Yuvavahini

ಸಂಸ್ಕೃತಿ

ಸಂಸ್ಕ್ರತಿ ಉಳಿಸುವಲ್ಲಿ ಮಹಿಳೆಯರ ಪಾತ್ರ ಪ್ರಮುಖ : ವಿಜಯಲಕ್ಷ್ಮಿ

ಕುಳಾಯಿ : ತುಳುನಾಡಿನ ಸಂಸ್ಕೃತಿ ಉಳಿಸುವಲ್ಲಿ ಮಹಿಳೆಯರ ಹೊಣೆಗಾರಿಕೆ ಪ್ರಾಮುಖ್ಯವಾಗಿದೆ. ಯುವವಾಹಿನಿ ಸಂಘಟನೆ ಯುವಕರಲ್ಲಿ ಶಿಕ್ಷಣ, ಸಂಘಟನೆ ಬಗ್ಗೆ ಜಾಗ್ರತಿ ಮೂಡಿಸಿ ಸುಸಂಸ್ಕ್ರತ ಪ್ರಜೆಗಳನ್ನಾಗಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಆಟಿದ ಪೊನ್ನುಪೊಂಜೊವುಲು ಎಂಬ ವಿಷಯದಲ್ಲಿ ಉಪನ್ಯಾಸ ನೀಡುತ್ತಾ ಪೆರ್ಮನ್ನೂರು ಸರಕಾರಿ ಪ್ರೌಢಶಾಲೆ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯಲಕ್ಷ್ಮಿ ಕಟೀಲು ತಿಳಿಸಿದರು. ಅವರು ದಿನಾಂಕ 29-07-2018ನೇ ಆದಿತ್ಯವಾರದಂದು ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಕುಳಾಯಿ, ಯುವವಾಹಿನಿ(ರಿ) ಪಣಂಬೂರು ಘಟಕ ಮತ್ತು ಯುವವಾಹಿನಿ(ರಿ) ಸುರತ್ಕಲ್ […]

Read More

ಸಂಸ್ಕೃತಿ ಪರಂಪರೆ ನಮ್ಮ ಧ್ಯೇಯವಾಗಲಿ : ಪದ್ಮನಾಭ ಕೋಟ್ಯಾನ್

ಮೂಲ್ಕಿ: ತುಳುನಾಡಿನ ಸಂಸ್ಕೃತಿ ಪರಂಪರೆ ನಮ್ಮ ಧ್ಯೇಯವಾಗಬೇಕು, ಮುಂದಿನ ಪೀಳಿಗೆಗೆ ಹಿಂದಿನ ಸಾಂಸ್ಕೃತಿಕತೆಯನ್ನು ತಿಳಿ ಹೇಳುವ ಕೆಲಸ ಇಂದು ಸಂಘ ಸಂಸ್ಥೆಗಳು ಮಾಡುತ್ತಿರುವುದು ಶ್ಲಾಘನೀಯ, ಮೂಲ್ಕಿ ಯುವವಾಹಿನಿಯಂತಹ ಸಂಸ್ಥೆಗಳಿಂದ ಯುವ ಪೀಳಿಗೆಯನ್ನು ಸಂಘಟನಾ ಶಕ್ತಿಯನ್ನು ತೋರಿಸಿರುವುದು ಸಮಾಜ ಗುರುತಿಸಿದೆ ಎಂದು ಕರ್ನಾಟಕ ಧಾರ್ಮಿಕ ಪರಿಷತ್‌ನ ಸದಸ್ಯ ಪದ್ಮನಾಭ ಕೋಟ್ಯಾನ್ ಹೇಳಿದರು. ಅವರು ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಮೂಲ್ಕಿಯ ಯುವವಾಹಿನಿ ಘಟಕದ ಆಶ್ರಯದಲ್ಲಿ ಭಾನುವಾರ ನಡೆದ ಹದಿನಾರನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ವೇದಿಕೆಯಲ್ಲಿ ತರಕಾರಿ, […]

