
25-12-2018, 5:03 PM
ಉಪ್ಪಿನಂಗಡಿ : ದಿನಾಂಕ 25-12-2018ನೇ ಮಂಗಳವಾರ ದಕ್ಷಿಣ ಕನ್ನಡ ಜಿಲ್ಲೆ ಹಿರಿಯ ಪ್ರಾರ್ಥಮಿಕ ಶಾಲೆ ಆಲಂತಾಯದಲ್ಲಿ ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ಆಯುಷ್ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಅರೋಗ್ಯ ಶಿಬಿರ ನಡೆಯಿತು. ಇದರ ಪ್ರಯೋಜನವನ್ನು ಸುಮಾರು ನೂರೈವತ್ತಕ್ಕಿಂತಲೂ ಹೆಚ್ಚು ಜನ ಪಡೆದುಕೊಂಡರು. ಈ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಹಿರಿಯ ಪ್ರಾರ್ಥಮಿಕ ಶಾಲೆ ಆಲಂತಾಯ ಇದರ ಮುಖ್ಯ ಗುರುಗಳಾದ ಶ್ರೀ ವೈ.ಸಾಂತಪ್ಪ ಇವರು […]
Read More

23-12-2018, 3:08 PM
ಉಪ್ಪಿನಂಗಡಿ : ದಿನಾಂಕ 23-12-2018ನೇ ಆದಿತ್ಯವಾರದಂದು ದಿ.ಗುರುಸಾಗರ್ ಇವರ ಸ್ಮರಣಾರ್ಥದಲ್ಲಿ ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕ ಮತ್ತು ಶ್ರೀ ರಾಮ ಭಜನಾ ಮಂಡಳಿ ಕರುವೇಲು ಮತ್ತು ಇಂಡಿಯನ್ ಡೆಂಟಲ್ ಅಸೋಸಿಯೇಷನ್ ಪುತ್ತೂರು ಹಾಗೂ ಯೆನೊಪೊಯ ದಂತ ಮಹಾವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಬೃಹತ್ ಉಚಿತ ವೈದ್ಯಕೀಯ ಶಿಬಿರ ಬಂಟ್ವಾಳ ತಾಲೂಕಿನ ಕರವೇಲು ಶಾಲೆಯಲ್ಲಿ ನಡೆಯಿತು. ಈ ಶಿಬಿರವನ್ನು ದಿ. ಗುರುಸಾಗರ್ ಇವರ ತಾಯಿ ವಂದನಾ ಶರತ್ ಮುದಲಾಜೆ ಉದ್ಘಾಟಿಸಿದರು. ಸಭೆಯ ಅಧ್ಯಕ್ಷತೆಯನ್ನು ಯುವವಾಹಿನಿ ಘಟಕದ ಉಪ್ಪಿನಂಗಡಿ ಅಧ್ಯಕ್ಷರಾದ […]
Read More

16-12-2018, 1:03 PM
ವೇಣೂರು : ಯುವವಾಹಿನಿ (ರಿ) ವೇಣೂರು ಘಟಕ, ಲಯನ್ಸ್ ಕ್ಲಬ್ ವೇಣೂರು, ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುಕ್ಕೇಡಿ, ಆಯುಷ್ ಇಲಾಖೆಯ ಜಂಟಿ ಆಶ್ರಯದಲ್ಲಿ ಕುಕ್ಕೇಡಿ ಅಂಬೇಡ್ಕರ್ ಭವನದಲ್ಲಿ ದಿನಾಂಕ 16.12.2018 ರಂದು ಆದಿತ್ಯವಾರ ಉಚಿತ ಆಯುಷ್ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಪಂಚಾಯತ್ ಸದಸ್ಯ ಶೇಖರ್ ಕುಕ್ಕೇಡಿ ಶಿಬಿರ ಉದ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಆಯುಷ್ ವೈದ್ಯರಾದ ಡಾ.ಕೃಷ್ಣಪ್ರಸಾದ್, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ರಾಕೇಶ್ ಕುಮಾರ್ ಮೂಡುಕೋಡಿ, ಕೇಂದ್ರ ಸಮಿತಿಯ ನಾಮನಿರ್ದೇಶಿತ ಸದಸ್ಯ […]
Read More

