13-08-2018, 4:25 PM
ಪಡುಬಿದ್ರಿ : ಆರ್ಥಿಕವಾಗಿ ಸಂಕಷ್ಟದಲ್ಲಿದ್ದು ಅನಾರೋಗ್ಯದಿಂದ ಬಳಲುತ್ತಿರುವ, ನಮ್ಮ ಘಟಕದ ಸದಸ್ಯರಾದ ನಂದಿಕೂರಿನ ಹೇಮಂತ್ ರವರ ತಾಯಿ ಜಯಂತಿಯವರಿಗೆ ಯುವವಾಹಿನಿ (ರಿ.) ಪಡುಬಿದ್ರಿ ಘಟಕದಿಂದದಿನಾಂಕ 13.08.2018 ರಂದು ರೂ.10,600 ಧನಸಹಾಯ ಮಾಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿಯ ಅಧ್ಯಕ್ಷರಾದ ದೀಪಕ್ ಕೆ. ಬೀರ, ನಿಕಟಪೂರ್ವ ಅಧ್ಯಕ್ಷರಾದ ಸಂತೋಷ್ ಎಸ್. ಪೂಜಾರಿ, ಮಾಜಿ ಅಧ್ಯಕ್ಷರಾದ ಅಶೋಕ್ ಪಾದೆಬೆಟ್ಟು, ಕಾರ್ಯದರ್ಶಿ ಶೈಲಜ, ಪಡುಬಿದ್ರಿ ಘಟಕದ ಸಮಾಜ ಸೇವಾ ನಿರ್ದೇಶಕರಾದ ಅಕ್ಷಯ್ ನಂದಿಕೂರು, ಅರುಣ್ ನಂದಿಕೂರು ಉಪಸ್ಥಿತರಿದ್ದರು.
Read More
14-07-2018, 8:18 AM
ಬಜ್ಪೆ: ವಿದ್ಯೆ ಉದ್ಯೋಗ ಸಂಪರ್ಕವೆನ್ನುವ ಮಹತ್ತರವಾದ ಆಶಯವನ್ನಿರಿಸಿಕೊಂಡು, ಸಮಾಜಮುಖಿಯಾಗಿ ಕಾರ್ಯೋನ್ಮುಖವಾಗಿರುವ ಯುವವಾಹಿನಿ ಆರೋಗ್ಯಪೂರ್ಣ ಸಮಾಜ ನಿರ್ಮಾಣದಲ್ಲೂ ತನ್ನನ್ನು ಬಹುವಾಗಿ ಅನ್ವಯಿತಗೊಳಿಸಿಕೊಂಡಿರುವ ಕಾರಣವಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ತನ್ನ ಮಡಿಗೇರಿಸಿಕೊಂಡಿರುವುದು ಕಡಿಮೆ ಸಾಧನೆಯೇನಲ್ಲ. ಯುವವಾಹಿನಿ ಕೇಂದ್ರ ಸಮಿತಿಯ ಪಡಿನೆಳಲಲ್ಲಿ ತನ್ನ ಪ್ರತಿಭೆಯನ್ನು ವಿಸ್ತಾರಗೊಳಿಸಿಕೊಂಡಿರುವ ಘಟಕಗಳಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ಯುವವಾಹಿನಿ(ರಿ.) ಬಜ್ಪೆ ಘಟಕದ ಆಶ್ರಯದಲ್ಲಿ ದಿನಾಂಕ. 14.07.2018 ರಂದು ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಮಂಗಳೂರು ವಿಶೇಷ ಆರ್ಥಿಕ ವಲಯ(SEZ) ಇದರ ಸಹಭಾಗಿತ್ವದಲ್ಲಿ, ಪ್ರಸಾದ್ ನೇತ್ರಾಲಯ […]
Read More
08-07-2018, 3:18 PM
ಮೂಡಬಿದ್ರೆ : ಯುವವಾಹಿನಿ (ರಿ) ಮೂಡಬಿದ್ರೆ ಘಟಕ ಹಾಗೂ ಲಯನ್ಸ್ ಕ್ಲಬ್ ಶಿರ್ತಾಡಿ ಇದರ ಜಂಟಿ ಆಶ್ರಯದಲ್ಲಿ ಶ್ರೀನಿವಾಸ್ ಇನ್ಸಿಟ್ಯೂಟ್ ಅಫ್ ಡೆಂಟಲ್ ಸಾಯನ್ಸ್ ಮುಕ್ಕ ಸುರತ್ಕಲ್ ಇದರ ಸಹಯೋಗದೊಂದಿಗೆ ದಿನಾಂಕ 08.07.2018 ರಂದು ಆನೆಗುಡ್ಡೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ಜರುಗಿತು. ಆನೆಗುಡ್ಡೆ ಸಂತ ಪ್ರಾನ್ಸಿಸ್ ಕ್ಸೇವಿಯರ್ ಚರ್ಚ್ನ ಧರ್ಮಗುರುಗಳಾದ ವಂದನೀಯ ಜೆರಾಲ್ಡ್ ಪ್ರಾನ್ಸಿಸ್ ಪಿಂಟೋ ಇವರು ದೀಪ ಬೆಳಗುವುದರ ಮತ್ತು ಮೂಲಕ ಶಿಬಿರ ಉದ್ಘಾಟಿಸಿದರು. ಯುವವಾಹಿನಿಯ ಯುವಕರು ಸಮಾಜಮುಖಿ […]
