Yuvavahini

ಮಾಹಿತಿ

ಉಚಿತ ಆರಿ ಕೌಶಲ್ಯ ತರಬೇತಿ

ಮೂಡುಬಿದಿರೆ: ಯುವವಾಹಿನಿ (ರಿ) ಮೂಡುಬಿದಿರೆ ಘಟಕ, ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಬ್ಯಾಂಕ್ ಅಫ್ ಬರೋಡಾ ಮೂಡುಬಿದಿರೆ ಶಾಖೆ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ವಿಚೀಸ್ ಕೌಶಲ್ಯ ಕೇಂದ್ರ ಮೂಡುಬಿದಿರೆ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ 15 ದಿನಗಳ ಉಚಿತ ಆರಿ ಕೌಶಲ್ಯ ತರಬೇತಿಯ ಸಮಾರೋಪ ಸಮಾರಂಭವು ದಿನಾಂಕ 17/04/2026 ರಂದು ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನೆರವೇರಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಜ್ಯೋತಿರಾಜ್ ಅವರು ಮಾತನಾಡಿ, ಮಹಿಳೆಯರು ಆರಿ ಕೌಶಲ್ಯವನ್ನು ಅಳವಡಿಸಿಕೊಂಡರೆ ಸ್ವ […]

Read More

ಅಂಬೇಡ್ಕರ್, ನಾರಾಯಣ ಗುರು ತತ್ವಾದರ್ಶಗಳಲ್ಲಿ ಸಾಮ್ಯತೆ: ಸುನಿಲ್ ಕುಮಾರ್ ಬಜಾಲ್

ಮಂಗಳೂರು : ಯುವವಾಹಿನಿ ಮಂಗಳೂರು ಘಟಕದ ವತಿಯಿಂದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ 14.04.2026 ರಂದು ಮಂಗಳೂರು ಯುವವಾಹಿನಿ ಸಭಾಂಗಣದಲ್ಲಿ ನಡೆಯಿತು ನಡೆಯಿತು. ಈ ಸಂದರ್ಭದಲ್ಲಿ ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಮುಖ್ಯ ಭಾಷಣಕಾರರಾದ ಸುನಿಲ್ ಕುಮಾರ್ ಬಜಾಲ್ ಅವರು ಮಾತನಾಡಿ, ಅಸ್ಪೃಶ್ಯತೆಯ ವಿರುದ್ಧ ಹೋರಾಡಿದ ಡಾ. ಅಂಬೇಡ್ಕರ್ ಅವರ ಜೀವನ ಹಾಗೂ ಶಿಕ್ಷಣದ ಹಂಬಲವು ಎಲ್ಲರಿಗೂ ಮಾದರಿಯಾಗಿದೆ. ಅಂಬೇಡ್ಕರ್ ಎಂದರೆ ಸಂವಿಧಾನ ಶಿಲ್ಪಿ ಹಾಗೂ ದಲಿತರ ಪರ ಹೋರಾಟಗಾರ […]

Read More

ಸೈಬರ್ ಅಪರಾಧಗಳ ಬಗ್ಗೆ ಜಾಗೃತರಾಗಿರಿ: ವೇಣುಗೋಪಾಲ್

ಮಂಗಳೂರು: ಇಂದಿನ ಡಿಜಿಟಲ್ ಯುಗದಲ್ಲಿ ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ವಿದ್ಯಾವಂತರು ಅತ್ಯಂತ ಜಾಗರೂಕರಾಗಿ ಇರಬೇಕು ಎಂದು ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಉರ್ವ ಪೊಲೀಸ್ ಠಾಣೆಯ ಎ.ಎಸ್.ಐ ವೇಣುಗೋಪಾಲ್ ಅವರು ತಿಳಿಸಿದರು. ಅವರು ಏಪ್ರಿಲ್ 7 ರಂದು ಉರ್ವಸ್ಟೋರ್‌ನ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಆಯೋಜಿಸಲಾಗಿದ್ದ ಸೈಬರ್ ಕ್ರೈಮ್ ಹಾಗೂ ಮಾದಕವಸ್ತುಗಳ ಕುರಿತು ಮಾಹಿತಿ ಕಾರ್ಯಾಗಾರ”ದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ಜಾಗೃತಿಯೇ ರಕ್ಷಾಕವಚ:ಸೈಬರ್ ಅಪರಾಧಗಳ ಜಾಲದ […]

