03-01-2026, 11:00 PM
ಸುರತ್ಕಲ್ : ಯುವವಾಹಿನಿ (ರಿ) ಸುರತ್ಕಲ್ ಘಟಕದ ವತಿಯಿಂದ ಎರಡು ದಿನಗಳ ಸಂಘಟನಾ ಪ್ರವಾಸವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ದಿನಾಂಕ 03.01.2026ರಂದು ಸುರತ್ಕಲ್ ಬಸ್ಸ್ಟ್ಯಾಂಡ್ನಿಂದ ಪ್ರಯಾಣ ಆರಂಭಿಸಿದ ತಂಡವು ಸೂರ್ಮನೆ ವಾಟರ್ಫಾಲ್, ಹೊರನಾಡು ದೇವಸ್ಥಾನ, ಕ್ಯಾತನಮಕ್ಕಿ ರೆಸಾರ್ಟ್ ಹಾಗೂ ಸನ್ಸೆಟ್ ಪಾಯಿಂಟ್ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿತು. ದಿನಪೂರ್ತಿ ಪ್ರವಾಸಿ ಸ್ಥಳಗಳನ್ನು ವೀಕ್ಷಿಸಿದ ನಂತರ ತಂಡವು ರೆಸಾರ್ಟ್ನಲ್ಲಿ ವಿಶ್ರಾಂತಿ ಪಡೆದುಕೊಂಡಿತು. ಮರುದಿನ ಬೆಳಗಿನ ಉಪಹಾರ ಹಾಗೂ ಮಧ್ಯಾಹ್ನದ ಊಟ ಮುಗಿಸಿ, ಹಿಂತಿರುಗುವ ಸಂದರ್ಭದಲ್ಲಿ ದಾರಿಮಧ್ಯೆ ಕಂಡುಬಂದ […]
Read More
30-12-2025, 7:31 AM
ಬೆಳ್ತಂಗಡಿ: ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಹಾಗೂ ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ, ಬೆಳ್ತಂಗಡಿ ತಾಲೂಕು ಇವರ ಸಹಕಾರದೊಂದಿಗೆ ದಿನಾಂಕ 30-12-2025ರಂದು ಸಂಭ್ರಮ ಯುವವಾಹಿನಿ ಕುಟುಂಬದ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಘಟಕದ ನಿರ್ದೇಶಕ ಸೌಮ್ಯ ಲಾಯಿಲಾ ಅವರ “ಕನಸು” ನಿವಾಸದಲ್ಲಿ ಯುವವಾಹಿನಿ ಕುಟುಂಬ ಸದಸ್ಯರ ಭಾಗವಹಿಸುವಿಕೆಯೊಂದಿಗೆ ನಡೆಯಿತು. ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ಅವರ ಅಧ್ಯಕ್ಷತೆಯಲ್ಲಿ ಆರಂಭವಾದ ಕಾರ್ಯಕ್ರಮವನ್ನು ಹಿರಿಯರಾದ ಗಿರಿಧರ ಪೂಜಾರಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಘಟಕದ ಸ್ಥಾಪಕ ಅಧ್ಯಕ್ಷ ರಾಕೇಶ್ ಕುಮಾರ್ ಮೂಡುಕೋಡಿ, […]
Read More
22-10-2025, 3:13 PM
ಬಿಲ್ಲವ ಸಂಘ (ರಿ.) ವಿಟ್ಲ, ಬಿಲ್ಲವ ಮಹಿಳಾ ಘಟಕ ಹಾಗೂ ಘಟಕದ ವತಿಯಿಂದ ಕಾರ್ಯಕ್ರಮ ದಿನಾಂಕ 20/07/2025 ನೇ ಭಾನುವಾರ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ವಿಟ್ಲದಲ್ಲಿ ನಡೆಯಿತು ಕಾರ್ಯಕ್ರಮದಲ್ಲಿ sslc ಮತ್ತು puc ಯಲ್ಲಿ ಶೇಕಡಾ 95% ಗಿಂತ ಅಧಿಕ ಅಂಕ ಪಡೆದ 9 ವಿದ್ಯಾರ್ಥಿಗಳನ್ನು ಗುರುತಿಸಲಾಯಿತು ಮತ್ತು ಸದಸ್ಯರು ತಯಾರಿಸಿದ ಆಟಿ ತಿಂಗಳ ಬಗ್ಗೆ ಬಗೆಯ ತಿಂಡಿಗಳನ್ನು ಪ್ರದರ್ಶನ ಬಳಿಕ ಎಲ್ಲರಿಗೂ ಬಡಿಸಲಾಯಿತು ಈ ಸಂದರ್ಭದಲ್ಲಿ ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು
Read More
19-09-2025, 7:45 AM
ಸಂಪರ್ಕದ ನಿಟ್ಟಿನಲ್ಲಿ ಕುಟುಂಬ ಸಂಪರ್ಕ ನಿರ್ದೇಶಕರಾದ ಸುಜಾತ ರವರ ಸಂಚಾಲಕತ್ವದಲ್ಲಿ ದಿನಾಂಕ 11-08-2025 ರಂದು ಸು ಪ್ರಮ್ ಸೋ ಚಲನಚಿತ್ರ ವೀಕ್ಷಣೆಗೆ ಹೋಗಲಾಗಿತ್ತು. 51 ಜನ ಸದಸ್ಯರ ತಂಡ ಚಲನಚಿತ್ರ ವೀಕ್ಷಣೆ ಮಾಡಿದೆವು.
