Yuvavahini

ಸಂಸ್ಕೃತಿ

ತುಳುವೆರೆ ತುಳಸಿ ಪರ್ಬ

ಯಶಸ್ಸು ಗಳಿಸಲು ಐಶ್ವರ್ಯ, ವಿದ್ಯಾರ್ಹತೆ, ಅಥವಾ ವ್ಯಕ್ತಿಯ ಹಿನ್ನಲೆ ಮುಖ್ಯವಾಗುವುದಿಲ್ಲ . ಆತನ ಕನಸು, ಸಾಧಿಸುವ ಛಲ, ಪರಿಶ್ರಮ ಮುಖ್ಯವಾಗುತ್ತದೆ. ಇದರೊಂದಿಗೆ ತಾವು ತೊಡಗಿಸಿಕೊಂಡು ವ್ಯಕ್ತಿಯನ್ನು ಪ್ರೀತಿಸಿ ಅದನ್ನೇ ಪ್ರವೃತ್ತಿಯನ್ನಾಗಿಸಿದಾಗ ಯಶಸ್ಸು ಸಾಧ್ಯ. ಯುವವಾಹಿನಿಯ ರಾಜ್ಯೋತ್ಸವ ಪ್ರಶಸ್ತಿಯ ಹಿಂದೆ ಮೂವತ್ತು ವರುಷಗಳ ಸಾಧನೆಯ ಶ್ರಮವಿದೆ, ಪ್ರತಿಯೊಬ್ಬ ಯುವವಾಹಿನಿ ಸದಸ್ಯನ ಬೆವರ ಹನಿ ಇದೆ. ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ಅಭಿಪ್ರಾಯ ಪಟ್ಟರು. ಅವರು ದಿನಾಂಕ 01.11.2017 ರಂದು ಯುವವಾಹಿನಿ (ರಿ) ಹೆಜಮಾಡಿ ಘಟಕದ […]

Read More

ಆರಾಧನಾ ಕೇಂದ್ರಗಳು ಸಂಸ್ಕಾರ ,ಸಂಸ್ಕೃತಿಯ ದಾರಿದೀಪವಾಗಬೇಕು : ಮಹಮ್ಮದ್ ಹನೀಫ್

ಪರಿಶುದ್ಧ ಮನಸ್ಸಿನೊಂದಿಗೆ ಸತ್ಕಾರ್ಯಗಳಿಗೆ ವಿನಿಯೋಗಿಸುವಾಗ ಮಾನವ ಜನ್ಮ ಸಾರ್ಥಕವಾಗುತ್ತದೆ. ಸಮಾಜದಲ್ಲಿ ಪರಸ್ಪರ ಪ್ರೀತಿ, ವಿಶ್ವಾಸ, ಶಾಂತಿಯನ್ನು ಬಲಪಡಿಸುವಲ್ಲಿ ಆರಾಧನಾ ಕೇಂದ್ರಗಳು ದಾರಿದೀಪವಾಗಬೇಕು ಹಾಗೂ ಮಾನವ ಬದುಕಿನ ವಿಕಸನಕ್ಕೆ ಸಂಸ್ಕಾರ ,ಸಂಸ್ಕೃತಿಯ ಮಾರ್ಗದರ್ಶನ ನೀಡುವ ಕೇಂದ್ರಗಳಾಗಬೇಕು ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಬಿ.ಎ‌.ಮಹಮ್ಮದ್ ಹನೀಫ್ ತಿಳಿಸಿದರು. ಅವರು ದಿನಾಂಕ 18.10.2017 ರಂದು ಯುವವಾಹಿನಿ (ರಿ) ಮುಲ್ಕಿ ಘಟಕದ ಆಶ್ರಯದಲ್ಲಿ ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಜರುಗಿದ ತುಳುವೆರೆ ತುಡಾರ ಪರ್ಬ ಸಮಾರಂಭದ ಮುಖ್ಯ […]

