24-02-2026, 9:00 PM
ಕೂಳೂರು: ಮನೆ-ಮನೆ ಭಜನೆಯು ಕುಟುಂಬದಲ್ಲಿ ಧಾರ್ಮಿಕ ಶ್ರದ್ಧೆ ಮತ್ತು ಒಗ್ಗಟ್ಟನ್ನು ಹೆಚ್ಚಿಸುತ್ತದೆ. ಯುವವಾಹಿನಿಯ ಇಂತಹ ಸತ್ಕಾರ್ಯಗಳು ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲಿ ಎಂದು ಸದಸ್ಯರು ಆಶಿಸಿದರು. ಸುಮಂಗಲ ಸಿ. ಕೋಟ್ಯಾನ್ ಅವರ ಮನೆಯಲ್ಲಿ ನಡೆದ ಭಜನಾ ಸಂಕೀರ್ತನೆಯಲ್ಲಿ ಘಟಕದ ಮಾಜಿ ಅಧ್ಯಕ್ಷರು, ನಿರ್ದೇಶಕರು ಹಾಗೂ ಸದಸ್ಯರು ಭಕ್ತಿಯಿಂದ ಪಾಲ್ಗೊಂಡಿದ್ದರು. ಯುವವಾಹಿನಿ ಕೂಳೂರು ಘಟಕದ ವತಿಯಿಂದ 2026-27ನೇ ಸಾಲಿನ ಪ್ರಥಮ ‘ಮನೆ-ಮನೆ ಭಜನೆ’ ಕಾರ್ಯಕ್ರದಲ್ಲಿ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.ಇದೇ ಸುಸಂದರ್ಭದಲ್ಲಿ ಘಟಕದ ಮುಖವಾಣಿ […]
Read More
20-02-2026, 9:00 PM
ಕಡಬ: ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ ಧಾರ್ಮಿಕ ಜಾಗೃತಿ ಮತ್ತು ಸದಸ್ಯರ ನಡುವಿನ ಬಾಂಧವ್ಯ ವೃದ್ಧಿಸುವ ನಿಟ್ಟಿನಲ್ಲಿ ಐವತ್ತೊಕ್ಲು ಗ್ರಾಮದ ಪೊಳೆಂಜದಲ್ಲಿ ಭಜನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ದಿನಾಂಕ 20.02.2026ರ ಶುಕ್ರವಾರ ಸಂಜೆ ಶ್ರೀಮತಿ ಮತ್ತು ಶ್ರೀ ನಾಗೇಶ್ ಪೂಜಾರಿಯವರ ಗೃಹದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಘಟಕದ ಸದಸ್ಯರು ಅತ್ಯಂತ ಭಕ್ತಿ ಮತ್ತು ಉತ್ಸಾಹದಿಂದ ಪಾಲ್ಗೊಂಡರು. ಸಂಜೆ 7.15 ರಿಂದ 9.00 ಗಂಟೆಯವರೆಗೆ ನಡೆದ ಭಜನೆಯಲ್ಲಿ ಸುಶ್ರಾವ್ಯವಾಗಿ ನಾಮಸಂಕೀರ್ತನೆ ಮಾಡುವ ಮೂಲಕ ಭಕ್ತಿ ಸೇವೆಯನ್ನು ಸಮರ್ಪಿಸಲಾಯಿತು. ಧಾರ್ಮಿಕ ಬದ್ಧತೆ: […]
Read More
04-02-2026, 11:56 AM
ಸಸಿಹಿತ್ಲು : ಯುವವಾಹಿನಿ (ರಿ.) ಸಸಿಹಿತ್ಲು ಘಟಕದ ಸದಸ್ಯರು ದಿನಾಂಕ 04.02.2026 ರಿಂದ 08.02.2026ರವರೆಗೆ ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನ, ಸಸಿಹಿತ್ಲು ಇಲ್ಲಿ ನಡೆದ ಹಸಿರು ಹೊರೆಕಾಣಿಕೆ, ನೇಮೋತ್ಸವ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳ ಸಂದರ್ಭದಲ್ಲಿ ಸ್ವಯಂಸೇವಕರಾಗಿ ಸೇವೆ ಸಲ್ಲಿಸಿದರು. ಐದು ದಿನಗಳ ಕಾಲ ನಡೆದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತರ ವ್ಯವಸ್ಥೆ, ಅನ್ನಸಂತರ್ಪಣೆ, ಶಿಸ್ತು ನಿರ್ವಹಣೆ ಸೇರಿದಂತೆ ವಿವಿಧ ಸೇವಾ ಚಟುವಟಿಕೆಗಳಲ್ಲಿ ಸದಸ್ಯರು ತೊಡಗಿಸಿಕೊಂಡರು. ಈ ಸಂದರ್ಭದಲ್ಲಿ ಯುವವಾಹಿನಿ ಸದಸ್ಯರು ಶ್ರದ್ಧಾಭಕ್ತಿಯಿಂದ ಸೇವೆ ಸಲ್ಲಿಸಿ ದೈವಸ್ಥಾನದ ಆಡಳಿತ […]