Read More

ತುಳುವರ ಬದುಕಿನ ಕ್ರಮವೇ ಶ್ರೀಮಂತಿಕೆಯ ದ್ಯೋತಕ : ಚೇತನ್ ಮುಂಡಾಜೆ

ಮಾಣಿ : ತುಳು ಬದುಕು ಎನ್ನುವುದು ಹಲವು ಆಯಾಮಗಳ ಒಟ್ಟು ಮೊತ್ತದ ಪ್ರತಿರೂಪ. ಇಲ್ಲಿನ ಸಂಸ್ಕ್ರತಿ , ಆಚರಣೆ, ವೈಶಿಷ್ಟಗಳು ಅನನ್ಯವಾದುದು. ದೈವಾರಾಧನೆಯಲ್ಲಿ ಬಳಕೆಯಾಗುವ ನುಡಿಗಟ್ಟುಗಳು ತುಳುವರ ಬದುಕಿನ ಶ್ರೀಮಂತಿಕೆಗೆ ಸಾಕ್ಷಿ. ಅವುಗಳ ಮರು ಪ್ರಸ್ತುತಿಯು ಆಟಿಡೊಂಜಿ ದಿನದಂತಹ ಕಾರ್ಯಕ್ರಮದಲ್ಲಿ ನಡೆದು ಬರುತ್ತಿರುವುದು ಸಮಂಜಸವಾಗಿದೆ ಎಂದು ಬಂಟ್ವಾಳ ಎಸ್.ವಿ.ಎಸ್ ಕಾಲೇಜಿನ ಉಪನ್ಯಾಸಕ ಚೇತನ್ ಮುಂಡಾಜೆ ನುಡಿದರು. ಅವರು ಯುವವಾಹಿನಿ (ರಿ) ಮಾಣಿ ಘಟಕದ ವತಿಯಿಂದ ದಿನಾಂಕ: 29.07.2018ರ ಆದಿತ್ಯವಾರದಂದು ಮಾಣಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಜರುಗಿದ […]

Read More

ಬದಲಾವಣೆ ಬೇಕು ಆದರೆ ನಮ್ಮ ಸಂಸ್ಕೃತಿಯನ್ನು ಮರೆಯಬಾರದು. -ಕೆ.ಎ ರೋಹಿಣಿ .

ಕೂಳೂರು : ಬದಲಾವಣೆ ಬೇಕು ಆದರೆ ನಮ್ಮ ಸಂಸ್ಕೃತಿಯನ್ನು ಮರೆಯಬಾರದು. ತುಳುನಾಡಿನ ಸಂಸ್ಕೃತಿ ,ಸಂಪ್ರದಾಯ ಹಾಗೂ ಆಚರಣೆಯ ಬಗ್ಗೆ ಮಕ್ಕಳಿಗೆ ತಿಳಿಸಬೇಕು ಇದರಿಂದ ಮುಂದಿನ ಪೀಳಿಗೆಗೆ ನಮ್ಮ ಸಂಸ್ಕೃತಿಯನ್ನು ರವಾನಿಸಬಹುದು, ಎಂದು ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ(ರಿ) ಇದರ ಸ್ಥಾಪಕ ಅಧ್ಯಕ್ಷರಾದ ಕೆಎ ರೋಹಿಣಿತಿಳಿಸಿದರು. ಆಗಿನ ಕಾಲದಲ್ಲಿ ಹೆತ್ತವರು ಹೇಳಿದಂತೆ ಮಕ್ಕಳು ಕೇಳುತ್ತಿದ್ದರು, ಆದರೆ ಈಗಿನ ಕಾಲದಲ್ಲಿ ಮಕ್ಕಳು ಹೇಳಿದಂತೆ ಹೆತ್ತವರು ಕೇಳಬೇಕಾದ ಪರಿಸ್ಥಿತಿ , ಆಟಿ ತಿಂಗಳಿನ ವಿಶೇಷತೆ ,ಅಮಾವಾಸ್ಯೆ ಬಡಿಸುವುದು ,ಆಟಿ ಕಳಂಜ […]

