Yuvavahini

ಕ್ರೀಡೆ

ಕೃಷಿ ಸಂಸ್ಕೃತಿಯಲ್ಲಿ ಯುವಸಮುದಾಯ ತೊಡಗಿಸಿಕೊಳ್ಳಬೇಕು:- ಸಚಿವ ಸುನೀಲ್ ಕುಮಾರ್ ಅಭಿಮತ

ಬೆಳ್ತಂಗಡಿ :- “ಕೆಸರುಗದ್ದೆ ಕ್ರೀಡಾಕೂಟ ಇಂದು ಜನಾಕರ್ಷಣೆ ಪಡೆಯುತ್ತಿದೆ. ಯಾವುದೇ ಒಂದು ಸಂಘಟನೆ ಬಲಪಡಿಸಲು ಈ ರೀತಿಯ ಕ್ರೀಡಾಕೂಟ ಅಗತ್ಯ. ಇಂತಹ ಹತ್ತು ಹಲವಾರು ಕಾರ್ಯಕ್ರಮಗಳ ಮೂಲಕ ಬಿಲ್ಲವ ಸಮುದಾಯವನ್ನು ಒಟ್ಟುಗೂಡಿಸುವ ಕಾರ್ಯ ಯುವವಾಹಿನಿ ಸಂಘಟನೆಯಿಂದಾಗಲಿ” ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು. ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ ವೇಣೂರು ಘಟಕದ ಆತಿಥ್ಯದಲ್ಲಿ ವೇಣೂರು ಮೂಡುಕೋಡಿ ಗ್ರಾಮದ ನೆಲ್ಲಿಗುಡ್ಡೆ ನೋನೊಟ್ಟು ಗದ್ದೆಯಲ್ಲಿ ಭಾನುವಾರ ನಡೆದ ”ಕೆಸರ್ ಡೊಂಜಿ ದಿನ”ಕೆಸರುಗದ್ದೆ ಕ್ರೀಡಾಕೂಟದ […]

Read More

ಕೆಸರ್‌ಡೊಂಜಿ ದಿನ :- ಯುವವಾಹಿನಿ ಮಾಣಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ವೇಣೂರು :- ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ ವೇಣೂರು ಘಟಕದ ಆತಿಥ್ಯದಲ್ಲಿ “ಕೆಸರ್ ಡೊಂಜಿ ದಿನ”ಕೆಸರುಗದ್ದೆ ಕ್ರೀಡಾಕೂಟದ ಸಮಗ್ರ ಪ್ರಶಸ್ತಿಯನ್ನು ಯುವವಾಹಿನಿ ಮಾಣಿ ಘಟಕವು ತನ್ನ ಮುಡಿಗೇರಿಸಿಕೊಂಡಿದೆ. ದಿನಾಂಕ 09 ಅಕ್ಟೋಬರ್ 2022ರಂದು ಜರಗಿದ ಕೆಸರ್ ಡೊಂಜಿ ಕ್ರೀಡಾಕೂಟದಲ್ಲಿ ಭಾಗವಹಿಸಿ ಅತೀ ಹೆಚ್ಚು ವಿಭಾಗದಲ್ಲಿ ಸ್ಪರ್ಧಿಸಿ ತೀವ್ರ ಪೈಪೋಟಿ ನೀಡಿ ಹೆಚ್ಚು ಬಹುಮಾನ ಪಡೆಯುವಲ್ಲಿ ಯಶಸ್ವಿಯಾಯಿತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಶ್ರೀ ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ ಪ್ರಶಸ್ತಿ ವಿತರಿಸಿದರು. ಈ ಸಂದರ್ಭದಲ್ಲಿಕಾರ್ಯಕ್ರಮದಲ್ಲಿ […]

Read More

ಕೃಷಿಯೇ ಬದುಕಿನ ಜೀವನಾಡಿ, ಕೃಷಿಯನ್ನು ಬೆಳೆಸಿ ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ :- ಉಮನಾಥ್ ಕೋಟ್ಯಾನ್

