
12-07-2026, 1:00 PM
ಉಪ್ಪಿನಂಗಡಿ, ಜು. 12: ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಉಪ್ಪಿನಂಗಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಭವನದಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿತು. ಶಿಬಿರವನ್ನು ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಮಾಜದ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಇಂತಹ ಉಚಿತ ಆರೋಗ್ಯ ಶಿಬಿರಗಳು ಅತ್ಯಂತ ಉಪಯುಕ್ತವಾಗಿದ್ದು, […]
Read More

08-07-2026, 1:00 PM
ಮಾಣಿ, ಜುಲೈ 8: ಸಮಾಜಮುಖಿ ಸೇವಾ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವ ಯುವವಾಹಿನಿ (ರಿ.) ಮಾಣಿ ಘಟಕವು ತನ್ನ ‘ಯುವ ಆರೋಗ್ಯ ಸ್ಪರ್ಶ’ ಯೋಜನೆಯಡಿ ಘಟಕದ ಸಕ್ರಿಯ ಸದಸ್ಯ ಯಶೋಧರ ಕೊಡಾಜೆ (ಮಾಣಿ ಗ್ರಾಮದ ದೈವಪಾತ್ರಿ) ಅವರ ಚಿಕಿತ್ಸೆಗೆ ₹50,000 ಧನಸಹಾಯವನ್ನು ವಿತರಿಸಿತು. ಯಶೋಧರ ಕೊಡಾಜೆ ಅವರು ಎಲುಬುಗಳಿಗೆ ಸಂಬಂಧಿಸಿದ ಅಪರೂಪದ ಆಲ್ಕಾಪ್ಟೋನೂರಿಯಾ (Alkaptonuria) ಕಾಯಿಲೆಯಿಂದ ಬಳಲುತ್ತಿದ್ದು, ಕಳೆದ ಹಲವು ವರ್ಷಗಳಿಂದ ನಿರಂತರ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆಗೆ ಹೆಚ್ಚಿನ ವೆಚ್ಚವಾಗುತ್ತಿರುವ ಹಿನ್ನೆಲೆಯಲ್ಲಿ ಅವರ ಆರೋಗ್ಯ ಚಿಕಿತ್ಸೆಗೆ ನೆರವಾಗುವ ಉದ್ದೇಶದಿಂದ […]
Read More

14-06-2026, 1:00 PM
ಕಟಪಾಡಿ, ಜೂನ್ 14: ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಯುವವಾಹಿನಿ (ರಿ.) ಕಟಪಾಡಿ ಘಟಕದ ವತಿಯಿಂದ ಜೇಸೀ ಭವನ, ಕಟಪಾಡಿಯಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು. ಮಾನವೀಯ ಸೇವೆಯ ಉದ್ದೇಶದಿಂದ ನಡೆದ ಈ ಶಿಬಿರದಲ್ಲಿ ಘಟಕದ ಅಧ್ಯಕ್ಷ ಸುಶಾಂತ್ ಪೂಜಾರಿ, ಉಪಾಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿ ರಕ್ತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಿದರು. ಸಮಾಜದಲ್ಲಿ ಅಗತ್ಯವಿರುವ ರೋಗಿಗಳ ಜೀವ ಉಳಿಸಲು ರಕ್ತದಾನವು ಶ್ರೇಷ್ಠ ಸೇವೆಯಾಗಿದ್ದು, ಆರೋಗ್ಯವಂತರು ಸ್ವಯಂಪ್ರೇರಿತರಾಗಿ ನಿಯಮಿತವಾಗಿ ರಕ್ತದಾನ ಮಾಡಬೇಕು ಎಂದು ಈ ಸಂದರ್ಭದಲ್ಲಿ ಅಭಿಪ್ರಾಯ […]
Read More

31-05-2026, 1:00 PM
ಶಿರ್ತಾಡಿ : “ಹೋಮಿಯೋಪತಿ ಚಿಕಿತ್ಸೆಯು ಅಡ್ಡಪರಿಣಾಮಗಳಿಲ್ಲದ ಪರಿಣಾಮಕಾರಿ ಚಿಕಿತ್ಸಾ ಪದ್ಧತಿಯಾಗಿದೆ. ಕಳೆದ 13 ವರ್ಷಗಳಿಂದ ಆರೋಗ್ಯ ಸಮಸ್ಯೆಗಳು ಎದುರಾದಾಗ ನಾನು ಹೋಮಿಯೋಪತಿ ಚಿಕಿತ್ಸೆಯನ್ನೇ ಅನುಸರಿಸುತ್ತಿದ್ದು ಉತ್ತಮ ಫಲಿತಾಂಶ ಕಂಡಿದ್ದೇನೆ. ಸಾರ್ವಜನಿಕರು ಇಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು” ಎಂದು ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ಅಧ್ಯಕ್ಷರಾದ ಗಿರೀಶ್ ಕೋಟ್ಯಾನ್ ತಿಳಿಸಿದರು ಅವರು ದಿನಾಂಕ 31-05-2026ರಂದು ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ (ರಿ.) ಶಿರ್ತಾಡಿ ಹಾಗೂ ಆಳ್ವಾಸ್ […]
Read More