Read More
24-06-2018, 4:23 PM
ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದಿಂದ ಅಂಗೈಯಲ್ಲಿ ಆರೋಗ್ಯ ಕಾರ್ಯಕ್ರಮವು ದಿನಾಂಕ 24.06.2018 ರಂದು ಕೂಳೂರು ನಾರಾಯಣಗುರು ಸೇವಾ ಸಂಘದಲ್ಲಿ ಜರುಗಿತು. ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ) ಮಂಗಳೂರು ವಲಯದ ಶಿಕ್ಷಕರಾದ ಜನಾರ್ದನ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅಂಗೈಯಲ್ಲಿ ಆರೋಗ್ಯ ಕಾರ್ಯಾಗಾರ ನಡೆಸಿಕೊಟ್ಟರು.ದೇಹದ ವಿವಿಧ ಅನಾರೋಗ್ಯ ಸಮಸ್ಯೆಗಳಿಗೆ ಅಂಗೈ ಮೂಲಕ ಚಿಕಿತ್ಸೆ ನೀಡುವ ಬಗ್ಗೆ ಪ್ರಾಯೋಗಿಕವಾಗಿ ವಿವರಿಸಿದರು. ಯುವವಾಹಿನಿ ಕೂಳೂರು ಘಟಕದ ಉಪಾಧ್ಯಕ್ಷ ಭಾಸ್ಕರ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಕೂಳೂರು ಬ್ರಹ್ಮಶ್ರೀ […]
Read More
02-05-2018, 2:08 PM
ದಿನಾಂಕ : 02/05/2018 ರಂದು ಯುವವಾಹಿನಿ(ರಿ) ಕುಪ್ಪೆಪದವು ಘಟಕದ ವತಿಯಿಂದ ಕಿಲೆಂಜಾರು ಗ್ರಾಮದ ನಿವಾಸಿಯಾದ,ನಡೆದಾಡಲು ಅಸಾಧ್ಯವಾಗಿ ಹಾಸಿಗೆ ಹಿಡಿದಿರುವ ರವೀಂದ್ರ ಇವರಿಗೆ ವೀಲ್ ಚೇರ್ ಹಸ್ತಾಂತರಿಸಲಾಯಿತು ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಕುಪ್ಪೆಪದವು ಘಟಕದ ಅಧ್ಯಕ್ಷರಾದ ಅರುಣ್ ಕುಮಾರ್ ಅಂಬೆಲೋಟ್ಟು , ಉಪಾಧ್ಯಕ್ಶರಾದ ಅಜೇಯ್ ಅಮೀನ್ ನಾಗಂದದಿ, ಕಾರ್ಯದರ್ಶಿ ರಿತೇಶ್ ನೆಲ್ಲಚಿಲ್ಲ್ , ವಿನಯ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು
Read More
28-04-2018, 2:08 PM
ಮೂಡಬಿದ್ರೆ: ದಿನಾಂಕ 28.04.2018 ರಂದು ಯುವವಾಹಿನಿ (ರಿ) ಮೂಡಬಿದ್ರೆ ಘಟಕದ ವತಿಯಿಂದ ಕಿಡ್ನಿ ವೈಫಲ್ಯ ದಿಂದ ಬಳಲುತ್ತಿರುವ, ಮಂಗಳೂರು ತಾಲೂಕು ದರೆಗುಡ್ಡೆ ಕೆಲ್ಲಪುತ್ತಿಗೆಯ ಮೇಲಿನ ಮನೆಯ ಡೊಂಬಯ್ಯ ಪೂಜಾರಿ ಎಂಬವರ ಮಗಳು ಬಡ ಕುಟುಂಬದ ಪೂಜಾ ಪೂಜಾರಿ ಇವರಿಗೆ ವೈದ್ಯಕೀಯ ನೆರವು ರೂ 15,000/- ಹಸ್ತಾಂತರಿಸಲಾಯಿತು. ಹಾಗೂ ಮಂಗಳೂರು ತಾಲೂಕಿನ ನೆಲ್ಲಿಕಾರ್ ನಿವಾಸಿ ಮನೋಜ್ ಪೂಜಾರಿ ಕಡು ಬಡತನದಲ್ಲಿ ಬದುಕುತ್ತಿರುವ ಇವರಿಗೆ ರೂ 5,000/- ವೈದ್ಯಕೀಯ ನೆರವು ನೀಡಲಾಯಿತು.
