17-03-2026, 8:00 PM
ಸುರತ್ಕಲ್: ಯುವವಾಹಿನಿ (ರಿ) ಸುರತ್ಕಲ್ ಘಟಕದ ವತಿಯಿಂದ ದಿನಾಂಕ 17-03-2026 ರಂದು ಕುಳಾಯಿ ಮಹಿಳಾ ಮಂಡಲದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ರಾಹುಲ್ ಎ. ಅಮೀನ್ ಹಾಗೂ ಮಹಿಳಾ ಸಂಘಟನಾ ನಿರ್ದೇಶಕಿ ಸುಧಾ ಸುರೇಶ್ ಉಪಸ್ಥಿತರಿದ್ದರು.ಮಹಿಳಾ ದಿನಾಚರಣೆಯ ಅಂಗವಾಗಿ ನಾಟಿನೈದ್ಯರಾದ ಸೇಸಮ್ಮ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ವೇಳೆ ಮಹಿಳೆಯರಿಗಾಗಿ ವಿಶೇಷ ಆಟಗಳನ್ನು ಆಯೋಜಿಸಲಾಗಿದ್ದು, ಭಾಗವಹಿಸಿದವರು ಉತ್ಸಾಹದಿಂದ ಪಾಲ್ಗೊಂಡರು.ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು ಹಾಗೂ ಎಲ್ಲಾ […]
Read More
17-03-2026, 8:00 PM
ಕೊಣಾಜೆ: ಯುವವಾಹಿನಿ (ರಿ.) ಗ್ರಾಮ ಚಾವಡಿ ಕೊಣಾಜೆ ಘಟಕದ ಆಶ್ರಯದಲ್ಲಿ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಇದರ ಸಹಯೋಗದಲ್ಲಿ ದಿನಾಂಕ 17-03-2026 ರಂದು ವಿಶ್ವ ಮಹಿಳಾ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಬಾಬು ಬಂಗೇರ ವಹಿಸಿಕೊಂಡಿದ್ದು, ಕೊಣಾಜೆ ಬ್ರಹ್ಮಶ್ರೀ ನಾರಾಯಣಗುರು ಸಂಘದ ಅಧ್ಯಕ್ಷರಾದ ವಿಜೇತ್ ಪಜೀರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಯುವವಾಹಿನಿ ಕೇಂದ್ರ ಸಮಿತಿ (ರಿ.) ಮಂಗಳೂರು ಇದರ ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ವೇದಿಕೆಯಲ್ಲಿ ಘಟಕದ […]
Read More
14-03-2026, 2:00 PM
ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ ಹೇಳಿದರು. ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ, ಯುವವಾಹಿನಿ (ರಿ.) ಕೊಲ್ಯ ಘಟಕದ ಆತಿಥ್ಯದಲ್ಲಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ “ಸಖೀ […]
Read More
14-03-2026, 2:00 PM
ಮಂಗಳೂರು : ಮಹಿಳಾ ದಿನಾಚರಣೆಯ ಸಂಭ್ರಮವು ಕೇವಲ ಒಂದು ದಿನಕ್ಕೆ ಸೀಮಿತವಾಗದೆ, ಪ್ರತಿದಿನವೂ ಸಂತೋಷ, ಸಂಭ್ರಮ ಹಾಗೂ ಸಕಾರಾತ್ಮಕ ಚಿಂತನೆಗಳೊಂದಿಗೆ ಆಚರಿಸಬೇಕಾಗಿದೆ ಎಂದು ರೂವಾರಿ.ಕಾಮ್ ಡಿಜಿಟಲ್ ಪತ್ರಿಕೆಯ ಪ್ರಧಾನ ಸಂಪಾದಕಿ ರತ್ನಾವತಿ ಜೆ. ಬೈಕಾಡಿ ಅಭಿಪ್ರಾಯಪಟ್ಟರು. ಅವರು ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಮಾರ್ಚ್ 14, 2026 ರಂದು ಸಂಜೆ 5 ಗಂಟೆಗೆ ಯುವವಾಹಿನಿ ಸಭಾಂಗಣದಲ್ಲಿ ಆಯೋಜಿಸಲಾದ ವಿಶ್ವ ಮಹಿಳಾ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಮಹಿಳೆಯರು “ಇತರರು ಏನು ಹೇಳುತ್ತಾರೆ” ಎಂಬ ಕೀಳರಿಮೆಯನ್ನು ತೊರೆದು, […]
