30-10-2016, 5:28 AM
ದಿನಾಂಕ 30-10-2106 ರಂದು ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ನಮ್ಮ ಮನೆ ಹಬ್ಬ ದೀಪಾವಳಿ ಎಂಬ ವಿನೂತನ ಕಾರ್ಯಕ್ರಮ ಜರಗಿತು. ಈ ಕಾರ್ಯಕ್ರಮವು ಘಟಕದ ಸದಸ್ಯ ಭಾಸ್ಕರ್ ಕೋಟ್ಯಾನ್ರವರ ಸಂಚಾಲಕತ್ವದಲ್ಲಿ ಅವರ ಮನೆಯಲ್ಲಿ ಘಟಕದ ಅಧ್ಯಕ್ಷ ಐ. ಸುಜಿತ್ರಾಜ್ ಹಾಗೂ ಸರ್ವಸದಸ್ಯರ ಉಪಸ್ಥಿತಿಯೊಂದಿಗೆ ಬಹಳ ವಿಜೃಂಭಣೆಯಿಂದ ನೆರವೇರಿತು. ಭಾಸ್ಕರ್ ಕೋಟ್ಯಾನ್ರವರ ಹೆತ್ತವರಾದ ಸದಾಶಿವ ಅಮೀನ್ ಮತ್ತು ಶ್ರೀಮತಿ ಜಾನಕಿ ಇವರ ಉಪಸ್ಥಿತಿಯಲ್ಲಿ ದೀಪವನ್ನು ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ನಿತೇಶ್ ಎಕ್ಕಾರ್ ಇವರು ದೀಪಾವಳಿ ಹಬ್ಬದ […]
Read More
23-10-2016, 5:38 AM
ಬೆಳಕಿನ ಒಂದು ಸೆಲೆ ಸಾಕು ಬದುಕಿನಲ್ಲಿ ಜೀವನೋತ್ಸಾಹ ತುಂಬಲು. ಹಣತೆಯ ಬೆಳಕಿನಲ್ಲಿ ಒಬ್ಬರ ಕಷ್ಟ, ನೋವು, ನಲಿವನ್ನು ಕ್ಷಣಕಾಲ ಕಂಡು ಅರ್ಥೈಸಿಕೊಳ್ಳಲು ಇದೊಂದು ಸದಾವಕಾಶ ಎನ್ನುವಂತೆ ಶ್ರೀಗುರು ವರ್ಯರ ಆಶೀರ್ವಾದದೊಂದಿಗೆ, ಕೂಳೂರು ಘಟಕದ ಆಶಯದಂತೆ ದೀಪಾವಳಿ ಹಬ್ಬದಂದು ಇಡೀ ಜಗತ್ತೇ ಬೆಳಕಿನಲ್ಲಿ ಜಗಮಗಿಸುವಾಗ ಕೆಲವೊಂದು ಮನೆಯಲ್ಲಿ ಹಣತೆ ಹಚ್ಚಲು ಸಾಧ್ಯವೇ ಇಲ್ಲ ಎನ್ನುವ ದಯನೀಯ ಕುಟುಂಬಗಳು ನಮ್ಮ ಸಮಾಜದಲ್ಲಿ ಇದ್ದಾವೆ. ಅಂಥವರನ್ನು ಗುರುತಿಸಿ ಅವರಿಗೆ ಒಂದು ತಿಂಗಳ ದಿನಬಳಕೆಯ ಎಲ್ಲಾ ಸಾಮಾಗ್ರಿಗಳನ್ನು ಒದಗಿಸಿಕೊಟ್ಟು ದೀಪಾವಳಿಯ ಅರ್ಥಪೂರ್ಣ ಆಚರಣೆಯಲ್ಲಿ […]
Read More
21-08-2016, 5:49 AM
ದಿನಾಂಕ 21-08-2016ರಂದು ಮಂಗಳೂರು ಮಹಿಳಾ ಘಟಕದ ವತಿಯಿಂದ ಮಂಗಳೂರಿನ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ‘ಕರಾವಳಿ ಸಭಾಭವನ’ದಲ್ಲಿ ‘ಸೋಣ ಸಂಭ್ರಮ’ಕಾರ್ಯಕ್ರಮ ಜರಗಿತು. ಕಾರ್ಯಕ್ರಮ ಸಂತ ಅಲೋಶಿಯಸ್ ಕಾಲೇಜಿನ ಪ್ರಾಚಾರ್ಯರಾದ ಡಾ| ಗಣೇಶ್ ಅಮೀನ್ ಸಂಕಮಾರ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮಂಗಳೂರಿನ ಸೆಂಟರ್ ಫಾರ್ ಇಂಟಿಗ್ರೇಟೆಡ್ ಲರ್ನಿಂಗ್ ಇದರ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸಚಿತಾ ನಂದಗೋಪಾಲ್, ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ, ಘಟಕದ ಸಲಹೆಗಾರರಾದ ಅಶೋಕ್ ಕುಮಾರ್ ಮತ್ತು ಸಾಧು ಪೂಜಾರಿ ಮೊದಲಾದವರು ಭಾಗವಹಿಸಿದ್ದರು. ಘಟಕದ ಅಧ್ಯಕ್ಷೆ […]
Read More
14-08-2016, 5:47 AM
