Yuvavahini

ಕ್ರೀಡೆ

ಕೃಷಿಕರ ಬದುಕಿನ ನೈಜ ಚಿತ್ರಣ ಅನಾವರಣ : ಯಶವಂತ ಪೂಜಾರಿ

ಕೂಳೂರು : ಕೇಸರ್ ದ ಗೊಬ್ಬುಲು ಕ್ರೀಡಾಕೂಟದ ಮೂಲಕ ಕೃಷಿಕರ ಬದುಕಿನ ನೈಜ ಚಿತ್ರಣ ಅನಾವರಣಗೊಂಡಿದೆ , ಕ್ರೀಡೆಯ ಮೂಲಕ ಪರಸ್ಪರ ಪ್ರೀತಿ , ವಿಶ್ವಾಸ ಬೆಳೆಸುವ ಕಾರ್ಯ ಯುವವಾಹಿನಿ ಕುಳೂರು ಘಟಕ ಮಾಡುತ್ತಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ತಿಳಿಸಿದರು ಅವರು ದಿನಾಂಕ 01.07.2017 ರಂದು ಯುವವಾಹಿನಿ(ರಿ) ಕೂಳೂರು ಘಟಕದ ಆಶ್ರಯದಲ್ಲಿ ಕೂಳೂರಿನ ಮೇಲ್ ಕೊಪ್ಪಳದಲ್ಲಿ ಜರುಗಿದ ಕೆಸರ್ದ ಗೊಬ್ಬುಲು 2018 ಕ್ರೀಡಾಕೂಟದ ಗದ್ದೆಗೆ ಸಾಂಪ್ರದಾಯಿಕವಾಗಿ ಹಾಲು ಹಾಗೂ ತೆಂಗಿನ ಕಾಯಿ […]

Read More

ಮಹಿಳೆಯರ ಸಾಧನೆ ಗಮನಾರ್ಹ : ಮಾಧವ ಸುವರ್ಣ

ಮಂಗಳೂರು : ಮಹಿಳೆಯರು ಪುರುಷರಿಗೆ ಸಮಾನವಾಗಿ ಸಮಾಜದಲ್ಲಿ ಸಾಧನೆ ಮಾಡುತ್ತಿದ್ದಾರೆ, ಕರಾವಳಿಯ ಹೆಚ್ಚಿನ ಮಹಿಳೆಯರು ಕ್ರೀಡಾ ಚಟುವಟಿಕೆಗಳ ಮೂಲಕ ದೇಶಕ್ಕೆ ಗೌರವ ತಂದಿದ್ದಾರೆ, ಒಂದೇ ಸಮನಾದ ತರಬೇತಿ ಮತ್ತು ಶಿಕ್ಷಣ ನೀಡಿದರೆ ಹೆಣ್ಣು ಗಂಡಿಗೆ ಎಲ್ಲಾ ರೀತಿಯಲ್ಲಿ ಸರಿಸಮಾನರು ಎಂದು ಕೆನರಾ ಪ್ರೌಢ ಶಾಲೆಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಯು.ಮಾಧವ ಸುವರ್ಣ ತಿಳಿಸಿದರು. ಅವರು ದಿನಾಂಕ 11.03.2018 ರಂದು ಯುವವಾಹಿನಿ(ರಿ) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ಮಂಗಳೂರಿನ […]

Read More

ಯುವವಾಹಿನಿ ಟ್ರೋಪಿ-2018 ಉದ್ಘಾಟನೆ

ಬೆಳ್ತಂಗಡಿ : ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ವಿದ್ಯಾನಿಧಿ ಸಹಾಯಾರ್ಥವಾಗಿ ಹಮ್ಮಿಕೊಂಡ ಕ್ರಿಕೆಟ್ ಪಂದ್ಯಾಟ ಯುವವಾಹಿನಿ ಟ್ರೋಪಿ – 2018 ದಿನಾಂಕ 10.02.2018 ಮತ್ತು 11.02.2018 ರಂದು ಅಳದಂಗಡಿ ಸತ್ಯದೇವತಾ ಮೈದಾನದಲ್ಲಿ ಜರುಗಿತು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ) ಬೆಳ್ತಂಗಡಿ ಇದರ ಅಧ್ಯಕ್ಷರಾದ ಸೋಮನಾಥ ಬಂಗೇರ ವರ್ಪಾಳೆ ಉದ್ಘಾಟನೆಯನ್ನು ಮಾಡಿ 2 ದಿನ ವಿದ್ಯಾನಿಧಿಯ ಸಹಾಯಾರ್ಥವಾಗಿ ನಡೆಯುವ ಈ ಕ್ರಿಕೆಟ್ ಪಂದ್ಯಾಟವು ಯಶಸ್ವಿಯಾಗಿ ಜರಗಲಿ ಎಂಬುದಾಗಿ ಶುಭ ಹಾರೈಸಿದರು. ಯುವವಾಹಿನಿ (ರಿ) ಬೆಳ್ತಂಗಡಿ […]