Read More
28-01-2026, 7:00 PM
ಯುವವಾಹಿನಿ (ರಿ.) ಪಣಂಬೂರು–ಕುಳಾಯಿ ಘಟಕದ ವತಿಯಿಂದ “ಮನೆ ಮನದಲ್ಲಿ ಭಜನೆ” ಯೋಜನೆಯ ಅಂಗವಾಗಿ, ದಿನಾಂಕ 28-01-2026 ಬುಧವಾರ ಘಟಕದ ಗೌರವ ಸದಸ್ಯರಾದ ಪ್ರಕಾಶ್ ಪೂಜಾರಿ ಅವರ ಮನೆಯಲ್ಲಿ ಸಂಜೆ 6:00 ಗಂಟೆಗೆ ಗುರುಪೂಜೆ ಹಾಗೂ ಘಟಕದ ಭಜನಾ ತಂಡದ ವತಿಯಿಂದ ಭಜನಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಭಕ್ತಿ–ಭಾವಪೂರ್ಣ ಭಜನಾ ಕೀರ್ತನೆಯಲ್ಲಿ ಯುವವಾಹಿನಿ ಮಂಗಳೂರು ಘಟಕದ ಸದಸ್ಯರಾದ ಸದಾನಂದ ಪೂಜಾರಿ ಅವರು ಗುರುಪೂಜಾ ಕಾರ್ಯವನ್ನು ನೆರವೇರಿಸಿದರು. ಭಜನಾ ಸೇವೆಗೆ ಆತಿಥ್ಯ ವಹಿಸಿದ ಪ್ರಕಾಶ್ ಪೂಜಾರಿ ದಂಪತಿಗಳನ್ನು ಘಟಕದ ವತಿಯಿಂದ […]
Read More
25-01-2026, 9:00 PM
ಕಡಬ: ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ ದಿನಾಂಕ 25.01.2026ರ ಆದಿತ್ಯವಾರ ಸಂಜೆ 7.15 ರಿಂದ 9.30 ಗಂಟೆಯವರೆಗೆ ಕಡಬದ ಕುತ್ಯಾಡಿ ಗ್ರಾಮದಲ್ಲಿ ಐದು ಮನೆಗಳಲ್ಲಿ ಮನೆ–ಮನೆ ಭಜನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕುತ್ಯಾಡಿಯ ಶ್ರೀಮತಿ ಮತ್ತು ಶ್ರೀ ಸುನಂದ ಪೂಜಾರಿ, ಶ್ರೀಮತಿ ಯಶೋದಾ ಪೂಜಾರಿ, ಶ್ರೀಮತಿ ಸುನಿತಾ ದಿನೇಶ್ ಪೂಜಾರಿ, ಶ್ರೀಮತಿ ಪ್ರೇಮ ಪೂಜಾರಿ, ಶ್ರೀಮತಿ ದಿವ್ಯ ಮತ್ತು ಬೇಬಿ ಪೂಜಾರಿ ಇವರ ಮನೆಗಳಲ್ಲಿ ಭಜನಾ ಕಾರ್ಯಕ್ರಮಗಳು ನಡೆಯಿತು. ಕಾರ್ಯಕ್ರಮದಲ್ಲಿ ಯುವವಾಹಿನಿ ಕಡಬ ಘಟಕದ ಸದಸ್ಯರು ಉತ್ಸಾಹದಿಂದ […]
Read More
11-01-2026, 10:00 AM
ಕಡಬ : ಕಡಬ ಶ್ರೀ ಮಹಾವಿಷ್ಣು ದೇವಸ್ಥಾನ, ಪಿಜಕ್ಕಳದಲ್ಲಿ ದಿನಾಂಕ 11.01.2026 ನೇ ಬೆಳಿಗ್ಗೆ ಧನುಪೂಜೆ ಪ್ರಯುಕ್ತ ಯುವವಾಹಿನಿ (ರಿ.) ಕಡಬ ಘಟಕದ ಸದಸ್ಯರು ಭಕ್ತಿಭಾವಪೂರ್ಣ ಭಜನಾ ಸೇವೆಯನ್ನು ಸಲ್ಲಿಸಿದರು. ಬೆಳಿಗ್ಗೆ 4.00 ಗಂಟೆಯಿಂದ 5.15 ಗಂಟೆಯವರೆಗೆ ನಡೆದ ಭಜನಾ ಸೇವೆಯಲ್ಲಿ ಭಕ್ತಿಗೀತೆಗಳು ಹಾಗೂ ನಾಮಸಂಕೀರ್ತನೆಯ ಮೂಲಕ ದೇವರ ಸ್ಮರಣೆಯಲ್ಲಿ ತೊಡಗಿಸಿಕೊಂಡರು. ಯುವವಾಹಿನಿ ಕಡಬ ಘಟಕದ ಈ ಸೇವೆಗೆ ದೇವಾಲಯದ ಆಡಳಿತ ಮಂಡಳಿ ಹಾಗೂ ಭಕ್ತಾದಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.
