Yuvavahini

ಪದಗ್ರಹಣ

ಯುವವಾಹಿನಿಯಿಂದ ಸಮಾಜದಲ್ಲಿ ವಿಶಿಷ್ಟ ಸಂಚಲನ : ಕೆ ವಸಂತ ಬಂಗೇರ

ವೇಣೂರು: ಯುವವಾಹಿನಿ ಯುವಕರ ಘಟಕ ಯುವಶಕ್ತಿಯನ್ನು ಬಳಸಿಕೊಳ್ಳುತ್ತಿರುವ ಯುವವಾಹಿನಿ ಘಟಕಗಳು ಸಮಾಜದಲ್ಲಿ ಉತ್ತಮ ಕಾರ್ಯಸಾಧನೆ ಮಾಡುತ್ತಿದೆ. ಶಿಕ್ಷಣ, ಆರೋಗ್ಯದ ಜತೆಗೆ ಬಡವರಿಗೆ ಸಹಾಯ ಹಸ್ತ ನೀಡುವ ಮೂಲಕ ಸಮಾಜದಲ್ಲಿ ಯುವವಾಹಿನಿ ವಿಶಿಷ್ಟ ಸಂಚಲನ ಮೂಡಿಸಿದೆ ಎಂದು ಬೆಳ್ತಂಗಡಿ ಶಾಸಕ ಕೆ ವಸಂತ ಬಂಗೇರ ಹೇಳಿದರು.ವೇಣೂರು ಗಾರ್ಡನ್ ವ್ಯೂ ಸಭಾಂಗಣದಲ್ಲಿ ದಿನಾಂಕ 01.12.2017 ರಂದು ಶುಕ್ರವಾರ ಜರಗಿದ ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿಯ 25ನೇ ವೇಣೂರು ನೂತನ ಘಟಕದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.ಯುವವಾಹಿನಿ ಸಮಾಜ ಸೇವೆಯ ಜತೆಗೆ […]

Read More

ಪ್ರೀತಿ , ವಿಶ್ವಾಸದ ಮೂಲಕ ಬಲಿಷ್ಠ ಸಮಾಜ ನಿರ್ಮಿಸೋಣ : ಪರಮಾನಂದ ಸಾಲ್ಯಾನ್

ಪರಸ್ಪರ ಪ್ರೀತಿ, ವಿಶ್ವಾಸದ ಮೂಲಕ ಬಲಿಷ್ಠ ಸಮಾಜ ನಿರ್ಮಾಣದ ನಮ್ಮ ಹಿರಿಯರ ಕನಸು ಮಾಡುವಲ್ಲಿ ಯುವವಾಹಿನಿ ಕಳೆದ 30 ವರ್ಷಗಳಿಂದ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದೆ ಎಂದು ಹಿರಿಯ ಪತ್ರಕರ್ತರು ಹಾಗೂ ರಂಗ ನಿರ್ದೇಶಕರಾದ ಪರಮಾನಂದ ಸಾಲ್ಯಾನ್ ತಿಳಿಸಿದರು. ದಿನಾಂಕ 24.09.2017 ರಂದು ಬೆಳುವಾಯಿ ಷಣ್ಮುಖಾನಂದ ಸಭಾಗೃಹದಲ್ಲಿ ಜರುಗಿದ ಯುವವಾಹಿನಿ (ರಿ) ಬೆಳುವಾಯಿ ಘಟಕದ 2017-18ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಹೊಸ ಚಿಂತನೆಗಳು, ಕ್ರಿಯಾಶೀಲ ಯೋಜನೆ, ಯೋಚನೆಯ ಮೂಲಕ ಯುವವಾಹಿನಿ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದೆ‌ […]

