04-11-2012, 6:23 AM
ಸ್ಥಿತಿ-ಗತಿ – ವಿಶುಕುಮಾರ್ (1979 ರಲ್ಲಿ ಬೆಳ್ತಂಗಡಿ ಬಿಲ್ಲವ ಸಂಘವು ಹೊರತಂದ ’ಕೋಟಿ- ಚೆನ್ನಯ’ ಎಂಬ ಸ್ಮರಣ ಸಂಚಿಕೆಯಲ್ಲಿ ಪ್ರಕಟಗೊಂಡ ಖ್ಯಾತ ಸಾಹಿತಿ ದಿ| ವಿಶುಕುಮಾರ್ ಅವರ ಇಂದಿಗೂ ಪ್ರಸ್ತುತವೆನಿಸುವ ಒಂದು ಲೇಖನ…) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಜನಾಂಗಕ್ಕೆ ಬಿಲ್ಲವ, ಪೂಜಾರಿ, ಬೈದ, ಹಳೇಪೈಕ ಇತ್ಯಾದಿ ಹೆಸರುಗಳು. ಉತ್ತರ ಕನ್ನಡದಲ್ಲಿ ನಾಮಧಾರಿಗಳು. ಶಿವಮೊಗ್ಗ, ಸಾಗರ ಕಡೆ ದೀವರು. ಹಳೇ ಮೈಸೂರು ಕಡೆ ಈಡಿಗರು. ಗುಲ್ಬರ್ಗ, ಬೀದರ್ ಕಡೆ ಈಳಿಗರು, ಕೇರಳದಲ್ಲಿ ತೀಯಾ, ತಮಿಳ್ನಾಡಿನಲ್ಲಿ ನಾಡಾರ್ ಹೀಗೆ ಬೇರೆ […]
Read More
04-11-2012, 6:08 AM
ಕನ್ನಡ ಸಾಹಿತ್ಯ ಲೋಕದಲ್ಲಿ ಶ್ರೇಷ್ಠ ಕತೆಗಾರರಾಗಿ, ಕಾದಂಬರಿಕಾರರಾಗಿ, ನಟರಾಗಿ, ನಾಟಕಕಾರರಾಗಿ, ನಿರ್ದೇಶಕರಾಗಿ, ಅಂಕಣ ಬರಹಗಾರರಾಗಿ, ಕನ್ನಡ, ತುಳು ಚಿತ್ರಗಳ ನಿರ್ದೇಶಕರಾಗಿ ಹೆಸರು ಮಾಡಿ ತಮ್ಮ ಅಲ್ಪ ಆಯುಷ್ಯದಲ್ಲಿಯೇ ಸಂದು ಹೋದ ನಮ್ಮ ನಾಡಿನ, ಬಿಲ್ಲವರ ಹೆಮ್ಮೆಯ ಕಣ್ಮಣಿ, ಧೀಮಂತ ಸಾಹಿತಿ ದಿ| ವಿಶುಕುಮಾರ್ರವರ ಸ್ಮರಣಾರ್ಥ ಯುವವಾಹಿನಿ (ರಿ) ಕೇಂದ್ರ ಸಮಿತಿಯು ‘ವಿಶುಕುಮಾರ್ ಪ್ರಶಸ್ತಿ’ ಯನ್ನು ಹುಟ್ಟುಹಾಕಿ ಕಳೆದ ಹತ್ತು ವರ್ಷಗಳಿಂದ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ. ನಮ್ಮ ಸಾಹಿತಿ ಮಿತ್ರರುಗಳ ಒತ್ತಾಸೆ, ಸಲಹೆಗಾರರ ಮಾರ್ಗದರ್ಶನದಲ್ಲಿ ’ವಿಶುಕುಮಾರ್ ದತ್ತಿನಿಧಿ’ಯನ್ನು ಸ್ಥಾಪಿಸಿ […]
Read More
04-11-2012, 6:05 AM
ಬಿಲ್ಲವರ ಚರಿತ್ರೆಯ ಗುತ್ತು, ಬರ್ಕೆ, ಗುರಿಕಾರ ಮನೆತನಗಳ ಕುರಿತ ಅಧ್ಯಯನವು ಕಳೆದ 2-3 ವರ್ಷಗಳಿಂದ ಮುಂಬಯಿ ’ಗುರುತು’ ಮಾಸಿಕ ಸಂಪಾದಕ, ಸಂಶೋಧಕ ಶ್ರೀ ಬಾಬು ಶಿವ ಪೂಜಾರಿಯವರ ಮಾರ್ಗದರ್ಶನದಲ್ಲಿ ನಡೆಯುತ್ತಾ ಬಂದಿದೆ. ಬಿ.ಎಂ.ರೋಹಿಣಿ, ಮುದ್ದು ಮೂಡುಬೆಳ್ಳೆ ಹಾಗೂ ರಮಾನಾಥ್ ಕೋಟೆಕಾರ್ರ ತಂಡ ಕ್ಷೇತ್ರಾಧ್ಯಯನ ನಡೆಸುತ್ತಾ ಬಂದಿದೆ. ಅದರಲ್ಲಿ ಒಂದು ಗುತ್ತುಮನೆ ಅಧ್ಯಯನದ ಮಾದರಿ ಇಲ್ಲಿದೆ: ಸಾಂತ್ಯ ಗುತ್ತು ಸಾಂತ್ಯ ಬಂಟ್ವಾಳ ತಾಲೂಕಿನಲ್ಲಿದೆ. ಬಿ.ಸಿ.ರೋಡ್, ಪುತ್ತೂರು ಮಾರ್ಗದಲ್ಲಿ ಮಾಣಿ ಕಳೆದು, ಕರುವೇಲ್ಲ್ಲಿ ಶಾಲಾ ಬಳಿ ಉತ್ತರದ ಮಣ್ಣಿನ ರಸ್ತೆಯಲ್ಲಿ ಮುಂದುವರಿದು […]
