01-02-2017, 11:28 AM
ಈ ಜಗತ್ತೆಂಬ ಮಾಯಲೋಕವು ಶತಕೋಟಿ ಜೀವರಾಶಿಗಳಿಂದ ತುಂಬಿ ತುಳುಕುತ್ತಿದ್ದರೂ, ಈ ಎಲ್ಲಾ ಜೀವರಾಶಿಗಳಿಗಿಂತ ಶ್ರೇಷ್ಠವಾದ ಹಾಗೂ ಭಿನ್ನವಾದ ಜೀವಿ ಮಾನವ. ಆಲೋಚನಾ ಶಕ್ತಿ ಮನುಷ್ಯ ಪ್ರಾಣಿಗೆ ಬಿಟ್ಟು ಇನ್ನಾವುದೇ ಪ್ರಾಣಿಗಳಿಗಿಲ್ಲ ಎಂಬ ಸತ್ಯ ನಮಗೆಲ್ಲಾ ತಿಳಿದಿದೆ. ಉಳಿದ ಪ್ರಾಣಿಗಳಿಗಿಂತ ತನ್ನ ಭಾವನೆಗಳನ್ನು ಇತರರೊಂದಿಗೆ ಭಾಷೆಯ ಮೂಲಕ, ಮಾತಿನಿಂದ ಸಂವಹನ ರೂಪದಲ್ಲಿ ವ್ಯಕ್ತಪಡಿಸುವ ವಿಶೇಷ ಸಾಮರ್ಥ್ಯ ಗಳಿಸಿದಂತ ಮಾನವ ವರ್ಗದಲ್ಲಿ ಜನಿಸಿದ ನಾವೇ ಧನ್ಯರು. ಪರಶುರಾಮ ಸೃಷ್ಠಿಯ ಈ ತುಳುನಾಡಿನಲ್ಲಿ ಬೈದ್ಯ ಅಂದರೆ ವೈದ್ಯ, ಬಿರುವ ಅಂದರೆ ವೀರ […]
Read More
25-12-2016, 11:18 AM
ದಿನಾಂಕ 25-12-2016 ರಂದು ಸಾಬರ ಕಟ್ಟೆಯ ಮಹಾತ್ಮಾಗಾಂಧಿ ಪ್ರೌಢಶಾಲೆಯಲ್ಲಿ ಯಡ್ತಾಡಿ ಘಟಕದ ವತಿಯಿಂದ ಜರಗಿದ ಕೋಟ ಹೋಬಳಿ ಮಟ್ಟದ ಬಿಲ್ಲವರ 6ನೇ ಸಾಹಿತ್ಯಿಕ-ಸಾಂಸ್ಕೃತಿಕ ಸಮ್ಮೇಳನ ’ದೀವಿಗೆ-2016’ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿಯವರು ಭಾಷಣ ಮಾಡುತ್ತಿರುವುದು.
Read More
10-10-2016, 5:09 AM
ಬಹುಶಃ ಬಲು ತಡವಾಗಿ ಒಂದು ಪ್ರಶ್ನೆ ನನ್ನ ಮನದ ಮುಂದೆ ಸುಳಿದಾಡುತ್ತಿದೆ. ಬದಲಾಗುತ್ತಿರುವ ಕಾಲಘಟ್ಟದಲ್ಲಿ ಸಾಮಾಜಿಕ ಅವಘಡಗಳಿಗೆ ಬಲಿಯಾಗುತ್ತಿರುವವರ ನಡುವೆ ಬಿಲ್ಲವ ಯುವ ಸಮುದಾಯದ ಪಾಲು ಅಧಿಕ ಎನ್ನುವುದನ್ನು ನಾವು ಒಪ್ಪಬೇಕಾದ ಸತ್ಯ. ನಾನಾ ಕಾರಣದಿಂದ ಮನೆ ತೊರೆಯುವುದರಿಂದ ಹಿಡಿದು ಜೈಲು ಸೇರುವವರೆಗೆ ನಮ್ಮವರ ಪಾಲು ಹಿರಿದು ಎನ್ನಬಹುದು. ಲೋಕಕ್ಕೆ ಶಾಂತಿ ಮಂತ್ರವನ್ನು ಪ್ರತಿಪಾದಿಸಿದ ಮಾನವತೆಯ ಹರಿಕಾರ ಬ್ರಹ್ಮಶ್ರೀ ನಾರಾಯಣಗುರುವರ್ಯರ ಆದರ್ಶದಡಿಯಲ್ಲಿ ಜನಿಸಿದ ನಮಗೆ ಅವರ ತತ್ವಾದರ್ಶಗಳೇ ಅರ್ಥವಾಗದೇ ಇರುವುದು ದುರಂತವೇ ಸರಿ. ಲೋಕಕ್ಕೆ ಶಾಂತಿ ಮಂತ್ರ […]
Read More
01-10-2016, 5:14 AM