Read More

ಬಲಿರಾಜ ಕೃಷಿ ಕ್ಷೇತ್ರದ ಯಜಮಾನ – ಡಾ|| ದೇಜಪ್ಪ ದಲ್ಲೋಡಿ

ಪುರಾಣ ಕಾಲದ ಬಲಿ ಚಕ್ರವರ್ತಿಯು ಭರತ ಭೂಮಿಯ ಕೃಷಿ ಕ್ಷೇತ್ರದ ಯಜಮಾನನಾಗಿದ್ದನು. “ಕೃಷಿತೋ ನಾಸ್ತಿ ದುರ್ಭಿಕ್ಷಂ” ಎಂಬುದು ಎರಡನೇ ಮನುವಾದ ಸ್ವಾರೋಚಿಷನ ಕಾಲದಲ್ಲಿ ವಿಶ್ವದ ಪ್ರಥಮ ಕೃಷಿಕನಾದ ಆದಿಮನಿಂದ ಹುಟ್ಟಿಕೊಂಡು ಬಲಿರಾಜನ ಕಾಲದಲ್ಲಿ ಸಂಪೂರ್ಣ ಪ್ರಗತಿಯನ್ನು ಕಂಡಿತು. ಇದರ ನಿಮಿತ್ತವಾಗಿಯೇ ಒಂದು ಕಾಲದ ತುಳುನಾಡಿನ ರೈತರು ತಮ್ಮ ಬೇಸಾಯದ ಗದ್ದೆಗಳ ಹುಣಿಗಳಲ್ಲಿ ಸಾಲು ಸಾಲಾಗಿ ದೀಪಗಳನ್ನುರಿಸಿ, ಬಲಿರಾಜನನ್ನು ಸಾಂಕೇತಿಕವಾಗಿ ಪ್ರತಿಷ್ಠಾಪಿಸಿ ದೀಪಾವಳಿಯನ್ನು ಆಚರಿಸುತ್ತಿದ್ದರು ಎಂದು ಖ್ಯಾತ ಸಂಶೋಧಕ ಹಾಗೂ ಹಿರಿಯ ಸಾಹಿತಿ ಡಾ|| ದೇಜಪ್ಪ ದಲ್ಲೋಡಿ ತಿಳಿಸಿದರು […]

Read More

ಬಾಂಧವ್ಯವನ್ನು ಗಟ್ಟಿಗೊಳಿಸುವ ಶಕ್ತಿ ಹಬ್ಬಗಳಿಗಿದೆ : ಬಿ.ತಮ್ಮಯ

ಪರಸ್ಪರ ದೀಪಗಳಿಂದ ಬೆಸೆದುಕೊಂಡು ಕತ್ತಲೆಯಿಂದ ಬೆಳಕಿನೆಡೆಗೆ ಒಂದು ಅಲೌಕಿಕ ಬೆಳಕಿನ ಚಿತ್ತಾರವನ್ನು ಪೂರ್ತಿ ಬಿಡಿಸಿದಂತೆ ಕಾಣುವ ಅಥವಾ ಅದನ್ನು ಅನುಭವಿಸುವ ಅವಕಾಶವಿರುವುದು ದೀಪಗಳ ಹಬ್ಬಕ್ಕೆ ಮಾತ್ರ, ತುಳುನಾಡಿನಲ್ಲಿ ತುಡಾರ ಪರ್ಬಕ್ಕೆ ವಿಶೇಷ ಮಹತ್ವ ಇದೆ. ಕುಟುಂಬದಲ್ಲಿ ಬಾಂಧವ್ಯವನ್ನು ಗಟ್ಟಿಗೊಳಿಸುವ ಶಕ್ತಿ ಹಬ್ಬಗಳಿಗಿದೆ. ಎಂದು ಯುವವಾಹಿನಿ ಕೇಂದ್ರ ಸಮಿತಿಯ ಸಲಹೆಗಾರರಾದ ಬಿ.ತಮ್ಮಯ ತಿಳಿಸಿದರು. ಅವರು ದಿನಾಂಕ 18.10.2017 ರಂದು ಉಪ್ಪಿನಂಗಡಿ ರಾಜ್ ಮಹಲ್ ಪೆದಮ್ಮಲೆ ( ವರದ್ರಾಜ್ ನಿವಾಸ) ಇಲ್ಲಿ ಯುವವಾಹಿನಿ ಉಪ್ಪಿನಂಗಡಿ ಘಟಕದ ಆಶ್ರಯದಲ್ಲಿ ಜರುಗಿದ ತುಡಾರ […]