Read More
04-11-2012, 5:45 AM
ಯುವವಾಹಿನಿ ಸಂಘಟನೆಯು ಅಮೃತವಾಹಿನಿಯಾಗಿ ಹರಿಯುತ್ತಾ ಬಂದು ಇದೀಗ ರಜತ ಮಹೋತ್ಸವಕ್ಕೆ ಕಾಲಿರಿಸಿದ ಈ ಶುಭ ಸಮಯದಲ್ಲಿ ನನ್ನ ಮನದಾಳದ ಮಾತನ್ನು ಅಕ್ಷರ ರೂಪದಲ್ಲಿ ಬರೆಯುವಾಗ ಮನತುಂಬಿ ನಿಲ್ಲುತ್ತದೆ. ಉಕ್ಕೇರುವ ಸಂತಸದಿಂದ ಲೇಖನಿ ಒಂದು ಕ್ಷಣ ನಿಂತು ಮತ್ತೆ ಮುನ್ನಡೆಯುತ್ತಿದೆ. ಅಂದರೆ ಸಂಘಟನೆ ಒಂದು ಸಾಮಾಜಿಕ ಶಕ್ತಿ ಹೌದು. ಆದರೆ ಒಂದು ಸಂಘಟನೆ ಇಪ್ಪತ್ತೈದು ವರ್ಷದ ಯೌವನಕ್ಕೆ ಕಾಲಿರಿಸುವುದೆಂದರೆ ಅದು ಅಷ್ಟು ಸುಲಭದ ಮಾತೇನೂ ಅಲ್ಲ. ಅಷ್ಟೊಂದು ಸಾಮಾಜಿಕ ಚಿಂತನೆಯ ಮನಸ್ಸು, ನಿಷ್ಠೆ, ಒಗ್ಗಟ್ಟು, ಆತ್ಮಬಲ, ಮಾನವೀಯ ಗುಣ […]
Read More
04-11-2012, 5:24 AM
ಆಧುನಿಕತೆಯನ್ನು ನಾವು ಪರಿಭಾವಿಸುವ ಬಗೆಯೇ ಸಂಕೀರ್ಣವಾದುದು. ಆಧುನಿಕತೆ ಎಂದರೇನು ಎಂಬುದನ್ನು ವ್ಯಾಖ್ಯಾನದ ಚೌಕಟ್ಟಿನ ಒಳಗೆ ತರುವ ಪ್ರಯತ್ನ ಚಿಂತಕ ವಲಯದಲ್ಲಿ ಸಾಕಷ್ಟು ನಡೆದಿವೆ. ಸರಳವಾಗಿ ನಾವು ’ಆಧುನಿಕತೆ’ ಎಂಬ ಪರಿಕಲ್ಪನೆಯನ್ನು ಗ್ರಹಿಸುವಾಗ ವರ್ತಮಾನದಲ್ಲಿ ನಡೆಯುತ್ತಿರುವ ಸ್ಥಿತ್ಯಂತರಗಳು, ಪಲ್ಲಟಗಳು ನಮ್ಮ ಅರಿವಿಗೆ ಬರುತ್ತವೆ. ಆದರೆ ವಿಶಾಲವಾದ ಅರ್ಥದಲ್ಲಿ ’ಆಧುನಿಕತೆ’ ಎಂಬುದು ಎಲ್ಲಾ ಕಾಲಕ್ಕೂ ಸಂಬಂಧಿಸಿದ್ದು. ಕಲ್ಲಿನಿಂದ ಬೆಂಕಿಯ ಸೃಷ್ಠಿಯ ಸಾಧ್ಯತೆಯನ್ನು ಗುರುತಿಸಿದ್ದೂ ಒಂದು ಕಾಲದ ಆಧುನಿಕತೆಯಾಗಿದೆ. ಚಕ್ರದ ಸೃಷ್ಟಿಯಂತೂ ಆಧುನಿಕತೆಯ ಮೂಲ ಬೇರು. ಜೈವಿಕ ವಿಕಾಸದ ಜೊತೆಗೆ ಬೌದ್ಧಿಕ […]
Read More
04-11-2012, 5:12 AM