ತುಳುನಾಡಿನ ಪರಂಪರೆ, ದೈವಾರಾಧನೆಯ ಬಗ್ಗೆ ಜನರಿಗೆ ತಿಳಿಸುವ ನಿಟ್ಟಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 88 ನೇ ಪುಣ್ಯತಿಥಿಯ ಅಂಗವಾಗಿ ಪಡುಬಿದ್ರಿ ಬಿಲ್ಲವ ಸಂಘ ಮತ್ತು ಯುವವಾಹಿನಿ ಪಡುಬಿದ್ರಿ ಘಟಕವು ಜಂಟಿಯಾಗಿ ನಡೆಸಿದ ಕೊಡಿಯಡಿತ ಸತ್ಯೊಲು ಎಂಬ ವಿಚಾರಗೋಷ್ಟಿಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ ಉದ್ಘಾಟಿಸಿ ಶುಭಹಾರೈಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಹಿರಿಯ ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಮಾತನಾಡಿ ಪುರಾತನ ಕಾಲದಲ್ಲಿ ಕೂಡು ಕುಟುಂಬದಲ್ಲಿ ಮಹಿಳೆಯರೇ ದೈವಗಳಿಗೆ ದೀಪವಿಡುವ ಪರಿಕ್ರಮವಿದ್ದು ಕಾಲಾನಂತರ ಮಹಿಳೆಯರನ್ನು […]
Read More
06-09-2016, 5:31 AM
(ಬ್ರಹ್ಮಶ್ರೀ ನಾರಾಯಣ ಗುರುವರ್ಯರ 162ನೇ ಜಯಂತಿಯ ಸಂದರ್ಭದಲ್ಲಿ ಸಕಾಲಿಕವಾಗಿ ಈ ಲೇಖನ) ಮನುಕುಲದ ಉದ್ಧಾರಕ್ಕಾಗಿ ಜಗತ್ತಿನಲ್ಲಿ ಅನೇಕ ಸಂತರು, ಮಹಾಂತರು, ಶರಣರು, ದಾರ್ಶನಿಕರು, ತತ್ವಜ್ಞಾನಿಗಳು ಅವತರಿಸಿ ತಮ್ಮ ತಪಸ್ಸು, ಚಿಂತನೆ, ಸಾಧನೆಗಳ ಪ್ರಭಾವದಿಂದ ಜನರಲ್ಲಿ ಜಡ್ಡುಗಟ್ಟಿದ್ದ ಮೂಢನಂಬಿಕೆಗಳನ್ನು ನಿವಾರಣೆ ಮಾಡಿದರು. ವೇದ ಉಪನಿಷತ್ತುಗಳ ತವರೂರಾದ ನಮ್ಮ ಭಾರತ ದೇಶದಲ್ಲಿಯೂ ಬುದ್ಧ, ಶಂಕರ, ಚೈತನ್ಯ, ಮಾಧವ, ರಾಮಾನುಜ, ಜಿನ, ಬಸವಣ್ಣ ಮೊದಲಾದ ಮತ ಸ್ಥಾಪಕರೂ ನಾಮದೇವ, ಜ್ಞಾನದೇವ, ತುಕಾರಾಮ, ಕಬೀರ, ಪುರಂದರದಾಸ, ಕನಕದಾಸ ಮೊದಲಾದ ಸಾಧುಸಂತರೂ ಅವರವರ ಕಾಲದಲ್ಲಿ […]
Read More
31-07-2016, 11:09 AM
ಕನ್ನಡ ಮತ್ತು ತುಳು ಭಾಷೆಗಳೆರಡರಲ್ಲೂ ಕೃತಿಗಳನ್ನು ರಚಿಸಿ ಸಾಹಿತ್ಯಾಭಿಮಾನಿಗಳಿಂದ ಮತ್ತು ವಿಮರ್ಶಕರಿಂದ ಸೈ ಎನಿಸಿಕೊಂಡು ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಛಾಪನ್ನು ಮೂಡಿಸಿದವರು ಎಂ. ಜಾನಕಿ ಬ್ರಹ್ಮಾವರರವರು. ಹುಟ್ಟೂರು ಉಡುಪಿ ತಾಲೂಕಿನ ಮೂಡುತೋನ್ಸೆ ಗ್ರಾಮದ ಕಲ್ಯಾಣಪುರ ಬಳಿಯ ಮೂಡುಕುದುರು. ೧೯೫೦ರ ಜೂನ್ ೨೦ರಂದು ಜನಿಸಿದ ಇವರ ತಂದೆ ಗುಂಡಿಬೈಲ್ ದಾರ ಪಾಲನ್, ತಾಯಿ ಮುತ್ತಕ್ಕ ಮೂಡುಕುದುರು. ತಮ್ಮ ಪ್ರೌಢ ಶಾಲಾ ಶಿಕ್ಷಣವನ್ನು ಮಿಲಾಗ್ರಿಸ್ ಹೈಸ್ಕೂಲು, ಕಲ್ಯಾಣಪುರದಲ್ಲಿ ಮುಗಿಸಿ ಪದವಿ ಶಿಕ್ಷಣವನ್ನು ಮಿಲಾಗ್ರಿಸ್ ಕಾಲೇಜು, ಕಲ್ಯಾಣಪುರದಲ್ಲಿ (ಪ್ರಥಮ ಬ್ಯಾಚಿನ ವಿದ್ಯಾರ್ಥಿನಿ) […]