Read More
12-03-2026, 1:07 PM
ಮಂಗಳೂರು: ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ, ಯುವವಾಹಿನಿ (ರಿ.) ಕೊಲ್ಯ ಘಟಕದ ಆತಿಥ್ಯದಲ್ಲಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ “ಸಖೀ ಸಂವಾದ – 2026” ಸಂವಾದ ಕಾರ್ಯಾಗಾರವು ಮಾರ್ಚ್ 14 ರಂದು ಬೆಳಿಗ್ಗೆ 9:30ರಿಂದ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಉದ್ಘಾಟನೆ ಮತ್ತು ಅತಿಥಿಗಳುದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್. ವಿ. ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ […]
Read More
08-03-2026, 9:00 PM
ಮಂಗಳೂರು: “ಒಬ್ಬ ಸುಸಂಸ್ಕೃತ ಮಹಿಳೆ ತನ್ನ ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸಂಪ್ರದಾಯಗಳ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ದೇಶ ಮತ್ತು ಸಮಾಜಕ್ಕೆ ಉತ್ತಮ ಕೊಡುಗೆ ನೀಡಲು ಸಾಧ್ಯ. ಹೆಣ್ಣು ತಾನು ಹುಟ್ಟಿದ ಮನೆ ಹಾಗೂ ಸೇರಿದ ಗಂಡನ ಮನೆಯ ಹಿತ ಬಯಸುವವಳು,” ಎಂದು ಡಿವೈನ್ ಪಾರ್ಕ್ನ ಮಹಿಳಾ ಮೇಲ್ಮೈ ಅಧಿಕಾರಿ ಪ್ರೇಮ ಪ್ರಭಾಕರ್ ಅವರು ಅಭಿಪ್ರಾಯಪಟ್ಟರು.ಅವರು ದಿನಾಂಕ 08-03-2026 ರಂದು ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. […]
Read More
08-03-2026, 9:00 PM
ಪಣಂಬೂರು: “ಇಂದಿನ ಬದಲಾದ ಜೀವನಶೈಲಿ ಮನುಷ್ಯನನ್ನು ರೋಗಗಳ ಗೂಡಾಗಿಸುತ್ತಿದೆ. ಅನಿಯಮಿತ ಆಹಾರ ಪದ್ಧತಿ ಮತ್ತು ವ್ಯಾಯಾಮದ ಕೊರತೆಯಿಂದ ಆಯುಷ್ಯ ಕ್ಷೀಣಿಸುತ್ತಿರುವುದು ಆತಂಕಕಾರಿ ಸಂಗತಿ. ಆರೋಗ್ಯಕರ ಬದುಕಿಗಾಗಿ ದಿನದ 24 ಗಂಟೆಗಳಲ್ಲಿ ಕನಿಷ್ಠ ಒಂದು ಗಂಟೆಯನ್ನಾದರೂ ಯೋಗಾಭ್ಯಾಸಕ್ಕೆ ಮೀಸಲಿಡುವುದು ಅನಿವಾರ್ಯ,” ಎಂದು SPYSS(R) ಜಿಲ್ಲಾ ಸಂಯೋಜಕಿ ಕನಕಾ ಮೋಹನ್ ತಿಳಿಸಿದರು. ಯುವವಾಹಿನಿ (ರಿ.) ಪಣಂಬೂರು-ಕುಳಾಯಿ ಘಟಕದ ವತಿಯಿಂದ ಮಾರ್ಚ್ 8ರ ಭಾನುವಾರ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಆರೋಗ್ಯ ಪದ್ಧತಿಯ […]
Read More
08-03-2026, 8:00 PM
