Yuvavahini

ಸಂಸ್ಕೃತಿ

ಕೆಂಜಾರು ಕರಂಬಾರು ಯುವವಾಹಿನಿ ಘಟಕದಿಂದ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆ

ಬಜಪೆ: ಯುವವಾಹಿನಿ (ರಿ.) ಕೆಂಜಾರು ಕರಂಬಾರು ಘಟಕದ ವತಿಯಿಂದ ಮೇಘೆ ಹುಣ್ಣಿಮೆಯ ಶುಭ ಸಂದರ್ಭದಲ್ಲಿ ದಿನಾಂಕ 03-03-2026, ಮಂಗಳವಾರದಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಕ್ಷೇತ್ರಕ್ಕೆ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ​ಬೆಳಿಗ್ಗೆ 4 ಗಂಟೆಗೆ ಕೆಂಜಾರು ಕರಂಬಾರಿನ ಶ್ರೀ ದೇವಿ ಭಜನಾ ಮಂದಿರದಿಂದ “ಓಂ ಗುರುಭ್ಯೋ ನಮಃ” ಎಂಬ ಗುರುಸ್ಮರಣೆಯೊಂದಿಗೆ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಘಟಕದ ಸದಸ್ಯರು ಹಾಗೂ ಭಕ್ತಾದಿಗಳು ಸೇರಿ ಒಟ್ಟು 15 ಮಂದಿಯ ತಂಡವು ಪಾದಯಾತ್ರೆಯ ಮೂಲಕ ಕಟೀಲು ಕ್ಷೇತ್ರವನ್ನು ತಲುಪಿ, ಅಮ್ಮನವರ ದರ್ಶನ ಪಡೆದು […]

Read More

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಭಜನಾ ಸೇವೆ

ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ದಿನಾಂಕ 02-03-2026, ಸೋಮವಾರದಂದು ನೆರವೇರಿತು. ​ಈ ವಾರದ ಭಜನಾ ಸೇವೆಯನ್ನು ಅಶೋಕ್ ನಗರ ದಂಬೇಲ್‌ನ ವೆಂಕಟೇಶ್ ರಾವ್ ಮತ್ತು ಬಳಗದವರ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿತ್ತು. ಭಕ್ತಿಪ್ರಧಾನವಾದ ಸಂಕೀರ್ತನೆಗಳ ಮೂಲಕ ನೆರೆದಿದ್ದ ಭಕ್ತಾದಿಗಳಲ್ಲಿ ಆಧ್ಯಾತ್ಮಿಕ ಚೈತನ್ಯವನ್ನು ಮೂಡಿಸಲಾಯಿತು.​ಕಾರ್ಯಕ್ರಮದಲ್ಲಿ ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಘಟಕದ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡು ದೇವರ […]

Read More

ಪುಣಚ ನೀರುಮಜಲು ಗರಡಿ ನೇಮೋತ್ಸವ: ಯುವವಾಹಿನಿ ವಿಟ್ಲ ಘಟಕದಿಂದ ಶ್ರಮದಾನ ಸೇವೆ

ವಿಟ್ಲ: ಇಲ್ಲಿನ ಪ್ರಸಿದ್ಧ ಪುಣಚ ನೀರುಮಜಲು ವಾರ್ಷಿಕ ಬ್ರಹ್ಮ ಬೈದೆರ್ಕಳ ಗರಡಿ ನೇಮೋತ್ಸವದ ಅಂಗವಾಗಿ, ಯುವವಾಹಿನಿ (ರಿ.) ವಿಟ್ಲ ಘಟಕದ ಸದಸ್ಯರು ದಿನಾಂಕ 01-03-2026, ಭಾನುವಾರದಂದು ವಿಶೇಷ ಸ್ವಯಂಸೇವಕ ಸೇವೆಯನ್ನು ಸಲ್ಲಿಸಿದರು.​ನೇಮೋತ್ಸವಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಅನ್ನ ಪ್ರಸಾದ ವಿತರಣೆಯ ಜವಾಬ್ದಾರಿಯನ್ನು ಹೊತ್ತಿದ್ದ ಘಟಕದ ಸದಸ್ಯರು, ಅತ್ಯಂತ ಶಿಸ್ತುಬದ್ಧವಾಗಿ ಮತ್ತು ಭಕ್ತಿಪೂರ್ವಕವಾಗಿ ಶ್ರಮದಾನ ಮಾಡಿದರು. ಯುವವಾಹಿನಿ ಸದಸ್ಯರ ಈ ನಿಸ್ವಾರ್ಥ ಸೇವೆಯನ್ನು ಗುರುತಿಸಿದ ಗರಡಿಯ ಆಡಳಿತ ಮಂಡಳಿಯು, ಘಟಕದ ಕಾರ್ಯವೈಖರಿಯನ್ನು ಶ್ಲಾಘಿಸಿದೆ. ಈ ಸೇವಾ ಕಾರ್ಯಕ್ರಮದಲ್ಲಿ ವಿಟ್ಲ ಘಟಕದ […]

Read More

ಗೆಜ್ಜೆಗಿರಿ ವಾರ್ಷಿಕ ಮಹೋತ್ಸವದಲ್ಲಿ ಯುವವಾಹಿನಿ ಕೂಳೂರು ಘಟಕ ಭಾಗಿ

ಮಂಗಳೂರು: ತುಳುನಾಡಿನ ಪವಿತ್ರ ಧಾರ್ಮಿಕ ಕ್ಷೇತ್ರವಾದ ಗೆಜ್ಜೆಗಿರಿ ನಂದನ ಬಿತ್ತಿಲ್‌ ಇಲ್ಲಿ ಜರುಗಿದ ವಾರ್ಷಿಕ ಮಹೋತ್ಸವ ಹಾಗೂ ನೇಮೋತ್ಸವ ಪುಣ್ಯ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಕೂಳೂರು ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡರು. ​ಸಮಾಜದ ಸಾಂಸ್ಕೃತಿಕ ಅಸ್ಮಿತೆಯ ತಾಣವಾಗಿರುವ ಗೆಜ್ಜೆಗಿರಿಗೆ ಸಂಘಟಿತವಾಗಿ ಭೇಟಿ ನೀಡಿದ ಘಟಕದ ತಂಡವು, ಕ್ಷೇತ್ರದ ದೈವಿಕ ವಿಧಿವಿಧಾನಗಳಲ್ಲಿ ಭಾಗಿಯಾಗಿ ಭಕ್ತಿ ಸಮರ್ಪಣೆ ಮಾಡಿತು.

Read More

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ : ಹೊರಕಾಣಿಕೆ ಸಮರ್ಪಣೆ

ವೇಣೂರು: ನಾರಾವಿಯ ಪುಣ್ಯಕ್ಷೇತ್ರ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಜರಗುತ್ತಿರುವ ಬ್ರಹ್ಮಕಲಶ ಮಹೋತ್ಸವದ ಅಂಗವಾಗಿ, ಯುವವಾಹಿನಿ (ರಿ.) ವೇಣೂರು ಘಟಕದ ವತಿಯಿಂದ ಅತ್ಯಂತ ಯಶಸ್ವಿಯಾಗಿ ಹೊರಕಾಣಿಕೆ ಸಮರ್ಪಿಸಲಾಯಿತು.​ದಿನಾಂಕ 01-03-2026ರ ಭಾನುವಾರದಂದು ನಡೆದ ಈ ವೈಭವದ ಹೊರಕಾಣಿಕೆ ಮೆರವಣಿಗೆಯಲ್ಲಿ ವೇಣೂರು ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಅತ್ಯಂತ ಉತ್ಸಾಹದಿಂದ ಭಾಗವಹಿಸಿದ್ದರು. ಭಕ್ತಿ ಮತ್ತು ಶ್ರದ್ಧೆಯ ಸಂಕೇತವಾಗಿ ಸಮರ್ಪಿಸಲಾದ ಈ ಹೊರಕಾಣಿಕೆಯನ್ನು ದೇವಸ್ಥಾನದ ಸಮಿತಿಯವರು ಗೌರವಪೂರ್ವಕವಾಗಿ ಸ್ವೀಕರಿಸಿದರು. ​ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಯುವವಾಹಿನಿ ವೇಣೂರು ಘಟಕದ ಪದಾಧಿಕಾರಿಗಳು, ಮಾಜಿ […]

