
ತುರ್ತು ಸೇವಾ ವಾಹನ – ಯುವವಾಹಿನಿ ( ರಿ.) ಗ್ರಾಮ ಚಾವಡಿ ಕೊಣಾಜೆ
19-10-2025, 2:19 PM
ತುರ್ತು ಸೇವಾ ವಾಹನ ಕಠಿಣ ಪರಿಸ್ಥಿತಿಯಲ್ಲಿ ಸೇವೆಗೆ ಅರ್ಪಿಸಲಾಗಿದೆ


19-10-2025, 2:19 PM
ತುರ್ತು ಸೇವಾ ವಾಹನ ಕಠಿಣ ಪರಿಸ್ಥಿತಿಯಲ್ಲಿ ಸೇವೆಗೆ ಅರ್ಪಿಸಲಾಗಿದೆ

15-09-2025, 3:45 PM
ದಿನಾಂಕ 24-08-2025 ರಂದು ಭಾನುವಾರ ಮಹಿಳಾ ಮಂಡಲ ಕುಳಾಯಿಯಲ್ಲಿ, ರೋಟರಿ ಕ್ಲಬ್ ಸುರತ್ಕಲ್, ಮಹಿಳಾ ಮಂಡಲ ಕುಳಾಯಿ, ಇನ್ನರ್ ವೀಲ್ ಕ್ಲಬ್ ಸುರತ್ಕಲ್ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಜಸ್ಟೀಸ್ ಕೆ. ಎಸ್. ಹೆಗ್ಡೆ ದೇರಳಕಟ್ಟೆ, ಮತ್ತು ಎ. ಬಿ. ಶೆಟ್ಟಿ ಸ್ಮಾರಕ ದಂತ ವಿದ್ಯಾಲಯದ ಸಹಭಾಗೀತ್ವದಲ್ಲಿ ಉಚಿತ ವೈದ್ಯಕೀಯ ಶಿಬಿರ ಹಾಗೂ ದಂತ ಚಿಕಿತ್ಸಾ ಶಿಬಿರವನ್ನು ನಡೆಸಲಾಯಿತು.. ಕಾರ್ಯಕ್ರಮವನ್ನು ಹಿರಿಯ ವೈದ್ಯರಾದ ಡಾl ಗೋಪಾಲಕೃಷ್ಣ ಭಟ್ ಸಂಕಬಿತ್ತಿಲು, ಉದ್ಘಾಟಿಸಿದರು. ರೋಟರಿ ಕ್ಲಬ್ ಸುರತ್ಕಲ್ ನ ಅಧ್ಯಕ್ಷರಾದ ರೊ. […]

06-07-2025, 1:58 PM
ಯುವವಾಹಿನಿ (ರಿ.) ಮಂಗಳೂರು ಘಟಕ: ಕ್ಯಾನ್ಸರ್ ಚಿಕಿತ್ಸಾ ಯೋಜನೆಗಳ ಕುರಿತು ಮಾಹಿತಿ ದಿನಾಂಕ 26-06-2025: ಯುವವಾಹಿನಿ (ರಿ.) ಮಂಗಳೂರು ಘಟಕದಲ್ಲಿ ಕ್ಯಾನ್ಸರ್ ಚಿಕಿತ್ಸಾ ಯೋಜನೆಗಳ ಕುರಿತು ಮಾಹಿತಿ ಕಾರ್ಯಗಾರ ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್ ಇದರ ಕಮ್ಯುನಿಟಿ ರಿಲೇಶನ್ ಆಫೀಸರಾದ ತ್ರೀವಿಕ್ರಮ್ ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟಿನಲ್ಲಿ ಕ್ಯಾನ್ಸರ್ ಚಿಕಿತ್ಸೆಗಾಗಿ ಲಭ್ಯವಿರುವ ವಿವಿಧ ಯೋಜನೆಗಳ ಮಾಹಿತಿಯನ್ನು ವಿವರವಾಗಿ ತಿಳಿಸಿದರು ಈ ಸಂದರ್ಭ ತ್ರಿವಿಕ್ರಮ್ ರವರನ್ನು ಘಟಕದ ವತಿಯಿಂದ ಗೌರವಿಸಲಾಯಿತು. ಅಧ್ಯಕ್ಷರಾದ ಅಶೋಕ್ ಅಂಚನ್ […]

