್ಟಾದರೆ ಇನ್ನಷ್ಟು ಹೆಚ್ಚಿನ ಸಮಾಜಮುಖಿ ಕೆಲಸ ಕಾರ್ಯಗಳನ್ನು ನಡೆಸಲು ಸಾಧ್ಯ ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿ. ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 03-06-2018 ನೇ ಭಾನುವಾರ ಅಡ್ವೆ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ […]

Read More

ಸಂಘಟನೆ ಮತ್ತು ಸಮಾನತೆಯಿಂದ ಯುವ ಜನತೆಯ‌ ಯಶಸ್ಸು ಸಾಧ್ಯ : ನರೇಶ್ ಕುಮಾರ್

ಕೂಳೂರು : ನಮ್ಮ ದೃಷ್ಟಿ ಎತ್ತರಕ್ಕೆ ಇದ್ದಾಗ ಮತ್ತು ಧೃಡ ಚಿತ್ತ ಇದ್ದಾಗ ತಲುಪುವ ಗುರಿ ಹತ್ತಿರವಾಗುತ್ತದೆ ಸಂಘಟನೆಯ ಶಕ್ತಿ ಯುವಸಮುದಾಯದಲ್ಲಿದೆ ಮತ್ತು ಸಮಾನತೆಯಲ್ಲಿದೆ ಹಾಗಾದಾಗ ಯಶಸು ಲಭಿಸುತ್ತದೆ . ನಾಯಕತ್ವಕ್ಕೆ ಅಡಿಪಾಯ ಮುಖ್ಯ ಈ ದಿಶೆಯಲ್ಲಿ ಕೂಳೂರು ಘಟಕದ ಪರಿಶ್ರಮ ಅಭಿನಂದನೀಯ ಮಹಿಳೆಯರಿಗೆ ಅವಕಾಶ ಹೆಚ್ಚಾಗಬೇಕು ಎನ್ನುವ ಕೂಗು ಎಲ್ಲ ಕಡೆ ಇದೆ ಕೂಳೂರು ಘಟಕ ಅದನ್ನು ಅನುಸರಿಸಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಉಪಾಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು ‌ತಿಳಿಸಿದರು. ಅವರು ದಿನಾಂಕ […]

Read More

ಯುವವಾಹಿನಿ ಅಮಾಯಕರಿಗೆ ಕರುಣಾಮಯಿಯಾಗಿದೆ : ಯಶವಂತ ಪೂಜಾರಿ

ಯುವವಾಹಿನಿಯು ಪ್ರೀತಿ, ವಾತ್ಸಲ್ಯವನ್ನು ಯುವ ಮನಸುಗಳಿಗೆ ರವಾನಿಸುವ ಕಾರ್ಯವನ್ನು ಸಮಾಜದಲ್ಲಿ ಮಾಡುತ್ತುದೆ.  ಯುವ ಪ್ರತಿಭೆಗಳಿಗೆ ವೇದಿಕೆಯಾಗಿ, ರೋಗಿಗಳಿಗೆ ಸಂಜೀವಿನಿಯಾಗಿ, ವಿದ್ಯಾರ್ಥಿಗಳಿಗೆ ಸರಸ್ವತಿಯಾಗಿ, ಅಮಾಯಕರಿಗೆ ಕರುಣಾಮಯಿಯಾಗಿ ಯುವವಾಹಿನಿ ಎಲ್ಲಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 21.04.2018 ರಂದು ಯಡ್ತಾಡಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಯುವವಾಹಿನಿ (ರಿ) ಯಡ್ತಾಡಿ ಘಟಕದ 2018-19 ನೇ ಸಾಲಿನ ಪದಸ್ವೀಕಾರ ಸಮಾರಂಭದಲ್ಲಿ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು. ಕೋಟ ಹೊಬಳಿಯ ಬಿಲ್ಲವ ಒಕ್ಕೂಟದ […]