Read More

ಸೋಣ ಸಂಭ್ರಮ – 2017

ಕೃಷಿಕರಿಗೆ ಸೋಣ ತಿಂಗಳು ಸಂಭ್ರಮದ ತಿಂಗಳು ಆಗಿರುವುದರಿಂದ ಈ ಕಾರ್ಯಕ್ರಮದ ಶೀರ್ಷಿಕೆ ಅರ್ಥಪೂರ್ಣವಾಗಿದೆ.ತಂತ್ರಜ್ಞಾನದಿಂದ ಮನಸ್ಸಿನ ಬದಲಾವಣೆ ಆಗಬಹುದೇ ಹೊರತು ಸಂಸ್ಕೃತಿ, ಸಂಸ್ಕಾರ ಹಾಗೂ ಜೀವನ ಪಾಠವನ್ನು ಕಲಿಸುವುದಿಲ್ಲ ಹಾಗಾಗಿ ಸಂಸ್ಕಾರದ ಜತೆಗೆ ಜೀವನ ಮೌಲ್ಯವನ್ನು ಅಳವಡಿಸುವುದು ಇಂದು ತೀರಾ ಅಗತ್ಯವಾಗಿದೆ ಎಂದು ಮಂಗಳೂರು ಮಹಿಳಾ ಮಂಡಲಗಳ ಒಕ್ಕೂಟದ ಸ್ಥಾಪಕ ಅಧ್ಯಕ್ಷರಾದ ಕೆ.ಎ.ರೋಹಿಣಿ ಅಭಿಪ್ರಾಯ ಪಟ್ಟರು.ಅವರು ದಿನಾಂಕ 09.09.2017 ರಂದು ಮಂಗಳೂರು ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಜರುಗಿದ ಸೋಣ ಸಂಭ್ರಮ ಕಾರ್ಯಕ್ರಮದಲ್ಲಿ […]

Read More

ಭಜನಾ ಕಾರ್ಯಕ್ರಮ ಹಾಗೂ ಸನ್ಮಾನ

ಯುವವಾಹಿನಿ (ರಿ) ಅಡ್ವೆ ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 163ನೇ ಜಯಂತಿ ಪ್ರಯುಕ್ತ ದಿನಾಂಕ 06.09.2017 ರಂದು ಅಡ್ವೆ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಭಜನಾ ಕಾರ್ಯಕ್ರಮ ನಡೆಯಿತು. ತದನಂತರ ನಡೆದ ಗುರುವಂದನಾ ಕಾರ್ಯಕ್ರಮದಲ್ಲಿ ಹಿರಿಯ ಕೃಷಿಕರು ಹಾಗೂ ಶ್ರೀ ಬ್ರಹ್ಮಬೈದರ್ಕಳ ಗರಡಿಯಲ್ಲಿ ಬಹಳ ಹಿಂದಿನಿಂದಲೂ ಸೇವೆ ಮಾಡಿಕೊಂಡು ಬಂದಿರುವ ಶ್ರೀ ಸಂಕಪ್ಪ ಪೂಜಾರಿಯವರನ್ನು ಗೌರವಿಸಲಾಯಿತು.

