19-07-2026, 6:00 PM
ಬೆಂಗಳೂರು, ಜುಲೈ 19: ಯುವವಾಹಿನಿ (ರಿ.) ಬೆಂಗಳೂರು ಘಟಕದ ವತಿಯಿಂದ ಸದಸ್ಯರಿಗಾಗಿ ಆಯೋಜಿಸಲಾಗಿದ್ದ “ಕೋಟಿ ಚೆನ್ನಯ್ಯ ಟ್ರೋಫಿ – ಸೀಸನ್ 2” ಬ್ಯಾಡ್ಮಿಂಟನ್ ಕ್ರೀಡಾಕೂಟವು ಭಾನುವಾರ ಬೆಂಗಳೂರಿನ ದಾಸರಹಳ್ಳಿ ಸಮೀಪದ ಎಎಂ ಸ್ಪೋರ್ಟ್ಸ್ ಅರೆನಾದಲ್ಲಿ ಸಂಭ್ರಮ, ಉತ್ಸಾಹ ಮತ್ತು ಕ್ರೀಡಾಸ್ಫೂರ್ತಿಯ ವಾತಾವರಣದಲ್ಲಿ ಯಶಸ್ವಿಯಾಗಿ ನಡೆಯಿತು. ಬೆಳಿಗ್ಗೆ ನಡೆದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿತ್ಯಾನಂದ ಶೆಟ್ಟಿ ಹಾಗೂ ನಂಜುಂಡ ಪೂಜಾರಿ ಅವರು, ಘಟಕದ ಅಧ್ಯಕ್ಷ ವಿಜೇತ್ ವಿ. ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. […]
Read More
16-07-2026, 11:00 AM
ಮೂಡುಬಿದಿರೆ, ಜುಲೈ 16: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಯುವವಾಹಿನಿ ಕ್ರೀಡೋತ್ಸವ–2026ರ ಯಶಸ್ವಿ ಆಯೋಜನೆ ಕುರಿತು ಸಮಾಲೋಚನಾ ಸಭೆ ಇಂದು ಆಳ್ವಾಸ್ ಫೌಂಡೇಶನ್ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರನ್ನು ಭೇಟಿ ಮಾಡಿ ನಡೆಸಲಾಯಿತು. ಸಭೆಯಲ್ಲಿ ಕ್ರೀಡೋತ್ಸವದ ರೂಪುರೇಷೆ, ವ್ಯವಸ್ಥಾಪನೆ ಹಾಗೂ ಅಗತ್ಯ ಸೌಲಭ್ಯಗಳ ಕುರಿತು ಚರ್ಚಿಸಿ, ಕಾರ್ಯಕ್ರಮದ ಯಶಸ್ವಿ ಆಯೋಜನೆಗೆ ಆಳ್ವಾಸ್ ಫೌಂಡೇಶನ್ನ ಸಹಕಾರ ಕೋರಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ […]
Read More
12-07-2026, 7:00 PM
ಅಡ್ವೆ, ಜು.12: ಯುವವಾಹಿನಿ (ರಿ.) ಅಡ್ವೆ ಘಟಕದ ವತಿಯಿಂದ ಘಟಕದ ಸದಸ್ಯರು ಹಾಗೂ ಪಲಿಮಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರಿಗಾಗಿ ಅಡ್ವೆಯ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ದೇವರ ಗದ್ದೆಯಲ್ಲಿ ‘ಕೆಸರ್ಡೊಂಜಿ ದಿನ-2026’ ಕಾರ್ಯಕ್ರಮವು ಭಾನುವಾರ ಬೆಳಗ್ಗಿನಿಂದ ಸಂಜೆಯವರೆಗೆ ಅತ್ಯಂತ ಸಂಭ್ರಮ, ಸಡಗರ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಬಳಿಕ ಗಂಧಪ್ರಸಾದ, ತೀರ್ಥ, ಸಿಯಾಳ, ಹಾಲು ಸಮರ್ಪಣೆ ಹಾಗೂ ತೆಂಗಿನಕಾಯಿ ಒಡೆಯುವ […]
Read More
10-05-2026, 7:00 PM
ಕುಪ್ಪೆಪದವು : “ನಾರಾಯಣ ಗುರುಗಳ ತತ್ವದಂತೆ ‘ವಿದ್ಯೆ–ಉದ್ಯೋಗ–ಸಂಪರ್ಕ’ ಎಂಬ ಧ್ಯೇಯೋದ್ದೇಶದೊಂದಿಗೆ ರಾಜ್ಯವ್ಯಾಪಿ ಬೆಳೆಯುತ್ತಿರುವ ಯುವವಾಹಿನಿ ಸಂಸ್ಥೆಯು, ಯುವಶಕ್ತಿಯನ್ನು ಸಮಾಜಸೇವೆಯತ್ತ ಕೊಂಡೊಯ್ಯುತ್ತಿರುವುದು ಹೆಮ್ಮೆಯ ವಿಚಾರ,” ಎಂದು ಶಾಸಕರಾದ ವೈ ಭರತ್ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಯುವವಾಹಿನಿ (ರಿ.) ಕುಪ್ಪೆಪದವು-ಎಡಪದವು ಘಟಕದ ವತಿಯಿಂದ ವಿದ್ಯಾನಿಧಿ ಸಹಾಯಾರ್ಥವಾಗಿ ಕಿಲೆಂಜಾರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಕ್ರಿಕೆಟ್ ಪಂದ್ಯಕೂಟದ ಸಮಾರೋಪ ಸಮಾರಂಭದಲ್ಲಿ ಮಾತನಾಡುತ್ತಿದ್ದರು. ಘಟಕವು ಯುವಜನರನ್ನು ಒಗ್ಗೂಡಿಸಿ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಮಾದರಿ ಸಂಘಟನೆಯಾಗಿ ಗುರುತಿಸಿಕೊಂಡಿದೆ ಎಂದು ಅವರು ಶ್ಲಾಘಿಸಿದರು. ಪಂದ್ಯಕೂಟವನ್ನು ಕಿಲೆಂಜಾರು ಅರಮನೆ […]
Read More
08-02-2026, 6:00 PM
ಬೆಂಗಳೂರು: ಯುವಕರು ಸಮಾಜವನ್ನು ಬಲಿಷ್ಠ ಮತ್ತು ಆರೋಗ್ಯಕರ ದಿಕ್ಕಿನಲ್ಲಿ ಮುನ್ನಡೆಸುವ ಶಕ್ತಿ ಹೊಂದಿದ್ದಾರೆ; ಇಂತಹ ಕ್ರೀಡಾ ವೇದಿಕೆಗಳು ಅವರಲ್ಲಿ ಶಿಸ್ತು, ಏಕತೆ ಮತ್ತು ಆತ್ಮವಿಶ್ವಾಸವನ್ನು ಬೆಳೆಸುತ್ತವೆ ಎಂದು ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಅಧ್ಯಕ್ಷರು ಹಾಗೂ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ನ ಚೇರ್ಮೆನ್ ಸೂರ್ಯಕಾಂತ್ ಜೆ. ಸುವರ್ಣ ಅಭಿಪ್ರಾಯಪಟ್ಟರು.