16-07-2026, 6:00 PM
ಕುಪ್ಪೆಪದವು, ಜುಲೈ 16: ಯುವವಾಹಿನಿ (ರಿ.) ಕುಪ್ಪೆಪದವು–ಎಡಪದವು ಘಟಕದ ಸಕ್ರಿಯ ಸದಸ್ಯೆ ಹರೀನಾಕ್ಷಿ ಅವರು ಆಕಸ್ಮಿಕವಾಗಿ ಬಿದ್ದು ಕಾಲಿನ ಮೂಳೆ ಮುರಿತಕ್ಕೊಳಗಾದ ಹಿನ್ನೆಲೆಯಲ್ಲಿ, ಘಟಕದ ವತಿಯಿಂದ ಆರೋಗ್ಯ ನಿಧಿಯಡಿ ಧನಸಹಾಯವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಘಟಕದ ಪದಾಧಿಕಾರಿಗಳು, ಸದಸ್ಯರ ಸಂಕಷ್ಟದ ಸಂದರ್ಭದಲ್ಲಿ ಯುವವಾಹಿನಿ ಸದಾ ಅವರೊಂದಿಗೆ ನಿಲ್ಲುವ ಬದ್ಧತೆಯನ್ನು ಹೊಂದಿದ್ದು, ಆರೋಗ್ಯ ನಿಧಿಯಂತಹ ಯೋಜನೆಗಳು ಸದಸ್ಯರಿಗೆ ನೆರವಾಗುವ ಮಹತ್ವದ ಉಪಕ್ರಮಗಳಾಗಿವೆ ಎಂದು ತಿಳಿಸಿದರು. ಹರೀನಾಕ್ಷಿ ಅವರು ಶೀಘ್ರವಾಗಿ ಸಂಪೂರ್ಣ ಗುಣಮುಖರಾಗಲಿ ಎಂದು ಹಾರೈಸಿದರು. ಧನಸಹಾಯ ವಿತರಣೆಯ […]
Read More
16-07-2026, 1:00 PM
ಉಪ್ಪಿನಂಗಡಿ, ಜುಲೈ 16: ವಿಶ್ವ ವೈದ್ಯರ ದಿನಾಚರಣೆ-2026ರ ಅಂಗವಾಗಿ ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ವತಿಯಿಂದ ಉಪ್ಪಿನಂಗಡಿಯ ವಿವಿಧ ಆಸ್ಪತ್ರೆಗಳು ಹಾಗೂ ಕ್ಲಿನಿಕ್ಗಳಿಗೆ ಭೇಟಿ ನೀಡಿ ಸಮಾಜದ ಆರೋಗ್ಯ ರಕ್ಷಣೆಯಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಡಾ. ರಾಜಾರಾಮ್ ಕೆ.ಬಿ., ಡಾ. ರಮ್ಯಾ ರಾಜಾರಾಮ್, ಡಾ. ಎಂ.ಆರ್. ಶೆಣೈ, ಡಾ. ಕೆ.ಜಿ. ಭಟ್, ಡಾ. ಎಂ.ಎನ್. ಭಟ್, ಡಾ. ರಘು, ಡಾ. ಸದಾನಂದ ಕುಂದರ್, ಡಾ. ಆಶಿತ್ ಎಂ.ವಿ., ಡಾ. ಶ್ವೇತಾ ಆಶಿತ್, […]
Read More
15-07-2026, 6:00 PM
ಮಾಣಿ, ಜುಲೈ 15: ಇತ್ತೀಚೆಗೆ ಸಂಭವಿಸಿದ ವಾಹನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವವಾಹಿನಿ (ರಿ.) ಮಾಣಿ ಘಟಕದ 2026–27ನೇ ಸಾಲಿನ ಪ್ರಚಾರ ನಿರ್ದೇಶಕರಾದ ಚರಣ್ ಜೆ. ಅನಂತಾಡಿ ಅವರಿಗೆ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ₹75,000 ಧನಸಹಾಯ ಹಸ್ತಾಂತರಿಸಲಾಯಿತು. ಘಟಕದ ಸದಸ್ಯರ ಸ್ವಯಂಪ್ರೇರಿತ ಸಹಕಾರದಿಂದ ಈ ಧನಸಹಾಯವನ್ನು ಸಂಗ್ರಹಿಸಿ, ಅವರ ಚಿಕಿತ್ಸೆಗೆ ನೆರವಾಗುವ ಉದ್ದೇಶದಿಂದ ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಘಟಕದ ಅಧ್ಯಕ್ಷರಾದ ಗಣೇಶ್ ಸಾಯಿ, ಸಂಕಷ್ಟದ […]
Read More
15-07-2026, 6:00 PM