Read More

ಗೆಜ್ಜೆಗಿರಿ ಜಾತ್ರಾ ಮಹೋತ್ಸವ: ಯುವವಾಹಿನಿ ಕೊಲ್ಯ ಘಟಕದಿಂದ ಸ್ವಯಂ ಸೇವೆ ಹಾಗೂ ಅನ್ನದಾನ ಸೇವೆ

ಕೊಲ್ಯ : ತುಳುನಾಡಿನ ಪವಿತ್ರ ಧಾರ್ಮಿಕ ಕ್ಷೇತ್ರವಾದ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತಿಲ್‌ನಲ್ಲಿ ಜರುಗಿದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಯುವವಾಹಿನಿ (ರಿ.) ಕೊಲ್ಯ ಘಟಕದ ಸದಸ್ಯರು ಭಕ್ತಿಪೂರ್ವಕವಾಗಿ ಸ್ವಯಂ ಸೇವೆಯನ್ನು ಸಲ್ಲಿಸಿದರು.​ಆದಿ ದೈವ ಧೂಮಾವತಿ, ಸಾಯನ ಬೈದ್ಯರ ಗುರುಪೀಠ ಹಾಗೂ ದೇಯಿ ಬೈದ್ಯೆತಿ-ಕೋಟಿ ಚೆನ್ನಯರ ಮೂಲಸ್ಥಾನವಾದ ಈ ಪವಿತ್ರ ಕ್ಷೇತ್ರದಲ್ಲಿ ಫೆಬ್ರವರಿ 28ರಂದು ಜರುಗಿದ ಕಾರ್ಯಕ್ರಮದಲ್ಲಿ ಘಟಕದ ಹೆಚ್ಚಿನ ಸಂಖ್ಯೆಯ ಸದಸ್ಯರು ಪಾಲ್ಗೊಂಡರು. ಬೆಳಿಗ್ಗೆಯಿಂದ ಸಂಜೆಯವರೆಗೆ ಕ್ಷೇತ್ರದ ಪ್ರಸಾದ ಪ್ಯಾಕಿಂಗ್ ಹಾಗೂ ದೇಯಿ ಬೈದ್ಯೆತಿ […]

Read More

ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ: ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಭೇಟಿ ಮತ್ತು ಪ್ರಸಾದ ಸ್ವೀಕಾರ

ಮಂಗಳೂರು: ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್‌ಲ್ (ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ) ಇಲ್ಲಿ ನಡೆದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ, ದಿನಾಂಕ 28-02-2026 ರಂದು ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಕ್ಷೇತ್ರದ ದರ್ಶನ ಮತ್ತು ಪ್ರಸಾದ ಸ್ವೀಕಾರ ಕಾರ್ಯಕ್ರಮ ನಡೆಯಿತು. ಜಾತ್ರಾ ಮಹೋತ್ಸವದ ಪುಣ್ಯ ಕಾಲದಲ್ಲಿ ಘಟಕದ ಸದಸ್ಯರೆಲ್ಲರೂ ಒಟ್ಟಾಗಿ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ವತಿಯಿಂದ ನೀಡಲಾಗುವ ಬ್ರಹ್ಮ ಬೈದರ್ಕುಲು ಹಾಗೂ […]

Read More

ಗೆಜ್ಜೆಗಿರಿ ಜಾತ್ರಾ ಮಹೋತ್ಸವ: ಯುವವಾಹಿನಿ ಕಂಕನಾಡಿ ಘಟಕದಿಂದ ಸ್ವಯಂ ಸೇವೆ ಮತ್ತು ಅನ್ನದಾನ ದೇಣಿಗೆ

ಮಂಗಳೂರು: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಇತ್ತೀಚೆಗೆ ಜರುಗಿದ ಜಾತ್ರಾ ಮಹೋತ್ಸವದ ಪುಣ್ಯ ಸಂದರ್ಭದಲ್ಲಿ, ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ವಿಶೇಷ ಸ್ವಯಂ ಸೇವೆ ಹಾಗೂ ಅನ್ನದಾನ ಸೇವೆಗಳನ್ನು ಸಲ್ಲಿಸಲಾಯಿತು. ​ದಿನಾಂಕ 28-02-2026ರ ಮಡಿಲು ಸೇವೆಯ ಪವಿತ್ರ ದಿನದಂದು ಕಂಕನಾಡಿ ಘಟಕದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರದಲ್ಲಿ ಉಪಸ್ಥಿತರಿದ್ದು, ಭಕ್ತಾದಿಗಳ ಅನುಕೂಲಕ್ಕಾಗಿ ಸ್ವಯಂಸೇವಕರಾಗಿ ಕಾರ್ಯನಿರ್ವಹಿಸಿದರು. ಕ್ಷೇತ್ರದ ಶಿಸ್ತು ಮತ್ತು ವ್ಯವಸ್ಥಿತ ನಿರ್ವಹಣೆಯಲ್ಲಿ ಪಾಲ್ಗೊಂಡು ಸೇವೆಯನ್ನು ಅರ್ಪಿಸಿದರು.​ಅನ್ನದಾನಕ್ಕೆ ಧನಸಹಾಯ:ಯುವವಾಹಿನಿಯ ಸಾಮಾಜಿಕ ಬದ್ಧತೆಯ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿಯೂ […]

