12-12-2025, 6:36 AM
ಮಕ್ಕಳ ದಿನಾಚರಣೆಯ ಪ್ರಯುಕ್ತ ದಿನಾಂಕ 14.11.2025 ರಂದು ಘಟಕದ ಅಧ್ಯಕ್ಷರು ಹಾಗೂ ಮಾಜಿ ಅಧ್ಯಕ್ಷರುಗಳು KMC ಅತ್ತವರ ದಲ್ಲಿ ಕ್ಯಾನ್ಸರ್ ಚಿಕಿತ್ಸೆ ಪಡೆಯುತ್ತಿರುವ 13 ವರ್ಷದ ಮಾಸ್ಟರ್ ಸನ್ವಿತ್ ಕೆ ಪೂಜಾರಿ ಯ ಅರೋಗ್ಯ ವಿಚಾರಿಸಿ ಅವರ ಕುಟುಂಬಕ್ಕೆ ಘಟಕದ ವತಿಯಿಂದ ವೈದ್ಯಕೀಯ ನೆರವಿನ ಚೆಕ್ಕ ನ್ನು ನೀಡಿ ಸನ್ವಿತ್ ಬೇಗನೆ ಗುಣಮುಖರಾಗಿ ಮನೆಗೆ ತೆರಳಲೆಂದು ಹಾರೈಸಿದರು.
Read More
01-12-2025, 2:38 PM
ಯುವವಾಹಿನಿ (ರಿ.) ಪಡುಬಿದ್ರಿ ಘಟಕ ಹಾಗೂ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಪಡುಬಿದ್ರಿ ಶಾಖೆ ಹಾಗೂ ಲಯನ್ಸ್ ಕ್ಲಬ್ ಪಡುಬಿದ್ರಿ ಇದರ ಜಂಟಿ ಸಹಯೋಗದೊಂದಿಗೆ ದಿನಾಂಕ 02/11/2025 ಭಾನುವಾರ ದಂದು ಉಚಿತ ನೇತ್ರ ತಪಾಸಣಾ ಶಿಬಿರ ವು ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಇದರ ವೈದ್ಯಕೀಯ ತಂಡದೊಂದಿಗೆ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಪಡುಬಿದ್ರಿ ಇಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಚಿತ್ತರಂಜನ್ ಬೋಳಾರ್ ನೆರವೇರಿಸಿದರು. […]
Read More
22-10-2025, 3:39 PM
ರೋಟರಿ ಕ್ಲಬ್ ಮಂಗಳೂರು ಪೂರ್ವ, ರೋಟರಿ ಸಮುದಾಯ ದಳ ಕೊಲ್ಯ, ಸಾರ್ವಜನಿಕ ಶ್ರೀಶಾರದಾ ಮಹೋತ್ಸವ ಸಮಿತಿ ಕೊಲ್ಯ ಹಾಗೂ ಎನಿಮಲ್ ಕೇರ್ ಟ್ರಸ್ಟ್ ಮಂಗಳೂರು ಇವರ ಸಹಕಾರದೊಂದಿಗೆ ಹುಚ್ಚುನಾಯಿ ನಿಯಂತ್ರಣ ಲಸಿಕಾ ಶಿಬಿರ ಮತ್ತು ದೇಸಿ ನಾಯಿ ಹಾಗೂ ಬೆಕ್ಕಿನ ಮರಿಗಳ ಉಚಿತ ದತ್ತು ಸ್ವೀಕಾರ ಶಿಬಿರ ದಿನಾಂಕ 28.09.25 ರಂದು ಶ್ರೀ ಶಾರದ ಮಹೋತ್ಸವ ಸಮಿತಿಯ ವಠಾರದಲ್ಲಿ ನೆರವೇರಿತು, ಸುಮಾರು ನೂರಕ್ಕೂ ಅಧಿಕ ನಾಯಿ ಹಾಗೂ ಬೆಕ್ಕಿಗೆ ಲಸಿಕೆ ನೀಡಲಾಯಿತು.ಈ ಸಮಯದಲ್ಲಿ ಜಂಟಿ ಸಂಸ್ಥೆಗಳ ಅಧ್ಯಕ್ಷರು, […]
Read More
21-10-2025, 3:48 PM