ದಿನಾಂಕ 14-08-2016ರ ಆದಿತ್ಯವಾರ ಅಡ್ವೆ ಘಟಕದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಜರಗಿತು. ಕಾರ್ಯಕ್ರಮ ಉದ್ಘಾಟನೆಯನ್ನು ಬ್ರಹ್ಮ ಬೈದರ್ಕಳ ಸೇವಾ ಸಮಿತಿ ಅಧ್ಯಕ್ಷ ಸುಂದರ ಯು. ಸುವರ್ಣರವರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಕೇಂದ್ರ ಸಮಿತಿಯ ಅಧ್ಯಕ್ಷ ಸಂತೋಷ್ಕುಮಾರ್, ಸಾಹಿತಿ ಉಗ್ಗಪ್ಪ ಪೂಜಾರಿ ಬೆದ್ರ, ಚಿತ್ರನಟ ಭೋಜರಾಜ ವಾಮಂಜೂರು, ಅಥನಿ ಕಂಪೆನಿಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಕಿಶೋರ್ ಆಳ್ವ, ನವೀನ್ಚಂದ್ರ ಸುವರ್ಣ, ಸುರೇಶ್ ಶೆಟ್ಟಿ ಮೂಡುಗುತ್ತು, ತ್ಯಾಂಪಣ್ಣ ಶೆಟ್ಟಿ ಮತ್ತು ಮನೋಜ್ ಕರ್ಕೇರ ಮೊದಲಾದವರು ಭಾಗವಹಿಸಿದ್ದರು. ಹಿರಿಯರಾದ ಸುಧಾಕರ ಡಿ. […]
Read More
24-07-2016, 5:56 AM
ಯುವವಾಹಿನಿ(ರಿ) ಹಳೆಯಂಗಡಿ ವತಿಯಿಂದ ದಿನಾಂಕ 24-7-2016 ರಂದು ಆಟಿದ ಆಯನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕೋಟಿ ಚೆನ್ನಯರು ಆರಾಧಿಸಿದ ಕೆಮ್ಮಲೆಜೆಯ ನಾಗಬ್ರಹ್ಮ ಗುಡಿಯ ಆಕರ್ಷಕ ರಂಗ ವಿನ್ಯಾಸದ ವೇದಿಯಲ್ಲಿ ಹಳೆಯಂಗಡಿ ಯುವವಾಹಿನಿಯ ಅವಳಿ ಸದಸ್ಯರ ಕೋಟಿ-ಚೆನ್ನಯ ಕಿರು ರೂಪಕದೊಂದಿಗೆ ಕಾರ್ಯಕ್ರಮ ಆರಂಭ. ದ.ಕ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಕಸ್ತೂರಿ ಪಂಜ ಹಾಗೂ ತುಳು ಚಿತ್ರನಟ, ರಂಗಭೂಮಿ ಕಲಾವಿದ ಶ್ರೀ ಅರವಿಂದ ಬೋಳಾರ್ ಇವರು ನಾಗಬ್ರಹ್ಮ ಗುಡಿಯ ಜೋಡು ನಂದಾ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಅತ್ಯಂತ ವಿಶಿಷ್ಠವಾಗಿ […]
Read More
23-10-2014, 12:44 PM
ಬೆಳಕಿನ ಹಬ್ಬವು ಸಮಾಜ ಮುಖಿಯಾಗಿ ಅರಳುವ, ಬೆಳಗುವ ಪರಿಯಿಂದ ಭವ್ಯವಾಗಿ ಅನಾವರಣಗೊಳ್ಳುತ್ತದೆ. ನಮಗೆ ಹಬ್ಬ ಅಥವಾ ಪರ್ಬ ಎಂದರೆ ದೀಪಾವಳಿ ಅದೇ ದೀಪಗಳ ಹಬ್ಬ ತುಳುವೆರೆ ತುಡಾರ ಪರ್ಬ. ಸ್ವತಃ ತಯಾರಿಸಿದ ಗೂಡುದೀಪಗಳು, ವೈವಿದ್ಯಮಯ ರಂಗೋಲಿಯ ಚಿತ್ತಾರ, ದೀಪಗಳ ಬೆಳಗಿನ ನೋಟದ ಮೂಲಕ ಹಬ್ಬವನ್ನು ಆಚರಿಸಿ ನಮ್ಮ ಸಂಪ್ರದಾಯವನ್ನು ಉಳಿಸಿ ಬೆಳೆಸುವ ಯುವವಾಹಿನಿಯ ಶ್ರಮ ಶ್ಲಾಘನೀಯ ಎಂದು ತುಳು ಭಾಷಾ ವಿದ್ವಾಂಸರಾದ ಕೆ.ಕೆ. ಪೇಜಾವರ ತಿಳಿಸಿದರು. ಅವರು ಯುವವಾಹಿನಿ ಬಂಟ್ವಾಳ ಘಟಕ ಹಾಗೂ ಕರ್ನಾಟಕ ತುಳು ಸಾಹಿತ್ಯ […]
Read More
14-08-2009, 6:44 AM
ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಜರಗಿದ ತುಳು ಸಂಸ್ಕೃತಿ ಬಿಂಬಿಸುವ ಆಟಿದ ಒಂಜಿ ದಿನ ಕಾರ್ಯಕ್ರಮ ದಿನಾಂಕ 14.08.2009 ರಂದು ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾ ಭವನದಲ್ಲಿ ಜರಗಿತು. ಈ ಸಂದರ್ಭದಲ್ಲಿ ರಂಗಭೂಮಿ ಕಲಾವಿದ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ದಂಪತಿಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅದ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್, ಬಿಲ್ಲವ ಮಹಾಮಂಡಲದ ವಕ್ತಾರ ಕೆ.ಹರಿಕೃಷ್ಣ ಬಂಟ್ವಾಳ್, ಸದಾನಂದ ಶೆಟ್ಟಿ ರಂಗೋಲಿ, ಹಾಗೂ ಬಂಟ್ವಾಳ ಯುವವಾಹಿನಿಯ ಅದ್ಯಕ್ಷ […]
Read More