Read More

ಅಧ್ಯಕ್ಷರಾಗಿ ಯಶವಂತ ಪೂಜಾರಿ

ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ ನೇ ಸಾಲಿನ ಅಧ್ಯಕ್ಷರಾಗಿ ಯಶವಂತ್ ಪೂಜಾರಿ ಆಯ್ಕೆಯಾಗಿದ್ದಾರೆ ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಸುವರ್ಣ ಬಿ.ಸಿ.ರೋಡ್, ಉಪಾಧ್ಯಕ್ಷರಾಗಿ ಜಯಂತ ನಡುಬೈಲು ಹಾಗೂ ನರೇಶ್ ಕುಮಾರ್ ಸಸಿಹಿತ್ಲು, ಕೋಶಾಧಿಕಾರಿಯಾಗಿ ಹರೀಶ್ ಕೆ.ಸನಿಲ್, ಜತೆ ಕಾರ್ಯದರ್ಶಿಯಾಗಿ ಚೇತನ್ ಕುಮಾರ್ ಮುಲ್ಕಿ., ಸಾಹಿತ್ಯ ಮತ್ತು ಸಾಂಸ್ಕೃತಿಕ ನಿರ್ದೇಶಕರಾಗಿ ಭುವನೇಶ್ ಪಚ್ಚಿನಡ್ಕ, ವಾರ್ಷಿಕ ಸಮಾವೇಶ ನಿರ್ದೇಶಕರಾಗಿಹರೀಶ್ ಕೆ.ಪೂಜಾರಿ  ಕ್ರೀಡೆ ಮತ್ತು ಆರೋಗ್ಯನಿರ್ದೇಶಕರಾಗಿಸುಜಿತ್ ರಾಜ್ ಐ. ಸುರತ್ಕಲ್ , ಸಮಾಜ ಸೇವೆ ನಿರ್ದೇಶಕರಾಗಿ ಭಾಸ್ಕರ ಸಾಲ್ಯಾನ್ ಅಗರಮೇಲು, […]

Read More

ಪ್ರೀತಿ ವಿಶ್ವಾಸದ ಬೆಸುಗೆ ಯುವವಾಹಿನಿ-ಸುನೀಲ್ ಕುಮಾರ್

ಸಮಾಜ ವನ್ನು ಕಟ್ಟಬೇಕಾಗಿರುವುದು ಹಣದಿಂದಲ್ಲ. ಬದಲಾಗಿ ನಂಬಿಕೆ ವಿಶ್ವಾಸ ಮತ್ತು ಪ್ರೀತಿಯಿಂದ. ಈ ಮೂರರ ಬಂಧನ ಕಳಚಲಾಗದ್ದು. ಅಂತಹ ಬೆಸುಗೆಯನ್ನು ಯುವವಾಹಿನಿ ಬೆಸೆಯುತ್ತಿದೆ ಎಂದು ಚಿಂತಕ, ಯುವ ಸಂಘಟಕ ಸುನೀಲ್ ಕುಮಾರ್ ಬಜಾಲ್ ತಿಳಿಸಿದರು ಅವರು ದಿನಾಂಕ 17.09.2017 ರಂದು ಬಂಟ್ವಾಳ ತಾಲೂಕಿನ ಮಾಣಿ ನಾರಾಯಣಗುರು ಸಮುದಾಯಭವನದಲ್ಲಿ ಜರುಗಿದ ಯುವವಾಹಿನಿಯ 26ನೇ ನೂತನ ಘಟಕ ಯುವವಾಹಿನಿ (ರಿ) ಮಾಣಿ ಘಟಕದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಅಧ್ಯಕ್ಷರಾದ ಸಂಪತ್ ಬಿ.ಸುವರ್ಣ […]

Read More

ಯುವವಾಹಿನಿ (ರಿ) ಕಟಪಾಡಿ ಘಟಕದ ಪದಗ್ರಹಣ

ಯುವವಾಹಿನಿ (ರಿ) ಕಟಪಾಡಿ ಘಟಕದ 2017-18 ನೇ ಸಾಲಿನ ಪದಗ್ರಹಣ ಸಮಾರಂಭವು ದಿನಾಂಕ 02.08.2017 ರಂದು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಶಿವಾನುಗ್ರಹ ಸಭಾಂಗಣದಲ್ಲಿ ಜರಗಿತು.ಕಟಪಾಡಿ ವಿಶ್ವನಾಥ ಕ್ಷೇತ್ರದ ಗೌರವ ಪ್ರಧಾನ ಕಾರ್ಯದರ್ಶಿ ಹರಿಶ್ಚಂದ್ರ ಅಮೀನ್ ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿದರು.ಯುವವಾಹಿನಿ (ರಿ) ಕಟಪಾಡಿ ಘಟಕದ ಅಧ್ಯಕ್ಷರಾದ ಸುಕುಮಾರ್ ಆರ್ ಕೋಟ್ಯಾನ್ ಸಭೆಯ ಅಧ್ಯಕ್ಷತೆ ವಹಿಸಿದ್ದರು ಯುವವಾಹಿನಿ (ರಿ) ಕಟಪಾಡಿ ಘಟಕದ 2017-18 ನೇ ಸಾಲಿನ ಅಧ್ಯಕ್ಷರಾಗಿ ಮಾಹೇಶ್ ಎನ್ ಅಂಚನ್ ಕಾರ್ಯದರ್ಶಿಯಾಗಿ ನಿತಿನ್ ಅಂಬಾಡಿ […]