ದಿನಾಂಕ: 15 ಸೆಪ್ಟೆಂಬರ್ 2025, ಭಾನುವಾರ ಮಧ್ಯಾಹ್ನ ಸ್ಥಳ: ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ, ಪದ್ಮನಾಭನಗರ ಕಾರ್ಯಕ್ರಮವು ಸದಸ್ಯರಿಗಾಗಿ ಫಿಟ್ನೆಸ್ ಆಟಗಳು (ಫ್ಲ್ಯಾಂಕ್ ಚಾಲೆಂಜ್ ಮುಂತಾದವು)ಗಳಿಂದ ಪ್ರಾರಂಭವಾಯಿತು. ಬಳಿಕ, ಸ್ಪರ್ಶ್ ಆಸ್ಪತ್ರೆಯ ಪ್ರಸಿದ್ಧ ಹೃದ್ರೋಗ ತಜ್ಞರಾದ ಡಾ. ಬಸವರಾಜ್ ಹಗರಗಿ ಅವರು ಹೃದಯದ ಆರೋಗ್ಯ ಕುರಿತಾದ ಪ್ರೇರಣಾದಾಯಕ ಹಾಗೂ ಜ್ಞಾನಮಯ ಉಪನ್ಯಾಸವನ್ನು ನೀಡಿದರು. ಡಾ ಬಸವರಾಜ್ ಹಗರಗಿಯವರ ಕೆಲವು ಮುಖ್ಯ ಸಂದೇಶಗಳು* : 1. ಹೃದಯವು ನಮ್ಮ ದೇಹದ ಎಂಜಿನ್ನಂತೆ ಕಾರ್ಯನಿರ್ವಹಿಸುತ್ತದೆ. 2. ಕೊಲೆಸ್ಟ್ರಾಲ್ ಜಮಾವಣೆಯಿಂದ ಹೃದಯದಲ್ಲಿ […]
Read More
19-10-2025, 2:19 PM
ತುರ್ತು ಸೇವಾ ವಾಹನ ಕಠಿಣ ಪರಿಸ್ಥಿತಿಯಲ್ಲಿ ಸೇವೆಗೆ ಅರ್ಪಿಸಲಾಗಿದೆ
Read More
15-09-2025, 3:45 PM
ದಿನಾಂಕ 24-08-2025 ರಂದು ಭಾನುವಾರ ಮಹಿಳಾ ಮಂಡಲ ಕುಳಾಯಿಯಲ್ಲಿ, ರೋಟರಿ ಕ್ಲಬ್ ಸುರತ್ಕಲ್, ಮಹಿಳಾ ಮಂಡಲ ಕುಳಾಯಿ, ಇನ್ನರ್ ವೀಲ್ ಕ್ಲಬ್ ಸುರತ್ಕಲ್ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಜಸ್ಟೀಸ್ ಕೆ. ಎಸ್. ಹೆಗ್ಡೆ ದೇರಳಕಟ್ಟೆ, ಮತ್ತು ಎ. ಬಿ. ಶೆಟ್ಟಿ ಸ್ಮಾರಕ ದಂತ ವಿದ್ಯಾಲಯದ ಸಹಭಾಗೀತ್ವದಲ್ಲಿ ಉಚಿತ ವೈದ್ಯಕೀಯ ಶಿಬಿರ ಹಾಗೂ ದಂತ ಚಿಕಿತ್ಸಾ ಶಿಬಿರವನ್ನು ನಡೆಸಲಾಯಿತು.. ಕಾರ್ಯಕ್ರಮವನ್ನು ಹಿರಿಯ ವೈದ್ಯರಾದ ಡಾl ಗೋಪಾಲಕೃಷ್ಣ ಭಟ್ ಸಂಕಬಿತ್ತಿಲು, ಉದ್ಘಾಟಿಸಿದರು. ರೋಟರಿ ಕ್ಲಬ್ ಸುರತ್ಕಲ್ ನ ಅಧ್ಯಕ್ಷರಾದ ರೊ. […]
Read More
06-07-2025, 1:58 PM
ಯುವವಾಹಿನಿ (ರಿ.) ಮಂಗಳೂರು ಘಟಕ: ಕ್ಯಾನ್ಸರ್ ಚಿಕಿತ್ಸಾ ಯೋಜನೆಗಳ ಕುರಿತು ಮಾಹಿತಿ ದಿನಾಂಕ 26-06-2025: ಯುವವಾಹಿನಿ (ರಿ.) ಮಂಗಳೂರು ಘಟಕದಲ್ಲಿ ಕ್ಯಾನ್ಸರ್ ಚಿಕಿತ್ಸಾ ಯೋಜನೆಗಳ ಕುರಿತು ಮಾಹಿತಿ ಕಾರ್ಯಗಾರ ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್ ಇದರ ಕಮ್ಯುನಿಟಿ ರಿಲೇಶನ್ ಆಫೀಸರಾದ ತ್ರೀವಿಕ್ರಮ್ ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟಿನಲ್ಲಿ ಕ್ಯಾನ್ಸರ್ ಚಿಕಿತ್ಸೆಗಾಗಿ ಲಭ್ಯವಿರುವ ವಿವಿಧ ಯೋಜನೆಗಳ ಮಾಹಿತಿಯನ್ನು ವಿವರವಾಗಿ ತಿಳಿಸಿದರು ಈ ಸಂದರ್ಭ ತ್ರಿವಿಕ್ರಮ್ ರವರನ್ನು ಘಟಕದ ವತಿಯಿಂದ ಗೌರವಿಸಲಾಯಿತು. ಅಧ್ಯಕ್ಷರಾದ ಅಶೋಕ್ ಅಂಚನ್ […]
Read More
18-12-2022, 3:40 PM