28-05-2026, 9:00 PM
ಮಂಗಳೂರು, ಮೇ 28: ಯುವವಾಹಿನಿ (ರಿ.) ಕಂಕನಾಡಿ ಘಟಕವು ತನ್ನ ಸಮಾಜಮುಖಿ ಕಾರ್ಯಚಟುವಟಿಕೆಗಳ ಅಂಗವಾಗಿ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಮಂಗಳೂರಿನ ಉಜ್ಜೋಡಿ ನಿವಾಸಿ ರಾಜೇಶ್ ಅವರಿಗೆ ಆರ್ಥಿಕ ನೆರವು ನೀಡಿದೆ. ರಾಜೇಶ್ ಅವರ ವೈದ್ಯಕೀಯ ಚಿಕಿತ್ಸೆಗೆ ಸಹಕಾರಿಯಾಗುವ ಉದ್ದೇಶದಿಂದ ಘಟಕದ ಸದಸ್ಯರು ಮತ್ತು ಹಿತೈಷಿಗಳ ಸಹಯೋಗದೊಂದಿಗೆ ಸಂಗ್ರಹಿಸಲಾದ Rs. 30,000/- ಮೊತ್ತದ ಧನಸಹಾಯವನ್ನು 28-05-2026 ರಂದು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದು, ರಾಜೇಶ್ ಅವರು ಶೀಘ್ರವಾಗಿ ಸಂಪೂರ್ಣ ಆರೋಗ್ಯವನ್ನು […]
Read More

27-05-2026, 8:00 PM
ಕೂಳೂರು : ಸಮಾಜಮುಖಿ ಮತ್ತು ಜನಪರ ಕಾರ್ಯಕ್ರಮಗಳ ಮೂಲಕ ಸದಾ ಮುಂಚೂಣಿಯಲ್ಲಿರುವ ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಮತ್ತೊಂದು ಶ್ಲಾಘನೀಯ ಸೇವಾ ಕಾರ್ಯ ನಡೆದಿದೆ. ಘಟಕದ 26ನೇ ಸೇವಾನಿಧಿ ಯೋಜನೆಯಾದ ಸಹಾಯಹಸ್ತ ಕಾರ್ಯಕ್ರಮದಡಿ, ಇತ್ತೀಚೆಗೆ ಸಂಭವಿಸಿದ ಭೀಕರ ವಾಹನ ಅಪಘಾತದಿಂದ ತೀವ್ರ ತೊಂದರೆಗೆ ಒಳಗಾಗಿದ್ದ ಕಾರ್ಕಳದ ಈದು ನಿವಾಸಿ ದಯಾನಂದ ಪೂಜಾರಿ (26) ಅವರ ಕುಟುಂಬಕ್ಕೆ ತುರ್ತು ಚಿಕಿತ್ಸಾ ವೆಚ್ಚಕ್ಕಾಗಿ ರೂ.16,000/-ಧನಸಹಾಯವನ್ನು ನೀಡಲಾಯಿತು.ದಿನಾಂಕ 27-05-2026ರಂದು ನಡೆದ ಘಟಕದ ಸಾಪ್ತಾಹಿಕ ಸಭೆಯಲ್ಲಿ, ಘಟಕದ ಅಧ್ಯಕ್ಷೆ ಗೀತಾ ವಸಂತ್ […]
Read More

17-05-2026, 8:30 PM
ಪೆರ್ಮಂಕಿ : ಯುವವಾಹಿನಿ (ರಿ.) ಪೆರ್ಮಂಕಿ ಘಟಕದ ವತಿಯಿಂದ ಗೆಜ್ಜೆಗಿರಿ ಶ್ರೀ ಆದಿ ಧೂಮಾವತಿ ಶ್ರೀದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಕಲ್ಕುಡ-ಕಲ್ಲುರ್ಟಿ ದೈವದ ಮಹಾತ್ಮೆ ಸಾರುವ ‘ನಾಗರತಿ’ ಎಂಬ ಕಾಲಮಿತಿ ಯಕ್ಷಗಾನ ಪ್ರದರ್ಶನವು ಪೆರ್ಮಂಕಿಯ ವಿಶಾಲ್ ಗಾರ್ಡನ್ನಲ್ಲಿ ಇತ್ತೀಚೆಗೆ ಯಶಸ್ವಿಯಾಗಿ ನೆರವೇರಿತು. ಸನ್ಮಾನ ಮತ್ತು ಆರ್ಥಿಕ ನೆರವು:ಇದೇ ಸಂದರ್ಭದಲ್ಲಿ ಉದ್ಯಮ ರಂಗದ ಜೊತೆಗೆ ಸಾಮಾಜಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಪ್ರಮುಖ ಉದ್ಯಮಿ, ಸಮಾಜ ಸೇವಕ ಶೈಲೇಂದ್ರ ವೈ. ಸುವರ್ಣ ಅವರನ್ನು ಘಟಕದ ವತಿಯಿಂದ ಅತ್ಯಂತ […]
Read More