Read More

ಕೋಟಿಚೆನ್ನಯ ಕೆಸರುಗದ್ದೆ ಕ್ರೀಡಾಕೂಟ ಸಂಪನ್ನ

ಪುತ್ತೂರು: ಹಿಂದಿನ ಕಾಲಘಟ್ಟದ ಸಂಸ್ಕೃತಿ ಕಲೆಗಳು ನಶಿಸಿ ಹೋಗುತ್ತಿರುವ ಇಂದಿನ ಕಾಲಘಟ್ಟದಲ್ಲಿ ಯುವವಾಹಿನಿ ಘಟಕವು ಜಿಲ್ಲೆಯ 26 ಘಟಕಗಳ ಯುವಸಮೂಹಕ್ಕೆ ಹಿಂದಿನ ಸಂಸ್ಕೃತಿ ಕಲೆಗಳನ್ನು ನೆನಪಿಸುವ ಅಪೂರ್ವ ಕಾರ್ಯಕ್ರಮ ಹಮ್ಮಿಕೊಂಡಿದ್ದು ಶ್ಲಾಘನೀಯ ಎಂದು ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷ ಜಯಂತ ನಡುಬೈಲುರವರು ಹೇಳಿದರು. ಡಿಸೆಂಬರ್ 24 ರಂದು ಆನಡ್ಕ ಕಂಬಳಗದ್ದೆ ಮರಕೂರು ಜನನ ಎಂಬಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಸಂಘಟನೆಯಾದ ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಹಾಗೂ […]

Read More

100ಮೀ ಓಟದಲ್ಲಿ ಚಿನ್ನ ಗೆದ್ದ ಕೊಲ್ಯ ಯುವವಾಹಿನಿಯ ಸ್ವಸ್ತಿಕ್ ಪೂಜಾರಿ

ಯುವವಾಹಿನಿ (ರಿ)  ಕೊಲ್ಯಘಟಕದ ಸದಸ್ಯ ಸ್ವಸ್ತಿಕ್ ಅವರು ದಿನಾಂಕ 19.05.2017 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ  ಜರುಗಿದ ಅತ್ಲೆಟಿಕ್ ಸ್ಪರ್ಧೆಯಲ್ಲಿ 100 ಮೀ ಓಟವನ್ನು 10.83 ಸೆಕೆಂಡುಗಳಲ್ಲಿ ಕ್ರಮಿಸಿ ಚಿನ್ನದ ಪದಕ ತನ್ನ ಮುಡಿಗೇರಿಸಿಕೊಂಡಿದ್ದಾರೆ ಸ್ವಸ್ತಿಕ್ ಅವರು ಚಿನ್ನದ ಪದಕ ಗಳಿಸುವುದರ ಮೂಲಕ ಉತ್ತರಪ್ರದೇಶದ ಲಕ್ನೊದಲ್ಲಿ 2017 ಜೂನ್ 11 ರಿಂದ 15 ರವರಗೆ ಜರುಗುವ ಫೆಡರೇಶನ್ ಕಪ್ ನಾಷನಲ್ ಜೂನಿಯರ್ ಅತ್ಲೆಟಿಕ್ಸ್ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.ಕೊಲ್ಯ ಸೋಮೇಶ್ವರದ ಆನಂದಾಶ್ರಮ ಪ್ರೌಢಶಾಲೆಯ ದೈಹಿಕ ಶಿಕ್ಷಕರಾದ ಸಂದೀಪ್ ರಾಜ್ […]