ವೇಣೂರು :- ಹಿರಿಯರ ಕಾಲದಿಂದಲೂ ಕೃಷಿಯೇ ನಮ್ಮ ಜೀವನಾಡಿ, ಕೃಷಿಯನ್ನು ಬೆಳೆಸಿ ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸು ಜವಾಬ್ದಾರಿ ನಮ್ಮ ಮೇಲಿದೆ. ಕೃಷಿಯನ್ನು ಅವಲಂಬಿಸಿ ಬದುಕಿದ ನಮ್ಮ ಹಿರಿಯರ ಜೀವನವೇ ಅದರ್ಶ ಎಂದು ಮುಲ್ಕಿ-ಮೂಡಬಿದಿರೆ ಕ್ಷೇತ್ರದ ಶಾಸಕರಾದ ಉಮನಾಥ್ ಕೋಟ್ಯಾನ್ ತಿಳಿಸಿದರು. ಅವರು ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ ವೇಣೂರು ಘಟಕದ ಆತಿಥ್ಯದಲ್ಲಿ “ಕೆಸರ್ ಡೊಂಜಿ ದಿನ”ಕೆಸರುಗದ್ದೆ ಕ್ರೀಡಾಕೂಟದ ಕಾರ್ಯಕ್ರಮದಲ್ಲಿ ಆತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಸಂಘಟನೆಗಳು ಸಮುದಾಯದ ಶಕ್ತಿಯಾಗಬೇಕು :- ಪದ್ಮರಾಜ್ ಆರ್ ಬ್ರಹ್ಮಶ್ರೀ ನಾರಾಯಣ […]

Read More

ಬಿರುವೆರ್ನ ಕೆಸರ್ದ ಕಲ

ಕಡಬ :- ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಕಡಬ ಘಟಕ ಇದರ ಆತಿಥ್ಯದಲ್ಲಿ ಕಡಬ ತಾಲೂಕು ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಂಘ ಹಾಗೂ ಕೋಟಿ-ಚೆನ್ನಯ್ಯ ಮಿತ್ರವೃಂದ ಆಲಂಕಾರು ಇದರ ಸಹಕಾರದೊಂದಿಗೆ ದಿನಾಂಕ‌ 28 ಆಗಸ್ಟ್ 2022ನೇ ಆದಿತ್ಯವಾರ ಆಲಂಕಾರಿನ ಮಾಯಿಲ್ಗ ಶ್ರೀ ರಕ್ತೇಶ್ವರಿ ದೈವಸ್ಥಾನದ ಬಳಿ “ಬಿರುವೆರ್ನ ಕೆಸರ್ದ ಕಲ” ಕೆಸರು ಗದ್ದೆ ಕ್ರೀಡಾ ಕೂಟ ನಡೆಯಿತು. ಕಾರ್ಯಕ್ರಮವನ್ನು ತಾಯಿ ರಕ್ತೇಶ್ವರಿ ಯ ದೈವಸ್ಥಾನದಲ್ಲಿ ಪ್ರಾರ್ಥನೆಯನ್ನು ಸಲ್ಲಿಸಿ , ಕ್ರೀಡಾ ಜ್ಯೋತಿಯನ್ನು ಬೆಳಗಿಸಿ […]

Read More

ಕ್ರೀಡೆ ನಮ್ಮ ನಡುವಿನ ಸಂಬಂಧಗಳನ್ನು ಗಟ್ಟಿಗೊಳಿಸುವ ಮೂಲಕ ಸಂಘಟನೆಯನ್ನು ಬಲಗೊಳಿಸುತ್ತವೆ : ಉದಯ್ ಅಮೀನ್ ಮಟ್ಟು

” ಕ್ರೀಡೆ ನಮ್ಮ ನಡುವಿನ ಸಂಬಂಧಗಳನ್ನು ಗಟ್ಟಿಗೊಳಿಸುವ ಮೂಲಕ ಸಂಘಟನೆಯನ್ನು ಬಲಗೊಳಿಸುತ್ತವೆ. ಒಂದು ತಂಡವಾಗಿ ಕ್ರೀಡಾಸ್ಫೂರ್ತಿಯಿಂದ ಪಾಲ್ಗೊಳ್ಳುವ ಸದಸ್ಯರ ನಡುವೆ ಪರಸ್ಪರ ಅರಿತುಕೊಳ್ಳುವ ಪ್ರಕ್ರಿಯೆ ನಡೆಯುತ್ತದೆ. ಯುವವಾಹಿನಿ (ರಿ.) ಮಾಣಿ ಘಟಕವು ಈ ಪಂದ್ಯಾಟದ ಮೂಲಕ ವಿದ್ಯಾನಿಧಿ ಹಾಗೂ ಸ್ಪಂದನ ಯೋಜನೆಗಳನ್ನು ಸತತವಾಗಿ ಬಲವರ್ಧನೆಗೊಳಿಸುತ್ತಿರುವುದು ಶ್ಲಾಘನೀಯ ” ಎಂದು ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ್ ಅಮೀನ್ ಮಟ್ಟು ರವರು ನುಡಿದರು. ಅವರು ದಿನಾಂಕ 20-03-2022 ರ ಆದಿತ್ಯವಾರದಂದು ಅನಂತಾಡಿ ಗ್ರಾಮದ ಬಂಟ್ರಿಂಜ ಕ್ರೀಡಾಂಗಣದಲ್ಲಿ ವಿಧ್ಯಾನಿಧಿ ಮತ್ತು […]