Read More

ಕರ್ತವ್ಯ ತಿಳಿದು ಕಾರ್ಯನಿರ್ವಹಿಸಿದಾಗ ಸಂಘಟನೆ ಬಲಿಷ್ಠ : ವಿದ್ಯಾ ರಾಕೇಶ್

ಬಜಪೆ : ಯುವವಾಹಿನಿ ಸಂಸ್ಥೆಯ ಬೆಳವಣಿಗೆಗೆ ಬೈಲಾ (ಉಪನಿಬಂಧನೆ) ಮಹತ್ವದ ಆಧಾರವಾಗಿದ್ದು, ಪ್ರತಿಯೊಬ್ಬ ಸದಸ್ಯರೂ ತನ್ನ ಕರ್ತವ್ಯ ಹಾಗೂ ಜವಾಬ್ದಾರಿಗಳನ್ನು ಸ್ಪಷ್ಟವಾಗಿ ಅರಿತು ಕಾರ್ಯನಿರ್ವಹಿಸಿದಾಗ ಮಾತ್ರ ಸಂಘಟನೆ ಮತ್ತಷ್ಟು ಬಲಿಷ್ಠವಾಗುತ್ತದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷರಾದ ವಿದ್ಯಾ ರಾಕೇಶ್ ಹೇಳಿದರು. ಅವರು ಯುವವಾಹಿನಿ ಬಜಪೆ ಘಟಕದ ನೂತನ ಕಾರ್ಯಕಾರಿ ಸಮಿತಿ ಸದಸ್ಯರಿಗೆ ನಡೆದ ಮಾಹಿತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಯುವವಾಹಿನಿ ಸಂಘಟನೆಯ ಹಿನ್ನೆಲೆ, ಅದರ ಉದ್ದೇಶಗಳು ಹಾಗೂ ಘಟಕದ ಪದಾಧಿಕಾರಿಗಳು, ನಿರ್ದೇಶಕರು ಮತ್ತು […]

Read More

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ ಹೇಳಿದರು. ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ, ಯುವವಾಹಿನಿ (ರಿ.) ಕೊಲ್ಯ ಘಟಕದ ಆತಿಥ್ಯದಲ್ಲಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ “ಸಖೀ […]

Read More

ಯುವವಾಹಿನಿ ‘ವಿಕಾಸ 2026’: ದಕ್ಷ ನಾಯಕತ್ವ ಹಾಗೂ ಶಿಸ್ತಿನಿಂದ ಸಂಘಟನೆ ಬಲವರ್ಧನೆ

ಮಂಗಳೂರು : “ಸಂಘಟನೆಯ ಯಶಸ್ಸು ಕೇವಲ ಅಧಿಕಾರ ಚಲಾಯಿಸುವುದರಲ್ಲಿಲ್ಲ, ಬದಲಾಗಿ ಎಲ್ಲರನ್ನೂ ಒಗ್ಗೂಡಿಸಿ ದಕ್ಷ ನಿರ್ಧಾರಗಳನ್ನು ತೆಗೆದುಕೊಳ್ಳುವ ನಾಯಕತ್ವದ ಮೇಲಿದೆ” ಎಂದು ಆಪ್ತ ಸಮಾಲೋಚಕರು, ತರಬೇತುದಾರರಾದ ಸ್ಮಿತೇಶ್ ಎಸ್ ಬಾರ್ಯ ಅಭಿಪ್ರಾಯಪಟ್ಟರು. ಅವರು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮತ್ತು ಮಂಗಳೂರು ಘಟಕದ ಆತಿಥ್ಯದಲ್ಲಿ ಯೆಯ್ಯಾಡಿಯ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಮಾರ್ಚ್ 1, ಭಾನುವಾರ ಆಯೋಜಿಸಲಾಗಿದ್ದ ಯುವವಾಹಿನಿ ಘಟಕಗಳ ಪದಾಧಿಕಾರಿಗಳ ಮತ್ತು ಸದಸ್ಯರ ತರಬೇತಿ ಕಾರ್ಯಾಗಾರ ‘ವಿಕಾಸ 2026’ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ […]

Read More

ಬ್ಯಾಂಕಿಂಗ್ ಹಾಗೂ ಸೌರ ಶಕ್ತಿ ಜೀವನೋಪಾಯ ಕುರಿತು ಮಾಹಿತಿ ಶಿಬಿರ

ಕೊಲ್ಯ: ದಿನಾಂಕ 25-02-2026ರಂದು TMG ಸುನಿಧಿ ಫೌಂಡೇಶನ್ ಟ್ರಸ್ಟ್, ಭಾರತೀಯ ವಿಕಾಸ ಟ್ರಸ್ಟ್ ಇವರ ಸಂಯುಕ್ತ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಕೊಲ್ಯ ಘಟಕದ ಸಹಕಾರದಲ್ಲಿ ಆರ್ಥಿಕ ಸಾಕ್ಷರತೆ, ಬ್ಯಾಂಕಿಂಗ್ ಸೌಲಭ್ಯಗಳು ಹಾಗೂ ಸೌರ ಶಕ್ತಿ ಆಧಾರಿತ ಜೀವನೋಪಾಯ ಯಂತ್ರಗಳ ಕುರಿತು ಮಾಹಿತಿ ಕಾರ್ಯಕ್ರಮವು ಬಿಲ್ಲವ ಸೇವಾ ಸಮಾಜ, ಕೊಲ್ಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ) ಕೊಲ್ಯ ಘಟಕದ ಪ್ರಥಮ ಉಪಾಧ್ಯಕ್ಷರಾದ ಜೀವನ್ ಕೊಲ್ಯ ಮಾತನಾಡಿ, ಪ್ರತಿಯೊಬ್ಬ ನಾಗರಿಕರೂ ಹಣಕಾಸು ಸಾಕ್ಷರತೆ, ಬ್ಯಾಂಕಿಂಗ್ ಸೌಲಭ್ಯಗಳು, ಕೌಶಲ್ಯ […]