Read More
06-01-2026, 9:00 PM
ಸುರತ್ಕಲ್ : ಯುವವಾಹಿನಿ (ರಿ.) ಸುರತ್ಕಲ್ ಘಟಕದ ವತಿಯಿಂದ ದಿನಾಂಕ 06-01-2026ರಂದು ಮನೆ–ಮನೆ ಭಜನಾ ಸೇವೆಯನ್ನು ಘಟಕದ ಅಧ್ಯಕ್ಷರಾದ ವಾಣಿ ಗಣೇಶ್ ಅವರ ಮನೆಯಲ್ಲಿ ಭಕ್ತಿಭಾವದಿಂದ ನಡೆಸಲಾಯಿತು. ಈ ಭಜನಾ ಸೇವೆಯಲ್ಲಿ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿ, ಧಾರ್ಮಿಕ ವಾತಾವರಣವನ್ನು ನಿರ್ಮಿಸಿದರು. ಕಾರ್ಯಕ್ರಮವು ಶಾಂತಿ, ಸೌಹಾರ್ದತೆ ಹಾಗೂ ಧಾರ್ಮಿಕ ಚೈತನ್ಯವನ್ನು ಮೂಡಿಸುವ ಉದ್ದೇಶದಿಂದ ಯಶಸ್ವಿಯಾಗಿ ನೆರವೇರಿತು
Read More
05-01-2026, 2:03 PM
ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ದಿನಾಂಕ: 05-01-2026 ರಂದು ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ಲಹರಿ ತಂಡ ಬಿಜೈ ಮಂಗಳೂರು ಇವರ ಸಹಯೋಗದಿಂದ ನೆರವೇರಿತು. ಯುವವಾಹಿನಿ (ರಿ.) ಮಂಗಳೂರು ಘಟಕದ ಒಂದನೇ ಉಪಾಧ್ಯಕ್ಷರು ಹರೀಶ್ ಕೆ. ಸುವರ್ಣ ಮತ್ತು ಸದಸ್ಯರು ಉಪಸ್ಥಿತಿ ಇದ್ದರು.
Read More
12-12-2025, 5:36 AM
25-11-2025 ಸಂಗೀತ ಎಂಬುದು ಮನಸ್ಸುಗಳನ್ನು ಜೋಡಿಸುವ ಶಕ್ತಿ, ಜನರನ್ನು ಒಗ್ಗೂಡಿಸುವ ಶಕ್ತಿ ಹಾಗೂ ನಮ್ಮ ಮನಸ್ಸಿನ ಭಾವನೆಗಳನ್ನು ಸುಂದರವಾಗಿ ವ್ಯಕ್ತಪಡಿಸುವ ಒಂದು ಕಲೆಯಾಗಿದೆ ಎಂದು ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲೆಯ ಉಪಾಧ್ಯಕ್ಷರಾದ ದೀಕ್ಷಿತ್ ಅತ್ತಾವರ ಹೇಳಿದರು. ಅವರು ಘಟಕದ ಆಶ್ರಯದಲ್ಲಿ ನಡೆದ ಸಂಗೀತ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಮಾತನಾಡಿ ಪ್ರತಿಯೊಬ್ಬ ವ್ಯಕ್ತಿಯಲ್ಲೂ ಪ್ರತಿಭೆಯೊoದಿರುತ್ತದೆ ಅಂತಹ ಪ್ರತಿಭೆಗಳನ್ನು ಮುನ್ನೆಲೆಗೆ ತರಲು ಮಂಗಳೂರು ಘಟಕವೂ […]
Read More
22-10-2025, 3:59 PM
ಕುದ್ರೋಳಿ ನವರಾತ್ರಿ ಮಹೋತ್ಸವದಲ್ಲಿ ಸ್ವಯಂ ಸೇವೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುತ್ತಿರುವ ನವರಾತ್ರಿ ಮಹೋತ್ಸವದಲ್ಲಿ ಯುವವಾಹಿನಿ ಉಪ್ಪಿನಂಗಡಿ ಘಟಕದ ವತಿಯಿಂದ ಸ್ವಯಂ ಸೇವೆ ನಡೆಯಿತು. ಘಟಕದ ಅಧ್ಯಕ್ಷರಾದ ನಾಣ್ಯಪ್ಪ ಕೋಟ್ಯಾನ್ ಇವರ ನೇತೃತ್ವದಲ್ಲಿ 100 ಕ್ಕೂ ಹೆಚ್ಚಿನ ಮಂದಿ ಸದಸ್ಯರು02.10.2025ರಂದು ಬೆಳಿಗ್ಗೆಯಿಂದ ಸಂಜೆ ತನಕ ಸೇವೆ ಸಲ್ಲಿಸಿದರು. ಸೇವೆಯಲ್ಲಿ ಘಟಕದ ಗೌರವ ಸಲಹೆಗಾರರಾದ ವರದರಾಜ್, ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದ್ದರು.
Read More