Read More
31-07-2016, 7:27 AM
ಕನ್ನಡ ಸಾಹಿತ್ಯ ಲೋಕದಲ್ಲಿ ಶ್ರೇಷ್ಠ ಕತೆಗಾರ, ಕಾದಂಬರಿಕಾರರಾಗಿ, ನಟರಾಗಿ, ನಾಟಕಕಾರರಾಗಿ, ಬರಹಗಾರರಾಗಿ, ಕನ್ನಡ, ತುಳು ಚಲನಚಿತ್ರಗಳ ನಿರ್ದೇಶಕರಾಗಿ, ರಾಜಕಾರಣಿಯಾಗಿ ಹೆಸರು ಮಾಡಿ ತಮ್ಮ ಅಲ್ಪ ಆಯುಷ್ಯದಲ್ಲಿಯೇ ಸಂದುಹೋದ ನಮ್ಮ ನಾಡಿನ ನಡೆ ನುಡಿಯ ಧೀಮಂತ ಸಾಹಿತಿ ದಿ| ವಿಶುಕುಮಾರ್ರವರ ಸ್ಮರಣಾರ್ಥ ಯುವವಾಹಿನಿಯ ವಿಶುಕುಮಾರ್ ದತ್ತಿನಿಧಿ ಸಂಚಾಲನಾ ಸಮಿತಿಯು ಕಳೆದ 14 ವರ್ಷಗಳಿಂದ ಸಾಹಿತ್ಯದ ವಿವಿಧ ಕ್ಷೇತ್ರಗಳಲ್ಲಿ ದುಡಿದ, ಗಣನೀಯ ಸಾಧನೆ ಮಾಡಿದ ಮಹನೀಯರನ್ನು ಗುರುತಿಸಿ ವಿಶುಕುಮಾರ್ ಪ್ರಶಸ್ತಿ ನೀಡುತ್ತಾ ಬಂದಿರುತ್ತದೆ. 2016ರ ಸಾಲಿನ ವಿಶುಕುಮಾರ್ ಪ್ರಶಸ್ತಿಯು ದ್ವಿಭಾಷಾ ಕವಿ, […]
Read More
31-07-2016, 6:15 AM
ಬಂಟ್ವಾಳ ತಾಲೂಕಿನ ಪುದು ಗ್ರಾಮದ ಸುಜೀರು ದೈಯಡ್ಕ ಮನೆ, ತಿಮ್ಮಪ್ಪ ಪೂಜಾರಿ ಹಾಗೂ ಶ್ರೀಮತಿ ಪುಷ್ಪಾರವರ ಸುಪುತ್ರಿಯಾದ ರಮ್ಯ ಸುಜೀರ್ರವರು ತನ್ನ ವಿದ್ಯಾಭ್ಯಾಸದ ಜೊತೆಯಲ್ಲಿಯೇ ಸಾಹಿತ್ಯದ ಬಗ್ಗೆ ಆಸಕ್ತಿ ಹೊಂದಿದವರು. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕನ್ನಡದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುತ್ತಾರೆ. ತುಳು ಅಧ್ಯಯನ ವನ್ನು ಐಚ್ಛಿಕ ವಿಷಯವಾಗಿ ತೆಗೆದುಕೊಂಡಿದ್ದಾರೆ. ಸಂತ ಅಲೋಶಿಯಸ್ ಕಾಲೇಜಿನಲ್ಲಿ ಬಿ.ಎ. ಬಿ.ಎಡ್. ಪದವಿಯನ್ನು ಪಡೆದಿರುತ್ತಾರೆ. ಸೈಂಟ್ ಜೋನ್ಸ್ ಪದವಿ ಪೂರ್ವ ಕಾಲೇಜು ಗಂಡಸಿ ಹಾಸನ ಇಲ್ಲಿ 1 ವರ್ಷ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸಿರುತ್ತಾರೆ. ಸೈಂಟ್ ಆನ್ಸ್ ಆಂಗ್ಲಮಾಧ್ಯಮ ಪ್ರೌಢಶಾಲೆ […]
Read More