ಅವರು ಯುವವಾಹಿನಿ (ರಿ.) ಬೆಂಗಳೂರು ಘಟಕದ ವತಿಯಿಂದ ಚಿಕ್ಕಬಾಣಾವರ ಸಮೀಪದ ಗೋಲ್ಡನ್ ರೇ ಕ್ರೀಡಾಂಗಣದಲ್ಲಿ ಫೆಬ್ರವರಿ 8ರಂದು ಆಯೋಜಿಸಲಾದ “ಬ್ರಹ್ಮಶ್ರೀ ಕ್ರೀಡಾಕೂಟ 2026” ನ್ನು ಉದ್ಘಾಟಿಸಿ ಮಾತನಾಡಿ ಯುವಕರು ಸಮಾಜದ […]
Read More
01-02-2026, 9:00 PM
ಪಡುಬಿದ್ರೆ/ಮಂಗಳೂರು : ಮಹಿಳಾ ಸಬಲೀಕರಣಕ್ಕೆ ಕ್ರೀಡೆಯನ್ನೇ ವೇದಿಕೆಯಾಗಿಸಿಕೊಂಡು, ಮಹಿಳಾ ಶಕ್ತಿಯನ್ನು ಸಮಾಜದ ಮುಂದಿಡುವ ಶ್ಲಾಘನೀಯ ಕಾರ್ಯವನ್ನು ಯುವವಾಹಿನಿ (ರಿ.) ಪಡುಬಿದ್ರೆ ಘಟಕ ಯಶಸ್ವಿಯಾಗಿ ನೆರವೇರಿಸಿದೆ. ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಆಶ್ರಯದಲ್ಲಿ ಸ್ಥಳೀಯ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ನಡೆದ “ಬಿಲ್ಲವ ಪ್ರೀಮಿಯರ್ ಲೀಗ್ (BPL) – 2026” ಮಹಿಳಾ ಕ್ರಿಕೆಟ್ ಪಂದ್ಯಾಟವು ಕೇವಲ ಕ್ರೀಡಾಕೂಟವಲ್ಲದೆ, ಸಂಘಟನೆ, ಏಕತೆ ಹಾಗೂ ಸಬಲೀಕರಣದ ಜೀವಂತ ಸಂದೇಶವಾಗಿ ಮೂಡಿಬಂದಿತು. ಪ್ರಮುಖವಾಗಿ ಯುವವಾಹಿನಿಯ ಮಹಿಳಾ ಸದಸ್ಯರಿಂದಲೇ ಆಯೋಜಿಸಲ್ಪಟ್ಟ ಈ […]
Read More
01-02-2026, 11:30 AM
ಕೊಲ್ಯ : ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ಆಯೋಜಿಸಲಾದ ಬಿಲ್ಲವಾಸ್ ವುಮೆನ್ಸ್ ಪ್ರೀಮಿಯರ್ ಲೀಗ್ – 2026 ಕ್ರಿಕೆಟ್ ಪಂದ್ಯಾಟದಲ್ಲಿ ಯುವವಾಹಿನಿ (ರಿ.) ಕೊಲ್ಯ ಘಟಕದ ತಂಡವು ಭಾಗವಹಿಸಿ, ಅತ್ಯುತ್ತಮ ಪ್ರದರ್ಶನ ನೀಡಿತು. ಪಂದ್ಯಾಟದ ಅವಧಿಯಲ್ಲಿ ಕೊಲ್ಯ ಘಟಕದ ಮಹಿಳಾ ಆಟಗಾರ್ತಿಯರು ತಮ್ಮ ಆಟದ ಮೂಲಕ ಕೌಶಲ್ಯ, ಆತ್ಮವಿಶ್ವಾಸ ಮತ್ತು ತಂಡಾತ್ಮಕ ಮನೋಭಾವವನ್ನು ಪ್ರದರ್ಶಿಸಿ, ಪ್ರೇಕ್ಷಕರ ಹಾಗೂ ಸಂಘಟಕರ ಮೆಚ್ಚುಗೆಗೆ ಪಾತ್ರರಾದರು.