Read More

ಹಗ್ಗಜಗ್ಗಾಟ : ಕಟಪಾಡಿ ಹಾಗೂ ಮಂಗಳೂರು ಮಹಿಳಾ ತಂಡಗಳಿಗೆ ಪ್ರಶಸ್ತಿಯ ಗರಿ

ದಿನಾಂಕ 07.05.2017ನೇ ಆದಿತ್ಯವಾರ ಉಡುಪಿಯ ಉದ್ಯಾವರದಲ್ಲಿ ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ  ಯುವವಾಹಿನಿ ಅಂತರ್ ಘಟಕ ಹಗ್ಗಜಗ್ಗಾಟ ಸ್ಪರ್ಧೆ ಜರುಗಿತು. ಈ ಕ್ರೀಡಾಕೂಟದಲ್ಲಿ ಒಟ್ಟು  16 ಯುವವಾಹಿನಿ ತಂಡಗಳು ಭಾಗವಹಿಸಿದ್ದವು ಪುರುಷರ ವಿಭಾಗದಲ್ಲಿ ಯುವವಾಹಿನಿ ಕಟಪಾಡಿ ಪ್ರಥಮ, ಬಂಟ್ವಾಳ ದ್ವಿತೀಯ, ಪುತ್ತೂರು ತೃತೀಯ   ಹಾಗೂ ಮಹಿಳಾ ವಿಭಾಗದಲ್ಲಿ ಯುವವಾಹಿನಿ ಮಂಗಳೂರು ಮಹಿಳಾ ಪ್ರಥಮ, ಉಡುಪಿ ದ್ವಿತೀಯ, ಬಂಟ್ವಾಳ ತೃತೀಯ  ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. ಬಹುಮಾನ ವಿಜೇತ ತಂಡಗಳು […]

Read More

ಯುವವಾಹಿನಿ ಬಿಲ್ಲವ ಸಮಾಜದ ಕಣ್ಣುಗಳು – ಡಾ. ರಾಜಶೇಖರ ಕೋಟ್ಯಾನ್

ಯುವವಾಹಿನಿಯು ಬಿಲ್ಲವ ಸಮಾಜದ ಕಣ್ಣುಗಳು,  ವಜ್ರದಂತೆ ಬಲಿಷ್ಠವಾಗಿರುವ   ಬಿಲ್ಲವ ಸಮಾಜವನ್ನು ಪರಸ್ಪರ ಪ್ರೀತಿ, ವಿಶ್ವಾಸ, ಸಂಪರ್ಕದ ಮೂಲಕ ಹೊಳಪು ನೀಡುವ ಕಾರ್ಯವನ್ನು ಯುವವಾಹಿನಿ ಮಾಡುತ್ತಿದೆ ಎಂದು ರಾಜ್ಯಪ್ರಶಸ್ತಿ ಪುರಸ್ಕ್ರತ ಚಲನಚಿತ್ರ ನಟ,ನಿರ್ಮಾಪಕ ರಾಜಶೇಖರ ಕೋಟ್ಯಾನ್ ತಿಳಿಸಿದರು. ಅವರು ದಿನಾಂಕ 07.05.2017ನೇ ಆದಿತ್ಯವಾರ ಉಡುಪಿಯ ಉದ್ಯಾವರದಲ್ಲಿ ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ ಜರುಗಿದ ಯುವವಾಹಿನಿ ಅಂತರ್ ಘಟಕ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆ ಯುವಕ್ರೀಡಾ ಸಂಗಮ 2017 […]

Read More

ಯುವವಾಹಿನಿಯ ಯುವಕ್ರೀಡಾ ಸಂಗಮ -2017 ಉದ್ಘಾಟನೆ

  ಸಮಾಜದಲ್ಲಿ ಪರಸ್ಪರ ಪ್ರೀತಿ, ವಿಶ್ವಾಸ, ಶಾಂತಿ,ನೆಮ್ಮದಿಯನ್ನು ಬಲಪಡಿಸುವಲ್ಲಿ ಯುವಕರ ಪಾತ್ರ ಮಹತ್ತರವಾದುದು, ಈ ನಿಟ್ಟಿನಲ್ಲಿ ಯುವಕರನ್ನು ಕ್ರೀಡೆಯ ಮೂಲಕ ಸಂಘಟಿಸುವ ಯುವವಾಹಿನಿಯ ಕಾರ್ಯ ಶ್ಲಾಘನೀಯವಾದುದು ಎಂದು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಅದ್ಯಕ್ಷರಾದ ಶ್ರೀ ಅಶೋಕ್ ಎಂ.ಸುವರ್ಣ ತಿಳಿಸಿದರು. ಅವರು ದಿನಾಂಕ 07.05.2017ನೇ ಆದಿತ್ಯವಾರ ಉಡುಪಿಯ ಉದ್ಯಾವರದಲ್ಲಿ ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ ಜರುಗಿದ ಯುವವಾಹಿನಿ ಅಂತರ್ ಘಟಕ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆ […]

