19-07-2026, 3:00 PM
ಬಜಪೆ ಜುಲೈ 19 : ಯುವವಾಹಿನಿ(ರಿ.) ಬಜಪೆ ಘಟಕದ ವತಿಯಿಂದ ಹಾಗೂ ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.) ಬಜಪೆ -ಕರಂಬಾರು ಇವರ ಸಹಕಾರದಲ್ಲಿ “ಆಟಿದ ನೆಂಪು -2026” ಕಾರ್ಯಕ್ರಮವು ಬ್ರಹ್ಮ ಶ್ರೀ ನಾರಾಯಣ ಗುರು ಸಮುದಾಯ ಭವನ ಬಜಪೆ ಇಲ್ಲಿ 19.07.2026 ರಂದು ಯುವವಾಹಿನಿ ಬಜಪೆ ಘಟಕದ ಅಧ್ಯಕ್ಷರಾದ ರೋಹಿತ್ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು. ಊರಿಗೆ ಬಂದ ಮಾರಿ ರೋಗದ ಕಳೆ ರುಜಿನದ ಕೊಳೆಯ ಕಳೆಯುತ್ತಾ ಮನೆಯಂಗಳಕ್ಕೆ […]
Read More
19-07-2026, 9:00 AM
ನಿಯಮಾವಳಿ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಪಣಂಬೂರು–ಕುಳಾಯಿ ಘಟಕದ ಆತಿಥ್ಯದಲ್ಲಿ, 2026ರ ಆಗಸ್ಟ್ 23ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಯುವವಾಹಿನಿ ಭಜನಾ ಸ್ಪರ್ಧೆ–2026ರ ನಿಯಮಾವಳಿ ಈ ಕೆಳಗಿನಂತಿದೆ. 🔹 ಅರ್ಹತೆ ಮತ್ತು ಸದಸ್ಯತ್ವ1) ಇದು ಯುವವಾಹಿನಿಯ ಅರ್ಹ ಸದಸ್ಯರಿಗೆ ಮಾತ್ರ ಸೀಮಿತವಾದ ಅಂತರ್ಘಟಕ ಭಜನಾ ಸ್ಪರ್ಧೆಯಾಗಿದೆ.2) ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲಾ ಸದಸ್ಯರು ನಿಗದಿತ ಅವಧಿಯೊಳಗೆ ವಾರ್ಷಿಕ ಸದಸ್ಯತ್ವ ಶುಲ್ಕ ಪಾವತಿಸಿ, ಕೇಂದ್ರ ಸಮಿತಿಯಿಂದ ಅನುಮೋದನೆಗೊಂಡ ಸದಸ್ಯತ್ವ ಸಂಖ್ಯೆ […]
Read More
28-06-2026, 5:00 PM
ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ 2026ನೇ ಅಗಸ್ಟ್ 23ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಾಧವ ಕೀರ್ತನೋತ್ಸವ ಭಜನಾ ಸ್ಪರ್ಧೆ 2026 ಆಮಂತ್ರಣ ಪತ್ರವನ್ನು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ನಡೆದ ಕೇಂದ್ರ ಸಮಿತಿಯ ಮಾಸಿಕ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು
Read More
25-06-2026, 8:00 PM
ಉಡುಪಿ, ಜೂನ್ 25: ಯುವವಾಹಿನಿ (ರಿ.) ಉಡುಪಿ ಘಟಕದ ವತಿಯಿಂದ ಗುರು ಸತ್ಸಂಗ ಕಾರ್ಯಕ್ರಮವು ಗುರುವಾರ ಸಂಜೆ ಕಲೆ ಮತ್ತು ಸಾಹಿತ್ಯ ನಿರ್ದೇಶಕರಾದ ಸಂದೇಶ್ ಕಟಪಾಡಿ ಅವರ ಆತಿಥ್ಯದಲ್ಲಿ ಕಟಪಾಡಿಯಲ್ಲಿರುವ ಅವರ ನಿವಾಸದಲ್ಲಿ ಭಕ್ತಿಭಾವದಿಂದ ನಡೆಯಿತು. ದೀಪ ಪ್ರಜ್ವಲನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಘಟಕದ ಸದಸ್ಯರು ಭಜನಾ ಸಂಕೀರ್ತನೆ ನಡೆಸಿದರು. ಬಳಿಕ ಘಟಕದ ಮಾಜಿ ಅಧ್ಯಕ್ಷ ಭಾಸ್ಕರ್ ಸುವರ್ಣ ಅವರು ಗುರುಗಳಿಗೆ ಮಹಾಪೂಜೆ ನೆರವೇರಿಸಿ, ಎಲ್ಲರಿಗೂ ಮಹಾಪ್ರಸಾದ ವಿತರಿಸಿದರು. ಗುರು ಸಂದೇಶ ನೀಡಿದ ಖ್ಯಾತ ನಿರೂಪಕರು ಹಾಗೂ ಘಟಕದ […]