Read More
17-03-2018, 5:00 PM
ಮಾಣಿ : ದ.ಕ.ಜಿ.ಪಂ.ಉ.ಹಿ.ಪ್ರಾ.ಶಾಲೆ ಪಾಟ್ರಕೇೂಡಿ ಕೆದಿಲದಲ್ಲಿ ದಿನಾಂಕ 17.03.2018 ರಂದು ಉಚಿತ ಆಯುಷ್ ಚಿಕಿತ್ಸಾ ಶಿಬಿರವು ಯುವವಾಹಿನಿ (ರಿ)ಮಾಣಿ ಘಟಕದ ಆಶ್ರಯದಲ್ಲಿ ದ.ಕ.ಜಿಲ್ಲಾ ಪಂಚಾಯತ್ ಆಯುಷ್ ಇಲಾಖೆಯ ವತಿಯಿಂದ ನಡೆಯಿತು. ಶಿಬಿರವನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಮಾಣಿ ಇದರ ಅಧ್ಯಕ್ಷರಾದ ನಾರಾಯಣ ಸಾಲ್ಯಾನ್ ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು “ಹಿಂದಿನ ಕಾಲದಲ್ಲಿ ಜನರಿಗೆ ಯಾವುದೇ ರೇೂಗಗಳು ಕಂಡು ಬಂದಲ್ಲಿ ಗಿಡಮೂಲಿಕೆಗಳಿಂದ ಮನೆ ಮದ್ದು ತಯಾರಿಸಿ ಉಪಯೇೂಗಿಸುತ್ತಿದ್ದರು. ಈಗ ಅದಕ್ಕೆಂದೆ ಸರ್ಕಾರ […]
Read More
14-03-2018, 3:56 PM
ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ ಮತ್ತು ಸ್ಥಳೀಯ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಉಚಿತ ಮಕ್ಕಳ ದಂತ ಚಿಕಿತ್ಸೆ ಮತ್ತು ತಪಾಸಣಾ ಶಿಬಿರವು ಯೆನಪೊಯ ಮೆಡಿಕಲ್ ಮತ್ತು ದಂತ ವೈದ್ಯಕೀಯ ಕಾಲೇಜು, ದೇರಳಕಟ್ಟೆ ಇಲ್ಲಿಯ ತಜ್ಞ ವೈದ್ಯರ ತಂಡದೊಂದಿಗೆ ದಿ.14.03.2018 ರಂದು ಇಳಂತಿಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಇಸುಬುರವರು ದೀಪ ಬೆಳಗಿಸಿ ನೆರವೇರಿಸಿ ಮಾತನಾಡಿ ಸಮಾಜದ ಜನರಲ್ಲಿ ಉತ್ತಮ ಆರೋಗ್ಯವಿದ್ದಾಗ ಬಲಿಷ್ಠ ಸಮಾಜ ನಿರ್ಮಾಣ ಆಗುತ್ತದೆ ಈ ನಿಟ್ಟಿನಲ್ಲಿ […]
Read More
11-03-2018, 1:53 PM
ಯುವವಾಹಿನಿ (ರಿ) ಕೂಳೂರು ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರ ಕೂಳೂರು ಇದರ ಸಹಯೋಗದಲ್ಲಿ ಮಂಗಳೂರು ಕೆಮಿಕಲ್ಸ್ ಆಂಡ್ ಫರ್ಟಿಲೈಜರ್ ಲಿಮಿಟೆಡ್ ಮಂಗಳೂರು ಇದರ ಸಹಕಾರದೊಂದಿಗೆ ಜಸ್ಟಿಸ್ ಕೆ ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ, ಮಂಗಳೂರು ಇಲ್ಲಿಯ ತಜ್ಞ ವೈದ್ಯರ ತಂಡದೊಂದಿಗೆ ದಿನಾಂಕ 11-03-2018 ರಂದು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರದ ದಿ! ಶ್ರೀಮತಿ ಜಾನಮ್ಮ ಸೂಡಪ್ಪ ಪೂಜಾರಿ ಸಭಾಭವನದಲ್ಲಿ “ಉಚಿತ ನೇತ್ರ ತಪಾಸಣಾ ಶಿಬಿರ” ಏರ್ಪಡಿಸಲಾಗಿತ್ತು. ಮಂಗಳೂರು ಮಹಾನಗರ ಪಾಲಿಕೆಯ […]
Read More
25-02-2018, 2:13 PM
ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ, ಎ1 ಫ್ರೆಂಡ್ಸ್ ಆಕಾಶಭವನ ಹಾಗೂ ಶ್ರೀನಿವಾಸ ಹಾಸ್ಪಿಟಲ್ ಮುಕ್ಕ ಇದರ ಸಹಯೋಗದೊಂದಿಗೆ ದಿನಾಂಕ 25.02.2018 ರಂದು ಪರಪಾದೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಕಾಶಭವನದಲ್ಲಿ ಉಚಿತ ವೈದ್ಯಕೀಯ ಶಿಬಿರ ಜರುಗಿತು. ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ದೀಪಕ್ ಕೆ.ಪೂಜಾರಿ ಶಿಬಿರ ಉದ್ಘಾಟಿಸಿ ಶುಭ ಹಾರೈಕೆ ಮಾಡಿದರು.ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ಸುಪ್ರೀತಾ ಪೂಜಾರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಎ1 ಫ್ರೆಂಡ್ಸ್ ಅಧ್ಯಕ್ಷರಾದ ಲೋಹಿತ್ ಕುಮಾರ್, ಪರಪಾದೆ ಸರಕಾರಿ […]
Read More