Read More

ಬೆಳ್ತಂಗಡಿ ಯುವವಾಹಿನಿಯಿಂದ ಯುವವಾಹಿನಿ ಟ್ರೋಫಿ ಕ್ರೀಡಾಕೂಟ ಸಂಪನ್ನ

ಸಂಘಟನೆಯ ಮೂಲಕ ಸಮಾಜವನ್ನು ಕಟ್ಟಿ ಯುವಕರನ್ನು ಒಗ್ಗೂಡಿಸುವ ಶ್ರೇಷ್ಠ ಕಾರ್ಯ ಯುವವಾಹಿನಿ ಮಾಡುತ್ತಿದೆ. ಕ್ರೀಡಾಕೂಟದ ಮೂಲಕ ಯುವ ಮನಸ್ಸುಗಳನ್ನು ಬೆಸೆದು ಸಮಾಜದಲ್ಲಿ ಸಾಮರಸ್ಯ ಮೂಡಿಸುವ ಕಾರ್ಯವನ್ನು ಯುವವಾಹಿನಿಯಂತಹ ಯುವಕರ ಸಂಘಟನೆ ಮಾಡುತ್ತಿರುವುದು ಶ್ಲಾಘನೀಯ ಎಂದು ಮೂಲ್ಕಿ ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷ ನಿವೃತ್ತ ಎಸ್ ಪಿ ಪೀತಾಂಬರ ಹೇರಾಜೆ ಹೇಳಿದರು. ಅವರು ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ದಿನಾಂಕ. 09.04.2017 ನೇ ಆದಿತ್ಯವಾರ ವೇಣೂರು ಸರಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಬಿಲ್ಲವ ಸಮಾಜ ಭಾಂದವರಿಗಾಗಿ ಜರುಗಿದ ಕ್ರಿಕೆಟ್ ಪಂದ್ಯ ಯುವವಾಹಿನಿ […]

Read More

ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಅಂತರ್ ಘಟಕ ಮಹಿಳಾ ಕ್ರೀಡಾಕೂಟ

ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ತಾ 5-3-2017 ನೇ ಆದಿತ್ಯವಾರ ಯುವವಾಹಿನಿ ಅಂತರ್ ಘಟಕ ಮಹಿಳಾ “ದೇಯಿ ಬೈದ್ಯೆದಿ ಕ್ರೀಡಾಕೂಟ” ಕುದ್ರೋಳಿ ಶ್ರೀ ನಾರಾಯಣಗುರು ಕಾಲೇಜು ಮೈದಾನದಲ್ಲಿ ನಡೆಯಿತು. ಕ್ರೀಡೆಯು ಮಾನವೀಯ ಸಂಬಂಧ ಬೆಸೆದು ಸಾಮರಸ್ಯ ಮೂಡಿಸುತ್ತದೆ. ಯುವವಾಹಿನಿ ಮಹಿಳಾ ಘಟಕವು ಕ್ರೀಡೆಗೆ ನೀಡುತ್ತಿರುವ ಪ್ರೋತ್ಸಾಹ ಶ್ಲಾಘನೀಯವಾದುದು ಎಂದು ಕುದ್ರೋಳಿ ಬಿಲ್ಲವ ಮಹಿಳಾ ಸಂಘದ ಅಧ್ಯಕ್ಷರಾದ ಶ್ರೀಮತಿ ಸುಮಲತಾ ಎನ್. ಸುವರ್ಣರವರು ಕ್ರೀಡಾಕೂಟ ಉದ್ಘಾಟಿಸಿ ತಿಳಿಸಿದರು. ಯುವವಾಹಿನಿ ಕೆಂದ್ರಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ, ಮಹಿಳಾ ಘಟಕದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!