ಭಜನಾ ಕಾರ್ಯಕ್ರಮ
18-11-2019, 4:08 PM
ಶ್ರೀ ವಿಠೋಬ ಭಜನಾ ಮಂದಿರ ಬಾಳೆಹಿತ್ಲು ಮುಲ್ಕಿ ಇಲ್ಲಿನ ಭಜನಾ ಮಂಗಲೋತ್ಸವ ಕಾರ್ಯ ಕ್ರಮ ದಲ್ಲಿ ಯುವವಾಹಿನಿ (ರಿ,) ಮುಲ್ಕಿ ಘಟಕದ ಸದಸ್ಯ ರಿಂದ ಭಜನಾ ಕಾರ್ಯಕ್ರಮ ನಡೆಯಿತು ,
18-11-2019, 4:08 PM
ಶ್ರೀ ವಿಠೋಬ ಭಜನಾ ಮಂದಿರ ಬಾಳೆಹಿತ್ಲು ಮುಲ್ಕಿ ಇಲ್ಲಿನ ಭಜನಾ ಮಂಗಲೋತ್ಸವ ಕಾರ್ಯ ಕ್ರಮ ದಲ್ಲಿ ಯುವವಾಹಿನಿ (ರಿ,) ಮುಲ್ಕಿ ಘಟಕದ ಸದಸ್ಯ ರಿಂದ ಭಜನಾ ಕಾರ್ಯಕ್ರಮ ನಡೆಯಿತು ,
15-11-2019, 3:36 PM
ಯುವವಾಹಿನಿಯೆಂಬ ಕೂಡುಕುಟುಂಬದ ಸದಸ್ಯರೊಬ್ಬರ ಮದುವೆಯಲ್ಲಿ “””ಮದ್ಯಮುಕ್ತ ಮದರಂಗಿ“”” ಪ್ರತಿಜ್ಞಾ ವಿಧಿ ಸಂಕಲ್ಪ ದೊಂದಿಗೆ ನೆರವೇರಿಸಿ ನಾರಾಯಣ ಗುರುಗಳ ಸಂದೇಶವನ್ನು ಸಮಾಜಕ್ಕೆ ಸಾರಿದ ಅಭೂತಪೂರ್ವ ಕ್ಷಣ ನಮ್ಮ ಘಟಕದ ಸದಸ್ಯರಾದ ಚಿ.ರಕ್ಷಿತ್ ಕೃಷ್ಣ ಸನಿಲ್ ರವರ ಮದುವೆಯ ಮದರಂಗಿ ಕಾರ್ಯಕ್ರಮ ವು ತಾರೀಕು 13-11-2019 ನೇ ಬುಧವಾರದಂದು ಸಾಯಂಕಾಲ ಮದುಮಗನ ನಿವಾಸ ಕೊಲ್ಯ ಕನೀರುಬೀಡುವಿನಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ಸಂತ ಸೆಬಾಸ್ಟಿಯನ್ ಕಾಲೇಜು ಪೆರ್ಮನ್ನೂರು ತೊಕ್ಕೋಟು ಇಲ್ಲಿಯ ಉಪನ್ಯಾಸಕರಾದ ಸಾಹಿತಿ ಅರುಣ್ ಉಳ್ಳಾಲ್ ರವರ ಆಶಯ ಭಾಷಣದಲ್ಲಿ ತಿಳಿಯಪಡಿಸಿದ ವಿಚಾರ […]
14-11-2019, 4:04 PM
ಇತ್ತೀಚೆಗೆ ಯುವಜನಾಂಗವು ಮದರಂಗಿ ಕಾರ್ಯಕ್ರಮದಲ್ಲಿ ಮಧ್ಯಪಾನಕ್ಕಾಗಿಯೇ ಆಸಕ್ತಿಯಿಂದ ಭಾಗವಹಿಸಿ, ಅನೇಕ ಅನಾಹುತವನ್ನು ಸೃಷ್ಟಿಸುತ್ತೀವೆ.ಆದರೆ ನಮ್ಮ ಘಟಕದ ಸಕ್ರಿಯೆ ಸದಸ್ಯೆಯಾಗಿರುವ ಕುಮಾರಿ ಹರ್ಷಿತರವರ ಮದರಂಗಿ ಶಾಸ್ತ್ರವು ಬಹಳ ವಿಭಿನ್ನತೆಗೆ ಸಾಕ್ಷಿಯಾಯಿತು. ದಿನಾಂಕ 13/11/2019ರಂದು ಅವಳ ಸ್ವಗೃಹವಾದ ಕುರಿಯಾಳದಲ್ಲಿ ಸಂಜೆ ಗೋಧೂಳಿ ಲಗ್ನದಲ್ಲಿ ಸತ್ಯನಾರಾಯಣ ಪೂಜೆ,ನಂತರ ಓಂಕಾರೇಶ್ವರ ಭಜನಾಮಂಡಳಿಯವರಿಂದ ಭಜನೆ ಕುಣಿತ ಅರಳುವ ಪ್ರತಿಭೆಗಳಿಂದ ಮಕ್ಕಳ ಮತ್ತು ಯುವಕರ ಸಾಂಸ್ಕೃತಿಕ ಕಾರ್ಯಕ್ರಮ,ಹಲವು ರೀತಿಯ ಮೋಜಿನ ಆಟಗಳು ಪ್ರೇಕ್ಷಕರನ್ನು ಮನರಂಜಿಸಿದವು. ಈ ರೀತಿಯಾಗಿ ಮಧ್ಯಪಾನವು ಸಮಾಜದ ಸ್ವಾಸ್ಥ್ಯದ ವಿನಾಶಕ್ಕೆ ಕಾರಣವಾಗುತ್ತಿದ್ದು , […]
10-11-2019, 2:44 AM
ಗುತ್ತು ಮನೆಯಲ್ಲಿ ಯುವವಾಹಿನಿ ಮಾಣಿ ಘಟಕದ ತುಳಸಿ ಪರ್ಬ ಕಾರ್ಯಕ್ರಮ ‘ಗುತ್ತು’ ಎಂದರೆ ಇತಿಹಾಸ ಘನೀಭವಿಸಿದಂತೆ ಮತ್ತು ಮರುಜೀವಿಸಿದಂತೆ. ಅದು ಒಂದು ವಾಸ್ತವವೂ ಹೌದು, ಕಲ್ಪನೆಯೂ ಹೌದು. ಅದೊಂದು ಅನುಭವಜನ್ಯ ಸತ್ಯ ಮತ್ತು ಪುನಃ ಪಡೆದುಕೊಂಡ ಅನುಭವ”. ಇಂತಹ ಗುತ್ತು ಮನೆತನದಲ್ಲಿ ಒಂದು ಇಡ್ಕಿದು ಗ್ರಾಮದ ಸೂರ್ಯ ಚಂದ್ರಾವತಿ ಅಮ್ಮನವರ ಗುತ್ತು ಮನೆತನ. ನಮ್ಮ ಸಂಸ್ಕೃತಿಯನ್ನು ನೆನಪಿಸುವ, ಹಾಗೂ ಧಾರ್ಮಿಕತೆಯನ್ನು ಬಿಂಬಿಸುವ ಯುವವಾಹಿನಿ ತುಳಸಿಪರ್ಬ ಕಾರ್ಯಕ್ರಮ ಘಟಕದ ನೂತನ ಅಧ್ಯಕ್ಷರಾದ ರಮೇಶ್ ಪೂಜಾರಿ ಮುಜಾಲ ಇವರ ಅಧ್ಯಕ್ಷತೆಯಲ್ಲಿ […]
09-11-2019, 2:49 AM
ಮದ್ಯ ಮುಕ್ತ ಮದರಂಗಿಗೆ ಸಾಕ್ಷಿಯಾಯಿತು ಯುವವಾಹಿನಿ (ರಿ) ವೇಣೂರು ಘಟಕ ವೇಣೂರು ನ. 8 : ಮದ್ಯಪಾನವು ಸಾಮಾಜದ ಸ್ವಾಸ್ಥ್ಯ ದ ವಿನಾಶಕ್ಕೆ ಕಾರಣವಾಗುತ್ತಿದ್ದು,ಇತ್ತೀಜೆಗೆ ಮದುವೆಯ ಮದರಂಗಿಯು ನವಕುಡುಕರನ್ನು ಸೃಷ್ಟಿಸುವ ಸಮಾರಂಭವಾಗಿ ಪರಿವರ್ತನೆಗೊಂಡಿದೆ. ಇದು ಬದಲಾಗಿ ಎಲ್ಲಾ ಕಡೆ ಮದ್ಯಮುಕ್ತ ಮದರಂಗಿ ಕಾರ್ಯಕ್ರಮ ನಡೆಯುವಂತಾಗಲಿ ಎಂದು ಆಳ್ವಾಸ್ ಕಾಲೇಜಿನ ಕನ್ನಡ ಪ್ರಾಧ್ಯಾಪಕರಾಗದ ಡಾ। ಯೋಗೀಶ್ ಕೈರೋಡಿ ಹೇಳಿದರು. ಯುವವಾಹಿನಿ (ರಿ) ವೇಣೂರು ಘಟಕದ ಆಶ್ರಯದಲ್ಲಿ ಬಜಿರೆಗ್ರಾಮದ ಹೊಸಮನೆ ಮನೋಜ್ ಪೂಜಾರಿಯವರ ಮನೆಯಲ್ಲಿ ನಡೆದ ಮದ್ಯ ಮುಕ್ತ ಮದರಂಗಿ ಕಾರ್ಯಕ್ರಮದಲ್ಲಿ […]
01-11-2019, 4:29 PM
