23-06-2026, 1:00 PM
ಮೂಡುಬಿದಿರೆ, ಜೂನ್ 23: ಯುವವಾಹಿನಿ (ರಿ.) ಮೂಡುಬಿದರೆ ಘಟಕ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ್ ಹಾಗೂ ವೀಚೀಸ್ ಕೌಶಲ್ಯಪರ ತರಬೇತಿ ಕೇಂದ್ರ ಮೂಡುಬಿದರೆ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ 5 ದಿನಗಳ ಉಚಿತ ಸೀರೆ ಕುಚ್ಚು ಕೌಶಲ್ಯ ತರಬೇತಿ ಕಾರ್ಯಕ್ರಮವು ಮಂಗಳವಾರ ಮೂಡುಬಿದರೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾಂಗಣದಲ್ಲಿ ಉದ್ಘಾಟನೆಯಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಕ್ರೀಡಾ ನಿರ್ದೇಶಕರಾದ ಶಂಕರ್ ಕೋಟ್ಯಾನ್ ಅವರು ಮಾತನಾಡಿ, “ಹೊಲಿಗೆ ಕಲಿತ ಮಹಿಳೆಯರು […]
Read More
22-06-2026, 11:00 AM
ಸುರತ್ಕಲ್ ಜೂನ್ 22: ಮಕ್ಕಳ ಸುರಕ್ಷತೆ, ಪೋಕ್ಸೋ ಕಾಯಿದೆಯ ಅರಿವು, ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳು ಹಾಗೂ ಮೊಬೈಲ್ ಬಳಕೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಯುವವಾಹಿನಿ (ರಿ.) ಸುರತ್ಕಲ್ ಘಟಕದ ವತಿಯಿಂದ ಶ್ರೀ ಮಹಾಲಿಂಗೇಶ್ವರ ಆಂಗ್ಲ ಮಾಧ್ಯಮ ಶಾಲೆ, ಸುರತ್ಕಲ್ನಲ್ಲಿ ಜಾಗೃತಿ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸುರತ್ಕಲ್ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ರಘು ನಾಯ್ಕ್ ಅವರು ಮಾತನಾಡಿ, “ಮಕ್ಕಳು ದೇಶದ ಭವಿಷ್ಯ. ಅವರ ಸುರಕ್ಷಿತ ಹಾಗೂ ನಿಶ್ಚಿಂತ ಬಾಲ್ಯವನ್ನು ಕಾಪಾಡುವುದು ನಮ್ಮೆಲ್ಲರ […]
Read More
16-06-2026, 7:30 PM
ಮಂಗಳೂರು : ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮವು ಜೂನ್ 16ರಂದು ನಡೆಯಿತು. ಕಾರ್ಯಕ್ರಮವು ಗುರು ಪೂಜೆಯೊಂದಿಗೆ ಆರಂಭಗೊಂಡು, ಗುರು ಸ್ತುತಿಯ ಬಳಿಕ ಘಟಕದ ಅಧ್ಯಕ್ಷ ಹರೀಶ್ ಕೆ. ಸುವರ್ಣ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಅಧ್ಯಕ್ಷರು ಸಭಿಕರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಅರೋಲಿನ್ ಡಿ’ಸೋಜ ಅವರು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಮಹತ್ವ ಹಾಗೂ […]
Read More
13-06-2026, 1:00 PM