Read More

ತುಳುನಾಡ ಸಂಪ್ರದಾಯ, ಪದ್ಧತಿ, ಆಚರಣೆಯನ್ನು ಮುಂದಿನ ಪೀಳಿಗೆಗೂ ಉಳಿಸಿ ಕೊಡೋಣ : ಸುಧಾಕರ್ ಅಮೀನ್

ಕಾಪು, ಜು. 29 :ತುಳುವರ ಆಚರಣೆ, ಸಂಪ್ರದಾಯ ಮತ್ತು ಪದ್ಧತಿ ಗಳು ಸರ್ವರಿಗೂ ಅನುಕರಣೀವಾಗಿದೆ. ಅದನ್ನು ಮತ್ತಷ್ಟು ಗಟ್ಟಿಗೊಳಿಸಿ ಮುಂದಿನ ಪೀಳಿಗೆಗೂ ಉಳಿಸಿಕೊಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಧಾರ್ಮಿಕ ಚಿಂತಕ ಸುಧಾಕರ ಡಿ. ಅಮೀನ್ ಹೇಳಿದರು. ಯುವವಾಹಿನಿ ಕಾಪು ಘಟಕದ ವತಿಯಿಂದ ರವಿವಾರ ಕಾಪು ಬಿಲ್ಲವರ ಸಹಾಯಕ ಸಂಘದಲ್ಲಿ ಹಮ್ಮಿಕೊಳ್ಳಲಾಗಿದ್ದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಆಟಿ ತಿಂಗಳನ್ನು ಅನಿಷ್ಟದ ತಿಂಗಳು ಎಂಬ ಅರ್ಥವನ್ನು ಕಲ್ಪಿಸಲಾಗುತ್ತಿದೆ. ಆದರೆ ಇದು ಅನಿಷ್ಡದ ತಿಂಗಳು ಅಲ್ಲವೇ […]

Read More

ಆಚರಣೆಗಳು‌ ಬದುಕನ್ನು ಶ್ರೀಮಂತವಾಗಿಸುತ್ತದೆ : ಸ್ಮಿತೇಶ್ ಬಾರ್ಯ

ಬಂಟ್ವಾಳ : ನೆಲ ಮೂಲ ಸಂಸ್ಕೃತಿಯನ್ನು ನಂಬಿಕೊಂಡು ಬಂದವರು ತುಳುವರು, ಅವರ ಪ್ರತಿಯೊಂದು ಆಚರಣೆಗಳು ಮೂಲ ನಂಬಿಕೆಯಿಂದ ಕೂಡಿತ್ತು, ಇದಕ್ಕೆ ವೈಜ್ಞಾನಿಕ ಹಿನ್ನಲೆ ಇರುವುದು ವಿಶೇಷ. ಎಲ್ಲರೂ ಕೂಡಿ ಆಚರಿಸುವ ಆಟಿಡೊಂಜಿ‌ ಕೂಟ ಎನ್ನುವ ಇಂತಹ ಕಾರ್ಯಕ್ರಮಗಳು ಇಂದಿನ‌ ಯುವ ಪೀಳಿಗೆಗೆ ತುಳುನಾಡಿನ ಗತವೈಭವವನ್ನು‌ ನೆನಪಿಸುತ್ತದೆ. ಇಂತಹ ಸಂಸ್ಕೃತಿ, ಸಂಸ್ಕಾರಯುತ ಆಚರಣೆಗಳು ಬದುಕನ್ನು ಶ್ರೀಮಂತವಾಗಿಸುತ್ತದೆ ಎಂದು ಎಸ್.ಡಿ.ಎಮ್ ಕಾಲೇಜಿನ‌ ಉಪನ್ಯಾಸಕ ಸ್ಮಿತೇಶ್. ಎಸ್.ಬಾರ್ಯ ತಿಳಿಸಿದರು ಅವರು ದಿನಾಂಕ 22.07.2018 ರಂದು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ […]

