25-01-2026, 9:00 PM
ಕಡಬ: ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ ದಿನಾಂಕ 25.01.2026ರ ಆದಿತ್ಯವಾರ ಸಂಜೆ 7.15 ರಿಂದ 9.30 ಗಂಟೆಯವರೆಗೆ ಕಡಬದ ಕುತ್ಯಾಡಿ ಗ್ರಾಮದಲ್ಲಿ ಐದು ಮನೆಗಳಲ್ಲಿ ಮನೆ–ಮನೆ ಭಜನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕುತ್ಯಾಡಿಯ ಶ್ರೀಮತಿ ಮತ್ತು ಶ್ರೀ ಸುನಂದ ಪೂಜಾರಿ, ಶ್ರೀಮತಿ ಯಶೋದಾ ಪೂಜಾರಿ, ಶ್ರೀಮತಿ ಸುನಿತಾ ದಿನೇಶ್ ಪೂಜಾರಿ, ಶ್ರೀಮತಿ ಪ್ರೇಮ ಪೂಜಾರಿ, ಶ್ರೀಮತಿ ದಿವ್ಯ ಮತ್ತು ಬೇಬಿ ಪೂಜಾರಿ ಇವರ ಮನೆಗಳಲ್ಲಿ ಭಜನಾ ಕಾರ್ಯಕ್ರಮಗಳು ನಡೆಯಿತು. ಕಾರ್ಯಕ್ರಮದಲ್ಲಿ ಯುವವಾಹಿನಿ ಕಡಬ ಘಟಕದ ಸದಸ್ಯರು ಉತ್ಸಾಹದಿಂದ […]
Read More
11-01-2026, 10:00 AM
ಕಡಬ : ಕಡಬ ಶ್ರೀ ಮಹಾವಿಷ್ಣು ದೇವಸ್ಥಾನ, ಪಿಜಕ್ಕಳದಲ್ಲಿ ದಿನಾಂಕ 11.01.2026 ನೇ ಬೆಳಿಗ್ಗೆ ಧನುಪೂಜೆ ಪ್ರಯುಕ್ತ ಯುವವಾಹಿನಿ (ರಿ.) ಕಡಬ ಘಟಕದ ಸದಸ್ಯರು ಭಕ್ತಿಭಾವಪೂರ್ಣ ಭಜನಾ ಸೇವೆಯನ್ನು ಸಲ್ಲಿಸಿದರು. ಬೆಳಿಗ್ಗೆ 4.00 ಗಂಟೆಯಿಂದ 5.15 ಗಂಟೆಯವರೆಗೆ ನಡೆದ ಭಜನಾ ಸೇವೆಯಲ್ಲಿ ಭಕ್ತಿಗೀತೆಗಳು ಹಾಗೂ ನಾಮಸಂಕೀರ್ತನೆಯ ಮೂಲಕ ದೇವರ ಸ್ಮರಣೆಯಲ್ಲಿ ತೊಡಗಿಸಿಕೊಂಡರು. ಯುವವಾಹಿನಿ ಕಡಬ ಘಟಕದ ಈ ಸೇವೆಗೆ ದೇವಾಲಯದ ಆಡಳಿತ ಮಂಡಳಿ ಹಾಗೂ ಭಕ್ತಾದಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.
Read More
06-01-2026, 9:00 PM
ಸುರತ್ಕಲ್ : ಯುವವಾಹಿನಿ (ರಿ.) ಸುರತ್ಕಲ್ ಘಟಕದ ವತಿಯಿಂದ ದಿನಾಂಕ 06-01-2026ರಂದು ಮನೆ–ಮನೆ ಭಜನಾ ಸೇವೆಯನ್ನು ಘಟಕದ ಅಧ್ಯಕ್ಷರಾದ ವಾಣಿ ಗಣೇಶ್ ಅವರ ಮನೆಯಲ್ಲಿ ಭಕ್ತಿಭಾವದಿಂದ ನಡೆಸಲಾಯಿತು. ಈ ಭಜನಾ ಸೇವೆಯಲ್ಲಿ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿ, ಧಾರ್ಮಿಕ ವಾತಾವರಣವನ್ನು ನಿರ್ಮಿಸಿದರು. ಕಾರ್ಯಕ್ರಮವು ಶಾಂತಿ, ಸೌಹಾರ್ದತೆ ಹಾಗೂ ಧಾರ್ಮಿಕ ಚೈತನ್ಯವನ್ನು ಮೂಡಿಸುವ ಉದ್ದೇಶದಿಂದ ಯಶಸ್ವಿಯಾಗಿ ನೆರವೇರಿತು
Read More
05-01-2026, 2:03 PM
ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ದಿನಾಂಕ: 05-01-2026 ರಂದು ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ಲಹರಿ ತಂಡ ಬಿಜೈ ಮಂಗಳೂರು ಇವರ ಸಹಯೋಗದಿಂದ ನೆರವೇರಿತು. ಯುವವಾಹಿನಿ (ರಿ.) ಮಂಗಳೂರು ಘಟಕದ ಒಂದನೇ ಉಪಾಧ್ಯಕ್ಷರು ಹರೀಶ್ ಕೆ. ಸುವರ್ಣ ಮತ್ತು ಸದಸ್ಯರು ಉಪಸ್ಥಿತಿ ಇದ್ದರು.