ಮಂಗಳೂರು : ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ (ರಿ) ಹಾಗೂ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ನಡೆದ ಮಹಿಳಾ ಆರೋಗ್ಯ, ಋತುಬಂಧ ಮತ್ತು ಕ್ಯಾನ್ಸರ್ ತಡೆ ಅರಿವು ಕಾರ್ಯಕ್ರಮದಲ್ಲಿ, ಋತುಬಂಧದ ಸಂದರ್ಭದಲ್ಲಿ ಉಂಟಾಗುವ ದೈಹಿಕ ಹಾಗೂ ಮಾನಸಿಕ ಬದಲಾವಣೆಗಳು, ಕ್ಯಾನ್ಸರ್ ತಡೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳು, ನಿಯಮಿತ ತಪಾಸಣೆಯ ಮಹತ್ವ ಹಾಗೂ ಆರೋಗ್ಯಕರ ಜೀವನಶೈಲಿಯ ಅಗತ್ಯತೆಯ ಕುರಿತು ಸಂಪನ್ಮೂಲ ವ್ಯಕ್ತಿ ಡಾ. ನಿಶಿತಾ ಶೆಟ್ಟಿಯಾನ್ ಫೆರ್ನಾಂಡಿಸ್ ಮಾಹಿತಿ ನೀಡಿದರು. 40 ವರ್ಷಗಳ ಬಳಿಕ […]
Read More
28-05-2026, 1:00 PM
ಮೂಡುಬಿದಿರೆ, ಮೇ 28: ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ನೋಮಿ ನೆಟ್ವರ್ಕ್ ಪ್ರಾಯೋಜಕತ್ವದಲ್ಲಿ ವಿಚೀಸ್ ಕೌಶಲ್ಯ ಕೇಂದ್ರ ಮೂಡುಬಿದಿರೆ ಸಹಯೋಗದೊಂದಿಗೆ ಆಯೋಜಿಸಲಾದ 15 ದಿನಗಳ ಉಚಿತ ಫ್ಯಾಷನ್ ಡಿಸೈನ್ ಕೌಶಲ್ಯ ತರಬೇತಿಯ ಸಮಾರೋಪ ಸಮಾರಂಭ ಹಾಗೂ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮವು 28-05-2026 ರಂದು ವಿಚೀಸ್ ಕೌಶಲ್ಯ ಕೇಂದ್ರದಲ್ಲಿ ನಡೆಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲದ ಕಾರ್ಯಕ್ರಮ ವ್ಯವಸ್ಥಾಪಕರಾದ ಜೀವನ್ ಕೊಲ್ಯ ಅವರು, ಮಹಿಳೆಯರು ಕೌಶಲ್ಯಾಧಾರಿತ ತರಬೇತಿಗಳನ್ನು ಪಡೆದು […]
Read More
23-05-2026, 4:00 PM
ಮಂಗಳೂರು: ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಸದಸ್ಯೆಯರಿಗಾಗಿ ಆಯೋಜಿಸಲಾಗಿದ್ದ “ಉಪನಿಬಂಧನೆ (ಬೈಲಾ) ಮಾಹಿತಿ ಕಾರ್ಯಾಗಾರವು ಮೇ 23ರಂದು ಸಂಜೆ ಯುವವಾಹಿನಿ ಸಭಾಂಗಣದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಘಟಕದ ಅಧ್ಯಕ್ಷೆ ಕಸ್ತೂರಿ ಮಹೇಶ್ ಅವರು ಕಾರ್ಯಾಗಾರಕ್ಕೆ ಆಗಮಿಸಿದ್ದ ಸರ್ವರನ್ನೂ ಸ್ವಾಗತಿಸಿದರು. ಬಳಿಕ, ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಘಟಕದ ಮಾಜಿ ಅಧ್ಯಕ್ಷೆ ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷೆ ವಿದ್ಯಾ ರಾಕೇಶ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಮಹಿಳಾ ಸಬಲೀಕರಣಕ್ಕೆ ಪೂರಕ ಚಿಂತನೆ: […]
Read More
17-05-2026, 1:30 PM
ಮೂಡುಬಿದಿರೆ: ಯುವವಾಹಿನಿ (ರಿ.) ಮೂಡುಬಿದಿರೆ ಘಟಕ ಹಾಗೂ ವೀಚೀಸ್ ತರಬೇತಿ ಕೇಂದ್ರ ಇವರ ಜಂಟಿ ಆಶ್ರಯದಲ್ಲಿ “ಉಚಿತ ಮಲ್ಲಿಗೆ ಕೃಷಿ ಮಾಹಿತಿ ಶಿಬಿರವು ದಿನಾಂಕ 17/05/2026 ರಂದು ಇಲ್ಲಿನ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಭಾಂಗಣದಲ್ಲಿ ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮವು ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಘಟಕದ ಅಧ್ಯಕ್ಷರಾದ ಗಿರೀಶ್ ಕೋಟ್ಯಾನ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಲ್ಲಿಗೆ ಕೃಷಿ ಮಾಹಿತಿ ಮತ್ತು ಪ್ರೇರಣೆ : ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ […]
