Yuvavahini

ಸಂಸ್ಕೃತಿ

ಆಚರಣೆಗಳು‌ ಬದುಕನ್ನು ಶ್ರೀಮಂತವಾಗಿಸುತ್ತದೆ : ಸ್ಮಿತೇಶ್ ಬಾರ್ಯ

ಬಂಟ್ವಾಳ : ನೆಲ ಮೂಲ ಸಂಸ್ಕೃತಿಯನ್ನು ನಂಬಿಕೊಂಡು ಬಂದವರು ತುಳುವರು, ಅವರ ಪ್ರತಿಯೊಂದು ಆಚರಣೆಗಳು ಮೂಲ ನಂಬಿಕೆಯಿಂದ ಕೂಡಿತ್ತು, ಇದಕ್ಕೆ ವೈಜ್ಞಾನಿಕ ಹಿನ್ನಲೆ ಇರುವುದು ವಿಶೇಷ. ಎಲ್ಲರೂ ಕೂಡಿ ಆಚರಿಸುವ ಆಟಿಡೊಂಜಿ‌ ಕೂಟ ಎನ್ನುವ ಇಂತಹ ಕಾರ್ಯಕ್ರಮಗಳು ಇಂದಿನ‌ ಯುವ ಪೀಳಿಗೆಗೆ ತುಳುನಾಡಿನ ಗತವೈಭವವನ್ನು‌ ನೆನಪಿಸುತ್ತದೆ. ಇಂತಹ ಸಂಸ್ಕೃತಿ, ಸಂಸ್ಕಾರಯುತ ಆಚರಣೆಗಳು ಬದುಕನ್ನು ಶ್ರೀಮಂತವಾಗಿಸುತ್ತದೆ ಎಂದು ಎಸ್.ಡಿ.ಎಮ್ ಕಾಲೇಜಿನ‌ ಉಪನ್ಯಾಸಕ ಸ್ಮಿತೇಶ್. ಎಸ್.ಬಾರ್ಯ ತಿಳಿಸಿದರು ಅವರು ದಿನಾಂಕ 22.07.2018 ರಂದು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ […]

Read More

ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ಭಜನಾ ಕಾರ್ಯಕ್ರಮ

ಪಡುಬಿದ್ರಿ : ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ದಿನಾಂಕ ೧೨. ೦೭. ೨೦೧೮ ಪಡುಬಿದ್ರಿ ನಾರಾಯಣಗುರು ಮಂದಿರದಲ್ಲಿ ವಾರದ ಭಜನೆಯು ನಡೆಯಿತು. ಈ ಸಂದರ್ಭದಲ್ಲಿ ಘಟಕದ ಪದಾಧಿಕಾರಿಗಳು, ಸದಸ್ಯರು, ಬಿಲ್ಲವ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಮಹಿಳಾ ವಿಭಾಗದ ಸದಸ್ಯೆಯರು ಉಪಸ್ಥಿತರಿದ್ದರು.

Read More

ತಾಯಿ ಮನುಕುಲದ ಶಾಲೆಗೆ ಗುರು : ಕೇಶವ ಎಚ್

ಮಂಗಳೂರು : ತಾಯಿ ಮನುಕುಲದ ಶಾಲೆಗೆ ಗುರುವಾಗಿದ್ದಾಳೆ, ಮನೆ ಎಂಬ ಪಾಠಶಾಲೆ ಹಾಗೂ ಪಾಕಶಾಲೆಗೆ ಶೋಧನೆ, ಸಂಶೋಧನೆಯ ಜ್ಞಾನಿ ವಿಜ್ಞಾನಿಯಾಗಿರುತ್ತಾಳೆ, ಪ್ರೀತಿಯ ಮುತ್ತಿಟ್ಟು, ಅನ್ನದ ತುತ್ತಿಟ್ಟು ಉಣಿಸಿ ತಣಿಸುವ ಅನ್ನಪೂರ್ಣೆ, ನಿದ್ದೆಗೆ ಲಾಲಿ ಜೋಗುಳ ಹಾಡಿ ಮಲಗಿಸುವ ಸಂಗೀತಗಾರ್ತಿ ಅಮ್ಮ, ಹೀಗೆ ಸಮಗ್ರ ಶಕ್ತಿಗೆ ಚೇತನದ ಅಮೃತದ ಸೆಲೆಯಾಗಿ ಸರ್ವರ ಹೃದಯದ ಆರಾಧನಾ ಮೂರ್ತಿಯಾಗಿರುತ್ತಾಳೆ ಎಂದು ಮುಲ್ಕಿ ನಾರಾಯಣಗುರು ಕಾಲೇಜಿನ ಉಪನ್ಯಾಸಕರಾದ ಕೇಶವ ಎಚ್ ತಿಳಿಸಿದರು. ಅವರು ದಿನಾಂಕ‌ 27.05.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ […]