Read More

ಕೃಷಿ ಚಟುವಟಿಕೆಗಳಿಂದ ಆರೋಗ್ಯ ಪೂರ್ಣ ಸಮಾಜ ನಿರ್ಮಾಣ : ರವೀಂದ್ರ ಪೂಜಾರಿ

ತುಳುನಾಡಿನಾದ್ಯಂತ ನಡೆಯುತ್ತಿರುವ ಆಟಿಡೊಂಜಿ ದಿನ,ಕೆಸರ್ ಡ್ ಒಂಜಿ ದಿನ ಮುಂತಾದ ಕಾರ್ಯಕ್ರಮಗಳನ್ನು ಸಡಗರ, ಸಂಭ್ರಮದಿಂದ ಮಾಡುತ್ತಿದ್ದೇವೆ.. ಈ ಸಂಭ್ರಮ ಒಂದು ದಿನಕ್ಕೆ ಸೀಮಿತವಾಗಿರದೆ, ನಮ್ಮ ವಿರಾಮದ ವೇಳೆಯಲ್ಲಿ ನಿತ್ಯ ನಿರಂತರವಾಗಿ ನಡೆಯಬೇಕಾಗಿದೆ. ಕೃಷಿ ಚಟುವಟಿಕೆಗಳಿಗೆ ನಾವು ಮೈಯೊಡ್ಡಿದರೆ, ನಮ್ಮ ಆರೋಗ್ಯವೃದ್ಧಿಯಾಗುವುದು.ಕೃಷಿಕರಾಗಿ ಬದುಕಿದ ನಮ್ಮ ಗುರುಹಿರಿಯರ ಆರೋಗ್ಯದ ಗುಟ್ಟು ಇದೇ ಎಂದು ಅಡ್ವೆ ರವೀಂದ್ರ ಪೂಜಾರಿಯವರು ತಿಳಿಸಿದರು. ಅವರು ದಿನಾಂಕ 13-08-2017 ಆದಿತ್ಯವಾರದಂದು ಅಡ್ವೆ ಆನಂದಿ ಸಭಾಭವನದಲ್ಲಿ ಯುವವಾಹಿನಿ(ರಿ.) ಅಡ್ವೆ ಘಟಕದ ವತಿಯಿಂದ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ […]

Read More

ರಕ್ಷಾ ಬಂಧನ

ಸಹೋದರ ಸಹೋದರಿಯ ಪವಿತ್ರ ಸಂಬಂಧ ಬೆಸೆಯುವ ರಕ್ಷಾ ಬಂಧನದ ಮಹತ್ವ ಹಾಗೂ ದೇಶದ ರಕ್ಷಣೆಯಲ್ಲಿ ಪ್ರತಿ ಪ್ರಜೆಗಳ ಪಾತ್ರ ಬಗ್ಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಹ ಕಾರ್ಯವಹ ರಾಜೇಶ್ ಉಪನ್ಯಾಸ ನೀಡಿದರು.ಅವರು ದಿನಾಂಕ 10.08.2017ರಂದು ಯುವವಾಹಿನಿ ಕಂಕನಾಡಿ ಘಟಕದ ವತಿಯಿಂದ ಉಜ್ಜೋಡಿ ಮಹಾಂಕಾಳಿ ದೈವಸ್ಥಾನದ ವಠಾರದಲ್ಲಿ ಜರುಗಿದ ರಕ್ಷಾಬಂಧನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು ಯುವವಾಹಿನಿ ಕಂಕನಾಡಿ ಘಟಕದ ಅಧ್ಯಕ್ಷರಾದ ಗೋಪಾಲ ಪೂಜಾರಿ ಸಭೆಯ ಅದ್ಯಕ್ಷತೆಯನ್ನು ವಹಿಸಿದ್ದರು.ವೇದಿಕೆಯಲ್ಲಿ ಘಟಕದ ಸಲಹೆಗಾರರಾದ ಪರಮೇಶ್ವರ ಪೂಜಾರಿ, ನಿಕಟಪೂರ್ವ […]