Read More

ವಾರ್ಷಿಕ ಕ್ರೀಡಾಕೂಟ – 2019

ಯುವವಾಹಿನಿ (ರಿ) ಮಂಗಳೂರು ಘಟಕದ ವಾರ್ಷಿಕ ಕ್ರೀಡಾಕೂಟ – 2019 ದಿನಾಂಕ 17.11.2019ರ ಭಾನುವಾರದಂದು ಪ್ರಪ್ರಥಮ ಬಾರಿಗೆ ಯುವವಾಹಿನಿ (ರಿ) ಮಂಗಳೂರು ಘಟಕದ ವಾರ್ಷಿಕ ಕ್ರೀಡಾಕೂಟ – 2019 ನಗರದ ಹೊರವಲಯದಲ್ಲಿರುವ ಪದವು ಮೈದಾನ ದಲ್ಲಿ ನಡೆಯಿತು. ಕ್ರೀಡಾಕೂಟವು ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಯುವ ಉದ್ಯಮಿ, ಗೆಜ್ಜೆಗಿರಿ ನಂದನ ಬಿತ್ತಿಲ್ ನ ಪ್ರದಾನ ಕೋಶಾಧಿಕಾರಿಯವರಾದ ಶ್ರೀಯುತ ದೀಪಕ್ ಕೋಟ್ಯಾನ್ ರವರು ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸಿ, ವಾಲಿಬಾಲ್ ಮತ್ತು ಕ್ರೀಕೆಟ್ ಆಡುವ ಮೂಲಕ ಕ್ರೀಡಾ […]

Read More

ಕೆಸರ್ಡ್ ಒಂಜಿ ದಿನ ಕ್ರೀಡಾಕೂಟ

    ಮಾಣಿ ಘಟಕದ “ಕೆಸರ್ಡ್ ಒಂಜಿ ದಿನ” ಕ್ರೀಡಾಕೂಟ ಯಶಸ್ವಿಯಾಗಿ ಸಂಪನ್ನ ಮಣ್ಣು ಅಂದರೆ ಅದಕ್ಕೆ ಅದರದೇ ಆದ ಗುಣವಿದೆ. ರೋಗರುಜಿನ ಗುಣ ಮಾಡುವ ಶಕ್ತಿ ಇದೆ. ಅದರಲ್ಲೂ ಕೆಸರುಗದ್ದೆಯ ಮಣ್ಣು ಅಂದರೆ ಇನ್ನೂ ಶ್ರೇಷ್ಠವಾದದ್ದು ಅಂಥ ನಮ್ಮ ಹಿರಿಯರ ಮಾತು. ಇದರ ಜೊತೆಗೆ ನಮ್ಮ ಗ್ರಾಮೀಣ ಕ್ರೀಡೆಯನ್ನು ನೆನಪಿಸುವ ದೃಷ್ಠಿಯಿಂದ ಇಂದು ಘಟಕದ ಸದಸ್ಯರಿಗೆ ಕುಟುಂಬ ಸಮ್ಮಿಲನ ರೀತಿಯಲ್ಲಿ ಸುತ್ತಲಿನ ಹತ್ತು ಗ್ರಾಮದ ಬಿಲ್ಲವ ಬಾಂಧವರ ಜೊತೆಗೂಡಿ ಯುವವಾಹಿನಿ ಮಾಣಿ ಘಟಕದ ಆತಿಥ್ಯದಲ್ಲಿ ಅನಂತಾಡಿಯ […]

Read More

ಹಳ್ಳಿಡೊಂಜಿ ದಿನ

ಯುವವಾಹಿನಿ ಕೂಳೂರು ಘಟಕದ ವತಿಯಿಂದ ದಿನಾಂಕ 08.09.19 ರಂದು ಹಳ್ಳಿಡೊಂಜಿ ದಿನ ಕಾರ್ಯಕ್ರಮವು ಘಟಕದ ಸದಸ್ಯರಾದ *ಪ್ರಸಾದ್ ಈದು ಬಟ್ಟೇಣಿ ಇವರ ಊರು ಈದು ಬಟ್ಟೇಣಿ, ಕಾರ್ಕಳ* ಇಲ್ಲಿ ನಡೆಯಿತು. ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಘಟಕದ 50 ಸದಸ್ಯರು ಕೂಳೂರಿನಿಂದ ಹೊರಟು 10.30 ಕ್ಕೆ ಶಿರ್ತಾಡಿ ತಲುಪಿ ಘಟಕದ ಸದಸ್ಯರಾದ *ಜಯ ಬಂಗೇರ* ಅವರ ಮನೆಯಲ್ಲಿ ಉಪಹಾರ ಮುಗಿಸಿ ನಂತರ ಅಲ್ಲಿಂದ ಹೊಸ್ಮಾರು ಆಶ್ರಮಕ್ಕೆ ಭೇಟಿ ನೀಡಿ, *ಶ್ರೀ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿಯವರ ದರ್ಶನ […]