ಕಾನೂನು ಮಾಹಿತಿ ಮಾನವ ಹಕ್ಕುಗಳ ರಕ್ಷಣಾ ಕಾನೂನು – 1993 (Protection of Human Rights Act) 1994 ರಲ್ಲಿ ಜಾರಿಗೆ ಬಂತು. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗ ಅನುಷ್ಠಾನಕ್ಕೆ ಬಂದು ಮಾನವ ಹಕ್ಕುಗಳ ರಕ್ಷಣೆ ಹೊಣೆ ಹೊತ್ತು ಕೊಂಡಿತು. ಮಾನವ ಹಕ್ಕುಗಳು (Human Rights) ಒಬ್ಬ ಪ್ರಜೆಗೆ ಸಂವಿಧಾನದಲ್ಲಿ ಕೊಡ ಮಾಡಲ್ಪಟ್ಟ ಬದುಕುವ ಹಕ್ಕು, ಸ್ವಾತಂತ್ರ್ಯದ ಹಕ್ಕು, ಸಮಾನತೆಯ ಹಕ್ಕು ಹಾಗೂ ಘನತೆಯ ಹಕ್ಕು ಇದಕ್ಕೆ ಮಾನವ ಹಕ್ಕು ಎನ್ನುತ್ತಾರೆ. […]
Read More
04-11-2012, 5:09 AM
ಚಿಂತನ ಈ ವಿಶಾಲ ಜಗತ್ತು ಬೇರೆ ಬೇರೆ ಕಡೆಗಳಲ್ಲಿ ಬೇರೆ ಬೇರೆ ಹವಾಗುಣ, ಪ್ರಾಕೃತಿಕ ಲಕ್ಷಣ, ಮಣ್ಣಿನ ಗುಣ ಹೊಂದಿದೆ. ಹಾಗೆಯೇ ಈ ಜಗತ್ತಿನ ಸೃಷ್ಟಿಯಲ್ಲಿ ಮಾನವನ ಸೃಷ್ಟಿಯು ಅತ್ಯಂತ ಶ್ರೇಷ್ಟವಾದುದು. ಮಾನವ ಕುಲದ ವಿಕಾಸವಾದಂತೆ ಕಾಲಕ್ರಮೇಣ ನಾಗರಿಕತೆ ಬೆಳೆಯಿತು. ಮಾನವ ಅನ್ಯನ್ಯ ಕಾರಣಗಳಿಗಾಗಿ ತಂಡ ತಂಡವಾಗಿ ಬದುಕಲು ಆರಂಭಿಸಿದ. ವಿಭಿನ್ನ ಪ್ರಾಕೃತಿಕ ಲಕ್ಷಣಗಳನ್ನು ಹೊಂದಿರುವ ಜಗತ್ತಿನಲ್ಲಿ ಮಾನವರು ಅವರವರು ಬದುಕುವ ನೆಲ ಜಲದ ಗುಣಗಳಿಗೆ ಅನುಗುಣವಾಗಿ ಬದುಕಬೇಕಾಯಿತು. ಇದರಿಂದ ವಿಭಿನ್ನ ಜೀವನ ರೀತಿ ಬೆಳೆಯಿತು. ಒಂದು […]
Read More
04-11-2012, 5:04 AM
ಹಿನ್ನೋಟ ಕುಂದಾಪುರದ ಬಸ್ಸ್ಟ್ಯಾಂಡ್ ಭಿಕ್ಷುಕ ಮತ್ತು ಬೊಬ್ಬರ್ಯ ಕಟ್ಟೆ ದಿವಂಗತ ವಿಶುಕುಮಾರ್ರವರನ್ನು ಆಳವಾಗಿ ಅಭ್ಯಸಿಸಿದರೆ ಅವರ ಸಾಹಿತ್ಯಿಕ ಸಂಬಂಧ ಹೆಚ್ಚು ಪ್ರಸಿದ್ಧಿ ಪಡೆದದ್ದು ಅವರು ಕುಂದಾಪುರದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಇನ್ಸ್ಪೆಕ್ಟರ್ ಆಗಿದ್ದಾಗ ಎನ್ನಬಹುದು. ಆಗ ನಾನು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಓದುತ್ತಿದ್ದುದರಿಂದ ಅವರ ಲೇಖನಗಳು ಉದಯವಾಣಿಯಲ್ಲಿ ಬರುತ್ತಿರುವುದನ್ನು ಓದುವವರಲ್ಲಿ ನಾನೂ ಒಬ್ಬನಾಗಿದ್ದೆ. ಹೆಚ್ಚಾಗಿ ಚಿತ್ರ- ಲೇಖನ (Feature Articles) ಗಳನ್ನು ಬರೆಯಲು ಇಚ್ಚಿಸುತ್ತಿದ್ದ ಇವರು, ನಾವು ದಿನನಿತ್ಯ ನೋಡುವ ವಿಷಯಗಳನ್ನು ಆಯ್ದು ಬರೆಯುತ್ತಿದ್ದರು. ಆಗಿನ ಕಾಲದಲ್ಲಿ […]
Read More