Read More

ಎಲ್ಲಾ ಬಾಂಧವ್ಯ , ಸಂಬಂಧಗಳನ್ನು ಮೀರಿದವಳು ತಾಯಿ : ಯಶವಂತ ಪೂಜಾರಿ

ಕೂಳೂರು : ಎಲ್ಲಾ ಬಾಂಧವ್ಯ ಸಂಬಂಧಗಳನ್ನು ಮೀರಿದವಳು ತಾಯಿ‌, ತಾನು ಎಲ್ಲಾ ಕಡೆ ಇರಲಾರೆ ಎಂಬ ಕಾರಣಕ್ಕಾಗಿ ದೇವರು ತಾಯಿಯನ್ನು ಸೃಷ್ಟಿಸಿದ ಎಂಬ ಮಾತನ್ನು ಅಕ್ಷರಶಃ ರುಜುವಾತು ಮಾಡಿಕೊಟ್ಟವಳು. ಹೆಜ್ಜೆಯಿಡಲು ಕಲಿಸಿದವಳು, ಕೈ ತುತ್ತು ನೀಡಿದವಳು, ಕರುಳಕುಡಿಯ ಜೀವನಕ್ಕಾಗಿ‌ ತನ್ನ ಜೀವವನ್ನು ಸವೆಸಿದವಳು, ಕಂದನ ಪ್ರತಿ ಯಶಸ್ಸಿನಲ್ಲೂ ಆಕೆಯ ಪಾಲಿದೆ ಪ್ರತಿ ಕಷ್ಟದಲ್ಲೂ ಆಕೆಯ ಸಾಂತ್ವನವಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ‌ 10.05.2018 ರಂದು ಯುವವಾಹಿನಿ (ರಿ) […]

Read More

ಸಮಾಜದಲ್ಲಿ ಪ್ರೀತಿ, ವಿಶ್ವಾಸ ,ಶಾಂತಿಯನ್ನು ಬಲಪಡಿಸುವಲ್ಲಿ ಹಬ್ಬಗಳು ದಾರಿದೀಪ : ಯಶವಂತ ಪೂಜಾರಿ

  ಬಜ್ಪೆ : ಜಾಗತೀಕರಣದ ಭರಾಟೆಯಲ್ಲಿ ನಮ್ಮ ಸಂಸ್ಕೃತಿ ಸಂಪ್ರದಾಯಗಳು ನಶಿಸಿಹೋಗುವ ಕಾಲಘಟ್ಟದಲ್ಲಿ ಯುವವಾಹಿನಿಯು ಹಬ್ಬಗಳನ್ನು ಸಾಮೂಹಿಕವಾಗಿ ಆಚರಿಸುವ ಮೂಲಕ ಮುಂದಿನ ಯುವಜನತೆಗೆ ಸಂಸ್ಕೃತಿ, ಸಂಸ್ಕಾರದ ಅರಿವು ಮೂಡಿಸಿದೆ. ಸಮಾಜದಲ್ಲಿ ಪರಸ್ಪರ ಪ್ರೀತಿ, ವಿಶ್ವಾಸ, ಶಾಂತಿಯನ್ನು ಬಲಪಡಿಸುವಲ್ಲಿ ಹಬ್ಬಗಳು ದಾರಿದೀಪವಾಗಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ‌ 15.04.2018 ರಂದು ಬಜ್ಪೆ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ಯುವವಾಹಿನಿ (ರಿ) ಬಜ್ಪೆ ಘಟಕದ ಆಶ್ರಯದಲ್ಲಿ ಜರುಗಿದ ಬಿಸು ಪರ್ಬ ಕಾರ್ಯಕ್ರಮದಲ್ಲಿ ಮುಖ್ಯ […]

