14-11-2018, 3:04 PM
ಮುಲ್ಕಿ : ಓದಿನಲ್ಲಿ ಸಿಗುವ ಆನಂದ ಅನುಭವ, ಒಳ್ಳೆಯ ವಿಚಾರ ಬೇರೆ ಯಾವ ತಂತ್ರಾಂಶದಿಂದ ಸಿಗಲು ಸಾಧ್ಯವಿಲ್ಲ. ಪುಸ್ತಕ ನಮ್ಮ ಜೀವನಕ್ಕೆ ಬೆಳಕು ಕೊಡುವಂತಹದು, ಈ ನಿಟ್ಟಿನಲ್ಲಿ ಯುವವಾಹಿನಿ ಮುಖವಾಣಿ ಯುವಸಿಂಚನ ಪತ್ರಿಕೆಯ ಸಾಧನೆ ಗಮನಾರ್ಹವಾದುದು ಎಂದು ಹೊಸ ಅಂಗಣ ಮಾಸ ಪತ್ರಿಕೆಯ ಸಂಪಾದಕರಾದ ಹರಿಶ್ಚಂದ್ರ ಪಿ. ಸಾಲ್ಯಾನ್ ಅಭಿಪ್ರಾಯ ಪಟ್ಟರು. ಅವರು ದಿನಾಂಕ 14.11.2018 ರಂದು ಮುಲ್ಕಿ ಸಿ. ಎಸ್. ಐ ಬಾಲಿಕಾಶ್ರಮದಲ್ಲಿ ಯುವವಾಹಿನಿ (ರಿ) ಮುಲ್ಕಿ ಘಟಕದ ಆಶ್ರಯದಲ್ಲಿ ನಡೆದ ಮಕ್ಕಳ ದಿನಾಚರಣೆಯ ಸಂದರ್ಭದಲ್ಲಿ […]
Read More
04-11-2018, 8:32 AM
ಬಂಟ್ವಾಳ : ಕಥೆ, ಕಾದಂಬರಿಕಾರರಾಗಿ, ನಟ ನಿರ್ದೇಶಕರಾಗಿ, ಪತ್ರಕರ್ತರಾಗಿ ರಾಜಕಾರಣಿಯಾಗಿ ತಮ್ಮ ಐದು ದಶಕಗಳ ಬದುಕಿನಲ್ಲಿ ಬಹುಮುಖ ಪ್ರತಿಭೆಯಿಂದ ಕನ್ನಡ ಮತ್ತು ತುಳು ಭಾಷೆಗಳೆರಡರಲ್ಲೂ ಕಲಾಸೇವೆ ಮಾಡಿ ಸಂದುಹೋದ ಸಾಹಿತಿ ವಿಶುಕುಮಾರ್ ರವರ ಬದುಕು ನಮಗೆ ಸದಾ ಅನುಕರಣೀಯ . ಅವರ ಕೃತಿಗಳನ್ನು ಸಾರಸ್ವತ ಲೋಕಕ್ಕೆ ಪರಿಚಯಿಸುವ ಕಾರ್ಯ ಆಗಬೇಕಾಗಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಟಿ.ಶಂಕರ ಸುವರ್ಣ ತಿಳಿಸಿದರು. ಅವರು ದಿನಾಂಕ 04.11.2018 ರಂದು ಬಿ.ಸಿ.ರೋಡ್ ಯುವವಾಹಿನಿ ಭವನದಲ್ಲಿ ಜರುಗಿದ ಯುವವಾಹಿನಿ […]
Read More
21-09-2018, 2:24 PM
ಪಡುಬಿದ್ರಿ : ಇಂದಿನ ಯುವಪೀಳಿಗೆಗೆ ನಮ್ಮ ಹಿರಿಯರು ಮೂಲ ನಂಬಿಕೆಗಳನ್ನು ತಿಳಿಸುವ ಅನಿವಾರ್ಯತೆಯಿದೆ. ಮೂಲ ನಂಬಿಕೆಗಳು ಮೂಢನಂಬಿಕೆಗಳಾಗದಂತೆ ಗಮನಹರಿಸಬೇಕಾಗಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಡಾ| ವೈ.ಎನ್. ಶೆಟ್ಟಿ ಹೇಳಿದರು. ಪಡುಬಿದ್ರಿ ಬಿಲ್ಲವ ಸಂಘದಲ್ಲಿ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಮತ್ತು ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಆಶ್ರಯದಲ್ಲಿ ದಿನಾಂಕ 21.09.2018 ರಂದು ಬ್ರಹ್ಮಶ್ರೀ ನಾರಾಯಣಗುರುಗಳ 90ನೇ ಪುಣ್ಯತಿಥಿಯ ಅಂಗವಾಗಿ ತುಳುನಾಡಿನ ಆಚರಣೆಯಲ್ಲಿ ನಂಬಿಕೆ- ಮೂಢನಂಬಿಕೆಗಳು ಎಂಬ ವಿಚಾರಗೋಷ್ಠಿಯಲ್ಲಿ ಸಮನ್ವಯಕಾರರಾಗಿ ಅವರು […]
Read More
05-08-2018, 4:07 PM