Read More
31-01-2026, 10:00 AM
ಪಡುಬಿದ್ರಿ: ಕ್ರೀಡೆ ಸಂಘಟನೆಗೆ ಏಕತೆಗೆ ಅತ್ಯುತ್ತಮ ಆಯ್ಕೆ. ಕ್ರೀಡೆ ಮೂಲಕ ಮಹಿಳಾ ಸಬಲೀಕರಣದತ್ತ ಹೆಜ್ಜೆ ಇಟ್ಟ ಯುವವಾಹಿನಿಯ ಪ್ರಯತ್ನ ಶ್ಲಾಘನೀಯ ಎಂದು ಭಾರತ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ ತಿಳಿಸಿದರು. ಅವರು ಯುವವಾಹಿನಿ ಪಡುಬಿದ್ರಿ ಘಟಕದ ವತಿಯಿಂದ ಆಯೋಜಿಸಲ್ಪಟ್ಟ ಬಿಲ್ಲವಾಸ್ ವುಮನ್ಸ್ ಪ್ರೀಮಿಯರ್ ಲೀಗ್- 2026 ರ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಸನ್ಮಾನ ಸ್ವೀಕರಿಸಿದ ಅಂತಾರಾಷ್ಟ್ರೀಯ ಕ್ರೀಡಾಪಟು ಕು| ರಕ್ಷಾ ರೆಂಜಾಳ ಮಾತನಾಡಿ, ಇಂತಹ ವಿನೂತನ […]
Read More
26-01-2026, 1:00 PM
ಮಾಣಿ : ಕ್ರೀಡೆ ಎಂಬುದು ಕೇವಲ ದೈಹಿಕ ಚಟುವಟಿಕೆಗೆ ಸೀಮಿತವಲ್ಲ; ಅದು ಯುವ ಮನಸ್ಸುಗಳನ್ನು ಒಗ್ಗೂಡಿಸುವ ಬಾಂಧವ್ಯದ ಶಕ್ತಿಯಾಗಿದ್ದು, ಸಂಘಟನಾ ಬಲವರ್ಧನೆಗೆ ಮಹತ್ವದ ಪಾತ್ರ ವಹಿಸುತ್ತದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಅವರು ಹೇಳಿದರು.ಅವರು ಗಣರಾಜ್ಯೋತ್ಸವದ ಅಂಗವಾಗಿ ದಿನಾಂಕ 26/01/2026 ರಂದು ಬಂಟ್ವಾಳ ತಾಲೂಕಿನ ಅನಂತಾಡಿಯ ಚಿತ್ತರಿಗೆ ಗದ್ದೆಯಲ್ಲಿ ಯುವವಾಹಿನಿ (ರಿ.) ಮಾಣಿ ಘಟಕದ ಆಶ್ರಯದಲ್ಲಿ ಆಯೋಜಿಸಲಾದ ಲೀಗ್ ಮಾದರಿಯ ಕ್ರಿಕೆಟ್ ಹಾಗೂ ತ್ರೋಬಾಲ್ ಪಂದ್ಯಾಟ “ಯುವ ಫ್ಯಾಮಿಲಿ ಚಾಂಪಿಯನ್ಸ್ ಕ್ರಿಕೆಟ್ […]
Read More
23-01-2026, 4:58 PM
ಪಡುಬಿದ್ರಿ : ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಸಾರಥ್ಯದಲ್ಲಿ 2026ರ ಜನವರಿ 31 ಹಾಗೂ ಫೆಬ್ರವರಿ 01ರಂದು ಹೆಜಮಾಡಿಯ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಬಿಲ್ಲವ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಕೂಟ ಆಯೋಜಿಸಲ್ಪಟ್ಟಿದ್ದು, ಇದರ ಅಂಗವಾಗಿ ಟೈಟಲ್ ಸಾಂಗ್ ಬಿಡುಗಡೆ ಕಾರ್ಯಕ್ರಮ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಗುರುದೇವರ ಸ್ಮರಣೆಯೊಂದಿಗೆ ನೆರವೇರಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಯುವವಾಹಿನಿ (ರಿ.) ಅಡ್ವೆ ಘಟಕದ ಅಧ್ಯಕ್ಷರಾದ ಪ್ರಸಾದ್ ಪಲಿಮಾರು ಅವರು ಮಾತನಾಡಿ, ಯುವವಾಹಿನಿ (ರಿ.) […]
Read More