Read More
17-05-2026, 1:00 PM
ಮೂಡುಬಿದಿರೆ : ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಭಾರತೀಯ ವಿಕಾಸ ಟ್ರಸ್ಟ್ (ಬಿ.ವಿ.ಟಿ.) ಮಣಿಪಾಲ (ನೋಮಿ ಯೋಜನೆ ಪ್ರಾಯೋಜಕತ್ವದಲ್ಲಿ) ಹಾಗೂ ವಿಚೀಸ್ ಕೌಶಲ್ಯ ಕೇಂದ್ರ ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ಸೌರಶಕ್ತಿ ಯೋಜನೆ ಹಾಗೂ ಬ್ಯಾಂಕ್ ಸಾಲ ಸೌಲಭ್ಯಗಳ ಕುರಿತಾದ ಮಾಹಿತಿ ಕಾರ್ಯಕ್ರಮವು ಇಲ್ಲಿನ ಸಮಾಜ ಮಂದಿರದಲ್ಲಿ ಇತ್ತೀಚೆಗೆ ಯಶಸ್ವಿಯಾಗಿ ಜರುಗಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ. ಕೆ. ಅವರು, “ಪ್ರಸ್ತುತ ದಿನಗಳಲ್ಲಿ ಸೌರಶಕ್ತಿ ಆಧಾರಿತ ತಂತ್ರಜ್ಞಾನಗಳ ಬಳಕೆ […]
Read More
12-05-2026, 1:00 PM
ಮೂಡಬಿದಿರೆ : ಯುವವಾಹಿನಿ (ರಿ.) ಮೂಡಬಿದಿರೆ ಘಟಕ, ಭಾರತೀಯ ವಿಕಾಸ ಟ್ರಸ್ಟ್ (BVT) ಮಣಿಪಾಲ ಹಾಗೂ ನೋಮಿ ಯೋಜನೆ ಪ್ರಾಯೋಜಕತ್ವದಲ್ಲಿ, ವಿಚೀಸ್ ಕೌಶಲ್ಯ ಕೇಂದ್ರ ಮೂಡುಬಿದಿರೆ ಇವರ ಸಹಕಾರದೊಂದಿಗೆ ಮಹಿಳೆಯರಿಗಾಗಿ ಹಮ್ಮಿಕೊಳ್ಳಲಾದ 15 ದಿನಗಳ ‘ಉಚಿತ ಫ್ಯಾಷನ್ ಡಿಸೈನ್ ತರಬೇತಿ’ ಕಾರ್ಯಕ್ರಮವು ದಿನಾಂಕ 12.05.2026 ರ ಮಂಗಳವಾರದಂದು ಇಲ್ಲಿನ ಸಮಾಜ ಮಂದಿರದಲ್ಲಿ ದೀಪ ಪ್ರಜ್ವಲನೆಗಳೊಂದಿಗೆ ಸಡಗರದಿಂದ ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಯುವವಾಹಿನಿ (ರಿ.) ಮೂಡಬಿದಿರೆ ಘಟಕದ ಅಧ್ಯಕ್ಷರಾದ ಗಿರೀಶ್ ಕೋಟ್ಯಾನ್ ಅವರು, “ಇಂದಿನ ದಿನಗಳಲ್ಲಿ ಮಹಿಳೆಯರು […]
Read More
17-04-2026, 10:00 AM
ಮೂಡುಬಿದಿರೆ: ಯುವವಾಹಿನಿ (ರಿ) ಮೂಡುಬಿದಿರೆ ಘಟಕ, ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಬ್ಯಾಂಕ್ ಅಫ್ ಬರೋಡಾ ಮೂಡುಬಿದಿರೆ ಶಾಖೆ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ವಿಚೀಸ್ ಕೌಶಲ್ಯ ಕೇಂದ್ರ ಮೂಡುಬಿದಿರೆ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ 15 ದಿನಗಳ ಉಚಿತ ಆರಿ ಕೌಶಲ್ಯ ತರಬೇತಿಯ ಸಮಾರೋಪ ಸಮಾರಂಭವು ದಿನಾಂಕ 17/04/2026 ರಂದು ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನೆರವೇರಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಜ್ಯೋತಿರಾಜ್ ಅವರು ಮಾತನಾಡಿ, ಮಹಿಳೆಯರು ಆರಿ ಕೌಶಲ್ಯವನ್ನು ಅಳವಡಿಸಿಕೊಂಡರೆ ಸ್ವ […]
Read More