Read More
23-06-2026, 9:00 PM
ಕೂಳೂರು ಜೂನ್ 23: ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ 66ನೇ ಮನೆ-ಮನೆ ಭಜನೆ ಕಾರ್ಯಕ್ರಮವು ಘಟಕದ ಮಾಜಿ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ಅವರ “ಅನುಗೃಹ” ನಿವಾಸದಲ್ಲಿ ಮಂಗಳವಾರ ಭಕ್ತಿಭಾವದಿಂದ ನೆರವೇರಿತು. ಕಾರ್ಯಕ್ರಮದಲ್ಲಿ ನಡೆದ ಭಜನಾ ಸಂಕೀರ್ತನೆಯಲ್ಲಿ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ನಿರ್ದೇಶಕರು ಹಾಗೂ ಸದಸ್ಯರು ಭಾಗವಹಿಸಿ ಭಜನಾ ಸೇವೆಯಲ್ಲಿ ತೊಡಗಿಸಿಕೊಂಡರು. ಈ ಸಂದರ್ಭದಲ್ಲಿ ಭಾಸ್ಕರ್ ಕೋಟ್ಯಾನ್ ಅವರ ಮಾತೃಶ್ರೀಯವರನ್ನು ಕೂಳೂರು ಘಟಕದ ಅಧ್ಯಕ್ಷರಾದ ಗೀತಾ ವಸಂತ್ ಅವರು ಶಾಲು ಹೊದಿಸಿ, ಫಲಪುಷ್ಪ ಹಾಗೂ ಸ್ಮರಣಿಕೆ […]
Read More
22-06-2026, 9:00 PM
ಮಂಗಳೂರು: ದಿನಾಂಕ: 22-06-2026 ರಂದು ಸೋಮವಾರ ಸಂಜೆ 5.30 ಗಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ಶ್ರೀ ಗೋಪಾಲಕೃಷ್ಣ ಮಹಿಳಾ ಭಜನಾ ತಂಡ ಕದ್ರಿ ಕಂಬಳ ಇವರ ಸಹಯೋಗದೊಂದಿಗೆ ನಡೆಯಿತು. ಭಕ್ತಿ ಭಾವದಿಂದ ತುಂಬಿದ ಭಜನೆಯನ್ನು ಗೋಕರ್ಣನಾಥ ಹಾಗೂ ನಾರಾಯಣ ಗುರುಗಳಿಗೆ ಸಮರ್ಪಿಸಿದರು. ಸಂಜೆ 7 ಗಂಟೆಗೆ ಸರಿಯಾಗಿ ಕ್ಷೇತ್ರದ ನಾರಾಯಣ ಗುರುಗಳಿಗೆ ಪೂಜೆ ಸಲ್ಲಿಸಿ, ಭಜನಾ ತಂಡದ […]
Read More
07-06-2026, 10:00 PM
ಶಕ್ತಿನಗರ : ವರ್ಷದಲ್ಲಿ ಕೇವಲ 28 ದಿನಗಳ ಕಾಲ ಮಾತ್ರ ದರ್ಶನಕ್ಕೆ ಅವಕಾಶವಿರುವ ಈ ಪುಣ್ಯಕ್ಷೇತ್ರಕ್ಕೆ ತೆರಳಲು ಜೂನ್ 6, 2026ರಂದು ಶನಿವಾರ ರಾತ್ರಿ 10.45 ಗಂಟೆಗೆ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ನಿರ್ದೇಶಕರು ಹಾಗೂ ಸದಸ್ಯರು ಸೇರಿದಂತೆ ಸುಮಾರು 33 ಮಂದಿ ನಾಲ್ಯಪದವು ಶಕ್ತಿನಗರ ಶಾಲೆಯ ಬಳಿ ಸೇರಿದರು. ಪ್ರಯಾಣ ಆರಂಭಿಸುವ ಮುನ್ನ ಎಲ್ಲರೂ ಗುರುಗಳಿಗೆ ಪ್ರಾರ್ಥನೆ ಸಲ್ಲಿಸಿ, ಮಹಾದೇವನ ದರ್ಶನದ ಸಂಕಲ್ಪದೊಂದಿಗೆ ಯಾತ್ರೆಯನ್ನು ಆರಂಭಿಸಿದರು. ಮರುದಿನ ಬೆಳಿಗ್ಗೆ ಸುಮಾರು 4.30 ಗಂಟೆಗೆ ಕೊಟ್ಟಿಯೂರು ತಲುಪಿದ […]