Read More

ತುಳುವೆರೆ ತುಳಸಿ ಪರ್ಬ

ಯಶಸ್ಸು ಗಳಿಸಲು ಐಶ್ವರ್ಯ, ವಿದ್ಯಾರ್ಹತೆ, ಅಥವಾ ವ್ಯಕ್ತಿಯ ಹಿನ್ನಲೆ ಮುಖ್ಯವಾಗುವುದಿಲ್ಲ . ಆತನ ಕನಸು, ಸಾಧಿಸುವ ಛಲ, ಪರಿಶ್ರಮ ಮುಖ್ಯವಾಗುತ್ತದೆ. ಇದರೊಂದಿಗೆ ತಾವು ತೊಡಗಿಸಿಕೊಂಡು ವ್ಯಕ್ತಿಯನ್ನು ಪ್ರೀತಿಸಿ ಅದನ್ನೇ ಪ್ರವೃತ್ತಿಯನ್ನಾಗಿಸಿದಾಗ ಯಶಸ್ಸು ಸಾಧ್ಯ. ಯುವವಾಹಿನಿಯ ರಾಜ್ಯೋತ್ಸವ ಪ್ರಶಸ್ತಿಯ ಹಿಂದೆ ಮೂವತ್ತು ವರುಷಗಳ ಸಾಧನೆಯ ಶ್ರಮವಿದೆ, ಪ್ರತಿಯೊಬ್ಬ ಯುವವಾಹಿನಿ ಸದಸ್ಯನ ಬೆವರ ಹನಿ ಇದೆ. ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ಅಭಿಪ್ರಾಯ ಪಟ್ಟರು. ಅವರು ದಿನಾಂಕ 01.11.2017 ರಂದು ಯುವವಾಹಿನಿ (ರಿ) ಹೆಜಮಾಡಿ ಘಟಕದ […]

Read More

ಆರಾಧನಾ ಕೇಂದ್ರಗಳು ಸಂಸ್ಕಾರ ,ಸಂಸ್ಕೃತಿಯ ದಾರಿದೀಪವಾಗಬೇಕು : ಮಹಮ್ಮದ್ ಹನೀಫ್

ಪರಿಶುದ್ಧ ಮನಸ್ಸಿನೊಂದಿಗೆ ಸತ್ಕಾರ್ಯಗಳಿಗೆ ವಿನಿಯೋಗಿಸುವಾಗ ಮಾನವ ಜನ್ಮ ಸಾರ್ಥಕವಾಗುತ್ತದೆ. ಸಮಾಜದಲ್ಲಿ ಪರಸ್ಪರ ಪ್ರೀತಿ, ವಿಶ್ವಾಸ, ಶಾಂತಿಯನ್ನು ಬಲಪಡಿಸುವಲ್ಲಿ ಆರಾಧನಾ ಕೇಂದ್ರಗಳು ದಾರಿದೀಪವಾಗಬೇಕು ಹಾಗೂ ಮಾನವ ಬದುಕಿನ ವಿಕಸನಕ್ಕೆ ಸಂಸ್ಕಾರ ,ಸಂಸ್ಕೃತಿಯ ಮಾರ್ಗದರ್ಶನ ನೀಡುವ ಕೇಂದ್ರಗಳಾಗಬೇಕು ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಬಿ.ಎ‌.ಮಹಮ್ಮದ್ ಹನೀಫ್ ತಿಳಿಸಿದರು. ಅವರು ದಿನಾಂಕ 18.10.2017 ರಂದು ಯುವವಾಹಿನಿ (ರಿ) ಮುಲ್ಕಿ ಘಟಕದ ಆಶ್ರಯದಲ್ಲಿ ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಜರುಗಿದ ತುಳುವೆರೆ ತುಡಾರ ಪರ್ಬ ಸಮಾರಂಭದ ಮುಖ್ಯ […]

Read More

ಬಲಿರಾಜ ಕೃಷಿ ಕ್ಷೇತ್ರದ ಯಜಮಾನ – ಡಾ|| ದೇಜಪ್ಪ ದಲ್ಲೋಡಿ

ಪುರಾಣ ಕಾಲದ ಬಲಿ ಚಕ್ರವರ್ತಿಯು ಭರತ ಭೂಮಿಯ ಕೃಷಿ ಕ್ಷೇತ್ರದ ಯಜಮಾನನಾಗಿದ್ದನು. “ಕೃಷಿತೋ ನಾಸ್ತಿ ದುರ್ಭಿಕ್ಷಂ” ಎಂಬುದು ಎರಡನೇ ಮನುವಾದ ಸ್ವಾರೋಚಿಷನ ಕಾಲದಲ್ಲಿ ವಿಶ್ವದ ಪ್ರಥಮ ಕೃಷಿಕನಾದ ಆದಿಮನಿಂದ ಹುಟ್ಟಿಕೊಂಡು ಬಲಿರಾಜನ ಕಾಲದಲ್ಲಿ ಸಂಪೂರ್ಣ ಪ್ರಗತಿಯನ್ನು ಕಂಡಿತು. ಇದರ ನಿಮಿತ್ತವಾಗಿಯೇ ಒಂದು ಕಾಲದ ತುಳುನಾಡಿನ ರೈತರು ತಮ್ಮ ಬೇಸಾಯದ ಗದ್ದೆಗಳ ಹುಣಿಗಳಲ್ಲಿ ಸಾಲು ಸಾಲಾಗಿ ದೀಪಗಳನ್ನುರಿಸಿ, ಬಲಿರಾಜನನ್ನು ಸಾಂಕೇತಿಕವಾಗಿ ಪ್ರತಿಷ್ಠಾಪಿಸಿ ದೀಪಾವಳಿಯನ್ನು ಆಚರಿಸುತ್ತಿದ್ದರು ಎಂದು ಖ್ಯಾತ ಸಂಶೋಧಕ ಹಾಗೂ ಹಿರಿಯ ಸಾಹಿತಿ ಡಾ|| ದೇಜಪ್ಪ ದಲ್ಲೋಡಿ ತಿಳಿಸಿದರು […]

