
22-01-2017, 12:38 PM
ದಿನಾಂಕ 22-1-2017 ರಂದು ಯುವವಾಹಿನಿ (ರಿ) ಪುತ್ತೂರು ಘಟಕದ ನೇತೃತ್ವದಲ್ಲಿ ಕೇಂದ್ರ ಸಮಿತಿಯ ಸಹಯೋಗದಲ್ಲಿ ನರಿಮೊಗರು ಗ್ರಾಮ ಸಮಿತಿ ಉದ್ಘಾಟನಾ ಸಮಾರಂಭ ಮತ್ತು ಉಚಿತ ವೈದ್ಯಕೀಯ ಶಿಬಿರ ನಡೆಯಿತು. ಪುತ್ತೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಜಯಂತ ನಡುಬೈಲುರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಹತ್ತು ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಪುತ್ತೂರಿನ ಯುವಕರನ್ನೊಳಗೊಂಡ ಯುವವಾಹಿನಿಯು ಇಂದು ಮನೆ ಮಾತಾಗಿದ್ದರೆ ಅದು ಯುವವಾಹಿನಿ ಸದಸ್ಯರಲ್ಲಿನ ಸ್ವಾರ್ಥ ರಹಿತ ಸ್ವಾಭಿಮಾನಿ ಬದುಕಿನಿಂದ ಮಾತ್ರ ಸಾಧ್ಯವಾಗಿದೆ ಎಂದು ತಿಳಿಸಿದರು. ವೇದಿಕೆಯಲ್ಲಿ ನರಿಮೊಗರು ಗ್ರಾಮ […]
Read More

22-01-2017, 11:42 AM
ಶ್ರೀ ನಾರಾಯಣಗುರು ಸೇವಾದಳ, (ಬಿಲ್ಲವ ಸಮಾಜ ಸೇವಾ ಸಂಘ ಮೂಲ್ಕಿ, ಯುವವಾಹಿನಿ (ರಿ) ಮೂಲ್ಕಿ ಘಟಕದ ಹಾಗೂ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಇದರ ಜಂಟಿ ಸಹಭಾಗಿತ್ವದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರವು ದಿನಾಂಕ 22-01-2017 ರಂದು ಮೂಲ್ಕಿ ಬಿಲ್ಲವ ಸಂಘದಲ್ಲಿ ಜರಗಿರುತ್ತದೆ. ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಇದರ ಖ್ಯಾತ ಹೃದಯರೋಗ ತಜ್ಞ ಡಾ| ಸುಬ್ರಹ್ಮಣ್ಯಮ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಗೋಪಿನಾಥ ಪಡಂಗ ಕಾರ್ಯಕ್ರಮ ಅಧ್ಯಕ್ಷತೆಯನ್ನು ವಹಿಸಿದ್ದರು. […]
Read More

14-01-2017, 12:41 PM
ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 14-1-2017 ರಂದು ಕೂಳೂರಿನ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರದ ಸಭಾಂಗಣದಲ್ಲಿ ಸುವರ್ಣ ಆರೋಗ್ಯಕ್ಕೆ ಸುರಕ್ಷಾ ಯೋಜನೆಗಳು ಎಂಬ ಮಾಹಿತಿ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಸುವರ್ಣ ಆರೋಗ್ಯ ಸುರಕ್ಷಾ ಯೋಜನೆಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸಂಯೋಜಕರಾದ ಜಗನ್ನಾಥ್ ಶಿರ್ಲಾಲ್ರವರು ಆರೋಗ್ಯ ಸುರಕ್ಷಾ ಯೋಜನೆಯ ಬಗ್ಗೆ ಮಾಹಿತಿಯನ್ನು ನೀಡಿದರು. ಸರಕಾರದಿಂದ ಆರೋಗ್ಯಕ್ಕೆ ಸಂಬಂಧಿಸಿದಂತೆ ಅನೇಕ ಸುರಕ್ಷಾ ಯೋಜನೆಗಳಿದ್ದು, ಆಯೋಜನೆಗಳ ಬಗ್ಗೆ ಸರಿಯಾದ ಮಾಹಿತಿಯನ್ನು ಜನರು […]
Read More

05-10-2016, 5:48 AM
ದಿನಾಂಕ 5-10-2016 ರಂದು ಕೂಳೂರು ಘಟಕದ ವತಿಯಿಂದ ಕೂಳೂರಿನ ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರದ ಸಭಾಂಗಣದಲ್ಲಿ ಆರೋಗ್ಯದ ಬಗ್ಗೆ ಮಾಹಿತಿ ಶಿಬಿರ ಜರಗಿತು. ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಮೂತ್ರರೋಗ ತಜ್ಞರಾದ ಡಾ. ಸದಾನಂದ ಪೂಜಾರಿಯವರು ಭಾಗವಹಿಸಿ ಮೂತ್ರರೋಗಗಳ ಬಗ್ಗೆ, ಕಿಡ್ನಿ ವಿಫಲತೆಯ ಕಾರಣಗಳು ಹಾಗೂ ಮೂತ್ರರೋಗವನ್ನು ಯಾವ ರೀತಿಯಲ್ಲಿ ತಡೆಗಟ್ಟಬಹುದು ಎಂಬ ಸಂಪೂರ್ಣ ಅರಿವನ್ನು ಸಭೆಗೆ ನೀಡಿದರು. ಈ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡಿದ ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷ ಸಂಜೀವ ಪೂಜಾರಿಯವರನ್ನು ಸಭೆಯಲ್ಲಿ ವಂದಿಸಲಾಯಿತು. ಆರೋಗ್ಯ […]
Read More

09-08-2009, 12:11 PM
ಯುವವಾಹಿನಿ ಬಂಟ್ವಾಳ ತಾಲೂಕು ಘಟಕವು 2008-09 ನೇ ಸಾಲಿನಲ್ಲಿ ಘಟಕದ ಅದ್ಯಕ್ಷ ಬಿ.ಶ್ರೀಧರ ಅಮೀನ್ ನೇತೃತ್ವದಲ್ಲಿ ಬಂಟ್ವಾಳ ತಾಲೂಕಿನಾದ್ಯಂತ 22 ಉಚಿತ ನೇತ್ರ ಶಸ್ತ್ರಚಿಕಿತ್ಸಾ ಶಿಬಿರ ಹಾಗೂ ಹಲವು ಕಡೆಗಳಲ್ಲಿ ವೆನ್ಲಾಕ್ ಆಸ್ಪತ್ರೆಯ ಬ್ಲಡ್ ಬ್ಯಾಂಕಿನ ಮೂಲಕ ರಕ್ತದಾನ ಶಿಬಿರಗಳನ್ನು ನಡೆಸಿದ್ದಕ್ಕಾಗಿ ಕರ್ನಾಟಕ ಸರಕಾರದ ಆರೋಗ್ಯ ಇಲಾಖೆಯು ಪ್ರಶಸ್ತಿ ಪತ್ರ ನೀಡಿ ಗೌರವಿಸಿದೆ. ಈ ಪ್ರಶಸ್ತಿ ಪತ್ರವನ್ನು ಬಂಟ್ವಾಳ ಕ್ಷೇತ್ರದ ಶಾಸಕರಾದ ಬಿ. ರಮಾನಾಥ ರೈ ಹಸ್ತಾಂತರಿಸಿದರು.
Read More