Read More

ದೇವೆರ್ ಬರೆತಿನ ಅಣೆಬರಹ’ ನಾಟಕ ಪ್ರದರ್ಶನ

ಕೊಣಾಜೆ: ಪಾನೇಲದ ಓಂ ಶ್ರೀ ಗಣೇಶ ಯುವಕ ಮಂಡಲ (ರಿ.) ಮಂಡಲಿ ಹಾಗೂ ಭಜನಾ ಮಂಡಳಿಯ ನೂತನ ಕಟ್ಟಡದ ಶುಭ ಉದ್ಘಾಟನಾ ಸಮಾರಂಭವು ಫೆಬ್ರವರಿ 27, 2026ರ ಶುಕ್ರವಾರದಂದು ಅತ್ಯಂತ ಸಡಗರ-ಸಂಭ್ರಮದಿಂದ ನೆರವೇರಿತು.​ಈ ಕಾರ್ಯಕ್ರಮದ ಸಾಂಸ್ಕೃತಿಕ ವೈವಿಧ್ಯದ ಭಾಗವಾಗಿ, ಯುವವಾಹಿನಿ (ರಿ.) ಗ್ರಾಮ ಚಾವಡಿ ಕೊಣಾಜೆ ಘಟಕದ ಸದಸ್ಯರಿಂದ “ದೇವೆರ್ ಬರೆತಿನ ಅಣೆಬರಹ” ಎಂಬ ತುಳು ಸಾಮಾಜಿಕ ಹಾಸ್ಯಮಯ ನಾಟಕವು ಪ್ರದರ್ಶನಗೊಂಡಿತು. ಗ್ರಾಮ ಚಾವಡಿ ಕೊಣಾಜೆ ಘಟಕದ ಕಲಾವಿದರ ಚಾಕಚಕ್ಯತೆ ಮತ್ತು ಹಾಸ್ಯಮಯ ಅಭಿನಯವು ನೆರೆದಿದ್ದ ಪ್ರೇಕ್ಷಕರ […]

Read More

ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ: ಯುವವಾಹಿನಿ ಶಕ್ತಿನಗರ ಘಟಕದಿಂದ ಸ್ವಯಂಸೇವಕ ಸೇವೆ ಮತ್ತು ದೇಣಿಗೆ ಸಮರ್ಪಣೆ

ಶಕ್ತಿನಗರ : ಯುವವಾಹಿನಿ (ರಿ.) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 27-02-2026 ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್‌ಲ್ ನಡೆದ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನದ ಜಾತ್ರಾ ಮಹೋತ್ಸವದಲ್ಲಿ ವಿಶೇಷ ಸ್ವಯಂಸೇವಕ ಸೇವೆಯನ್ನು ಸಲ್ಲಿಸಲಾಯಿತು.​ಗೆಜ್ಜೆಗಿರಿ ಕ್ಷೇತ್ರದಲ್ಲಿ ನಡೆದ ಭವ್ಯ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಘಟಕದ ಸದಸ್ಯರು ಶಿಸ್ತಿನಿಂದ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಪ್ರತಿ ವರ್ಷದ ಸಂಪ್ರದಾಯದಂತೆ ಈ ಬಾರಿಯೂ ಕ್ಷೇತ್ರದ ಅನ್ನದಾನ ಸೇವೆಗೆ ಶಕ್ತಿನಗರ ಘಟಕದ ವತಿಯಿಂದ ಆರ್ಥಿಕ ದೇಣಿಗೆಯನ್ನು ಹಸ್ತಾಂತರಿಸಲಾಯಿತು. ಈ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!