17-05-2026, 2:00 PM
ಕೊಲ್ಯ : ಮಾನವ ಸೇವೆಯೇ ಮಾಧವ ಸೇವೆ ಎಂಬ ಧ್ಯೇಯದೊಂದಿಗೆ, ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ.) ಕೊಲ್ಯ ಸೋಮೇಶ್ವರ ಮತ್ತು ಯುವವಾಹಿನಿ (ರಿ.) ಕೊಲ್ಯ ಘಟಕದ ಜಂಟಿ ಆಶ್ರಯದಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ಎರಡು ಕುಟುಂಬಗಳಿಗೆ ಆರ್ಥಿಕ ನೆರವು ನೀಡುವ ಮೂಲಕ “ಸಹಾಯ ಹಸ್ತ” ಚಟುವಟಿಕೆಯನ್ನು ಹಮ್ಮಿಕೊಳ್ಳಲಾಯಿತು. ದಿನಾಂಕ 17-05-2026 ರಂದು ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ತಾಯಂದಿರ ವೈದ್ಯಕೀಯ ಚಿಕಿತ್ಸಾ ವೆಚ್ಚಕ್ಕಾಗಿ ಧನಸಹಾಯ ಹಸ್ತಾಂತರಿಸಲಾಯಿತು: ಸೋಮೇಶ್ವರ ನಿವಾಸಿ ದಾಮೋದರ ಪೂಜಾರಿ ಇವರ ಧರ್ಮಪತ್ನಿಯವರ ಚಿಕಿತ್ಸಾ ವೆಚ್ಚಕ್ಕಾಗಿ. […]
Read More

06-04-2026, 8:00 PM
ಕೊಲ್ಯ: “ನಿಮ್ಮ ಆರೋಗ್ಯ ನಿಮ್ಮ ಕಾಲು ಮತ್ತು ಕೈಗಳಲ್ಲಿ” ಎಂಬ ಧ್ಯೇಯವಾಕ್ಯದೊಂದಿಗೆ, ಯುವವಾಹಿನಿ (ರಿ) ಕೊಲ್ಯ ಘಟಕ ಮತ್ತು ಮಂಗಳೂರಿನ ಕಂಪಾನಿಯೋ ಶ್ರೀದೇವಿ ವೆಲ್ನೆಸ್ ಸೆಂಟರ್ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಆರೋಗ್ಯ ಮಾಹಿತಿ ಕಾರ್ಯಕ್ರಮವು ದಿನಾಂಕ 06-04-2026 ರಂದು ಕೊಲ್ಯದ ನಾರಾಯಣ ಗುರು ಸಭಾಭವನದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು.ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ) ಕೊಲ್ಯ, ಸೋಮೇಶ್ವರ ಇವರ ಸಹಕಾರದೊಂದಿಗೆ ನಡೆಯುತ್ತಿರುವ 15 ದಿನಗಳ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಭಾಗವಾಗಿ ಈ ಕಾರ್ಯಕ್ರಮವನ್ನು […]
Read More

29-03-2026, 10:00 AM
ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕ, ಕಂಪಾನಿಯೋ ಶ್ರೀದೇವಿ ವೆಲ್ನೆಸ್ ಸೆಂಟರ್, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಹಾಗೂ ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ) ಕೊಲ್ಯ, ಸೋಮೇಶ್ವರ ಇವರ ಸಹಕಾರದೊಂದಿಗೆ 15 ದಿನಗಳ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಉದ್ಘಾಟನಾ ಸಮಾರಂಭವು ಕೊಲ್ಯದ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ನೆರವೇರಿತು.ಬಿಲ್ಲವ ಸೇವಾ ಸಮಾಜ (ರಿ) ಕೊಲ್ಯ ಇದರ ಅಧ್ಯಕ್ಷರಾದ ಗೋಪಾಲ್ ಕೊಂಡಾಣ ಅವರು ಉದ್ಘಾಟಿಸಿ, ಇಂತಹ ಉಚಿತ ಆರೋಗ್ಯ ಶಿಬಿರಗಳ ಸದುಪಯೋಗವನ್ನು ಸಾರ್ವಜನಿಕರು […]
Read More