18-12-2022, 3:40 PM
ಮಂಗಳೂರು:- ಮಂಗಳೂರು ಕೆಮಿಕಲ್ಸ್ ಆ್ಯಂಡ್ ಫರ್ಟಿಲೈಜರ್ಸ್ ಲಿಮಿಟೆಡ್ (ಎಂಸಿಎಫ್), ಪಣಂಬೂರು ಸಾರಥ್ಯದಲ್ಲಿ ಜಸ್ಟಿಸ್ ಕೆ.ಎಸ್.ಹೆಗ್ಡೆ ಚಾರಿಟೆಬಲ್ ಆಸ್ಪತ್ರೆ ದೇರಳಕಟ್ಟೆ, ಧೂಮಾವತಿ ಫ್ರೆಂಡ್ಸ್ ಸರ್ಕಲ್ ಕೃಷ್ಣಾಪುರ ಮತ್ತು ಯುವವಾಹಿನಿ ಸುರತ್ಕಲ್ ಘಟಕದ ಸಹಯೋಗದಲ್ಲಿ ದಿನಾಂಕ 18 ಡಿಸೆಂಬರ್ ಭಾನುವಾರದಂದು ನೇತ್ರ ತಪಾಸಣಾ ಉಚಿತ ಶಿಬಿರ ನಡೆಯಿತು. ಎಂಸಿಎಫ್ನ ಸಿಎಂ ಗಿರೀಶ್ ಅಧ್ಯಕ್ಷತೆ ವಹಿಸಿದ್ದರು. ಸಾರಾಳ ಧೂಮಾವತಿ ದೈವಸ್ಥಾನ ಅಧ್ಯಕ್ಷ ಹರೀಶ್ ಸುವರ್ಣ ಶಿಬಿರವನ್ನು ಉದ್ಘಾಟಿಸಿದರು. ಧೂಮಾವತಿ ಫ್ರೆಂಡ್ಸ್ ಸರ್ಕಲ್ ಅಧ್ಯಕ್ಷ ಅರುಣ್ ಅಂಚನ್, ಜಸ್ಟಿಸ್ ಕೆ.ಎಸ್.ಹೆಗ್ಡೆ ಚಾರಿಟೆಬಲ್ ಆಸ್ಪತ್ರೆಯ […]

04-09-2022, 2:09 PM
ಕೂಳೂರು :- ಯುವವಾಹಿನಿ (ರಿ.) ಕೂಳೂರು ಘಟಕ, ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ಫಲ್ಗುಣಿ, ಹಿಂದ್ ಕುಷ್ಟ್ ನಿವಾರಣ್ ಸಂಘ್ ಹಾಗೂ ರೆಡ್ ಕ್ರಾಸ್ ಸಂಸ್ಥೆ, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ದಿನಾಂಕ 04 ಸೆಪ್ಟೆಂಬರ್ 2022 ರಂದು ಬೃಹತ್ ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರವು ಫಲ್ಗುಣಿ ಸಭಾಂಗಣ ಕೂಳೂರುನಲ್ಲಿ ನಡೆಯಿತು. ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ ಭರತ್ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಯುವವಾಹಿನಿ ಮತ್ತು ಲಯನ್ಸ್ […]

10-08-2022, 1:50 PM
ಬಂಟ್ವಾಳ : ಆರೋಗ್ಯ ಮಾನವನ ಅತ್ಯಂತ ಶ್ರೇಷ್ಠ ಸಂಪತ್ತು, ಆಯುರ್ವೇದ ಔಷಧಿಗಳು ನಿಧಾನವಾದ ಪರಿಣಾಮ ಎಂಬುದು ಸತ್ಯಕ್ಕೆ ದೂರವಾದ ಮಾತು, ಋಷಿಮನಿಗಳ ಕಾಲದಿಂದಲೂ ನಾವು ಕೇಳಿ ತಿಳಿದುಕೊಂಡ ಹಾಗೂ ಯಾವುದೇ ಅಡ್ಡ ಪರಿಣಾಮಗಳು ಇಲ್ಲದ, ಆಯುರ್ವೇದ ಚಿಕಿತ್ಸೆ ಅತ್ಯಂತ ಪ್ರಯೋಜನಕಾರಿಯಾಗಿದೆ ಎಂದು ರೊಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ ಇದರ ಅಧ್ಯಕ್ಷೆ ಪಲ್ಲವಿ ಕಾರಂತ್ ತಿಳಿಸಿದರು. ಅವರು ದಿನಾಂಕ 10 ಆಗಸ್ಟ್ 2022 ರಂದು ಬಂಟ್ವಾಳ ತಾಲೂಕಿನ ಪಚ್ಚಿನಡ್ಕದಲ್ಲಿ ಯುವವಾಹಿನಿ ಬಂಟ್ವಾಳ ಘಟಕ, ಓಂ ಫ್ರೇಂಡ್ಸ್ ಪಚ್ಚಿನಡ್ಕ ಹಾಗೂ ರೋಟರಿ […]