Read More

ಯುವ ಸಂದೇಶ–2026 : ರಸ್ತೆ ಸುರಕ್ಷತಾ ಜಾಥಾ ಯಶಸ್ವಿ

ಉಪ್ಪಿನಂಗಡಿ : ಯುವಜನರ ನಿರ್ಲಕ್ಷ್ಯ ಮನೋಭಾವದಿಂದ ರಸ್ತೆ ಅಪಘಾತಗಳು ಹೆಚ್ಚುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಮತ್ತು ಎಚ್ಚರಿಕೆಯಿಂದ ವಾಹನ ಚಲಾಯಿಸುವುದು ನಮ್ಮನ್ನು ಮಾತ್ರವಲ್ಲದೆ ನಮ್ಮನ್ನು ನಿರೀಕ್ಷಿಸುತ್ತಿರುವ ಮನೆಯವರನ್ನೂ ರಕ್ಷಿಸುತ್ತದೆ. ತಮ್ಮನ್ನು ತಾವು ರಕ್ಷಿಸಿಕೊಳ್ಳುವುದು ಯುವಜನತೆ ತಮ್ಮ ಹೆತ್ತವರಿಗೆ ನೀಡುವ ಅತಿ ದೊಡ್ಡ ಕೊಡುಗೆ ಎಂದು ಬಂಟ್ವಾಳ ಪ್ರಾದೇಶಿಕ ಸಾರಿಗೆ ಕಚೇರಿಯ ಹಿರಿಯ ಅಧಿಕಾರಿ ಚರಣ್ ಕೆ.ಎಸ್ ಅಭಿಪ್ರಾಯಪಟ್ಟರು. ಅವರು ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ 15.02.2026 […]

Read More

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ‘ಸಖೀ ಸಂವಾದ’ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಇವರಿಗೆ ಆಹ್ವಾನ

ಮಂಗಳೂರು : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಮಾರ್ಚ್ 14ರಂದು ಮಂಗಳೂರು ಪುರಭವನದಲ್ಲಿ ನಡೆಯಲಿರುವ ವಿಶ್ವ ಮಹಿಳಾ ದಿನಾಚರಣೆಯ ವಿಶೇಷ ಕಾರ್ಯಕ್ರಮ “ಸಖೀ ಸಂವಾದ”ಕಾರ್ಯಾಗಾರಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರನ್ನು ಗೌರವಪೂರ್ವಕವಾಗಿ ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ವಿವಿಧ ಸಮಾಜಮುಖಿ ಕಾರ್ಯಕ್ರಮಗಳು, ಯುವಜನತೆ ಹಾಗೂ ಮಹಿಳಾ ಸಬಲೀಕರಣಕ್ಕಾಗಿ ಕೈಗೊಳ್ಳಲಾಗುತ್ತಿರುವ ಚಟುವಟಿಕೆಗಳ ಕುರಿತು ಕಮಿಷನರ್ ಅವರಿಗೆ ವಿವರಿಸಲಾಯಿತು. […]

Read More

ಜ್ಞಾನದ ಬೆಳಕಲ್ಲಿ ವಿದ್ಯಾರ್ಥಿಗಳ ಭವಿಷ್ಯ ಅರಳುತ್ತದೆ : ವಿಧ್ಯಾ ರಾಕೇಶ್

ಹೆಜಮಾಡಿ : ವಿದ್ಯೆಯೇ ಯುವವಾಹಿನಿಯ ಪ್ರಮುಖ ಧ್ಯೇಯವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ಜ್ಞಾನದ ಬೆಳಕಿನಲ್ಲಿ ತೊಡಗಿಸಿಕೊಂಡರೆ ಭವಿಷ್ಯವು ಸುಂದರವಾಗಿ ಅರಳುತ್ತದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷರಾದ ವಿಧ್ಯಾ ರಾಕೇಶ್ ಹೇಳಿದರು. ಹೆಜಮಾಡಿ ಘಟಕವು ಕಳೆದ ಹನ್ನೊಂದು ವರ್ಷಗಳಿಂದ ನಿರಂತರವಾಗಿ ಈ ಶೈಕ್ಷಣಿಕ ಕಾರ್ಯಕ್ರಮವನ್ನು ಹಮ್ಮಿಕೊಂಡು ಬರುತ್ತಿರುವುದು ಸಂತೋಷದ ವಿಷಯವಾಗಿದ್ದು, ಮುಂದೆಯೂ ಮಕ್ಕಳ ಭವಿಷ್ಯ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು. ಅವರು ಯುವವಾಹಿನಿ(ರಿ.) ಹೆಜಮಾಡಿ ಘಟಕ ಹಾಗೂ ಸ್ವರ್ಣ ಸೌಹಾರ್ದ ಸಹಕಾರಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!