13-12-2018, 3:58 PM
ಎಕ್ಕಾರು ಪೆರ್ಮುದೆ : ಮನನೊಂದ ಅಶಕ್ತ ಸಮಾಜ ಬಾಂಧವರ ಸಹಾಯಕ್ಕೆ ಸದಾ ಸಿದ್ದ ಎನ್ನುವ ಯುವವಾಹಿನಿ(ರಿ) ಎಕ್ಕಾರು ಪೆರ್ಮುದೆ ಘಟಕವು ತನ್ನ ಧ್ಯೇಯ ವಾಕ್ಯದಂತೆ ಮತ್ತೊಂದು ನೊಂದ ಬಡ ಮನಸ್ಸಿಗೆ ತನ್ನ ಸಹಾಯ ಹಸ್ತವನ್ನು ನೀಡಿರುತ್ತದೆ ಮೂಡಿಗೆರೆಯ ಸುರೇಶ್ ಇವರು ಕಳೆದ ಕೆಲ ದಿನಗಳಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ನಗರದ ಎ.ಜೆ ಆಸ್ಪತ್ರೆಗೆ ದಾಖಲಾಗಿರುತ್ತಾರೆ. ಮೂಲತಃ ಬಡ ಕುಟುಂಬದವರಾಗಿದ್ದು, ಅವಿವಾಹಿತರಾಗಿದ್ದು ತನ್ನ ತಂದೆಯನ್ನೂ ಕಳೆದುಕೊಂಡಿರುತ್ತಾರೆ. ಇವರ ಚಿಕಿತ್ಸೆಗೆ ಹಣ ಹೊಂದಿಸಲು ಇವರ ಸಹೋದರಿ ಸುಮ ಇವರು ಕಷ್ಟ […]
Read More

07-12-2018, 4:04 PM
ಯಡ್ತಾಡಿ : ಬದುಕು ಒಂದೊಮ್ಮೆ ತೀರಾ ಸಂಕಷ್ಟಕ್ಕೆ ತುತ್ತಾಗುತ್ತದೆ. ಕಷ್ಟ ಬಂದವರಿಗೆ ಮರಳಿ ಮರಳಿ ನೋವು ಬರುತ್ತೆ. ಯಡ್ತಾಡಿ ಗ್ರಾಮದಲ್ಲಿ ವಾಸವಾಗಿರುವ ಸ.ಹಿ.ಪ್ರಾ. ಶಾಲೆ ಯಡ್ತಾಡಿಯ 7ನೇ ತರಗತಿ ವಿದ್ಯಾರ್ಥಿ ರಾಜೇಂದ್ರ ಎಂಬ ಹುಡುಗನ ಕರುಣಾಜನಕ ಕಥೆ ಇದು. ಕಡು ಬಡತನದಲ್ಲಿ ಹುಟ್ಟಿದ ಈ ಹುಡುಗನಿಗೆ ಹುಟ್ಟಿನಿಂದಲೇ ಒಂದು ಕಿಡ್ನಿಯಲ್ಲಿ ಸಮಸ್ಯೆ ಇತ್ತು. ಆದರೂ ಚಿಕಿತ್ಸೆಯ ಮೂಲಕ ಒಂದೇ ಕಿಡ್ನಿಯಲ್ಲಿ ಲವ ಲವಿಕೆಯ ಜೀವನ ಸಾಗಿಸುತ್ತಿದ್ದ. ಆದರೆ ಇತ್ತೀಚಿಗೆ ಇನ್ನೊಂದು ಕಿಡ್ನಿಯಲ್ಲೂ ಸಮಸ್ಯೆ ಕಾಣಿಸಿ ಹಲವಾರು ದಿನಗಳಿಂದ […]
Read More