ಮಂಗಳೂರು:- ಮಂಗಳೂರು ಕೆಮಿಕಲ್ಸ್ ಆ್ಯಂಡ್ ಫರ್ಟಿಲೈಜರ್ಸ್ ಲಿಮಿಟೆಡ್ (ಎಂಸಿಎಫ್), ಪಣಂಬೂರು ಸಾರಥ್ಯದಲ್ಲಿ ಜಸ್ಟಿಸ್ ಕೆ.ಎಸ್.ಹೆಗ್ಡೆ ಚಾರಿಟೆಬಲ್ ಆಸ್ಪತ್ರೆ ದೇರಳಕಟ್ಟೆ, ಧೂಮಾವತಿ ಫ್ರೆಂಡ್ಸ್ ಸರ್ಕಲ್ ಕೃಷ್ಣಾಪುರ ಮತ್ತು ಯುವವಾಹಿನಿ ಸುರತ್ಕಲ್ ಘಟಕದ ಸಹಯೋಗದಲ್ಲಿ ದಿನಾಂಕ 18 ಡಿಸೆಂಬರ್ ಭಾನುವಾರದಂದು ನೇತ್ರ ತಪಾಸಣಾ ಉಚಿತ ಶಿಬಿರ ನಡೆಯಿತು. ಎಂಸಿಎಫ್ನ ಸಿಎಂ ಗಿರೀಶ್ ಅಧ್ಯಕ್ಷತೆ ವಹಿಸಿದ್ದರು. ಸಾರಾಳ ಧೂಮಾವತಿ ದೈವಸ್ಥಾನ ಅಧ್ಯಕ್ಷ ಹರೀಶ್ ಸುವರ್ಣ ಶಿಬಿರವನ್ನು ಉದ್ಘಾಟಿಸಿದರು. ಧೂಮಾವತಿ ಫ್ರೆಂಡ್ಸ್ ಸರ್ಕಲ್ ಅಧ್ಯಕ್ಷ ಅರುಣ್ ಅಂಚನ್, ಜಸ್ಟಿಸ್ ಕೆ.ಎಸ್.ಹೆಗ್ಡೆ ಚಾರಿಟೆಬಲ್ ಆಸ್ಪತ್ರೆಯ […]
Read More
04-09-2022, 2:09 PM
ಕೂಳೂರು :- ಯುವವಾಹಿನಿ (ರಿ.) ಕೂಳೂರು ಘಟಕ, ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ಫಲ್ಗುಣಿ, ಹಿಂದ್ ಕುಷ್ಟ್ ನಿವಾರಣ್ ಸಂಘ್ ಹಾಗೂ ರೆಡ್ ಕ್ರಾಸ್ ಸಂಸ್ಥೆ, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ದಿನಾಂಕ 04 ಸೆಪ್ಟೆಂಬರ್ 2022 ರಂದು ಬೃಹತ್ ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರವು ಫಲ್ಗುಣಿ ಸಭಾಂಗಣ ಕೂಳೂರುನಲ್ಲಿ ನಡೆಯಿತು. ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ ಭರತ್ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಯುವವಾಹಿನಿ ಮತ್ತು ಲಯನ್ಸ್ […]
Read More
10-08-2022, 1:50 PM
ಬಂಟ್ವಾಳ : ಆರೋಗ್ಯ ಮಾನವನ ಅತ್ಯಂತ ಶ್ರೇಷ್ಠ ಸಂಪತ್ತು, ಆಯುರ್ವೇದ ಔಷಧಿಗಳು ನಿಧಾನವಾದ ಪರಿಣಾಮ ಎಂಬುದು ಸತ್ಯಕ್ಕೆ ದೂರವಾದ ಮಾತು, ಋಷಿಮನಿಗಳ ಕಾಲದಿಂದಲೂ ನಾವು ಕೇಳಿ ತಿಳಿದುಕೊಂಡ ಹಾಗೂ ಯಾವುದೇ ಅಡ್ಡ ಪರಿಣಾಮಗಳು ಇಲ್ಲದ, ಆಯುರ್ವೇದ ಚಿಕಿತ್ಸೆ ಅತ್ಯಂತ ಪ್ರಯೋಜನಕಾರಿಯಾಗಿದೆ ಎಂದು ರೊಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ ಇದರ ಅಧ್ಯಕ್ಷೆ ಪಲ್ಲವಿ ಕಾರಂತ್ ತಿಳಿಸಿದರು. ಅವರು ದಿನಾಂಕ 10 ಆಗಸ್ಟ್ 2022 ರಂದು ಬಂಟ್ವಾಳ ತಾಲೂಕಿನ ಪಚ್ಚಿನಡ್ಕದಲ್ಲಿ ಯುವವಾಹಿನಿ ಬಂಟ್ವಾಳ ಘಟಕ, ಓಂ ಫ್ರೇಂಡ್ಸ್ ಪಚ್ಚಿನಡ್ಕ ಹಾಗೂ ರೋಟರಿ […]
Read More