Read More

ಗುರು ಜಯಂತಿಯ ಅಂಗವಾಗಿ ಕ್ರೀಡಾಕೂಟ

ಯುವವಾಹಿನಿ (ರಿ) ಹೆಜಮಾಡಿ ಘಟಕ . ಬ್ರಹ್ಮ್ಮಶ್ರೀ ನಾರಾಯಣ ಗುರುವರ್ಯರ 165 ನೇ ಗುರು ಜಯಂತಿಯ ಅಂಗವಾಗಿ ಹೆಜಮಾಡಿ ಬಿಲ್ಲವರ ಹತ್ತು ಸಮಸ್ತರಿಗೆ ವಿವಿಧ ಕ್ರೀಡಾಕೂಟಗಳು ದಿನಾಂಕ 25/08/2019 ರಂದು ಹೆಜಮಾಡಿ ಬಿಲ್ಲವ ಸಂಘದ ವಠಾರದಲ್ಲಿ ಜರಗಿತು . ಈ ಪಂದ್ಯಾಟದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ) ಹೆಜಮಾಡಿ ಘಟಕದ ಅಧ್ಯಕ್ಷರಾದ ಶ್ರೀಮತಿ ಚಂದ್ರಾವತಿ ಹರೀಶ್ ವಹಿಸಿದ್ದರು . ಅಧ್ಯಕ್ಷರಾದ ಶ್ರೀಮತಿ ಚಂದ್ರಾವತಿ ಹರೀಶ್ ಸರ್ವರನ್ನು ಸ್ವಾಗತಿಸಿದರು . ಹೆಜಮಾಡಿ ಬಿಲ್ಲವರ ಸಂಘ ದ ಉಪಾಧ್ಯಕ್ಷರು, ಹೆಜಮಾಡಿ ಮಹಾಲಿಂಗೇಶ್ವರ […]

Read More

ಗ್ರಾಮೀಣ ಕ್ರೀಡಾಕೂಟ ಗೊಬ್ಬುದ ಬಿರ್ದೊಲಿ

ಉಡುಪಿ : ಯುವವಾಹಿನಿ ಉಡುಪಿ ಘಟಕದಲ್ಲಿ ದಿನಾಂಕ 21/04/2019 ರಂದು ಗ್ರಾಮೀಣ ಕ್ರೀಡಾಕೂಟ ಗೊಬ್ಬುದ ಬಿರ್ದೊಲಿ. ಕಾರ್ಯಕ್ರಮ ನಡೆಯಿತು. ಕೇಂದ್ರಸಮಿತಿಯ ಮಾಜಿ ಅಧ್ಯಕ್ಷ ರಾದ ರವಿರಾಜ್ ರವರು ಬಿರು ಚಲಾಯಿಸಿ ಕಾರ್ಯಕ್ರಮ ವನ್ನು ವಿಶಿಷ್ಟ ರೀತಿಯಲ್ಲಿ ಉದ್ಘಾಟಿಸಿದರು . ಕಾರ್ಯಕ್ರಮವು MCF ಮಂಗಳೂರು ನೊಡನೆ ಸಹಭಾಗಿತ್ವದಲ್ಲಿ ಉಡುಪಿಯ ಕ್ರಿಶ್ಚಿಯನ್ ಹೈಸ್ಕೂಲಿನಲ್ಲಿ ನಡೆಯಿತು. ಸುಮಾರು 90 ಸದಸ್ಯರು ಭಾಗವಹಿಸಿದ್ದರು. ಹಿರಿಯರು ಕಿರಿಯರೆನ್ನದೆ. ಗಂಡು ಹೆಣ್ಣೆಂಬ ಭೇದವಿಲ್ಲದೆ, ಏಕಮನಸ್ಕರಾಗಿ ಕುಣಿದು ಕುಪ್ಪಳಿಸಿ ಎಲ್ಲರೂ ವಿಜ್ರಂಭಿಸಿದರು. ಲಗೋರಿ, ಪಿಲಿಚಂಡಿ, ಸೊಪ್ಪಿನ ಆಟ, […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!