Read More
12-12-2025, 5:36 AM
25-11-2025 ಸಂಗೀತ ಎಂಬುದು ಮನಸ್ಸುಗಳನ್ನು ಜೋಡಿಸುವ ಶಕ್ತಿ, ಜನರನ್ನು ಒಗ್ಗೂಡಿಸುವ ಶಕ್ತಿ ಹಾಗೂ ನಮ್ಮ ಮನಸ್ಸಿನ ಭಾವನೆಗಳನ್ನು ಸುಂದರವಾಗಿ ವ್ಯಕ್ತಪಡಿಸುವ ಒಂದು ಕಲೆಯಾಗಿದೆ ಎಂದು ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲೆಯ ಉಪಾಧ್ಯಕ್ಷರಾದ ದೀಕ್ಷಿತ್ ಅತ್ತಾವರ ಹೇಳಿದರು. ಅವರು ಘಟಕದ ಆಶ್ರಯದಲ್ಲಿ ನಡೆದ ಸಂಗೀತ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಮಾತನಾಡಿ ಪ್ರತಿಯೊಬ್ಬ ವ್ಯಕ್ತಿಯಲ್ಲೂ ಪ್ರತಿಭೆಯೊoದಿರುತ್ತದೆ ಅಂತಹ ಪ್ರತಿಭೆಗಳನ್ನು ಮುನ್ನೆಲೆಗೆ ತರಲು ಮಂಗಳೂರು ಘಟಕವೂ […]
Read More
22-10-2025, 3:59 PM
ಕುದ್ರೋಳಿ ನವರಾತ್ರಿ ಮಹೋತ್ಸವದಲ್ಲಿ ಸ್ವಯಂ ಸೇವೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುತ್ತಿರುವ ನವರಾತ್ರಿ ಮಹೋತ್ಸವದಲ್ಲಿ ಯುವವಾಹಿನಿ ಉಪ್ಪಿನಂಗಡಿ ಘಟಕದ ವತಿಯಿಂದ ಸ್ವಯಂ ಸೇವೆ ನಡೆಯಿತು. ಘಟಕದ ಅಧ್ಯಕ್ಷರಾದ ನಾಣ್ಯಪ್ಪ ಕೋಟ್ಯಾನ್ ಇವರ ನೇತೃತ್ವದಲ್ಲಿ 100 ಕ್ಕೂ ಹೆಚ್ಚಿನ ಮಂದಿ ಸದಸ್ಯರು02.10.2025ರಂದು ಬೆಳಿಗ್ಗೆಯಿಂದ ಸಂಜೆ ತನಕ ಸೇವೆ ಸಲ್ಲಿಸಿದರು. ಸೇವೆಯಲ್ಲಿ ಘಟಕದ ಗೌರವ ಸಲಹೆಗಾರರಾದ ವರದರಾಜ್, ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದ್ದರು.