Read More

ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ಭಜನಾ ಕಾರ್ಯಕ್ರಮ

ಪಡುಬಿದ್ರಿ : ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ದಿನಾಂಕ ೧೨. ೦೭. ೨೦೧೮ ಪಡುಬಿದ್ರಿ ನಾರಾಯಣಗುರು ಮಂದಿರದಲ್ಲಿ ವಾರದ ಭಜನೆಯು ನಡೆಯಿತು. ಈ ಸಂದರ್ಭದಲ್ಲಿ ಘಟಕದ ಪದಾಧಿಕಾರಿಗಳು, ಸದಸ್ಯರು, ಬಿಲ್ಲವ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಮಹಿಳಾ ವಿಭಾಗದ ಸದಸ್ಯೆಯರು ಉಪಸ್ಥಿತರಿದ್ದರು.

Read More

ತಾಯಿ ಮನುಕುಲದ ಶಾಲೆಗೆ ಗುರು : ಕೇಶವ ಎಚ್

ಮಂಗಳೂರು : ತಾಯಿ ಮನುಕುಲದ ಶಾಲೆಗೆ ಗುರುವಾಗಿದ್ದಾಳೆ, ಮನೆ ಎಂಬ ಪಾಠಶಾಲೆ ಹಾಗೂ ಪಾಕಶಾಲೆಗೆ ಶೋಧನೆ, ಸಂಶೋಧನೆಯ ಜ್ಞಾನಿ ವಿಜ್ಞಾನಿಯಾಗಿರುತ್ತಾಳೆ, ಪ್ರೀತಿಯ ಮುತ್ತಿಟ್ಟು, ಅನ್ನದ ತುತ್ತಿಟ್ಟು ಉಣಿಸಿ ತಣಿಸುವ ಅನ್ನಪೂರ್ಣೆ, ನಿದ್ದೆಗೆ ಲಾಲಿ ಜೋಗುಳ ಹಾಡಿ ಮಲಗಿಸುವ ಸಂಗೀತಗಾರ್ತಿ ಅಮ್ಮ, ಹೀಗೆ ಸಮಗ್ರ ಶಕ್ತಿಗೆ ಚೇತನದ ಅಮೃತದ ಸೆಲೆಯಾಗಿ ಸರ್ವರ ಹೃದಯದ ಆರಾಧನಾ ಮೂರ್ತಿಯಾಗಿರುತ್ತಾಳೆ ಎಂದು ಮುಲ್ಕಿ ನಾರಾಯಣಗುರು ಕಾಲೇಜಿನ ಉಪನ್ಯಾಸಕರಾದ ಕೇಶವ ಎಚ್ ತಿಳಿಸಿದರು. ಅವರು ದಿನಾಂಕ‌ 27.05.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ […]

