2023 : ವಿಶುಕುಮಾರ್ ಪ್ರಶಸ್ತಿ ಪುರಸ್ಕೃತರು
01-11-2023, 7:42 AM
20-11-2022, 5:38 PM
ಉಡುಪಿ :- ತುಳುನಾಡು ಭಾವನಾತ್ಮಕ ಕುಟುಂಬ ಪದ್ಧತಿಯನ್ನು ಹೊಂದಿದ್ದು ಇಲ್ಲಿನ ಆಚಾರ ವಿಚಾರಗಳು, ಸಂಸ್ಕೃತಿಯ ಉಳಿವಿಗೆ ಇದರ ಪಾತ್ರ ಮಹತ್ವದ್ದಾಗಿದೆ. ಜಾನಪದ ಕ್ಷೇತ್ರದಲ್ಲಿ ಮಾಡಿದ ಕೆಲಸಕ್ಕೆ ಇಂದು ನನಗೆ ಸಾರ್ಥಕ್ಯದ ಕ್ಷಣವಾಗಿದೆ, ಅದೇ ರೀತಿ ತುಳುನಾಡಿನ ಜಾನಪದ ಹಾಗೂ ಸಂಸ್ಕ್ರತಿಯ ಉಳಿವಿಗೆ ಯುವವಾಹಿನಿಯ ಕೊಡುಗೆ ಅನನ್ಯ ಎಂದು ಜಾನಪದ ವಿದ್ವಾಂಸರೂ, ಸಂಶೋಧಕರಾದ ಕೆ.ಎಲ್. ಕುಂಡಂತಾಯ ಇವರು ನುಡಿದರು. ಅವರು ಯುವವಾಹಿನಿ ಉಡುಪಿ ಘಟಕದ ವತಿಯಿಂದ ದಿನಾಂಕ 20 ನವೆಂಬರ್ 2022ರ ರವಿವಾರದಂದು ಉಡುಪಿಯ ಚಿಟ್ಪಾಡಿಯ ಲಕ್ಷ್ಮೀ ಸಭಾ […]
02-10-2022, 9:01 AM
ಮಾಣಿ :- ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ವಿಶುಕುಮಾರ್ ದತ್ತಿನಿಧಿ ಸಮಿತಿ ವತಿಯಿಂದ ಕೊಡ ಮಾಡುವ 2022ನೇ ಸಾಲಿನ ವಿಶುಕುಮಾರ್ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 02 ಅಕ್ಟೋಬರ್ 2022 ರ ಆದಿತ್ಯವಾರದಂದು ಯುವವಾಹಿನಿ (ರಿ.)ಮಾಣಿ ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ಮಾಣಿ ಇಲ್ಲಿ ನೆರವೇರಿತು. ಸಾಹಿತಿ ಹಾಗೂ ವಿಮರ್ಶಕರಾದ ಡಾ.ಬಿ.ಜನಾರ್ದನ ಭಟ್ ಇವರಿಗೆ ಈ ಬಾರಿಯ ವಿಶುಕುಮಾರ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಲೇಖಕ […]
13-09-2022, 1:46 PM
ಮಂಗಳೂರು:- ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲಯುತರಾಗಿರಿ, ದುಶ್ಚಟಗಳಿಂದ ವಿಮುಖರಾಗಿ ಸತ್ಪ್ರಜೆಗಳಾಗಿ ಎಂದು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಆದರ್ಶಗಳನ್ನು ತಿಳಿಯ ಪಡಿಸಿದ ಅಸೋಸಿಯೇಟ್ ಪ್ರೊಫೆಸರ್ ವಿನೀತ ರೈ ಅವರು ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎನ್ನುವ ನಾರಾಯಣ ಗುರುಗಳ ತತ್ವದೇಶಗಳನ್ನು ಘೋಷಿಸುವುದರ ಮೂಲಕ ನಾವೆಲ್ಲರೂ ಒಂದೇ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ನಡೆದ ಗುರು ಜಯಂತಿ, ಶಿಕ್ಷಕರ ದಿನಾಚರಣೆ ಮತ್ತು ಸಾಹಿತ್ಯ ಸೌರಭ ಬಹುಮಾನ ವಿತರಣಾ ಕಾರ್ಯಕ್ರಮವನ್ನು […]