Read More
07-06-2026, 10:00 PM
ಕೂಳೂರು : ಕೇರಳದ ಕಣ್ಣೂರು ಜಿಲ್ಲೆಯಲ್ಲಿರುವ ಕೊಟ್ಟಿಯೂರು ಮಹಾದೇವ ದೇವಸ್ಥಾನವು ಅತ್ಯಂತ ಪವಿತ್ರ ಹಾಗೂ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿದ್ದು, ತನ್ನ ಆಧ್ಯಾತ್ಮಿಕ ಮಹತ್ವದಿಂದ ಭಕ್ತರಿಗೆ ವಿಶಿಷ್ಟ ಅನುಭವವನ್ನು ನೀಡುತ್ತಿದೆ. ಈ ಪುಣ್ಯಕ್ಷೇತ್ರಕ್ಕೆ ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ವಿಶೇಷ ತೀರ್ಥಯಾತ್ರೆಯನ್ನು ಆಯೋಜಿಸಲಾಯಿತು. ಜೂನ್ 6, 2026ರಂದು ರಾತ್ರಿ 10.00 ಗಂಟೆಗೆ ಕೂಳೂರಿನಿಂದ ಬಸ್ಸಿನ ಮೂಲಕ ಯಾತ್ರೆ ಆರಂಭಗೊಂಡಿತು. ಈ ಯಾತ್ರೆಯಲ್ಲಿ ಘಟಕದ ಮಾಜಿ ಅಧ್ಯಕ್ಷರು, ಅಧ್ಯಕ್ಷರು, ನಿರ್ದೇಶಕರು ಹಾಗೂ ಸದಸ್ಯರು ಸೇರಿದಂತೆ ಸುಮಾರು 40 ಮಂದಿ […]
Read More
07-06-2026, 10:00 PM
ಮಂಗಳೂರು: ವರ್ಷದಲ್ಲಿ ಕೇವಲ ಒಂದು ತಿಂಗಳ ಅವಧಿಗೆ ಮಾತ್ರ ನಡೆಯುವ ಕೊಟ್ಟಿಯೂರು ಪರಶಿವನ ಜಾತ್ರೆಯ ಅಂಗವಾಗಿ ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಜೂನ್ 6, 2026ರಂದು ವಿಶೇಷ ಕ್ಷೇತ್ರಯಾತ್ರೆಯನ್ನು ಆಯೋಜಿಸಲಾಯಿತು. ರಾತ್ರಿ 8.30 ಗಂಟೆಗೆ ಮಂಗಳೂರಿನಿಂದ ಹೊರಟ ಯಾತ್ರಿಕರು ಮುಂಜಾನೆ ಸುಮಾರು 4 ಗಂಟೆಗೆ ಕೊಟ್ಟಿಯೂರು ಪುಣ್ಯಕ್ಷೇತ್ರವನ್ನು ತಲುಪಿದರು. ಪವಿತ್ರ ವಾವಲಿ ನದಿಯಲ್ಲಿ ಸ್ನಾನ ಮಾಡಿ, ಮಡಿ ಬಟ್ಟೆಯಲ್ಲಿ ಕ್ಷೇತ್ರ ಪ್ರದಕ್ಷಿಣೆ ಸಲ್ಲಿಸಿ, ಭಕ್ತಿಭಾವದಿಂದ ಪರಶಿವ ಮತ್ತು ಸತಿಯ ದರ್ಶನ ಪಡೆದರು. ಕೊಟ್ಟಿಯೂರು ಕ್ಷೇತ್ರವು ತನ್ನ […]
Read More
07-06-2026, 10:00 PM
ಕೆಂಜಾರು-ಕರಂಬಾರು: ಯುವವಾಹಿನಿ (ರಿ.) ಕೆಂಜಾರು-ಕರಂಬಾರು ಘಟಕದ ವತಿಯಿಂದ ಆಯೋಜಿಸಲಾದ ಕೊಟ್ಟಿಯೂರು ಪುಣ್ಯಕ್ಷೇತ್ರಗಳ ಪವಿತ್ರ ಯಾತ್ರೆಯು ಯಶಸ್ವಿಯಾಗಿ ನೆರವೇರಿತು. ಜೂನ್ 6, 2026ರಂದು ರಾತ್ರಿ 8.30 ಗಂಟೆಗೆ ಶ್ರೀ ದೇವಿ ಭಜನಾ ಮಂದಿರ, ಕೆಂಜಾರು-ಕರಂಬಾರುವಿನಿಂದ ಯಾತ್ರೆಯು ಅತ್ಯಂತ ಉತ್ಸಾಹದಿಂದ ಆರಂಭವಾಯಿತು. ಈ ಧಾರ್ಮಿಕ ಪ್ರವಾಸದಲ್ಲಿ ಒಂದು ಬಸ್ಸಿನಲ್ಲಿ 50 ಮಂದಿ ಹಾಗೂ ಒಂದು ಟಿಟಿ ವಾಹನದಲ್ಲಿ 14 ಮಂದಿ ಸೇರಿದಂತೆ ಒಟ್ಟು 64 ಮಂದಿ ಯಾತ್ರಿಕರು ಭಾಗವಹಿಸಿದ್ದರು.ಮರುದಿನ ಮುಂಜಾನೆ ಸುಮಾರು 4.00 ಗಂಟೆಗೆ ಯಾತ್ರಿಕರು ಪವಿತ್ರ ಕೊಟ್ಟಿಯೂರು ಕ್ಷೇತ್ರವನ್ನು […]
Read More