Read More

ಎಲ್ಲಾ ಬಾಂಧವ್ಯ , ಸಂಬಂಧಗಳನ್ನು ಮೀರಿದವಳು ತಾಯಿ : ಯಶವಂತ ಪೂಜಾರಿ

ಕೂಳೂರು : ಎಲ್ಲಾ ಬಾಂಧವ್ಯ ಸಂಬಂಧಗಳನ್ನು ಮೀರಿದವಳು ತಾಯಿ‌, ತಾನು ಎಲ್ಲಾ ಕಡೆ ಇರಲಾರೆ ಎಂಬ ಕಾರಣಕ್ಕಾಗಿ ದೇವರು ತಾಯಿಯನ್ನು ಸೃಷ್ಟಿಸಿದ ಎಂಬ ಮಾತನ್ನು ಅಕ್ಷರಶಃ ರುಜುವಾತು ಮಾಡಿಕೊಟ್ಟವಳು. ಹೆಜ್ಜೆಯಿಡಲು ಕಲಿಸಿದವಳು, ಕೈ ತುತ್ತು ನೀಡಿದವಳು, ಕರುಳಕುಡಿಯ ಜೀವನಕ್ಕಾಗಿ‌ ತನ್ನ ಜೀವವನ್ನು ಸವೆಸಿದವಳು, ಕಂದನ ಪ್ರತಿ ಯಶಸ್ಸಿನಲ್ಲೂ ಆಕೆಯ ಪಾಲಿದೆ ಪ್ರತಿ ಕಷ್ಟದಲ್ಲೂ ಆಕೆಯ ಸಾಂತ್ವನವಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ‌ 10.05.2018 ರಂದು ಯುವವಾಹಿನಿ (ರಿ) […]

Read More

ಸಮಾಜದಲ್ಲಿ ಪ್ರೀತಿ, ವಿಶ್ವಾಸ ,ಶಾಂತಿಯನ್ನು ಬಲಪಡಿಸುವಲ್ಲಿ ಹಬ್ಬಗಳು ದಾರಿದೀಪ : ಯಶವಂತ ಪೂಜಾರಿ

  ಬಜ್ಪೆ : ಜಾಗತೀಕರಣದ ಭರಾಟೆಯಲ್ಲಿ ನಮ್ಮ ಸಂಸ್ಕೃತಿ ಸಂಪ್ರದಾಯಗಳು ನಶಿಸಿಹೋಗುವ ಕಾಲಘಟ್ಟದಲ್ಲಿ ಯುವವಾಹಿನಿಯು ಹಬ್ಬಗಳನ್ನು ಸಾಮೂಹಿಕವಾಗಿ ಆಚರಿಸುವ ಮೂಲಕ ಮುಂದಿನ ಯುವಜನತೆಗೆ ಸಂಸ್ಕೃತಿ, ಸಂಸ್ಕಾರದ ಅರಿವು ಮೂಡಿಸಿದೆ. ಸಮಾಜದಲ್ಲಿ ಪರಸ್ಪರ ಪ್ರೀತಿ, ವಿಶ್ವಾಸ, ಶಾಂತಿಯನ್ನು ಬಲಪಡಿಸುವಲ್ಲಿ ಹಬ್ಬಗಳು ದಾರಿದೀಪವಾಗಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ‌ 15.04.2018 ರಂದು ಬಜ್ಪೆ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ಯುವವಾಹಿನಿ (ರಿ) ಬಜ್ಪೆ ಘಟಕದ ಆಶ್ರಯದಲ್ಲಿ ಜರುಗಿದ ಬಿಸು ಪರ್ಬ ಕಾರ್ಯಕ್ರಮದಲ್ಲಿ ಮುಖ್ಯ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜೂನ್ 14 ಭಾನುವಾರ ಬೆಳಗ್ಗೆ ಗಂಟೆ 9.00 ರಿಂದ
ಸ್ಥಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂ ವಿಧಾನಸೌಧ ಬಳಿ, ಕಬ್ಬನ್ ಪಾರ್ಕ್ ಬೆಂಗಳೂರು

ಯುವವಾಹಿನಿ (ರಿ) ಬೆಂಗಳೂರು ಘಟಕ

ದಿನಾಂಕ : 2026ನೇ ಜೂನ್ 13 ಶನಿವಾರ ಸಂಜೆ ಗಂಟೆ 6.00 ರಿಂದ
ಸ್ಥಳ : ಮುಲ್ಕಿ , ಬಿಲ್ಲವ ಸಮಾಜ ಸೇವಾ ಸಂಘ(ರಿ)

ಯುವವಾಹಿನಿ (ರಿ) ಮುಲ್ಕಿ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!