Read More

ಯುವ ಪ್ರತಿಭೆಯನ್ನು ಗುರುತಿಸಿ, ನಾಯಕತ್ವ ಮೂಡಿಸಿ-ಯಶವಂತ ಪೂಜಾರಿ

ಯುವವಾಹಿನಿ ಸಂಸ್ಥೆಯು ಶಿಸ್ತುಬದ್ಧ ಹಾಗೂ ಕ್ರಮಬದ್ಧ ಸಂಸ್ಥೆ ಎನಿಸಿದ್ದು ಅದು ಸಮಾಜಕ್ಕೆ ಅನೇಕ ಕೊಡುಗೆಗಳನ್ನು ನೀಡುತ್ತಾ, ಸಹಕರಿಸುತ್ತಾ ಬಂದಿದೆ. ಮುಂದಿನ ದಿನಗಳಲ್ಲಿ ಗ್ರಾಮವಾರು ಯುವವಾಹಿನಿ ಸಂಘವನ್ನು ರಚಿಸಿ ಯುವಜನತೆಯಲ್ಲಿನ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸಿ ಅವರಲ್ಲಿ ನಾಯಕತ್ವ ಮೂಡಿಸಿ ಅವರನ್ನು ಸತ್ಪ್ರಜೆಗಳನ್ನಾಗಿ ಮಾಡುವತ್ತ ಶ್ರಮಿಸಬೇಕಾಗಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ನಿಯೋಜಿತ ಅಧ್ಯಕ್ಷ  ಯಶವಂತ ಪೂಜಾರಿರವರು ಹೇಳಿದರು. ಅವರು ದಿನಾಂಕ: 30.07.2017  ರಂದು ಬಪ್ಪಳಿಗೆ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆದ 2017-18ನೇ ಸಾಲಿನ ಯುವವಾಹಿನಿ ಪುತ್ತೂರು ಘಟಕದ […]

Read More

ಯುವ ಮನಸ್ಸುಗಳಿಗೆ ಜೀವ ತುಂಬುವ ಕೆಲಸ ನಡೆಯಬೇಕು : ಯಶವಂತ ಪೂಜಾರಿ

ಸಂಘಟನೆಗಳು ಒಕ್ಕೂಟ ವ್ಯವಸ್ಥೆ ಗೆ ಬಲವನ್ನು ತುಂಬುವ ಕೆಲಸವನ್ನು ನಿರ್ವಹಿಸುತ್ತದೆ. ಎಲ್ಲರಿಗೂ ನಾಯಕರಾಗುವ ಅವಕಾಶ ತನ್ನಿಂದ ತಾನೇ ಲಭ್ಯವಾಗುವುದಿಲ್ಲ. ಸಂಘಟನೆಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಾಗ ಅವಕಾಶಗಳು ಒಲಿದು ಬರುತ್ತದೆ. ತಮಗೆ ಸಿಗುವ ಅವಕಾಶವನ್ನು ಯೋಗ್ಯ ರೀತಿಯಲ್ಲಿ ನಿರ್ವಹಿಸಿದಾಗ ಮಾತ್ರ ಸಂಘಟನೆಗೂ ಸಮಾಜಕ್ಕೂ ಕೀರ್ತಿ ಲಭ್ಯವಾಗುತ್ತದೆ. ನಾಯಕತ್ವ ವಹಿಸುವುದು ಜವಾಬ್ದಾರಿ ಯ ಕೆಲಸ. ನಾಯಕನಾದವನು ತನ್ನ ಬಳಗವನ್ನು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು. ಯುವ ಮನಸ್ಸುಗಳಿಗೆ ಜೀವ ತುಂಬುವ ಕೆಲಸ ನಡೆಯಬೇಕು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ಶ್ರೀ ಯಶವಂತ […]