Read More

ಬಾಂಧವ್ಯವನ್ನು ಗಟ್ಟಿಗೊಳಿಸುವ ಶಕ್ತಿ ಹಬ್ಬಗಳಿಗಿದೆ : ಬಿ.ತಮ್ಮಯ

ಪರಸ್ಪರ ದೀಪಗಳಿಂದ ಬೆಸೆದುಕೊಂಡು ಕತ್ತಲೆಯಿಂದ ಬೆಳಕಿನೆಡೆಗೆ ಒಂದು ಅಲೌಕಿಕ ಬೆಳಕಿನ ಚಿತ್ತಾರವನ್ನು ಪೂರ್ತಿ ಬಿಡಿಸಿದಂತೆ ಕಾಣುವ ಅಥವಾ ಅದನ್ನು ಅನುಭವಿಸುವ ಅವಕಾಶವಿರುವುದು ದೀಪಗಳ ಹಬ್ಬಕ್ಕೆ ಮಾತ್ರ, ತುಳುನಾಡಿನಲ್ಲಿ ತುಡಾರ ಪರ್ಬಕ್ಕೆ ವಿಶೇಷ ಮಹತ್ವ ಇದೆ. ಕುಟುಂಬದಲ್ಲಿ ಬಾಂಧವ್ಯವನ್ನು ಗಟ್ಟಿಗೊಳಿಸುವ ಶಕ್ತಿ ಹಬ್ಬಗಳಿಗಿದೆ. ಎಂದು ಯುವವಾಹಿನಿ ಕೇಂದ್ರ ಸಮಿತಿಯ ಸಲಹೆಗಾರರಾದ ಬಿ.ತಮ್ಮಯ ತಿಳಿಸಿದರು. ಅವರು ದಿನಾಂಕ 18.10.2017 ರಂದು ಉಪ್ಪಿನಂಗಡಿ ರಾಜ್ ಮಹಲ್ ಪೆದಮ್ಮಲೆ ( ವರದ್ರಾಜ್ ನಿವಾಸ) ಇಲ್ಲಿ ಯುವವಾಹಿನಿ ಉಪ್ಪಿನಂಗಡಿ ಘಟಕದ ಆಶ್ರಯದಲ್ಲಿ ಜರುಗಿದ ತುಡಾರ […]

Read More

ಸೋಣ ಸಂಭ್ರಮ – 2017

ಕೃಷಿಕರಿಗೆ ಸೋಣ ತಿಂಗಳು ಸಂಭ್ರಮದ ತಿಂಗಳು ಆಗಿರುವುದರಿಂದ ಈ ಕಾರ್ಯಕ್ರಮದ ಶೀರ್ಷಿಕೆ ಅರ್ಥಪೂರ್ಣವಾಗಿದೆ.ತಂತ್ರಜ್ಞಾನದಿಂದ ಮನಸ್ಸಿನ ಬದಲಾವಣೆ ಆಗಬಹುದೇ ಹೊರತು ಸಂಸ್ಕೃತಿ, ಸಂಸ್ಕಾರ ಹಾಗೂ ಜೀವನ ಪಾಠವನ್ನು ಕಲಿಸುವುದಿಲ್ಲ ಹಾಗಾಗಿ ಸಂಸ್ಕಾರದ ಜತೆಗೆ ಜೀವನ ಮೌಲ್ಯವನ್ನು ಅಳವಡಿಸುವುದು ಇಂದು ತೀರಾ ಅಗತ್ಯವಾಗಿದೆ ಎಂದು ಮಂಗಳೂರು ಮಹಿಳಾ ಮಂಡಲಗಳ ಒಕ್ಕೂಟದ ಸ್ಥಾಪಕ ಅಧ್ಯಕ್ಷರಾದ ಕೆ.ಎ.ರೋಹಿಣಿ ಅಭಿಪ್ರಾಯ ಪಟ್ಟರು.ಅವರು ದಿನಾಂಕ 09.09.2017 ರಂದು ಮಂಗಳೂರು ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಜರುಗಿದ ಸೋಣ ಸಂಭ್ರಮ ಕಾರ್ಯಕ್ರಮದಲ್ಲಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!