04-09-2022, 3:45 PM
ಕೆಂಜಾರು ಕರಂಬಾರು :- 04 ಸೆಪ್ಟೆಂಬರ್ 2022ರ ರವಿವಾರದಂದು ಸಾಹಿತ್ಯ ಸೌರಭ ಹಾಗೂ ನಾಲ್ಕನೇ ವರ್ಷದ ಕೃಷ್ಣ ವೇಷ ಸ್ಪರ್ಧೆ 2022 ಇದರ ಬಹುಮಾನ ವಿತರಣಾ ಕಾರ್ಯಕ್ರಮ ಶ್ರೀ ದೇವಿ ಭಜನಾ ಮಂದಿರ ಕೆಂಜಾರ್ -ಕರಂಬಾರ್ ಇಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯೆ ಮತ್ತು ಉದ್ಯೋಗಕ್ಕೆ ಹೆಚ್ಚಿನ ಪ್ರಾಶಸ್ತ್ಯ ಕೊಡಬೇಕೆಂದು ಹೇಳಿದರು. ಘಟಕದ ಎಲ್ಲಾ ಕಾರ್ಯಕ್ರಮವನ್ನು ಶ್ಲಾಘಿಸಿದರು. ಶ್ರೀ ದೇವಿ ಭಜನಾ ಮಂದಿರದ ಎರಡನೇ […]
04-08-2022, 1:33 PM
ಕೂಳೂರು :- ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ , ಯುವವಾಹಿನಿ (ರಿ.) ಉಡುಪಿ ಘಟಕದ ಅತಿಥ್ಯದಲ್ಲಿ, ಕಲೆ ಮತ್ತು ಸಾಹಿತ್ಯ ನಿರ್ದೇಶಕರ ಯೋಜನೆಯಡಿಯಲ್ಲಿ ನಡೆಯುವ ಡೆನ್ನನ ಡೆನ್ನಾನ -2022 ಕಾರ್ಯಕ್ರಮದ ಅಂಗವಾಗಿ ನಡೆಯುತ್ತಿರುವ ಸಾಹಿತ್ಯ ಸೌರಭ ಕಾರ್ಯಕ್ರಮದಲ್ಲಿ ನಾರಾಯಣ ಗುರುಗಳ ತತ್ವ ಸಂದೇಶವನ್ನು ಸಾರುವ ಉದ್ದೇಶದೊಂದಿಗೆ ಶಾಲಾ ಮಕ್ಕಳಿಗೆ ಹಮ್ಮಿಕೊಂಡಿರುವ ಚಿತ್ರ ಕಲಾ ಸ್ಪರ್ಧೆಯು ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ದಿನಾಂಕ 04 ಆಗಸ್ಟ್ 2022 ಗುರುವಾರದಂದು ದ.ಕ.ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆ […]
24-07-2022, 1:39 PM
ಮಂಗಳೂರು :- ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜಯಂತಿಯ ಅಂಗವಾಗಿ ಶಾಲಾ ಮಕ್ಕಳಿಗೆ ಮತ್ತು ಘಟಕದ ಸದಸ್ಯರಿಗೆ ವಿವಿಧ ಸ್ಪರ್ಧೆಗಳನ್ನು ಯುವವಾಹಿನಿ ಸಭಾಂಗಣದಲ್ಲಿ ಮಂಗಳೂರು ಘಟಕದ ವತಿಯಿಂದ ದಿನಾಂಕ 24 ಜುಲೈ 2022 ರಂದು ಭಾನುವಾರ ಶಾಲಾ ಕಾಲೇಜಿನ ಮಕ್ಕಳಿಗೆ ಮತ್ತು ಘಟಕದ ಸದಸ್ಯರಿಗೆ ನಾರಾಯಣಗುರುಗಳ ವಿಷಯದ ಬಗ್ಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಕೇಂದ್ರ ಸಮಿತಿಯ ಸಾಹಿತ್ಯ ಸೌರಭದ ಅಂಗವಾಗಿ ಕಲೆ ಮತ್ತು ಸಾಹಿತ್ಯಕ್ಕೆ ಒತ್ತು ನೀಡಿ ಗುರು ತತ್ವ […]