25-11-2018, 5:31 PM
ಬಂಟ್ವಾಳ: ಸಾಮಾಜಿಕ ಹಾಗೂ ದೈಹಿಕ ಆರೋಗ್ಯ ಇವೆರಡೂ ಕೂಡ ಬಹಳ ಪ್ರಾಮುಖ್ಯವಾದುದು. ಈ ನಿಟ್ಟಿನಲ್ಲಿ ಯುವ ಸಂಘಟನೆಗಳು ಹೆಚ್ಚು ಕ್ರೀಯಾಶೀಲರಾಗಿ ಕಾರ್ಯಕ್ರಮ ರೂಪಿಸಬೇಕು. ಯುವವಾಹಿನಿ(ರಿ) ನಂತಹ ಸಂಘಟನೆಗಳು ಈ ಕುರಿತು ಹೆಚ್ಚು ಸಕಾರಾತ್ಮಕವಾಗಿ ಆಲೋಚಿಸುತ್ತಿರುವುದು ಶ್ಲಾಘನೀಯ ಎಂಬುದಾಗಿ ಮಾಜಿ ಸಚಿವರಾದ ಬಿ. ರಾಮನಾಥ ರೈ ತಿಳಿಸಿದರು. ಅವರು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಬಿ.ಸಿ. ರೋಡಿ ನ ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 25-11-2018 ರಂದು ಜರುಗಿದ ರಕ್ತದಾನ ಮತ್ತು ಉಚಿತ ಆರೋಗ್ಯ […]
Read More

21-10-2018, 3:37 PM
ಯಡ್ತಾಡಿ : ಸಂಘಟನೆಯನ್ನು ಬಲಪಡಿಸುವ ಸಲುವಾಗಿ ಒಂದಿಷ್ಟು ಮನರಂಜನೆಗೆ, ಒಂದಿಷ್ಟು ಸಂಘಟನೆಗೆ ಎಂಬ ಉದ್ದೇಶವನ್ನು ಮುಂದಿರಿಸಿಕೊಂಡು ಯುವವಾಹಿನಿ (ರಿ) ಯಡ್ತಾಡಿ ಘಟಕ ಆರಂಭಿಸಿದ ನಮ್ಮ ನಡೆಯ ಎರಡನೇ ಕಾರ್ಯಕ್ರಮ ನಮ್ಮ ನಡೆ, ಕಂಬಳಕಟ್ಟು ಕಡೆ, ಅಧ್ಯಕ್ಷರಾದ ಸತೀಶ ಪೂಜಾರಿಯವರ ಮನೆಯಲ್ಲಿ ದಿನಾಂಕ 21-10-2018 ರಂದು ನಡೆಸಲಾಯಿತು. ಸ್ವಯಂ ಪ್ರೇರಣೆಯಿಂದ ಸದಸ್ಯರು ಭಾಗವಹಿಸದೇ ಇದ್ದರೆ ಯಾವುದೇ ಸಂಘಟನೆಯನ್ನು ಮುನ್ನಡೆಸುವುದು ಕಷ್ಟ ಸಾಧ್ಯ. ಅದೂ ಅಲ್ಲದೆ ಅದು ವ್ಯರ್ಥ ಕೂಡ. ಈ ನಿಟ್ಟಿನಲ್ಲಿ ಹೊಸ ಚಿಂತನೆಯೊಂದಿಗೆ ಯುವವಾಹಿನಿ ಪ್ರಾರಂಭಿಸಿದ ಕಾರ್ಯಕ್ರಮ […]
Read More