ಅಜೆಕಾರು, ಜು. 15: ಯುವವಾಹಿನಿ (ರಿ.) ಕಾರ್ಕಳ ಘಟಕವು ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಅಜೆಕಾರು ಶ್ರೀರಾಮ ಮಂದಿರದ ಸಭಾಭವನದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಪೊರೆ (ಕಣ್ಣಿನ ಮುತ್ತು) ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿತು. ಶಿಬಿರದಲ್ಲಿ ಉಡುಪಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ವೈದ್ಯಾಧಿಕಾರಿಗಳ ತಂಡ ಸಾರ್ವಜನಿಕರಿಗೆ ಸಮಗ್ರ ನೇತ್ರ ತಪಾಸಣೆ ನಡೆಸಿ, ಅಗತ್ಯ ಸಲಹೆ ಹಾಗೂ ಚಿಕಿತ್ಸಾ ಮಾರ್ಗದರ್ಶನ ನೀಡಿತು. ಕಣ್ಣಿನ ಆರೋಗ್ಯದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಲಾದ ಈ […]
Read More
12-07-2026, 1:00 PM
ಉಪ್ಪಿನಂಗಡಿ, ಜು. 12: ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಉಪ್ಪಿನಂಗಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಭವನದಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿತು. ಶಿಬಿರವನ್ನು ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಮಾಜದ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಇಂತಹ ಉಚಿತ ಆರೋಗ್ಯ ಶಿಬಿರಗಳು ಅತ್ಯಂತ ಉಪಯುಕ್ತವಾಗಿದ್ದು, […]
Read More
08-07-2026, 1:00 PM
ಮಾಣಿ, ಜುಲೈ 8: ಸಮಾಜಮುಖಿ ಸೇವಾ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವ ಯುವವಾಹಿನಿ (ರಿ.) ಮಾಣಿ ಘಟಕವು ತನ್ನ ‘ಯುವ ಆರೋಗ್ಯ ಸ್ಪರ್ಶ’ ಯೋಜನೆಯಡಿ ಘಟಕದ ಸಕ್ರಿಯ ಸದಸ್ಯ ಯಶೋಧರ ಕೊಡಾಜೆ (ಮಾಣಿ ಗ್ರಾಮದ ದೈವಪಾತ್ರಿ) ಅವರ ಚಿಕಿತ್ಸೆಗೆ ₹50,000 ಧನಸಹಾಯವನ್ನು ವಿತರಿಸಿತು. ಯಶೋಧರ ಕೊಡಾಜೆ ಅವರು ಎಲುಬುಗಳಿಗೆ ಸಂಬಂಧಿಸಿದ ಅಪರೂಪದ ಆಲ್ಕಾಪ್ಟೋನೂರಿಯಾ (Alkaptonuria) ಕಾಯಿಲೆಯಿಂದ ಬಳಲುತ್ತಿದ್ದು, ಕಳೆದ ಹಲವು ವರ್ಷಗಳಿಂದ ನಿರಂತರ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆಗೆ ಹೆಚ್ಚಿನ ವೆಚ್ಚವಾಗುತ್ತಿರುವ ಹಿನ್ನೆಲೆಯಲ್ಲಿ ಅವರ ಆರೋಗ್ಯ ಚಿಕಿತ್ಸೆಗೆ ನೆರವಾಗುವ ಉದ್ದೇಶದಿಂದ […]
Read More
14-06-2026, 1:00 PM
ಕಟಪಾಡಿ, ಜೂನ್ 14: ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಯುವವಾಹಿನಿ (ರಿ.) ಕಟಪಾಡಿ ಘಟಕದ ವತಿಯಿಂದ ಜೇಸೀ ಭವನ, ಕಟಪಾಡಿಯಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು. ಮಾನವೀಯ ಸೇವೆಯ ಉದ್ದೇಶದಿಂದ ನಡೆದ ಈ ಶಿಬಿರದಲ್ಲಿ ಘಟಕದ ಅಧ್ಯಕ್ಷ ಸುಶಾಂತ್ ಪೂಜಾರಿ, ಉಪಾಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿ ರಕ್ತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಿದರು. ಸಮಾಜದಲ್ಲಿ ಅಗತ್ಯವಿರುವ ರೋಗಿಗಳ ಜೀವ ಉಳಿಸಲು ರಕ್ತದಾನವು ಶ್ರೇಷ್ಠ ಸೇವೆಯಾಗಿದ್ದು, ಆರೋಗ್ಯವಂತರು ಸ್ವಯಂಪ್ರೇರಿತರಾಗಿ ನಿಯಮಿತವಾಗಿ ರಕ್ತದಾನ ಮಾಡಬೇಕು ಎಂದು ಈ ಸಂದರ್ಭದಲ್ಲಿ ಅಭಿಪ್ರಾಯ […]