ಪಡುಬಿದ್ರಿ : ದಿನಾಂಕ 08/03/2026 ರಂದು ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ಮಹಿಳಾ ದಿನಾಚರಣೆ ಹಾಗೂ ಸಂತೋಷ ಕೂಟವನ್ನು ಮುಲ್ಕಿಯ ಚೆನ್ನಯ ಕುದುರುದಲ್ಲಿರುವ ರಿವರ್ ಶೈನ್ ಕಯಾಕಿಂಗ್ ಮತ್ತು ಅಡ್ವೆಂಚರ್ನಲ್ಲಿ ಆಯೋಜಿಸಲಾಯಿತು.ಗುರುಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ವಿಧಿತ್ ಪೂಜಾರಿ ಕರ್ನಿರೆ ವಹಿಸಿ ಎಲ್ಲರನ್ನು ಸ್ವಾಗತಿಸಿದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಮಾಜಿ ಅಧ್ಯಕ್ಷರಾದ ಉದಯ್ ಅಮೀನ್ ಮಟ್ಟು ಉಪಸ್ಥಿತರಿದ್ದರು. ಗೌರವ ಉಪಸ್ಥಿತಿಯಾಗಿ ಕೇಂದ್ರ […]
Read More
08-03-2026, 1:00 PM
ಕುಳಾಯಿ : ಯುವವಾಹಿನಿ ಸುರತ್ಕಲ್ ಘಟಕದ ವತಿಯಿಂದ ಮಹಿಳಾ ದಿನಾಚರಣೆಯ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರವನ್ನು ದಿನಾಂಕ 08.03.2026 ರಂದು ಕುಳಾಯಿ ಮಹಿಳಾ ಮಂಡಲದಲ್ಲಿ ಆಯೋಜಿಸಲಾಗಿತ್ತು. ಸಾರ್ವಜನಿಕ ಗಣೇಶೋತ್ಸವ ಸಮಿತಿ (ರಿ) ಕುಳಾಯಿ, ಮಹಿಳಾ ಮಂಡಲ (ರಿ) ಕುಳಾಯಿ, ತಿರಂಗ ಟ್ರಸ್ಟ್ (ರಿ) ಮಂಗಳೂರು, ಶ್ರೀನಿವಾಸ ಆಸ್ಪತ್ರೆ ಮುಕ್ಕ ಇದರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವು ನಡೆಯಿತು. ಮಹಿಳಾ ದಿನಾಚರಣೆಯನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ, ರೋಗಿಗಳ ಪ್ರಾಣ ಉಳಿಸುವ ಉದಾತ್ತ ಉದ್ದೇಶದಿಂದ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಶ್ರೀನಿವಾಸ […]
Read More
08-03-2026, 1:00 PM
ಯಡ್ತಾಡಿ: ಯುವವಾಹಿನಿ (ರಿ.) ಯಡ್ತಾಡಿ ಘಟಕದ ವತಿಯಿಂದ ಮಹಿಳಾ ದಿನಾಚರಣೆಯ ಅಂಗವಾಗಿ ಸಾಧಕ ಮಹಿಳೆಯರನ್ನು ಗೌರವಿಸುವ ಕಾರ್ಯಕ್ರಮವನ್ನು ಮಾಜಿ ಅಧ್ಯಕ್ಷರಾದ ಅಣ್ಣಪ್ಪ ಪೂಜಾರಿ ಅವರ ನಿವಾಸದಲ್ಲಿ ಮಾಸಿಕ ಸಭೆಯೊಂದಿಗೆ ಆಯೋಜಿಸಲಾಯಿತು.ಕಾರ್ಯಕ್ರಮದಲ್ಲಿ ಮಾತನಾಡಿದ ಘಟಕದ ಮಾಜಿ ಅಧ್ಯಕ್ಷರಾದ ರಾಜು ಪೂಜಾರಿ ಅವರು, ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದಿ ಸುಸಂಸ್ಕೃತ ಸಮಾಜ ನಿರ್ಮಾಣ ಮಾಡುವಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಮಹಿಳೆಯರು ಕುಟುಂಬ ಮತ್ತು ಸಮಾಜದ ಶಕ್ತಿಯಾಗಿದ್ದು, ಅವರ ಸಾಧನೆಗಳು ಇತರರಿಗೆ ಪ್ರೇರಣೆಯಾಗಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಉಡುಪಿ ನೌಕರರ […]
Read More