ದಿನಾಂಕ 1/11/2019ರ ಶುಕ್ರವಾರ ಸಂಜೆ ಘಟಕದ ಆಶ್ರಯದಲ್ಲಿ ಕುಣಿತ ಭಜನಾ ತರಗತಿಯನ್ನು ಘಟಕದ ಸಲಹೆಗಾರರು ರಘುನಾಥ ಶಾಂತಿ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಹರೀಶ್ ಸುವರ್ಣ ವಹಿಸಿದರು. ಘಟಕದ ಕಾರ್ಯದರ್ಶಿ ವಿಜಯ್ ಕುಮಾರ್ , ಯುವವಾಹಿನಿ ಮಹಿಳಾ ಸಂಚಲನ ಸಮಿತಿಯ ಸಂಚಾಲಕಿ ಶ್ರೀಮತಿ ಸುಜಾತ ಅಣ್ಣಿ ಪೂಜಾರಿ,ಕಲೆ ಮತ್ತು ಸಾಹಿತ್ಯ ನಿರ್ದೇಶಕರು ಜೀತೆಶ್ ಬೆಳ್ತಂಗಡಿ, ತರಬೇತುದಾರ ವಾಸು ಮುಂಡಾಜೆ ಉಪಸ್ಥಿತರಿದ್ದರು. ಗುರುರಾಜ ಗುರಿಪಳ್ಳ ಸ್ವಾಗತಿಸಿದರು. ನಿಕಟಪೂರ್ವ ಅಧ್ಯಕ್ಷ ಪ್ರಶಾಂತ್ ಮಚ್ಚಿನ ನಿರೂಪಿಸಿ ,ವಂದಿಸಿದರು.
31-10-2019, 4:05 PM
ಯುವವಾಹಿನಿ (ರಿ.) ಬಂಟ್ವಾಳ ಘಟಕದ ವತಿಯಿಂದ ನೆರವೇರಿದ ವಿಶಿಷ್ಟ ಕಾರ್ಯಕ್ರಮ.. ಲೋಕ ಶಾಂತಿಯ ಹರಿಕಾರ ಬ್ರಹ್ಮ ಶ್ರೀ ನಾರಾಯಣ ಗುರುಗಳ ತತ್ವವನ್ನು ಜೀವನದಲ್ಲಿ ಪಾಲಿಸಲು ಪಣತೊಟ್ಟು,, ಕಠಿಬದ್ಧರಾಗುವುದರೊಂದಿಗೆ ಮದುವೆಯ ಮುಂಚಿತವಾಗಿ ಜರಗುವ ಶುಭಕಾರ್ಯವನ್ನು ಪಾವಿತ್ರ್ಯತೆಯೆಡೆಗೊಯ್ದ “ಮದ್ಯಮುಕ್ತ ಮದರಂಗಿ” ಯುವವಾಹಿನಿ(ರಿ.) ಬಂಟ್ವಾಳ ಘಟಕದ ಸಕ್ರಿಯ ಸದಸ್ಯರಾದ ಹರೀಶ್ ಸಾಲ್ಯಾನ್ ಅಜಕಲ ರವರ ಮದುವೆಯ ಮದರಂಗಿಯ ಕಾರ್ಯಕ್ರಮವು ವಿಭಿನ್ನತೆಯಿಂದ ನೆರವೇರಿದ್ದು,ಸಮಾಜದಿಂದಲೇ ಸಮಾಜವನ್ನು ತಿದ್ದಿ ಸರಿದಾರಿಗೊಯ್ಯುವ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಮುನ್ನುಡಿ ಬರೆದ ಯುವವಾಹಿನಿ (ರಿ.)ಬಂಟ್ವಾಳ ಘಟಕ ದ ಸದಸ್ಯರ ವಿಶಾಲವಾದ […]
30-10-2019, 4:16 PM
ನಮ್ಮ ಮನೆ ಹಬ್ಬ ದೀಪಾವಳಿ ಕತ್ತಲಿನಿಂದ ಬೆಳಕಿನೆಡೆಗೆ ಕಾರ್ಯಕ್ರಮವು ಘಟಕದ ಕೋಶಾಧಿಕಾರಿ ಇಂದಿರ ರವರ ಮನೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ರವರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಸುಭಾಷ್ ರವರು ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷರಾದ ಸಂಜೀವ ಪೂಜಾರಿ, ಯುವವಾಹಿನಿ ಕೂಳೂರು ಘಟಕದ ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್, ನಿಕಟಪೂರ್ವ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ಪವಿತ್ರ. ಯು ಅಮೀನ್, ಮಾರ್ಗದರ್ಶಕರಾದ ಗಿರಿಧರ ಸನಿಲ್, ಕಾರ್ಯಕ್ರಮದ ಸಂಚಾಲಕರಾದ ಇಂದಿರ […]
30-10-2019, 2:32 AM
ಬ್ರಹ್ಮಶ್ರೀ ನಾರಾಯಣ ಗುರು ಧ್ಯಾನ ಮಂದಿರ ಕೊಲ್ಯ ಹಾಗೂ ಯುವ ವಾಹಿನಿ(ರಿ.) ಕೊಲ್ಯ ಘಟಕದ ಆಶ್ರಯದಲ್ಲಿ ಜರುಗುವ “ಧಾರ್ಮಿಕ ಶಿಕ್ಷಣ ಪದ್ಧತಿ ಹಾಗೂ ಭಜನಾ ತರಬೇತಿ ಕಮ್ಮಟ” ನಿರಂತರವಾಗಿ ನಡೆಯುತ್ತಿದ್ದು, ಇಂದು ದ್ವಿತೀಯ ತರಗತಿಯು ಭಜನಾ ಗುರುಗಳಾದ ಅರುಣ್ ಉಳ್ಳಾಲ್ ರವರಿಂದ ಸಂಜೆ 7.00 ರಿಂದ 8.00 ಗಂಟೆಯ ವರೆಗೆ ಜರಗಿತು. ಗುರುಗಳು ದೀಪಾವಳಿ ಹಬ್ಬದ ಮಹತ್ವವನ್ನು ಹಾಗೂ ಹಿಂದೂ ಪಂಚಾಂಗದ ಬಗ್ಗೆ ಕೆಲವು ಮಾಹಿತಿಗಳನ್ನು ಸಭೆಯಲ್ಲಿ ನೀಡಿದರು. ಭಜನೆಯಲ್ಲಿ ಸ್ವರ ಉಚ್ಛಾರದ ಬಗ್ಗೆ ಇರುವ ಮಹತ್ವಗಳನ್ನು ತಿಳಿಸಿದರು. […]
29-10-2019, 3:56 PM
ದಿನಾಂಕ 29.10.2019 ರಂದು ಸಂಜೆ ಯುವವಾಹಿನಿ ಸಭಾಂಗಣ ದಲ್ಲಿ ಘಟಕದ ಎಲ್ಲಾ ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಸೇರಿ ದೀಪಗಳ ಹಬ್ಬ ದೀಪಾವಳಿ ಯನ್ನು ಸಂಭ್ರಮ ಸಡಗರದಿಂದ ಆಚರಿಸಿದೇವು. ಸಾಯಂಕಾಲ 4.30 ಗಂಟೆಗೆ ಘಟಕದ ಹಿರಿಯ ಸದಸ್ಯರಾದ ಶ್ರೀಯುತ ಪರಮೇಶ್ವರ ಪೂಜಾರಿಯವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿಷ್ಣು ಸಹಸ್ರನಾಮದೊಂದಿಗೆ ಆರಂಭಗೊಂಡ ಭಜನಾ ಕಾರ್ಯಕ್ರಮದಲ್ಲಿ ವಿವಿಧ ಸದಸ್ಯರು ಎರಡು ಗಂಟೆಗಳ ಕಾಲ ಸುಶ್ರಾವ್ಯವಾಗಿ ಭಜನೆ ಹಾಡಿದರು. ನಂತರ 6.30 ಗಂಟೆಗೆ ಸಾಪ್ತಾಹಿಕ ಸಭೆಯನ್ನು […]