Read More
31-05-2026, 1:00 PM
ಶಿರ್ತಾಡಿ : “ಹೋಮಿಯೋಪತಿ ಚಿಕಿತ್ಸೆಯು ಅಡ್ಡಪರಿಣಾಮಗಳಿಲ್ಲದ ಪರಿಣಾಮಕಾರಿ ಚಿಕಿತ್ಸಾ ಪದ್ಧತಿಯಾಗಿದೆ. ಕಳೆದ 13 ವರ್ಷಗಳಿಂದ ಆರೋಗ್ಯ ಸಮಸ್ಯೆಗಳು ಎದುರಾದಾಗ ನಾನು ಹೋಮಿಯೋಪತಿ ಚಿಕಿತ್ಸೆಯನ್ನೇ ಅನುಸರಿಸುತ್ತಿದ್ದು ಉತ್ತಮ ಫಲಿತಾಂಶ ಕಂಡಿದ್ದೇನೆ. ಸಾರ್ವಜನಿಕರು ಇಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು” ಎಂದು ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ಅಧ್ಯಕ್ಷರಾದ ಗಿರೀಶ್ ಕೋಟ್ಯಾನ್ ತಿಳಿಸಿದರು ಅವರು ದಿನಾಂಕ 31-05-2026ರಂದು ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ (ರಿ.) ಶಿರ್ತಾಡಿ ಹಾಗೂ ಆಳ್ವಾಸ್ […]
Read More
28-05-2026, 9:00 PM
ಮಂಗಳೂರು, ಮೇ 28: ಯುವವಾಹಿನಿ (ರಿ.) ಕಂಕನಾಡಿ ಘಟಕವು ತನ್ನ ಸಮಾಜಮುಖಿ ಕಾರ್ಯಚಟುವಟಿಕೆಗಳ ಅಂಗವಾಗಿ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಮಂಗಳೂರಿನ ಉಜ್ಜೋಡಿ ನಿವಾಸಿ ರಾಜೇಶ್ ಅವರಿಗೆ ಆರ್ಥಿಕ ನೆರವು ನೀಡಿದೆ. ರಾಜೇಶ್ ಅವರ ವೈದ್ಯಕೀಯ ಚಿಕಿತ್ಸೆಗೆ ಸಹಕಾರಿಯಾಗುವ ಉದ್ದೇಶದಿಂದ ಘಟಕದ ಸದಸ್ಯರು ಮತ್ತು ಹಿತೈಷಿಗಳ ಸಹಯೋಗದೊಂದಿಗೆ ಸಂಗ್ರಹಿಸಲಾದ Rs. 30,000/- ಮೊತ್ತದ ಧನಸಹಾಯವನ್ನು 28-05-2026 ರಂದು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದು, ರಾಜೇಶ್ ಅವರು ಶೀಘ್ರವಾಗಿ ಸಂಪೂರ್ಣ ಆರೋಗ್ಯವನ್ನು […]
Read More
27-05-2026, 8:00 PM
ಕೂಳೂರು : ಸಮಾಜಮುಖಿ ಮತ್ತು ಜನಪರ ಕಾರ್ಯಕ್ರಮಗಳ ಮೂಲಕ ಸದಾ ಮುಂಚೂಣಿಯಲ್ಲಿರುವ ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಮತ್ತೊಂದು ಶ್ಲಾಘನೀಯ ಸೇವಾ ಕಾರ್ಯ ನಡೆದಿದೆ. ಘಟಕದ 26ನೇ ಸೇವಾನಿಧಿ ಯೋಜನೆಯಾದ ಸಹಾಯಹಸ್ತ ಕಾರ್ಯಕ್ರಮದಡಿ, ಇತ್ತೀಚೆಗೆ ಸಂಭವಿಸಿದ ಭೀಕರ ವಾಹನ ಅಪಘಾತದಿಂದ ತೀವ್ರ ತೊಂದರೆಗೆ ಒಳಗಾಗಿದ್ದ ಕಾರ್ಕಳದ ಈದು ನಿವಾಸಿ ದಯಾನಂದ ಪೂಜಾರಿ (26) ಅವರ ಕುಟುಂಬಕ್ಕೆ ತುರ್ತು ಚಿಕಿತ್ಸಾ ವೆಚ್ಚಕ್ಕಾಗಿ ರೂ.16,000/-ಧನಸಹಾಯವನ್ನು ನೀಡಲಾಯಿತು.ದಿನಾಂಕ 27-05-2026ರಂದು ನಡೆದ ಘಟಕದ ಸಾಪ್ತಾಹಿಕ ಸಭೆಯಲ್ಲಿ, ಘಟಕದ ಅಧ್ಯಕ್ಷೆ ಗೀತಾ ವಸಂತ್ […]
Read More