06-08-2022, 3:30 PM
ಮೂಲ್ಕಿ :- ಯುವವಾಹಿನಿ (ರಿ.) ಮೂಲ್ಕಿ ಘಟಕ ಹಾಗೂ ಲಯನ್ಸ್ ಕ್ಲಬ್ ಮೂಲ್ಕಿ ಮತ್ತು ನವದುರ್ಗ ಯುವಕ ವ್ರಂದ ಕೋಟಕೇರಿ ಇದರ ಸಂಯುಕ್ತ ಆಶ್ರಯದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ಮೂಲ್ಕಿ ಬಸ್ಸು ನಿಲ್ದಾಣದ ಬಳಿ ಹಾಳೆ ತೊಗಟೆಯ ಕಷಾಯ ವಿತರಣೆ ಕಾರ್ಯಕ್ರಮ ಜರಗಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಭಾರತಿ ಭಾಸ್ಕರ ಕೋಟ್ಯಾನ್, ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು, ಮಾಜಿ ಅಧ್ಯಕ್ಷರುಗಳಾದ ಹರೀಂದ್ರ ಸುವರ್ಣ, ಮೋಹನ್ ಸುವರ್ಣ, ಜಯ ಸಿ ಪೂಜಾರಿ, ಸತೀಶ್ ಕಿಲ್ಪಾಡಿ […]

17-07-2022, 4:35 PM
ಪುತ್ತೂರು :- ಯುವವಾಹಿನಿ (ರಿ.) ಪುತ್ತೂರು ಘಟಕ , ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಪುತ್ತೂರು ಘಟಕ ಇವರ ಸಂಯುಕ್ತ ಆಶ್ರಯದಲ್ಲಿ, ರೋಟರಿ ಕ್ಯಾಂಪ್ಕೊ ಬ್ಲಡ್ ಸೆಂಟರ್ ಪುತ್ತೂರು ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ದಿನಾಂಕ 17 ಜುಲೈ 2022 ನೇ ಭಾನುವಾರದಂದು ರೋಟರಿ ಜಿ ಎಲ್ ಸಭಾಭವನ ಪುತ್ತೂರು ಇಲ್ಲಿ ಯುವವಾಹಿನಿ ಪುತ್ತೂರು ಘಟಕದ ಉಪಾಧ್ಯಕ್ಷರಾದ ಉಮೇಶ್ ಬಾಯಾರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯನ್ನು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ […]

04-07-2022, 2:24 PM
ಬಜ್ಪೆ:- ಯುವವಾಹಿನಿ (ರಿ.) ಬಜ್ಪೆ ಘಟಕದ ವತಿಯಿಂದ ಬಜಪೆ ತಾರಿಕಂಬಳ ನಿವಾಸಿಯಾದ ಸುರೇಂದ್ರ ಪೂಜಾರಿ ಮತ್ತು ಗಾಯತ್ರಿ ದಂಪತಿಗಳ ಮಗಳಾದ ಬೇಬಿ ದೀಕ್ಷಾ ಇವರು ಮೆದುಳಿನ ಕಾಯಿಲೆಯಿಂದ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದು, ತೀರಾ ಕಡು ಬಡತನದಲ್ಲಿರುವ ಈ ಕುಟುಂಬಕ್ಕೆ ಘಟಕದ ವತಿಯಿಂದ ಸಹಾಯಧನ ನೀಡಲಾಯಿತು ಹಾಗೂ ಬಜಪೆ ಕಿನ್ನಿಪದವು ನಿವಾಸಿಯಾದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ಇವರ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು ಈ ಕುಟುಂಬಕ್ಕೆ ಘಟಕದ ವತಿಯಿಂದ ಧನಸಹಾಯ ನೀಡಲಾಯಿತು. ಈ ಸಂಧರ್ಭದಲ್ಲಿ ಅಧ್ಯಕ್ಷರಾದ ಉಷಾ […]

19-06-2022, 3:04 PM
ಕಂಕನಾಡಿ :- ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ದಿನಾಂಕ 23 ಜೂನ್ 2022 ರಂದು ಘಟಕದ ನೂತನ ಕಚೇರಿಯ ಸಭಾಂಗಣದಲ್ಲಿ “ವಿಶ್ವ ಯೋಗ ದಿನಾಚರಣೆ”ಯನ್ನು ಆಚರಿಸಲಾಯಿತು. ಶಾಂಭವಿ ಅಂಚನ್ ರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಭಾರತ ವಿಶ್ವಕ್ಕೆ ಕೊಟ್ಟ ಕೊಡುಗೆಯೇ ಯೋಗ , ಯೋಗದಿಂದ ನಮ್ಮ ಜೀವನಶೈಲಿಯಲ್ಲಿ ಆಗುವ ಬದಲಾವಣೆಯನ್ನು ಉದಾಹರಣೆ ಸಹಿತ ವಿವರಿಸಿ ದಿನ ನಿತ್ಯ ನಾವು ಒಂದು ಗಂಟೆಯಾದರೂ ನಮ್ಮ ಆರೋಗ್ಯಕ್ಕಾಗಿ ಯೋಗ ಮಾಡಬೇಕು ಎಂದು ತಿಳಿಸಿ, ಕೆಲವು ಆಸನಗಳನ್ನು ಸದಸ್ಯರಿಂದ ಮಾಡಿಸಿದರು. […]