Read More

ಯುವವಾಹಿನಿಯ ಸಾಧನೆ ಬಿಳಿ ಹಾಳೆಯಂತಿದೆ : ನಿರ್ಮಲಾ ಸಂಜೀವ್

ಮಂಗಳೂರು : ಪ್ರೀತಿ, ಅಕ್ಕರೆ ಹಾಗೂ ಕೌಟುಂಬಿಕ ಚೌಕಟ್ಟಿನ ಮೂಲಕ ಯುವವಾಹಿನಿ ಯುವಕರಿಗೆ ಪ್ರೇರಣೆ ನೀಡಿದೆ. 30 ವರ್ಷಗಳ ಇತಿಹಾಸವಿರುವ ಯುವವಾಹಿನಿಯ ಸಾಧನೆ ಯಾವುದೇ ಕಲ್ಮಶವಿಲ್ಲದೆ ಬಿಳಿ ಹಾಳೆಯಂತಿದೆ. ಯುವವಾಹಿನಿಯ ಆರಂಭದ ದಿನಗಳಿಂದಲೂ ತೀರಾ ಹತ್ತಿರದಿಂದ ಯುವವಾಹಿನಿಯನ್ನು ಕಂಡ ತನಗೆ ಯುವವಾಹಿನಿಯೇ ತನ್ನ ಮೊದಲ ಮಗು ಎಂದು ಗೋಕರ್ಣನಾಥ ಕೊ ಅಪರೇಟಿವ್ ಬ್ಯಾಂಕ್ ನ ಶಾಖಾ ಪ್ರಬಂಧಕರಾದ ನಿರ್ಮಲಾ ಸಂಜೀವ್ ತಿಳಿಸಿದರು. ಅವರು ದಿನಾಂಕ 11.04.2018 ರಂದು ಮಂಗಳೂರು ಉರ್ವಾಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿದ ಯುವವಾಹಿನಿ (ರಿ) […]

Read More

ಯುವವಾಹಿನಿಯ ನಡೆ ಜಾಗೃತ ಸಮಾಜದ ಕಡೆ : ಜಯಾನಂದ

ಕಂಕನಾಡಿ: ಯುವವಾಹಿನಿ ಸ್ವಾಭಿಮಾನದ ಸ್ಪೂರ್ತಿ, ಸಮಾಜದಲ್ಲಿ ಸಂಘಟನೆಯ ಅರಿವು ಮೂಡಿಸಿದೆ, ಆತ್ಮವಿಶ್ವಾಸವನ್ನು ಬಿಟ್ಟು ಮಿಕ್ಕೆಲ್ಲವನ್ನೂ ಕಳಕೊಂಡರೂ ಚಿಂತೆ ಇಲ್ಲ ಎಂಬ ಗುರುವರ್ಯರ ಸಂದೇಶದಂತೆ ನಾವು ಕೀಳರಿಮೆ ಬಿಟ್ಟು ಕತ್ತಲೆಯಿಂದ ಜ್ಞಾನದ ಬೆಳಕಿನೆಡೆ ಮುನ್ನಡೆಯೋಣ , ಯುವವಾಹಿನಿಯ ನಡೆ ಜಾಗೃತ ಸಮಾಜದ ಕಡೆ ಮುಖ ಮಾಡಿದೆ ಇದು ನಿರಂತರ ಪ್ರಕ್ರಿಯೆಯಾಗಲಿ ಹಾಗೂ ಯುವವಾಹಿನಿ ಕಂಕನಾಡಿ ಘಟಕವು ಶ್ರೇಷ್ಠ ಘಟಕವಾಗಿ ಹೊರಹೊಮ್ಮಲಿ ಎಂದು ಮೆಸ್ಕಾಮ್ ಕಾರ್ಯಪಾಲಕ ಇಂಜಿನಿಯರ್ ಜಯಾನಂದ ಎಮ್ ತಿಳಿಸಿದರು ಅವರು ದಿನಾಂಕ 01.04.2018 ರಂದು ಉಜ್ಜೋಡಿ ಶ್ರೀ […]

Read More

ಯುವವಾಹಿನಿ ಆಶ್ರಯ ವಾಹಿನಿ : ಬಲ್ಯೊಟ್ಟು ಸ್ವಾಮೀಜಿ

ಕುಪ್ಪೆಪದವು : ಸತ್ ಚಿಂತನೆಯನ್ನು ರೂಪಿಸಿಕೊಳ್ಳುವ ಮೂಲಕ ಯುವ ಸಮುದಾಯದ ಶಕ್ತಿ ಸಾರ್ಥಕತೆಯನ್ನು ಪಡೆಯುತ್ತದೆ, ಸಮಾಜಮುಖಿ ಕಾರ್ಯಗಳ ಮೂಲಕ ಶೋಷಿತ ಜನಾಂಗವನ್ನು ಮುಖ್ಯ ವಾಹಿನಿಗೆ ತರುವಂತಹ ಯುವವಾಹಿನಿ ಸಮಾಜದ ಆಶ್ರಯ ವಾಹಿನಿಯಾಗಿದೆ, ಬಿಲ್ಲವ ಸಮಾಜದ ಆದರ್ಶದ ದಾರಿದೀಪವಾಗಿದೆ ಎಂದು ಶ್ರೀ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ತಿಳಿಸಿದರು ಅವರು ದಿನಾಂಕ 01.04.2018 ರಂದು ಯುವವಾಹಿನಿಯ 30 ನೇ ನೂತನ ಘಟಕ ಯುವವಾಹಿನಿ (ರಿ) ಕುಪ್ಪೆಪದವು ಘಟಕ ಉದ್ಘಾಟಿಸಿ ಆಶೀರ್ವಚನ ನೀಡಿದರು. ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶಗಳನ್ನು ಅಕ್ಷರಶಃ ಪಾಲಿಸುತ್ತಿರುವ […]