Read More
27-08-2022, 2:06 PM
ಮಂಗಳೂರು:- ದಿನಾಂಕ 27 ಮತ್ತು 28ರ ಆಗಸ್ಟ್ 2022ರಂದು ಚಿಕ್ಕಮಗಳೂರಿಗೆ ಕಿರು ಪ್ರವಾಸವನ್ನು ಮಂಗಳೂರು ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಪ್ರವಾಸಿ ತಾಣಗಳಾದ ಕೊಟ್ಟಿಗೆಹಾರ, ಬಾಬಾಬುಡನಗಿರಿ, ದತ್ತಪೀಠ, ಝರಿ ವಾಟರ್ ಪಾಲ್ಸ್, ಮಾಣಿಕ್ಯಧಾರ, ಮುಳ್ಳಯ್ಯನ ಗಿರಿ ಬೆಟ್ಟ ಹಾಗೂ ಸುಂದರ ಪ್ರಕೃತಿಯ ಮಡಿಲಲ್ಲಿರುವ ಆಶ್ರಯ ತಾಣ ಜಪ್ಪದ್ ಕಲ್ಲು ರೆಸಾರ್ಟಿನಲ್ಲಿ ಕ್ಯಾಂಪ್ ಫ್ಯೆರ್, ರೋಪ್ ವೇ, ಸ್ವಿಮ್ಮಿಂಗ್ ಪೂಲ್, ಕ್ರಿಕೆಟ್ ಮ್ಯಾಚ್, ಮ್ಯೂಸಿಕಲ್ ಡ್ಯಾನ್ಸ್ ಮುಂತಾದ ಮನೋರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. 40 ಜನ ಹಿರಿಯರು ಮತ್ತು ನಾಲ್ಕು ಮಂದಿ […]
Read More
06-06-2022, 3:01 PM
ಯುವವಾಹಿನಿ(ರಿ) ಕಡಬ ಘಟಕ ಹಾಗೂ ವಿದ್ಯಾ ಚೇತನ ವಿಶೇಷ ಮಕ್ಕಳ ಶಾಲೆ ರಾಮಕುಂಜ ಇದರ ಸಹಯೋಗದಲ್ಲಿ ವಿಶೇಷ ಮಕ್ಕಳ ಸಂವಾದ ಕಾರ್ಯಕ್ರಮವು 06 ಜೂನ್ 2022 ನೇ ಸೋಮವಾರ ವಿದ್ಯಾ ಚೇತನ ವಿಶೇಷ ಮಕ್ಕಳ ಶಾಲೆ ರಾಮಕುಂಜ ಇಲ್ಲಿ ನಡೆಯಿತು. ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶರವೂರು ಇದರ ವ್ಯವಸ್ಥಾಪನ ಸಮಿತಿ ಸದಸ್ಯರಾದ ಮಂಜುಳಾ ಕೆ, ಸಿ ಎಂಡೋಪೀಡಿತ ಮಕ್ಕಳನ್ನು ನೋಡಿಕೊಳ್ಳಲು ಸರಕಾರವು ಐದು ಎಕರೆ ಜಮೀನನ್ನು ಆಲಂಕಾರ್ ನಲ್ಲಿ ನಿಗದಿಪಡಿಸಿದೆ, ನಿಗದಿಪಡಿಸಿದ […]
Read More
16-05-2022, 1:43 PM
ದಿನಾಂಕ 01.05.2022 ರಂದು “ಯುವವಾಹಿನಿ ಕುಟುಂಬ ಸಮ್ಮಿಲನ 2022” ಕಾರ್ಯಕ್ರಮವನ್ನು ಕುಳಾಯಿ ವಿಷ್ಣು ಮೂರ್ತಿ ದೇವಸ್ಥಾನದ ಪರಿಸರದ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಅಂತಾರಾಷ್ಟ್ರೀಯ ಮಟ್ಟದ ಪವರ್ ಲಿಫ್ಟ್ ರ್ ಹಾಗೂ ವೈಟ್ ಲಿಫ್ಟರ್ ಸುಪ್ರಿತಾ ಪೂಜಾರಿಯವರು ಚಾಲನೆ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಘಟಕದ ಅಧ್ಯಕ್ಷರಾದ ಶ್ರೀ ರವಿ ಅಮೀನ್ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಘಟಕದ ಸದಸ್ಯರಾದ ಯಶಸ್ವಿನಿ, ಜಯಶ್ರೀ, ಕೀರ್ತಿ ಹಾಗೂ ಕುಮಾರಿ ಅಕ್ಷಿತಾ ರವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಶುಭಾರಂಭಗೊಂಡಿತು. ಈ ಕಾರ್ಯಕ್ರಮದಲ್ಲಿ ಘಟಕದ […]