07-10-2018, 4:14 PM
ಕೂಳೂರು : ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 07/10/2018 ರವಿವಾರ ಸoಜೆ 4 ಗoಟೆಗೆ ಮಹಿಳೆ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮವನ್ನು ಕೂಳೂರು ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಸಭಾಭವನದಲ್ಲಿ ಘಟಕದ ಮಹಿಳಾ ಸದಸ್ಯರಿಗಾಗಿ ಹಮ್ಮಿಕೊಳ್ಳಲಾಯಿತು . ಸಂಪನ್ಮೂಲ ವ್ಯಕ್ತಿಯಾಗಿ ಸ್ತ್ರೀರೋಗ ತಜ್ಞೆ ಹಾಗೂ ಪ್ರಸೂತಿ ಶಾಸ್ತ್ರಜ್ಞರಾದ ಡಾ.ಲತಾ ಶರ್ಮಾ ಇವರು ಆಗಮಿಸಿದ್ದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಇವರು ವಹಿಸಿದ್ದರು .ಮುಖ್ಯ ಅತಿಥಿಯಾಗಿ ಘಟಕದ ಸಲಹೆಗಾರರಾದ ನೇಮಿರಾಜ್, ಕೂಳೂರು ಬ್ರಹ್ಮಶ್ರೀ ನಾರಾಯಣಗುರು […]
Read More

29-09-2018, 4:06 PM
ಮಂಗಳೂರು : ವಿಶ್ವ ಹೃದ್ರೋಗ ದಿನಾಚರಣೆಯ ಅಂಗವಾಗಿ ಒಮೇಗಾ ಅಸ್ಪತ್ರೆ ಮಂಗಳೂರು, ಯುವವಾಹಿನಿ (ರಿ) ಮಂಗಳೂರು ಘಟಕ, ಲಯನ್ಸ್ ಕ್ಲಬ್ ಮಂಗಳೂರು ಮಂಗಳಾದೇವಿ, ಅಶೋಕನಗರ ಲಯನ್ಸ್ ಕ್ಲಬ್, ಲಯನ್ಸ್ ಕ್ಲಬ್ ಕುಡ್ಲ. ಇವರ ಸಂಯುಕ್ತ ಆಶ್ರಯದಲ್ಲಿ ಖ್ಯಾತ ಹೃದ್ರೋಗ ತಜ್ಞರಾದ ಡಾ. ಕೆ.ಮುಕುಂದ್ ಇವರ ನೇತೃತ್ವದಲ್ಲಿ “ಉಚಿತ ಹೃದಯರೋಗ ಮತ್ತು ಮಧುಮೇಹ ತಪಾಸಣಾ ಶಿಬಿರ” ದಿನಾಂಕ 29.09.2018 ರಂದು ಯುವವಾಹಿನಿ ಸಭಾಂಗಣ ಉರ್ವಸ್ಟೋರ್ ಇಲ್ಲಿ ನಡೆಯಿತು. ಶಿಬಿರಾರ್ಥಿಗಳ ವೈದ್ಯಕೀಯ ತಪಾಸಣೆಯ ಪೂರ್ವದಲ್ಲಿ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು […]
Read More

23-09-2018, 2:42 AM
ಕಂಕನಾಡಿ : ಇತ್ತೀಚೆಗೆ ಮಂಗಳಾದೇವಿ ದೇವಸ್ಥಾನದಲ್ಲಿ ಮರ ಬಿದ್ದು ಗಾಯಗೊಂಡ ಸುರೇಖಾ ಕೋಟ್ಯಾನ್ ಆರೋಗ್ಯವನ್ನು ವಿಚಾರಿಸಿ ₹.10000/- ವೈದ್ಯಕೀಯ ನೆರವು ನೀಡಲಾಯಿತು.ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಕಂಕನಾಡಿ ಘಟಕದ ಅಧ್ಯಕ್ಷ ಭವಿತ್ ರಾಜ್ ಕಾರ್ಯದರ್ಶಿ ಸುಮಾ ವಸಂತ್ , ಮಾಜಿ ಅಧ್ಯಕ್ಷ ಹರೀಶ್. ಕೆ. ಸನಿಲ್ ಮತ್ತಿತರರು ಉಪಸ್ಥಿತರಿದ್ದರು.
Read More