Read More

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಯುವವಾಹಿನಿ ವೇದಿಕೆ ನಿರ್ಮಿಸಿದೆ

ಕೊಲ್ಯ : ನಿರ್ದಿಷ್ಟ ಗುರಿಯೊಂದಿಗೆ , ಸಂಘಟಿತ ಸಾಧನೆಯೆಡೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಸದೃಡವಾಗಲು ಯುವವಾಹಿನಿ ವೇದಿಕೆ ನಿರ್ಮಿಸಿದೆ, ಸಮಾಜದ ಎಲ್ಲಾ ವರ್ಗದವರನ್ನು ಸೇರಿಸಿಕೊಂಡು ಸಮಾಜಮುಖಿ ಕಾರ್ಯವನ್ನು ನಡೆಸುತ್ತಿರುವ ಯುವವಾಹಿನಿಯ ಕಾರ್ಯ ಶ್ಲಾಘನೀಯ ಎಂದು ಹೈಕೋರ್ಟ್ ನ್ಯಾಯವಾದಿ ನವನೀತ ಡಿ.ಹಿಂಗಾಣಿ ತಿಳಿಸಿದರು. ಅವರು ದಿನಾಂಕ 11.03.2018 ರಂದು ಕೊಲ್ಯ ನಾರಾಯಣಗುರು ಮಂದಿರದಲ್ಲಿ ಯುವವಾಹಿನಿ (ರಿ) ಕೊಲ್ಯ ಘಟಕದ 2018-19 ನೇ ಸಾಲಿನ ಪದಗ್ರಹಣ ಸಮಾರಂಭದಲ್ಲಿ ಪ್ರಧಾನ ಭಾಷಣ ಮಾಡಿದರು. ಮಾಡೂರು ಶ್ರೀ ಶಿರಡಿ […]

Read More

ಯುವವಾಹಿನಿಯಿಂದ ಗುರುಗಳ ಸಂದೇಶ ಅನುಷ್ಠಾನ ಶ್ಲಾಘನೀಯ : ವಿನಯ ಕುಮಾರ್ ಸೊರಕೆ

ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶ ಯುವಪೀಳಿಗೆ ಅನುಸರಿಸುವಂತೆ ಮಾಡುವ ಯುವವಾಹಿನಿಯ ಕಾರ್ಯ ಶ್ಲಾಘನೀಯ, ವಿದ್ಯೆಗೆ ಭದ್ರ ಬುನಾದಿ ಹಾಕುವ ಮೂಲಕ ಉದ್ಯೋಗ , ವ್ಯಕ್ತಿತ್ವ ವಿಕಸನ, ಕ್ರೀಡೆ, ಆರೋಗ್ಯ, ಕ್ಷೇತ್ರದಲ್ಲಿ ಜಾಗೃತಿ ಮೂಡಿಸುವ ಮೂಲಕ ಯುವವಾಹಿನಿಯ ಎಲ್ಲಾ ಘಟಕಗಳು ಸಮಾಜದಲ್ಲಿ ವಿಶಿಷ್ಠ ಸಂಚಲನ ಮೂಡಿಸಿದೆ ಎಂದು ಕಾಪು ಕ್ಷೇತ್ರದ ಶಾಸಕರಾದ ವಿನಯ ಕುಮಾರ್ ಸೊರಕೆ ತಿಳಿಸಿದರು. ಅವರು ದಿನಾಂಕ 11.02.2018 ನೇ ಆದಿತ್ಯವಾರ ಕಾಪು ಬಿಲ್ಲವ ಸಂಘದ ಸಭಾಂಗಣದಲ್ಲಿ ಜರುಗಿದ ಯುವವಾಹಿನಿಯ 29 ಘಟಕ ಯುವವಾಹಿನಿ (ರಿ) ಕಾಪು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!