Read More
05-05-2022, 4:44 PM
ಕೂಳೂರು ಘಟಕದ ವತಿಯಿಂದ ಯುವವಾಹಿನಿಯ ಎಲ್ಲಾ ಸದಸ್ಯರ ಸಂಪರ್ಕ ಹಾಗೂ ಉತ್ತಮ ಭಾಂದವ್ಯಕ್ಕಾಗಿ ಯುವವಾಹಿನಿ (ರಿ.) ಕೂಳೂರು ಘಟಕದ ಸ್ನೇಹ ಸಮ್ಮಿಲನ 2022 ಕಾರ್ಯಕ್ರಮವು ದಿನಾಂಕ 15-05-2022 ರಂದು ಪಡುಬಿದ್ರಿ ಬ್ಲೂ ಪ್ಲ್ಲಾಗ್ ಬೀಚ್ ನಲ್ಲಿ ನಡೆಯಿತು. ಘಟಕದ ಅಧ್ಯಕ್ಷರಾದ ದೀಕ್ಷೀತ್ ಸಿ ಎಸ್ ಎಲ್ಲರನ್ನೂ ಸ್ವಾಗತಿಸಿದರು. ಪಡುಬಿದ್ರಿ ಘಟಕದ ಅಧ್ಯಕ್ಷರಾದ ಯಶೋಧರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಸ್ನೇಹ ಮಿಲನ 2022 ಉತ್ತಮ ರೀತಿಯಲ್ಲಿ ಸಾಗಲಿ ಎಂದು ಶುಭ ಹಾರೈಸಿದರು. ನಂತರ ಮಾಜಿ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ರವರ […]
Read More
20-11-2019, 3:21 PM
ಯುವವಾಹಿನಿ ಕೂಳೂರು ಘಟಕದ ವತಿಯಿಂದ ಸ್ನೇಹ ಸಮ್ಮಿಲನ 2019 ಕಾರ್ಯಕ್ರಮವು ದಿನಾಂಕ 17.11.19 ರಂದು ಬಡ್ಡ ಕುದುರು ಮರಕಡ ಇಲ್ಲಿ ನಡೆಯಿತು. ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಸದಸ್ಯರ ತಂಡ ಮರವೂರು ತಲುಪಿ, ಅಲ್ಲಿಂದ ದೋಣಿಯ ಮೂಲಕ ಕುದುರು ತಲುಪಿದೆವು. 10 ಗಂಟೆಗೆ ಸರಿಯಾಗಿ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಮ್ಮ ಘಟಕದ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅಲ್ಲಿನ ಸ್ಥಳೀಯರಾದ ಸದಾಶಿವ ಪೂಜಾರಿ ಹಾಗೂ ಭುಜಂಗ ರವರು ಇದ್ದರು. ಕಾರ್ಯಕ್ರಮದಲ್ಲಿ […]
Read More
20-11-2019, 3:00 PM
ಯುವವಾಹಿನಿ (ರಿ) ಮಂಗಳೂರು ಘಟಕದ ವಾರ್ಷಿಕ ಕ್ರೀಡಾಕೂಟ – 2019 ದಿನಾಂಕ 17.11.2019ರ ಭಾನುವಾರದಂದು ಪ್ರಪ್ರಥಮ ಬಾರಿಗೆ ಯುವವಾಹಿನಿ (ರಿ) ಮಂಗಳೂರು ಘಟಕದ ವಾರ್ಷಿಕ ಕ್ರೀಡಾಕೂಟ – 2019 ನಗರದ ಹೊರವಲಯದಲ್ಲಿರುವ ಪದವು ಮೈದಾನ ದಲ್ಲಿ ನಡೆಯಿತು. ಕ್ರೀಡಾಕೂಟವು ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಯುವ ಉದ್ಯಮಿ, ಗೆಜ್ಜೆಗಿರಿ ನಂದನ ಬಿತ್ತಿಲ್ ನ ಪ್ರದಾನ ಕೋಶಾಧಿಕಾರಿಯವರಾದ ಶ್ರೀಯುತ ದೀಪಕ್ ಕೋಟ್ಯಾನ್ ರವರು ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸಿ, ವಾಲಿಬಾಲ್ ಮತ್ತು ಕ್ರೀಕೆಟ್ ಆಡುವ ಮೂಲಕ ಕ್ರೀಡಾ […]
Read More