Read More

ನಾಳಿನ ಸದೃಢ ಸಮಾಜಕ್ಕೆ, ಇಂದು ಸನ್ನದ್ಧರಾಗೋಣ : ಕವಿತಾ ಸನಿಲ್

ನಾಳಿನ ಸದೃಢ ಸಮಾಜಕ್ಕೆ ಇಂದು ಸನ್ನದ್ಧರಾದಲ್ಲಿ ಮಾತ್ರ ಯುವ ಸಮುದಾಯವನ್ನು ಸಂಸ್ಕøತಿ ಸಂಸ್ಕಾರಗಳ ಮೂಲಕ ಅದರ ಬಗ್ಗೆ ತಿಳುವಳಿಕೆ ನೀಡುವ ಕಾರ್ಯ ನಿರಂತರವಾಗಿ ನಡೆಯಬೇಕು ಎಂದು ಮಂಗಳೂರು ಮೇಯರ್ ಕವಿತಾ ಸನಿಲ್ ಹೇಳಿದರು. ಹಳೆಯಂಗಡಿಯ ಬಿಲ್ಲವ ಸಮಾಜ ಸೇವಾ ಸಂಘ ಮತ್ತು ಯುವವಾಹಿನಿ ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಗೃಹದಲ್ಲಿ ನಡೆದ ಆಟಿ ಆನಿ-ಇನಿ-ಎಲ್ಲೆ ಕಾರ್ಯಕ್ರಮವನ್ನು ಬತ್ತ ಕುಟ್ಟುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ ನಾನಿಲ್ ಅಧ್ಯಕ್ಷತೆಯನ್ನು […]

Read More

ತುಳುನಾಡಿನ ಆಚರಣೆ ಪವಿತ್ರವಾದ ಸಂಸ್ಕ್ರತಿ : ಡಾ|| ಸದಾನಂದ ಪೆರ್ಲ

ತುಳುನಾಡಿನ ಜನರ ಎಲ್ಲ ಆಚರಣೆ ಮತ್ತು ಆಹಾರ ಪದ್ಧತಿಗಳು ಕೇವಲ ಒಂದು ಸಮುದಾಯಕ್ಕೆ ಮೀಸಲಾಗಿರುವ ವಿಷಯವಲ್ಲ. ಅದು ಸರ್ವಕಾಲಿಕ ಸತ್ಯವನ್ನು ಒಳಗೊಂಡ ಒಂದು ಪವಿತ್ರ ಸಂಸ್ಕøತಿ ಎಂದು ಮಂಗಳೂರು ಆಕಾಶವಾಣಿಯ ಹಿರಿಯ ಕಾರ್ಯಕ್ರಮ ನಿರ್ವಾಹಕರಾದ ಡಾ| ಸದಾನಂದ ಪೆರ್ಲ ಹೇಳಿದರು. ಮೂಲ್ಕಿ ಯುವವಾಹಿನಿ ಘಟಕದ ಆಶ್ರಯದಲ್ಲಿ ಬಿಲ್ಲವ ಸಮಾಜ ಸೇವಾಸಂಘದಲ್ಲಿ ಜರಗಿದ 15ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಆಟಿ ಕೆಟ್ಟ ದಿನಗಳ ಒಂದು ಮಾಸ ಎಂದು ಪ್ರತಿಬಿಂಬಿಸಲಾಗುತ್ತಿದೆ. ಆಟಿ ತಿಂಗಳು ಅತ್ಯಂತ ಶ್ರೇಷ್ಠ ತಿಂಗಳು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜೂನ್ 14 ಭಾನುವಾರ ಬೆಳಗ್ಗೆ ಗಂಟೆ 9.00 ರಿಂದ
ಸ್ಥಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂ ವಿಧಾನಸೌಧ ಬಳಿ, ಕಬ್ಬನ್ ಪಾರ್ಕ್ ಬೆಂಗಳೂರು

ಯುವವಾಹಿನಿ (ರಿ) ಬೆಂಗಳೂರು ಘಟಕ

ದಿನಾಂಕ : 2026ನೇ ಜೂನ್ 13 ಶನಿವಾರ ಸಂಜೆ ಗಂಟೆ 6.00 ರಿಂದ
ಸ್ಥಳ : ಮುಲ್ಕಿ , ಬಿಲ್ಲವ ಸಮಾಜ ಸೇವಾ ಸಂಘ(ರಿ)

ಯುವವಾಹಿನಿ (ರಿ) ಮುಲ್ಕಿ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!