Read More
22-10-2025, 3:32 PM
ದಿನಾಂಕ 28/07/2025 ರಂದು ಶ್ರೀ ಗೋಕರ್ನಾಥೇಶ್ವರ ಕ್ಷೇತ್ರ ಕುದ್ರಳ್ಳಿಯಲ್ಲಿ ಘಟಕದ ವತಿಯಿಂದ ಭಜನಾ ಸಂಕೀರ್ತನೆಯನ್ನು ನಡೆಸಲಾಯಿತು
Read More
22-10-2025, 3:27 PM
ದಿನಾಂಕ 27/07/2025 ರಂದು ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್ (ರಿ) ಇದರ ಸಹಭಾಗಿತ್ವದಲ್ಲಿ ಕಾರ್ಯಕ್ರಮ ನಡೆಯಿತು, ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಗುರುಪೂಜೆ ಸಲ್ಲಿಸಿ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಮೊದಲಿಗೆ ಘಟಕದ ಸದಸ್ಯರು ಹಾಗೂ ಊರ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಸಾಂಸ್ಕೃತಿಕ ಕಾರ್ಯಕ್ರಮದ ನಂತರ ಸಭಾ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಸಂತ ಅಲೋಶಿಯಸ್ ಸ್ನಾತಕೋತರ ವಿಭಾಗದಲ್ಲಿ ಮುಖ್ಯಸ್ಥರಾದ ಪ್ರೊ|ಡಾ| ರಾಕೇಶ್ ಕುಮಾರ್ ಹಾಗೂ ಸಾಹಿತಿಕಾರರು ಮತ್ತು ಸಂತ ಅಲೋಶಿಯಸ್ ಪಿಯು […]
Read More
22-10-2025, 2:58 PM
ಘಟಕದ ಆಶ್ರಯದಲ್ಲಿ ಮಹಿಳಾ ಸಂಚಾಲನ ಸಮಿತಿ ಬೆಳ್ತಂಗಡಿ ತಾಲೂಕು ಆತಿಥ್ಯದಲ್ಲಿ ದಿನಾಂಕ 02.08.2025ನೇ ಶನಿವಾರದಂದು ಆಟಿದ ಕಮ್ಮೆನ ಕಾರ್ಯಕ್ರಮವು ಬೆಳ್ತಂಗಡಿಯ ಗುರುನಾರಾಯಣ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷರಾದ ರಕ್ಷಿತ್ ಶಿವರಾಂ ನೆರವೇರಿಸಿ ಶುಭ ಹಾರೈಸಿದರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಘಟಕದ ಸಲಹೆಗಾರರಾದ ಸುಧಾಮಣಿ ಆರ್ ಮಾತನಾಡಿ ಆಟಿ ತಿಂಗಳ ವಿಶೇಷತೆಗಳ ಬಗ್ಗೆ ತಿಳಿಸಿದರು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಗುರುರಾಜ್ ಗುರಿಪಳ್ಳ ವಹಿಸಿದ್ದರು. ವೇದಿಕೆಯಲ್ಲಿ ಮಹಿಳಾ ಸಂಚಾಲನ ಸಮಿತಿಯ ಪ್ರಧಾನ ಸಂಚಾಲಕರಾದ […]
Read More
22-10-2025, 2:52 PM
ದಿನಾಂಕ 08-07-2025 ರಂದು ಘಟಕದ ಮಾಜಿ ಅಧ್ಯಕ್ಷರಾದ ಕಿಶೋರ್ ಕುಮಾರ್ ರವರ ಮನೆಯಲ್ಲಿ ಮನೆ ಮನೆ ಭಜನೆ ಕಾರ್ಯಕ್ರಮ ನಡೆಯಿತು. ಪ್ರಥಮವಾಗಿ ಅಂದಿನ ವಾರದ ಸಭೆಯನ್ನು ಅವರ ಮನೆಯಲ್ಲಿಯೇ ನಡೆಸಿಕೊಂಡೆವು ನಂತರ ಒಂದು ಗಂಟೆಯ ಭಜನಾವಳಿ ನಡೆಯಿತು. ಮಾಜಿ ಅಧ್ಯಕ್ಷರು,ಸದಸ್ಯರೆಲ್ಲರೂಡನೆ ಮನೆಯವರೂ ಕೂಡಿ ಭಜನಾವಳಿಯನ್ನು ಚಂದಗೊಳಿಸಿದರು. ಮಂಗಳ ಹಾಡುವುದರೊಡನೆ ದೇವರ ಆರತಿ ಮುಗಿಸಿ ಪ್ರಸಾದ ವಿತರಣೆ ಮಾಡಿದರು. ತದನಂತರ ಪಲಹಾರದ ಸೇವನೆಯೊಂದಿಗೆ ಭಜನಾ ಸೇವೆಯನ್ನು ಮುಕ್ತಾಯಗೊಳಿಸಲಾಯಿತು.
Read More