Read More

ಯುವವಾಹಿನಿ ಪಣಂಬೂರು ಘಟಕದ ಪದಗ್ರಹಣ

ಯುವವಾಹಿನಿ (ರಿ) ಪಣಂಬೂರು ಘಟಕದ 2017-18 ನೇ ಸಾಲಿನ ಪದಗ್ರಹಣ ಸಮಾರಂಭವು ದಿನಾಂಕ 22.07.2017 ರಂದು ಪಣಂಬೂರು NMPT ಕ್ರೀಯೇಶನ್ ಕ್ಲಬ್ ನಲ್ಲಿ ಜರುಗಿತು ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಪ್ರಭಾಕರ ಕುಳಾಯಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ಮಹಾನಗರ ಪಾಲಿಕಾ ಕಾರ್ಪೊರೇಟರ್ ಶ್ರೀಮತಿ ಪ್ರತಿಭಾ ಕುಳಾಯಿ ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ರವಿಚಂದ್ರ ನೂತನ ಪದಾಧಿಕಾರಿಗಳನ್ನು ಪರಿಚಯಿಸಿದರು. ಯುವವಾಹಿನಿ ಪಣಂಬೂರು ಘಟಕದ 2017-18 […]

Read More

ಬಡವರ ಸಂಕಷ್ಟಗಳಿಗೆ ಸ್ಪಂದಿಸುವ ಯುವವಾಹಿನಿ ಕಾರ್ಯ ಶ್ಲಾಘನೀಯ

ಸಮಾಜದ ಕಡು ಬಡವರ ಸಂಕಷ್ಟಗಳಿಗೆ ಯುವ ಜನಾಂಗ ಸ್ಪಂದಿಸಿದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ , ಈ ನಿಟ್ಟಿನಲ್ಲಿ ಯುವವಾಹಿನಿ ಕಾರ್ಯ ಶ್ಲಾಘನೀಯ ಎಂದು ಮಂಗಳೂರು ಮಹಾನಗರ ಪಾಲಿಕಾ ಹಣಕಾಸು ಮತ್ತು ತೆರಿಗೆ ಸಮಿತಿ ಅಧ್ಯಕ್ಷೆ ಪ್ರತಿಭಾ ಕುಳಾಯಿ ಅಭಿಪ್ರಾಯ ಪಟ್ಟರು. ಅವರು ದಿನಾಂಕ 16.07.2017 ನೇ ಆದಿತ್ಯವಾರ ಹೆಜಮಾಡಿ ಬಿಲ್ಲವ ಸಮುದಾಯ ಭವನದಲ್ಲಿ ಯುವವಾಹಿನಿ (ರಿ) ಹೆಜಮಾಡಿ ಘಟಕದ 2017-18ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರುಸಮಾರಂಭದ ಅಧ್ಯಕ್ಷತೆ […]

Read More

ಕೌಟುಂಬಿಕ ಸಾಮರಸ್ಯ, ಸತತ ಪ್ರಯತ್ನ ,ಇಚ್ಛಾಶಕ್ತಿ, ಇವೇ ಯುವವಾಹಿನಿ ಸಾಧನೆಯ ಹಿಂದಿರುವ ಶಕ್ತಿ :- ಸಂಕಮಾರ್

ಕೌಟುಂಬಿಕ ಸಾಮರಸ್ಯ,ಇಚ್ಛಾಶಕ್ತಿ, ಆತ್ಮ ಶಕ್ತಿ, ಸತತ ಪ್ರಯತ್ನ, ಇವೇ ಯುವವಾಹಿನಿಯ ಸಾಧನೆಯ ಹಿಂದಿರುವ ಶಕ್ತಿ, ಕೇವಲ 9 ತಿಂಗಳಲ್ಲಿ ಮೌಲ್ಯಯುತ 24 ಕಾರ್ಯಕ್ರಮಗಳನ್ನು ನೀಡಿದ ಕೂಳೂರು ಯುವವಾಹಿನಿ ಘಟಕವು ಯುವ ಜನಾಂಗಕ್ಕೆ ಮಾದರಿಯಾಗಿದೆ, ಕ್ರಿಯಾಶೀಲ ಯೋಜನೆ ಯೋಚನೆಗಳಿಂದ ಕೂಡಿದ ಅಂತರಾಷ್ಟ್ರೀಯ ಸಂಸ್ಥೆ ಗೆ ಸರಿಸಮನಾಗಿರುವ ಪದಗ್ರಹಣ ಸಮಾರಂಭವು ಸರ್ವರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಮಂಗಳೂರು ಸೈಂಟ್ ಅಲೋಶಿಯಸ್ ಕಾಲೇಜಿನ ಉಪನ್ಯಾಸಕರಾದ ಡಾ.ಗಣೇಶ್ ಅಮೀನ್ ಸಂಕಮಾರ್ ಅಭಿಪ್ರಾಯ ಪಟ್ಟರು. ಅವರು ದಿನಾಂಕ 25.06.2017ನೇ ಆದಿತ್ಯವಾರ ಕೂಳೂರು ಚರ್ಚ್ ಹಾಲ್ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!