ಮಂಗಳೂರು : ಲೇಖನಗಳು, ಮಾಹಿತಿಗಳ ಸಂಗ್ರಹ, ಆಶಯ, ಅವಲೋಕನ, ಸಾಹಿತ್ಯ, ಸಾಂಸ್ಕೃತಿಕ, ಕಥೆ, ಕವನ ಮುಂತಾದ ವೈವಿಧ್ಯಮಯ ಬರಹಗಳನ್ನು ಒಳಗೊಂಡ ಯುವವಾಹಿನಿಯ ಮುಖವಾಣಿ 2018 ರ ಸಿಂಚನ ವಾರ್ಷಿಕ ವಿಶೇಷಾಂಕವನ್ನು ಕನ್ನಡ ಮತ್ತು ಸಂಸ್ಕೃತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಸಚಿವರಾದ ಡಾ.ಜಯಮಾಲ ಬಿಡುಗಡೆಗೊಳಿಸಿದರು. ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಜರುಗಿದ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶದಲ್ಲಿ ಸಿಂಚನ ವಾರ್ಷಿಕ ವಿಶೇಷಾಂಕವನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ […]
Read More
03-06-2018, 8:42 AM
ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ದಿನಾಂಕ 03.06.2018 ರಂದು ಮಂಗಳೂರು ಯುವವಾಹಿನಿ ಸಭಾಂಗಣದಲ್ಲಿ ಜರುಗಿದ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಿರಿಯ ಸಾಹಿತಿ ವಿಮರ್ಶಕಿ ಬಿ.ಎಮ್.ರೋಹಿಣಿ ಅವರಿಗೆ 2017 ರ ವಿಶುಕುಮಾರ್ ಪ್ರಶಸ್ತಿ ಪ್ರದಾನಿಸಲಾಯಿತು. ಪ್ರಶಸ್ತಿ ಪ್ರದಾನಿಸಿದ ಹಿರಿಯ ಸಂಘಟಕಿ ಕೆ.ಎ.ರೋಹಿಣಿಯವರು ಮಾತನಾಡಿ ಬಿ.ಎಮ್.ರೋಹಿಣಿಯವರ ಸಾಧನೆಗೆ ಅರ್ಹವಾಗಿ ವಿಶುಕುಮಾರ್ ಪ್ರಶಸ್ತಿ ದೊರೆತಿದೆ ಎಂದರು. ಛಲವಾದಿಯಾಗಿರುವ ಅವರು ಸಾಹಿತ್ಯ ಕ್ಷೇತ್ರದಲ್ಲಿ ನಿರಂತರವಾಗಿ ತೊಡಗಿಸಿಕೊಂಡವರು. 74 […]
Read More
15-10-2017, 2:35 PM
ಸುಮಾರು 450 ವರ್ಷಗಳ ಹಿಂದೆ ನಡೆದ ಐತಿಹಾಸಿಕ ‘ ಕೋಟಿ- ಚೆನ್ನಯ‘ ಅವಳಿ ವೀರ ಪುರುಷರ ಸ್ವಾಭಿಮಾನದ ಬದುಕಿನ ನೈಜ ಕಥೆ- ವಿಶುಕುಮಾರ್ ಅವರಿಗೆ ಆ ವೀರ ಪುರುಷರು ತುಂಬಾ ಪ್ರಭಾವ ಬೀರಿದ್ದರು. ಅವರ ವ್ಯಕ್ತಿತ್ವ, ನಡೆ-ನುಡಿ ,ಅವರು ಅನ್ಯಾಯದ ವಿರುದ್ಧ ಹೋರಾಡುವುದು ಇತ್ಯಾದಿ. ಇದನ್ನು ವಿಶುಕುಮಾರ್ ಅವರು ತಮ್ಮ ಜೀವನುದ್ದಕ್ಕೂ ಪಾಲಿಸಿಕೊಂಡು ಬಂದಿದ್ದರು. ಆ ವೀರಪುರುಷರನ್ನು ‘ ಮಾದರಿ’ಯಾಗಿಟ್ಟುಕೊಂಡರು.ಆ ಕಥೆ ಹಿಡಿಸಿದ್ದರಿಂದಲೇ ಮೊದಲು ಅವರು ನಾಟಕ ಬರೆದು, ನಿರ್ದೇಶನ ಮಾಡಿದರು. ಅದರಲ್ಲಿ ಯಶಸ್ವಿ ಕೂಡ ಪಡೆದರು. […]
Read More
15-10-2017, 1:51 PM
ಕಳೆದ ಸಂಚಿಕೆಗಳಲ್ಲಿ ವಿಶುಕುಮಾರ್ ಅವರು ತನ್ನ 30 ರ ಹರೆಯದ ಒಳಗಿನ ಅಂದರೆ 1965 ರ ಮೊದಲು ಬರೆದ ಲೇಖನ, ಕಾದಂಬರಿ, ನಾಟಕಗಳ ಬಗ್ಗೆ ಬರೆದಿದ್ದೇವು. ಮುಂದಿನ ಸಂಚಿಕೆಗಳಲ್ಲಿ 1975 ರ ಒಳಗೆ ಅವರ ಬರವಣಿಗೆ, ಯೋಚನಾ ಮಟ್ಟ, ಸಾಧನೆಗಳ ಕುರಿತು ಬರೆಯುತ್ತೇವೆ. 1965 ರಲ್ಲಿ ವಿಶುಕುಮಾರ್ ಅವರು ರಾಜ್ಯ ಸರಕಾರದ ಮುಜರಾಯಿ ಇಲಾಖೆಗೆ ಅಧಿಕಾರಿಯಾಗಿ ನೇಮಕಗೊಂಡರು. ಅವರು ಕುಂದಾಪುರದಲ್ಲಿ ಕೆಲಸ ಮಾಡತೊಡಗಿದರು. ‘ ಎಂಡೋಮೆಂಟ್ ‘ ಆಗಿರುವ ದೇವಾಲಯಗಳ ಲೆಕ್ಕ ಪರಿಶೋಧನೆ ಮಾಡುವುದೇ ಇವರ ಕೆಲಸ. […]
Read More